Monday 13 April 2015

ವಿಶ್ವ ವಿನೂತನ ವಿದ್ಯಾಚೇತನ / Vishwa vinootana

ವಿಶ್ವ ವಿನೂತನ ವಿದ್ಯಾಚೇತನ
ಸರ್ವಹೃದಯ ಸಂಸ್ಕಾರಿ | ಜಯ ಭಾರತಿ ||

ಕರುನಾಡ ಸರಸ್ವತಿ ಗುಡಿಗೋಪುರ ಸುರಶಿಲ್ಪ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ | ಪವಿತ್ರಿತ ಕ್ಷೇತ್ರ ಮನೋಹಾರಿ ||

ಗಂಗಕದಂಬ ರಾಷ್ಟ್ರಕೂಟ ಚಾಲುಕ್ಯ ಹೊಯ್ಸಳ ಬಲ್ಲಾಳ
ಹಕ್ಕಬುಕ್ಕ ಪುಲಿಕೇಶಿ ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ ||

ಅರಿವೇ ಗುರುನುಡಿ ಜ್ಯೋತಿರ್ಲಿಂಗ ದಯವೇ ಧರ್ಮದ ಮೂಲತರಂಗ
ವಿಶ್ವ ಭಾರತಿಗೆ ಕನ್ನಡದಾರತಿ | ಮೊಳಗಲಿ ಮಂಗಳ ಜಯಭೇರಿ ||

                                                             - ಚೆನ್ನವೀರ ಕಣವಿ

No comments:

Post a Comment