Monday 29 June 2015

ಬುಡವೇ ಭದ್ರವಿಲ್ಲದ ಮೇಲೆ ಕಟ್ಟಡ ಮಜಬೂತಾಗುವುದು ಹೇಗೆ? ( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)

( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)

ಥೂ! ಗಾಂಧೀಜಿ ಹೇಳ್ತಾರಲ್ಲ , ಗ್ರಾಮ ಸ್ವರಾಜ್ಯ-ಸ್ವದೇಶೀ … ಇವೆಲ್ಲ  ಯೋಚಿಸಲಿಕ್ಕೂ  ಅನರ್ಹವಾದವು’ ಹೀಗೆನ್ನುತ್ತಿದ್ದವರು ಯಾರಿರಬಹುದು ಹೇಳಿ? ಸಾವರ್ಕರಾ? ಅಂಬೇಡ್ಕರಾ? ಜಿನ್ನಾನಾ? ಪಟೇಲರಾ? ಖಂಡಿತಾ ಅಲ್ಲ, ಹಾಗೆನ್ನುತ್ತಿದ್ದವರು, ಸ್ವತಃ ಗಾಂಧೀಜಿಯವರ ಅನುಯಾಯಿ ನೆಹರೂ!
ಯಾರನ್ನು  ಗಾಂಧೀಜಿ ‘ನನ್ನ  ನಂತರ ನನ್ನ  ಮಾತನಾಡುವವ’ ಎಂದು ಕರೆಯುತ್ತಿದ್ದರೋ ಅದೇ ವ್ಯಕ್ತಿ. ಯಾರನ್ನು  ಇಡಿಯ ದೇಶ ಗಾಂಧೀಜಿಯ ಚಿಂತನೆಗಳ ಶಾಶ್ವತ ರೂಪ ಎಂದು ಭಾವಿಸುತ್ತಿದ್ದರೋ ಆತ. ಹೌದು ಅದೇ ನೆಹರೂ ಸ್ವದೇಶಿ ಚಿಂತನೆ ನಡೆಸಿದರೆ ದೇಶ ಹಾಳಾಗಿ ಹೋಗುತ್ತದೆ, ದೇಶವನ್ನು ಕಟ್ಟಬೇಕೆಂದರೆ ದೊಡ್ಡ ದೊಡ್ಡ  ಯಂತ್ರಗಳ ಮೇಲೆ ಕಟ್ಟಬೇಕು, ಅದರಿಂದಲೇ ಆರ್ಥಿಕ ಸ್ಥಿತಿ ಬಲಗೊಳ್ಳುವುದು ಸಾಧ್ಯ ಎನ್ನುತ್ತಿದ್ದರು.
ದೇಶ ಅನಾಚೂನವಾಗಿ ಬೆಳೆದು ಬಂದದ್ದೇ ಗ್ರಾಮ ಸ್ವರಾಜ್ಯದ ಆಧಾರದ ಮೇಲೆ. ಲಕ್ಷಾಂತರ ಹಳ್ಳಿಗಳು ಉದ್ಧಾರವಾದರೆ ಮಾತ್ರ ದೇಶದ ಅಭಿವೃದ್ಧಿ  ಸಾಧ್ಯ ಎಂದು  ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದರು. ಆದರೆ ನೆಹರೂ ಅವೆಲ್ಲವನ್ನೂ ತಿರಸ್ಕರಿಸಿದರು. ದೊಡ್ಡ ದೊಡ್ಡ ಯಂತ್ರಗಳು ಗೃಹಕೈಗಾರಿಕೆಗಳನ್ನು  ಮೀರಿ ಬೆಳೆಯಬೇಕು. ಆಗ ದೇಶದಲ್ಲಿ  ಹಣ ಸಂಗ್ರಹವಾಗುತ್ತದೆ. ಆ ಹಣ ಬಡವರಿಗೂ  ಸೇರುತ್ತದೆ ಎಂಬುದು ಅವರ ಲೆಕ್ಕಾಚಾರ. ದೇಶ ಸಾವಿರಾರು ವರ್ಷಗಳಿಂದ ಅನುಸರಿಸಿಕೊಂಡು ಬಂದ ಮಾರ್ಗವನ್ನೇ  ಈಗ ನೆಹರೂ ಬದಲಿಸ ಹೊರಟಿದ್ದರು. ಪಾಪ! ಗಾಂಧೀಜಿಯಂತಹ ಮಹಾನ್ ವ್ಯಕ್ತಿಯೊಂದಿಗೆ  ಒಡನಾಡಿಯೂ ತಮ್ಮ  ಆ ತನಕದ ಆಡಂಬರತನವನ್ನು  ಬದಲಿಸಿಕೊಂಡು ಸರಳವಾಗಲಾರದ ವ್ಯಕ್ತಿ, ಸರಳವಾಗಿದ್ದ  ದೇಶವನ್ನು ದಿಢೀರ್ ಸಿರಿವಂತಿಕೆಯತ್ತ ಎಳೆದು ತರುವ ಯೋಚನೆಗೆ ಶುರುವಿಟ್ಟರು.
ನೆಹರೂ ಸ್ವತಃ ಆರ್ಥಿಕ ತಜ್ಞರಲ್ಲ , ಯಂತ್ರಗಳ ಬಗ್ಗೆ  ಮಾತನಾಡಬಲ್ಲ  ಇಂಜಿನಿಯರೂ ಆಗಿರಲಿಲ್ಲ.  ಅವರು ಬರಿ ಕನಸುಗಾರರಾಗಿದ್ದರು. ತಾವು ಕಂಡ ಕನಸನ್ನು ನನಸುಗೊಳಿಸಬೇಕು. ಆ ಮಾರ್ಗದಲ್ಲಿರುವ ತೊಡಕುಗಳು ಏನೇ ಇರಲಿ, ಅದರಿಂದ ದೇಶ ನಿರ್ನಾಮವಾಗಿಯೇ ಹೋಗಲಿ ಚಿಂತೆ ಇಲ್ಲ. ಕನಸು ಮಾತ್ರ ಸಾಕಾರವಾಗಬೇಕು ಎಂಬ ಹುಚ್ಚು  ಅವರಲ್ಲಿತ್ತು! ಅದಕ್ಕೆ ಮೆಹಲೋನವೀಸ್ ಎಂಬುವವನ ಜೊತೆ ಪಡೆದರು.
ಆತ ಮತ್ತೊಬ್ಬ  ನೆಹರೂ. ಇತ್ತ ಇಂಜಿನಿಯರ್ ಅಲ್ಲ, ಅತ್ತ  ಆರ್ಥಿಕತಜ್ಞನೂ ಅಲ್ಲ. ಬೇರೆಡೆಯ ಯೋಜನೆಗಳನ್ನು  ಕದ್ದು  ತನ್ನದೇ  ಯೋಜನೆ ಇದು ಎಂದು ನಂಬಿಸಬಲ್ಲ  ಮೋಸಗಾರ ಅಷ್ಟೇ. ಆತ ಅಂಕಿ-ಅಂಶಗಳನ್ನು  ಕೊಟ್ಟು ಯಂತ್ರಗಳಿಂದಲೇ ದೇಶದ ಅಭಿವೃದ್ಧಿ  ಎಂದು ಸಾಸಿ ತೋರುತ್ತಿದ್ದ. ಅದನ್ನು  ಸಾಕಾರಗೊಳಿಸಲೆಂದೇ ರಷ್ಯಾದ ಮಾದರಿಯ ಪಂಚವಾರ್ಷಿಕ ಯೋಜನೆಗಳನ್ನು  ಜಾರಿಗೆ ತರಲು ಒತ್ತಡ ಹೇರಿದ.
ವಾಸ್ತವವಾಗಿ ಆಗತಾನೆ ಸ್ವಾತಂತ್ರ್ಯ ಪಡೆದ ದೇಶ ತನ್ನ  ಆಂತರಿಕ ಶಕ್ತಿ ಯಾವುದೆಂದು ಗುರುತಿಸಿಕೊಂಡು ಅದನ್ನು  ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಬೆಳೆಯಬೇಕು. ಅದನ್ನು  ಬಿಟ್ಟು, ಅವರು ಹಾಗೆ  ಬೆಳೆದಿದ್ದಾರೆ; ಇವರು ಹೀಗೆ  ಬೆಳೆದಿದ್ದಾರೆ ಎನ್ನುತ್ತಾ  ಕುಳಿತರೆ, ಅವರನ್ನು  ಅನುಸರಿಸುವ ಪ್ರಯತ್ನ  ಮಾಡಿದರೆ ಖಂಡಿತ ಬೆಳವಣಿಗೆ ಅಸಾಧ್ಯ.ಭಾರತದ ಮಟ್ಟಿಗೆ ಹೇಳುವುದಾದರೆ, ಗ್ರಾಮಶಕ್ತಿ  ಇಲ್ಲಿನ ಆಂತರಿಕ ಶಕ್ತಿ. ಅಲ್ಲಿ  ಕಳೆದು ಹೋಗುತ್ತಿರುವ ನಮ್ಮವರ ಕಲೆ-ಕುಸುರಿ ಕೆಲಸಗಳನ್ನು ಬಳಸಿಕೊಳ್ಳಬೇಕಿತ್ತು. ಕೃಷಿ ಕಾರ್ಯದಲ್ಲಿ  ಕ್ಷಮತೆಯನ್ನು  ಹೆಚ್ಚಿಸುವ  ಯತ್ನ  ಮಾಡಬೇಕಿತ್ತು. ಆದರೆ  ನೆಹರೂ ಅವೆಲ್ಲವನ್ನು  ಬದಿಗಿಟ್ಟು  ಕೈಗಾರಿಕೀಕರಣ ಮಾಡುವ ಪ್ರಯತ್ನ  ಶುರುವಿಟ್ಟರು. ಅದಕ್ಕೆ ಹಣ ಎಲ್ಲಿಂದ ತರಬೇಕು? ಸಾಲ ತಂದರು. ಮೊದಲ ಬಾರಿಗೆ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ  ಸಾಲ ಎತ್ತುವ ಚಾಳಿ ಶುರುವಿಟ್ಟಿತು.  ಆ ಹಣವನ್ನು  ನೆಹರೂ ಎಲ್ಲೆಲ್ಲಿ  ಹೂಡಿಕೆ ಮಾಡಿದರೋ ಅಲ್ಲಿಂದ ಹೇಳುವಷ್ಟು  ಹಣ ಹುಟ್ಟಲಿಲ್ಲ. ಮತ್ತೆ  ಸಾಲ-ಮತ್ತೆ ನಷ್ಟ. ಈ ಚಕ್ರ ಎಲ್ಲಿಯವರೆಗೂ ಮುಂದುವರೆಯಿತೆಂದರೆ, ಇಂದು ಸಾಲದ ಮೇಲೆಯೇ ಬದುಕುವ ಚಟವನ್ನು  ನಮ್ಮ  ನಾಯಕರು ಹಚ್ಚಿಸಿಕೊಂಡಿದ್ದಾರೆ. ದೇಶ ಅಕ್ಷರಶಃ ಸಾಲದ ಉರುಳಲ್ಲಿ  ಸಿಕ್ಕು  ಒದ್ದಾಡುತ್ತಿದೆ. ನೆಹರೂ ಹುಟ್ಟಿಸಿದ ಆ ಆರ್ಥಿಕ ಕೂಸು ನೆಹರೂ ಕಾಲದಲ್ಲಿಯೇ ಸತ್ತುಹೋಯಿತು. ಈ ದೇಶದ ಜನ ಅಪಾರ ತೆರಿಗೆ ಕಟ್ಟುವ ಮೂಲಕ ಆ ಕೂಸಿಗೆ ಕೃತಕ ಉಸಿರಾಟ ಮಾಡುತ್ತಿದ್ದಾರೆಯೇ ಹೊರತು ಮತ್ತೇನಲ್ಲ!
ನೆಹರೂ, Public Sector Unitಗಳನ್ನು  ಸರ್ಕಾರದ ವಶಕ್ಕೆ ಪಡೆದರು. ಗೃಹಕೈಗಾರಿಕೆಗಳನ್ನು  ನಡೆಸುವುದು, ಅಲ್ಲಿನ ವಸ್ತುಗಳನ್ನು ಮಾರುಕಟ್ಟೆಗೊಯ್ಯುವುದು ಇವಲ್ಲಾ ಸಾಧ್ಯವಾದಷ್ಟೂ ಕಷ್ಟವಾಗುವಂತೆ ನೋಡಿಕೊಂಡರು. ಲೈಸೆನ್ಸು, ಪರ್ಮಿಟ್ಟು ಎಂದೆಲ್ಲ  ರಗಳೆಗಳು ಶುರುವಾಗಿದ್ದು ಇದೇ ಕಾಲಕ್ಕೆ. ಸಮಾಜವಾದದ ಹೆಸರಲ್ಲಿ, ಸರ್ವರಿಗೂ  ಸಮಪಾಲು ಎನ್ನುತ್ತಿದ್ದ  ನೆಹರೂ ಕೊನೆಗಾಲಕ್ಕೆ  ಈ ರೀತಿ ಬದಲಾದದ್ದು, ಬಡವರ ಶೋಷಣೆಗೆ ನಿಂತದ್ದು ಎಲ್ಲರಿಗೂ  ಅಚ್ಚರಿತಂದಿತ್ತು. ಬಡತನ ನಿರ್ಮೂಲನೆಗೆ ಎಂದು ಶುರುವಿಟ್ಟ ಆರ್ಥಿಕ ಯೋಜನೆಗಳು ಬಡವರ ನಿರ್ಮೂಲನೆ ಮಾಡಿದ್ದು ಖಂಡಿತ ಸುಳ್ಳಲ್ಲ.
ಗಾಂಧೀಜಿಯ ಗ್ರಾಮರಾಜ್ಯದ ಕಲ್ಪನೆಯನ್ನು  ಅಮೆರಿಕದಂತಹ ರಾಷ್ಟ್ರಗಳೇ ಮೆಚ್ಚಿ  ಸ್ವೀಕರಿಸಿದ್ದವು. ಅವರಲ್ಲಿ  ಗೃಹಕೈಗಾರಿಕೆಗಳ ಪರಿಕಲ್ಪನೆ ಇಲ್ಲದಿದ್ದರೂ, ಹೆಚ್ಚು -ಹೆಚ್ಚು  ಜನ ಸೇರಿ ಕೆಲಸ ಮಾಡುವಂತಹ ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು  ಸ್ಥಾಪಿಸಿದರು. ಲಕ್ಷಾಂತರ ಜನರಿಗೆ ಉದ್ಯೋಗ ನೀಡಬಲ್ಲ ಏಕೈಕ ಮಾರ್ಗ ಅದು. ಅಕ್ಷರಶಃ ಆ ನೀತಿಯನ್ನು  ಭಾರತ ಪಾಲಿಸಬೇಕಿತ್ತು. ಇಲ್ಲಿನ ಜನಸಂಖ್ಯೆಗೆ ತಕ್ಕಂತಹ ಉದ್ಯೋಗ ನೀಡಬೇಕಾದರೆ
Medium scale industries & Small scale industriesಗಳ ಜರೂರತ್ತಿತ್ತು. ಆದರೆ ಸ್ವಾತಂತ್ರ್ಯ ಬಂದ ೫೫ ವರ್ಷಗಳ ನಂತರ ಇಂದಿಗೂ ಆ ಎರಡು ಕ್ಷೇತ್ರಗಳಿಗೂ ವಿಶೇಷ ಬೆಲೆ ಬಂದಿಲ್ಲ. ಆ ವರ್ಗದವರೊಂದಿಗೆ ನೆಹರೂ ಕಾಲದ ಅಸ್ಪೃಶ್ಯತೆ ಇಂದಿಗೂ ಜಾರಿಯಲ್ಲಿದೆ!
ನೆಹರೂ ಎಂದಿಗೂ ಗಾಂಧೀಜಿ ಹೇಳಿದ ಮಾರ್ಗದಲ್ಲಿ  ನಡೆದವರೇ ಅಲ್ಲ. ಗಾಂಧೀಜಿ ಆಶ್ರಮದಲ್ಲಿದ್ದ  ನಿಷ್ಠಾವಂತ ಕಾರ್ಯಕರ್ತರು ನೆಹರೂ ಪಾಲಿಗೆ ನಿಯತ್ತಿನ ಸಿಪಾಯಿಗಳು. ಚುನಾವಣೆ ಬಂತೆಂದರೆ ಸಾಕು, ಅಲ್ಲಿ ನೆಹರೂ ಹಾಜರ್. ಅದೇ ಕಾರ್ಯಕರ್ತರನ್ನು  ಪುಸಲಾಯಿಸಿ, ಬಡಿದೆಬ್ಬಿಸಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದರು. ಆ ಕಾರ್ಯಕರ್ತರ ಪ್ರಾಬಲ್ಯವಿದ್ದ  ಕ್ಷೇತ್ರದಲ್ಲಿ  ಅವರದೇ ಅಭ್ಯರ್ಥಿಯನ್ನು ನಿಲ್ಲಿಸಲೂ ಹಿಂದೆ-ಮುಂದೆ ನೋಡುತ್ತಿರಲಿಲ್ಲ. ಆಮೇಲೆ..? ಆಮೇಲೇನು? ಅದೇ ಗಾಂಧೀಜಿ ಆಶ್ರಮದಿಂದ ಹೊರಸೂಸುತ್ತಿದ್ದ  ಜಗ ಬೆಳಗುವ ಚಿಂತನೆಯನ್ನು  ಮೂಲೆಗೊತ್ತುತ್ತಿದ್ದರು. ಗಾಂಧೀಜಿಯ ಕಟ್ಟಾ ಅನುಯಾಯಿಯೊಬ್ಬರು ಮೂರು ಬಾರಿ ಚುನಾವಣೆ ರ್ಸ್ಪಸಿ ಗೆದ್ದರು. ಸರಕಾರ ಕೊಟ್ಟ  ಸೌಲಭ್ಯಗಳನ್ನೆಲ್ಲಾ  ಹಿಂದಿರುಗಿಸಿ ಗಾಂಜಿ  ಹೇಳಿದ ಮಾರ್ಗದಲ್ಲಿ  ನಡೆದರು. ಆದರೆ ನೆಹರೂ ಅವರ ಮಾತಿಗೆ  ಎಂದೂ ಬೆಲೆಯನ್ನೇ  ಕೊಡಲಿಲ್ಲ. ಗ್ರಾಮಸ್ವರಾಜ್ಯದ ಕಲ್ಪನೆಯನ್ನು  ಮೂದಲಿಸಿ ದೊಡ್ಡ ಕಾರ್ಖಾನೆಗಳನ್ನು  ಬೆಂಬಲಿಸುವುದರಲ್ಲಿಯೇ ಕಾಲಕಳೆದರು. ಆ ಕಾರ್ಖಾನೆಗಳಿಗಾಗಿ ಸಾಲತಂದರು. ದೇಶವನ್ನು  ಅಂತಾರಾಷ್ಟ್ರೀಯ ಮಟ್ಟದಲ್ಲಿ  ಚಿರಋಣಿಗಳನ್ನಾಗಿಸಿ(?) ಹೊರಟರು.
ಇದೇ ವೇಳೆಗೆ, ಭಾರತದ ನಂತರ ಸ್ವಾತಂತ್ರ್ಯ ಪಡೆದಿದ್ದ  ರಾಷ್ಟ್ರಗಳೆಲ್ಲ  ಮಿಂಚಿನಂತೆ ಬೆಳೆದವು. ರಾಷ್ಟ್ರದ ಅಂತಃಶಕ್ತಿಯನ್ನು ಗುರುತಿಸಿ, ನಿಸ್ವಾರ್ಥತೆಯಿಂದ ರಾಷ್ಟ್ರವನ್ನು  ಮುನ್ನಡೆಸಿದವರೆಲ್ಲ  ಜಗತ್ತಿನ ಭೂಪಟದಲ್ಲಿ  ಕಂಗೊಳಿಸುವಂತೆ ಬೆಳೆದರು. ಅಲ್ಲಿ ಬೆಳೆದದ್ದು  ವೈಯಕ್ತಿಕವಾಗಿ  ಆ ವ್ಯಕ್ತಿಗಳಲ್ಲ , ರಾಷ್ಟ್ರ!. ಆದರೆ ಭಾರತದಲ್ಲಿ  ನೆಹರೂ ಹಠಕ್ಕೆ  ಬಿದ್ದು,  ತಾವು ಬೆಳೆಯಬೇಕೆಂದರು. ಜಗತ್ತಿನ  ಎಲ್ಲ  ರಾಷ್ಟ್ರಗಳು  ತನ್ನ ಬಗ್ಗೆಯೇ ಮಾತಾಡಬೇಕೆಂದು ಆಶಿಸಿದರು. ಆ ಆಸೆಯ ಪೂರೈಕೆಗಾಗಿ ದೇಶದ ಹಿತಾಸಕ್ತಿಗಳನ್ನು  ಬಲಿಕೊಡಲಿಕ್ಕೂ  ಅವರು ಹಿಂದೆ-ಮುಂದೆ ನೋಡಲಿಲ್ಲ!!
ಭಾರತ ಸ್ವತಂತ್ರವಾಗಿ ಬಹುಕಾಲದ ನಂತರ ಅಕಾರ ಪಡೆದ ಸಿಂಗಾಪೂರದ  ಲೀ ಕ್ವಾನ್‌ಯೂರನ್ನು  ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ಸ್ಪಷ್ಟ  ಉದ್ದೇಶ, ಚಿಂತನೆಗಳೊಂದಿಗೆ ದೇಶವನ್ನು  ಎತ್ತರಕ್ಕೆ  ಬೆಳೆಸಬೇಕೆಂಬ ಹಠಕ್ಕೆ  ಬಿದ್ದ ಕ್ವಾನ್‌ಯೂ ಅಂತಾರಾಷ್ಟ್ರೀಯ ಮಟ್ಟದಿಂದ  ವ್ಯಾಪಾರಿಗಳನ್ನು  ಸಿಂಗಾಪೂರಕ್ಕೆ ಸೆಳೆದರು. ಅದೇ ವೇಳೆಗೆ ಸಿಂಗಾಪೂರದ ಕಲೆ ಜಗತ್ತು  ಮೆಚ್ಚುವಂತೆ ನೋಡಿಕೊಂಡರು. ಸಿಂಗಪೂರ್ ನೋಡುತ್ತ, ನೋಡುತ್ತ ಕಣ್ಣು ಕುಕ್ಕುವ ನಗರವಾಗಿಬಿಟ್ಟಿತು. ಕ್ವಾನ್‌ಯೂ ಒಮ್ಮೆ  ಮಾತನಾಡುತ್ತ, ‘ಹೊರಗಡೆಯಿಂದ ಬರುವ ತಂತ್ರಜ್ಞಾನ, ಬಂಡವಾಳವನ್ನು  ಸಿಂಗಾಪೂರ ಸ್ವಾಗತಿಸುತ್ತಿದೆ. ಆದರೆ ಆ ನೆಪದಲ್ಲಿ  ಅದು ತನ್ನತನವನ್ನು  ಕಳೆದುಕೊಳ್ಳಲು ಸಿದ್ಧವಿಲ್ಲ’ ಎಂದಿದ್ದರು. ‘ನಾಯಕರು, ಅಕಾರಿಗಳು, ನಿರ್ಣಯ ಮಾಡಬಲ್ಲ ಜನ ಇವರೆಲ್ಲ  ಮೊದಲು ಶಿಸ್ತನ್ನು  ಪಾಲಿಸಬೇಕು. ಶಿಸ್ತನ್ನು  ಇತರರ ಮೇಲೆ ಹೇರುವ ಮುನ್ನ  ಅದನ್ನು  ಅನುಸರಿಸಿ ತೋರಿಸಬೇಕು. ಅವರು ಮೊದಲು ಭ್ರಷ್ಟಾಚಾರರಹಿತರಾಗಿ ಜನರಿಗೆ ಉದಾಹರಣೆಯಾಗಬೇಕು’ ಎಂದೂ ಹೇಳಿದ್ದರು. ಅವೆಲ್ಲ  ನೆಹರೂ ಕಿವಿಗೆ  ಬೀಳುವುದು  ಸಾಧ್ಯವೇ ಇರಲಿಲ್ಲ. ಬಿದ್ದರೂ  ಕ್ವಾನ್‌ಯೂ ಹೇಳಿದ ಯಾವುದನ್ನೂ  ಅವರಿಗೆ  ಮಾಡಿ ತೋರಿಸುವುದು ಸಾಧ್ಯವಿರಲಿಲ್ಲ.  ಶಿಸ್ತು, ಚಿಂತನೆಗಳಲ್ಲಿನ  ಸ್ಪಷ್ಟತೆ, ಇವು ನೆಹರೂ  ಪಾಲಿಗೆ ದೂರ-ಬಹುದೂರ! ಚೆಂದದ ಬಟ್ಟೆ, ಭಾಷಣ, ಹೊಗಳುಭಟರ ಸಹವಾಸ ಅವರಿಗೆ ಹೇಳಿ ಮಾಡಿಸಿದಂಥವಾಗಿದ್ದವು!
‘ನಿಮ್ಮ  ದೇಶದಲ್ಲಿ  ಪ್ರತಿಭೆಗಳಿಗೆ ಸೂಕ್ತ ಅವಕಾಶಕೊಡುತ್ತಿಲ್ಲ. ಅವರಿಗೆ ತಮ್ಮ  ಸಾಧನೆ ತೋರ್ಪಡಿಸಲು ಅನುಕೂಲವಾಗುವಂತಹ, ಆರ್ಥಿಕ-ಸಾಮಾಜಿಕ-ರಾಜಕೀಯ ಪರಿಸರದ ನಿರ್ಮಾಣ ಮಾಡಿಕೊಡುತ್ತಿಲ್ಲ. ಇದೇ ಭಾರತೀಯರು ಸಿಂಗಾಪೂರಕ್ಕೆ ಬಂದರೆ ಅದ್ಭುತ ಸಾಧನೆ ಮಾಡುತ್ತಾರೆ. ಆದರೆ ಇಲ್ಲಿ  ಅವರಿಂದ ಸಾಧ್ಯವಿಲ್ಲ’ ಮುಂತಾದ ವಿಚಾರಗಳನ್ನು  ಮನಸ್ಸಿಗೆ ನಾಟುವಂತೆ ಹೇಳಿ ‘ಭಾರತ ಬೆಳೆದರೆ ನಮಗೆ ಲಾಭವಿದೆ. ಅದಕ್ಕೆ ಸ್ವಾರ್ಥದಿಂದ  ಭಾರತ ಬೆಳೆಯಲಿ ಎಂದು ಆಶಿಸುತ್ತಿದ್ದೇನೆ’ ಎಂದು ಕ್ವಾನ್‌ಯೂ ಹೇಳಿದ್ದರು.
ಏಷ್ಯಾದ ಬಹುತೇಕ ರಾಷ್ಟ್ರಗಳು ಹೀಗೆ ಭಾರತ ಆರ್ಥಿಕವಾಗಿ ಶಕ್ತಿಯುತವಾಗುವುದನ್ನು  ಕಾಯುತ್ತ  ಕುಳಿತಿದ್ದವು. ದಶಕಗಳಷ್ಟು ದೀರ್ಘಕಾಲ ಕಾದವು. ಭಾರತ ಪ್ರಬಲವಾಗುವ ಬದಲು, ಆರ್ಥಿಕವಾಗಿ ದುರ್ಬಲವಾಗುತ್ತ ಸಾಗಿದಂತೆಲ್ಲ ಹತಪ್ರಭವಾದವು. ಜಪಾನ್-ಚೀನಾಗಳ ಮೊರೆಹೊಕ್ಕು ಸುಮ್ಮನಾದವು. ನೆಹರೂ ಯೋಜನೆಗಳ ಮೇಲೆ ಯೋಜನೆಗಳನ್ನು  ರೂಪಿಸಿದರು. ಪ್ರತಿಯೊಂದೂ ಬಡ ಭಾರತದಲ್ಲಿ  ಸಂಪತ್ತನ್ನು  ಸೃಷ್ಟಿಸುವ (ನೆನಪಿಡಿ! ಸಂಪತ್ತನ್ನು  ಗಳಿಸುವುದಲ್ಲ ) ಯೋಜನೆಗಳೇ ಆದವು. ಅದಕ್ಕೆ ಸಾಲ ತರಲಾಯಿತು. ತಂದ ಸಾಲದಲ್ಲಿ  ಬಹುಪಾಲು ನೆಹರೂ ಮತ್ತವರ ತಂಡಕ್ಕೇ ಖರ್ಚಾಯಿತು. ಮಂತ್ರಿಗಳು -ರಾಜಕಾರಣಿಗಳು-ಅಕಾರಿವರ್ಗ ಇವರೆಲ್ಲರ ಖರ್ಚುವೆಚ್ಚ  ಅಷ್ಟು  ಅಪಾರವಾಗಿತ್ತು!
ಭಾರತದಲ್ಲಿ ಹುಟ್ಟುತ್ತಿರುವ -ಇನ್ನೂ  ಹುಟ್ಟದಿರುವ  ಮಗುವೂ ಕೂಡ ಸಾಲದ ಹೊರೆ ಹೊರಲೇಬೇಕಾಯಿತು. ಮತ್ತು  ಪರಿಸ್ಥಿತಿಗಳನ್ನು  ಅವಲೋಕಿಸಿದ ರಾಷ್ಟ್ರಪತಿ ಡಾ| ಬಾಬು ರಾಜೇಂದ್ರ ಪ್ರಸಾದರು ದ್ವಿತೀಯ ಪಂಚವಾರ್ಷಿಕ ಯೋಜನೆ (೨ನೇ ಜೂನ್ ೧೯೫೭)ಯ ಮುನ್ನ ನೆಹರೂಗೆ ಪತ್ರ ಬರೆದರು,
‘ನಾವು ಯೋಜನೆಗಳಲ್ಲಿ  ತೊಡಗಿಸುತ್ತಿರುವ ಹಣ ಸರಿಯಾಗಿ ಬಳಕೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು  ಗಮನಿಸಲಿಕ್ಕೆ  ಸೂಕ್ತ ವ್ಯವಸ್ಥೆ  ಮಾಡಲಾಗಿದೆ ಎಂದು  ಭಾವಿಸಿದ್ದೇನೆ…. ಹಾಗೇನಾದರೂ ಆಗದಿದ್ದಲ್ಲಿ, ಜನರ ಬೆವರಿನ ಹಣ, ತ್ಯಾಗದ ಹಣ ವಿಪತ್ತಿಗಾಗಿ ಖರ್ಚಾದಂತಾಗುತ್ತದೆ. ನಾವು ಎರಡನೇ ಪಂಚವಾರ್ಷಿಕ ಯೋಜನೆಗಳಿಗೆಂದೇ ಜನರ ಮೇಲೆ ತೆರಿಗೆಯ ಭಾರ ಹೇರಿದ್ದೇವೆ. ಆದರೆ ಇದೇ ಸಂದರ್ಭದಲ್ಲಿ  ಹೊಸ ಆರ್ಥಿಕ ನೀತಿಯನ್ನು  ಜಾರಿಗೆ ತರಲು, ಆಡಳಿತಕ್ಕೆಂದು  ಮಾಡುತ್ತಿರುವ  ಖರ್ಚನ್ನು ಕಡಿತಗೊಳಿಸಲು  ಯಾವ-ಯಾವ ಕ್ರಮಗಳನ್ನು   ಕೈಗೊಂಡಿದ್ದೇವೆಂಬುದು ನನಗೆ ತಿಳಿಯುತ್ತಿಲ್ಲ. ಹನಿ ಹನಿ ಸೋರಿ ಅದು ಖಾಲಿಯೂ ಆಗಬಹುದು. ಅದಕ್ಕೆ ಪ್ರತಿಯೊಂದು ವಿಭಾಗಗಳೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಯೋಜನೆಗಳನ್ನು  ಕೈಗೊಳ್ಳುವ ಮುನ್ನ ಅದು ನಮ್ಮ  ಆರ್ಥಿಕ ಪರಿಸ್ಥಿತಿಗೆ ಸೂಕ್ತವಾಗಿ  ಹೊಂದಾಣಿಕೆಯಾಗುವಂತಿರಬೇಕು. ಕೊರತೆ ನಿರ್ಮಾಣವಾಗಿ ಜನರ ಮೇಲೆ ತೆರಿಗೆಯ ಭಾರ ಅಕವಾಗದಂತೆ ನೋಡಿಕೊಳ್ಳುವ ವ್ಯವಸ್ಥೆ  ಇರಬೇಕು’ ಎಂದೆಲ್ಲ  ಬುದ್ಧಿಮಾತು ಹೇಳಿದ್ದರು.
ಕೇಳುವ ವ್ಯವಧಾನ ನೆಹರೂಗಿರಲಿಲ್ಲ. ಆ ಪತ್ರ ಅದ್ಯಾವ  ಬುಟ್ಟಿ ಸೇರಿತೋ ದೇವರೇ ಬಲ್ಲ.
ನೆಹರೂ ಪಾಲಿಗೆ ಸರ್ಕಾರ ನಡೆಸುವುದೆಂದರೆ ಐಷಾರಾಮಿ ಹೋಟೇಲು ನಡೆಸಿದಂತೆ. ಅಲ್ಲಿ ಎಲ್ಲವೂ ವೈಭವೋಪೇತವಾಗಿರಬೇಕು. ಅದಕ್ಕೆ  ಅಗತ್ಯವಿರುವಷ್ಟು  ಹಣ  ದೊರೆಯದಿದ್ದರೆ ಸಾಲವಾದರೂ ತರಬೇಕು. ಇದು  ಅವರ ಚಿಂತನೆ. ಅದಕ್ಕೆ  ತಕ್ಕಂತೆ  ಭಾರತ ಒಂದು  ವೈಭವೋಪೇತ ಹೋಟೆಲಿನಂತಾಯಿತೇ ಹೊರತು ರಾಷ್ಟ್ರವಾಗಲಿಲ್ಲ, ಶಕ್ತಿಯಾಗಲಿಲ್ಲ!
ಯೋಜನೆಗಳ ಹೆಸರಿನಲ್ಲಿ  ಖರ್ಚು ಮಾಡಿದ  ಒಂದೊಂದು ಹಣವೂ ಸೇರಬೇಕಾದ  ಸ್ಥಳ ಸೇರಲಿಲ್ಲ. ಕೆಲಸವೇನೋ ಬೇಕಾದಷ್ಟಾಯ್ತು. ಆದರೆ ಗುಣಮಟ್ಟ ಕಳಪೆಯಾಯಿತು. ೧೯೫೨-೫೩ರಲ್ಲಿ  ಒಂದು ಕೊಳವೆ ಬಾವಿ ೨೦೦ ಎಕರೆಗಳ ಭೂಮಿಗೆ ನೀರುಣಿಸಲು ಶಕ್ತವಾಗಿದ್ದರೆ, ಪಂಚವಾರ್ಷಿಕ ಯೋಜನೆಗಳ ಫಲವಾಗಿ  ಸಿಕ್ಕಸಿಕ್ಕಲ್ಲಿ ಕೊರೆದ ಕೊಳವೆ ಬಾವಿಗಳು ೧೯೫೫-೫೬ರ ವೇಳೆಗೆ ಸರಾಸರಿ ೬೦ ಎಕರೆ ಭೂಮಿಯನ್ನು  ಮಾತ್ರ ತಣಿಸಬಲ್ಲವಾಗಿದ್ದವು. ಹಣ ಸುರಿದದ್ದು ವ್ಯರ್ಥವಾಗಿತ್ತು. ಸರ್ಕಾರ ಜನ ಮಾಡುತ್ತಿದ್ದ  ಕೆಲಸಗಳನ್ನು  ತಾನೇ ಮಾಡಲು  ಮುಂದಾದ್ದರಿಂದ ಜನರೂ  ಆಲಸಿಗಳಾದರು. ಕೆರೆ ಹೂಳೆತ್ತಬೇಕಿದ್ದರೂ  ಸರ್ಕಾರದ ಮರ್ಜಿಗೆ ಕಾಯಲು ಶುರುವಿಟ್ಟರು. ಇಡಿಯ ದೇಶ ನೈತಿಕ ತಳಹದಿಯನ್ನು  ಕಳೆದುಕೊಳ್ಳಲು ಶುರುವಿಟ್ಟಿತು.
ಅವುಗಳ  ಎಲ್ಲ  ಶ್ರೇಯ ನೆಹರೂವಿಗೇ ಸಲ್ಲಬೇಕು!

Saturday 27 June 2015

ಯೋಜನೆಯ ಪಾಠವನ್ನು ನಾವೇ ಕಲಿಸಬೇಕು!

`ಬೆಂಗಳೂರಿಂದ ಹುಬ್ಬಳ್ಳಿಗೆ ಹೋಗೋ ರಸ್ತೆ ಚೆನ್ನಾಗಿದೆ. ಆದರೆ ಅಲ್ಲಲ್ಲಿ ರಸ್ತೆ ಪೂರ್ಣಗೊಳಿಸುವ ಕೆಲಸ ನಡೆಯುತ್ತಿದೆ’. ಹಾಗಂತ ಕಳೆದ ಏಳೆಂಟು ವರ್ಷಗಳಿಂದ ಹೆಳ್ತಿರೋದನ್ನು ಕೇಳಿದ್ದೇವೆ.ಬೆಂಗಳೂರು ಮೆಟ್ರೋ ಅಂತೂ ಮುಗಿಯುತ್ತಲೇಇಲ್ಲ.ಗುಲ್ಬರ್ಗಾದ ಅನೇಕ ರಸ್ತೆಗಳು ಜಲ್ಲಿಗಳ ಗುಡ್ಡೆಗಳಿಂದ ತುಂಬಿವೆಯೇ ಹೊರತು ರಸ್ತೆಯಾಗಿ ಮಾರ್ಪಟ್ಟಿಯೇ ಇಲ್ಲ. ಹೀಗೇಕೆ?
ಫ್ರಾನ್ಸಿಗೆ ಹೋಗಿ ಬಂದ ಅಂಕಣಕಾರ ಅಶೋಕ್ ದೇಸಾಯಿ ಅಲ್ಲಿನ ಕಂಪೆನಿಯೊಂದರ ಕೆಲಸ ಮಾಡುವ ರೀತಿನೀತಿಗಳನ್ನು ನೀಟಾಗಿ ವಿವರಿಸಿ ಬರೆದಿದ್ದಾರೆ. ಅಲ್ಲಿನ ಯಾವುದೇ ಕೆಲಸದ ಶುರು ಮಾಡುವ ಮುಂಚೆ ಮೊದಲ ಆದ್ಯತೆ ಪರಿಸ್ಠಿತಿ ಅಧ್ಯಯನಕ್ಕೆ ಎನ್ನುವುದನ್ನು ನಿರೂಪಿಸಿದ್ದಾರೆ. ಯಾವುದೇ ಕಾರ್ಯವನ್ನು ವಹಿಸಿಕೊಳ್ಳುವ ಕಂಪೆನಿ, ಅದರ ಅಧ್ಯಯನ ನಡೆಸಿ ಶ್ರೇಣಿ ನೀಡಿಕೊಳ್ಳುತ್ತದೆ. ಯೋಜನೆಯ ವ್ಯಾಪ್ತಿ, ತಾಂತ್ರಿಕ ಸಂಕೀರ್ಣತೆ, ಸಂಗ್ರಹ ಸೌಲಭ್ಯ ಮತ್ತು ಸ್ಥಳೀಯ ಅಗತ್ಯಗಳೆಂಬ ಆಧಾರದ ಮೇಲೆ ಒಂದರಿಂದ ಐದರವರೆಗೆ ಅಂಕ ನೀಡಿ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸುತ್ತದೆ.
ಉದಾಹರಣೆಗೆ, ನೀರು ಮತ್ತು ವಿದ್ಯುತ್ ಸರಬರಾಜಿಗೆ ಮೂಲಸೌಕರ್ಯ ಭಾರಿಯಾಗಿಯೇ ಬೇಕಾಗುತ್ತದೆ. ಹೀಗಾಗಿ ಇದರ ವ್ಯಾಪ್ತಿ ಬಲು ದೊಡ್ಡದು. ದೂರಸಂಪರ್ಕ ಮತ್ತು ಆರೋಗ್ಯ ಉಸ್ತುವಾರಿಗೆ ಸಂಬಂಧಪಟ್ಟ ಯೋಜನೆಯಾದರೆ,ಅಲ್ಲಿ ತಂತ್ರಿಕತೆಗೆ ಮಹತ್ವ ಹೆಚ್ಚು. ಜಿಲ್ಲಾಡಳಿತ ಕಟ್ಟಡಗಳಿಗೆ,ಆರಕ್ಷಕ ಠಾಣೆಗಳಿಗೆ ಜನರಿಂದ ಹಣ ಸಂಗ್ರಹಿಸಲಾಗುವುದಿಲ್ಲ. ರಸ್ತೆಗಳಿಗಾದರೆ ಸಂಗ್ರಹಿಸಬಹುದು. ಹಾಗೆಯೇ ಸೈನ್ಯಕ್ಕೆ ಸಂಬಂಧಪಟ್ಟ ಯೋಜನೆಗಳು ರಾಷ್ಟ್ರೀಯ ಹೊಣೆಯಾದರೆ, ಬೀದಿ ದೀಪ ಪೂರೈಕೆ ಪಕ್ಕಾ ಪ್ರಾದೇಶಿಕವಾದದ್ದು. ಇಂತಹ ಲೆಕ್ಕಾಚಾರ ಮಾಡಿ, ಬೇಕಾದ್ದು- ಬೇಡವಾದ್ದನ್ನೆಲ್ಲ ವಿಂಗಡಿಸಿಯೇ ಮುಂದಿನ ಹೆಜ್ಜೆ. ಆಯಾ ವಿಂಗಡಣೆಯ ಶ್ರೇಣಿಗೆ ತಕ್ಕಂತೆ, ಆಯಾ ಯೋಗ್ಯತೆ ಹೊಂದಿರುವ ಕಂಪೆನಿಗಳಿಗೆ ಕೆಲಸ ವಹಿಸಿಕೊಡಲಾಗುತ್ತದೆ. ಹೀಗಾಗಿ ಫ್ರಾನ್ಸಿನಕಂಪೆನಿಗಳು ಜಗತ್ತಿನ ಎಲ್ಲೆಡೆ ಸೇವೆ ಸಲ್ಲಿಸುವ ಮಟ್ಟಕ್ಕೆ ಬೆಳೆದಿವೆ. ನಾವಾದರೋ ಯಾವುದೋ ಕೆಲಸವನ್ನು ಯಾರದೋ ಕೈಗೆ ಕೊಟ್ಟು ಫಲಿತಾಂಶಕ್ಕೆ ಕಾಯುತ್ತ ಕೂರುತ್ತೇವೆ.
ಈ ನಿಟ್ಟಿನಲ್ಲಿ ಗುಜರಾತ್ ಸರ್ಕಾರದ ಕೆಲಸ ಅಪರೂಪದ್ದು. ಯೋಜನೆಗಳಿಗೆ ಟೆಂಡರ್ ಕರೆದು, ಪಡಕೊಂಡವರಿಗೆ ನಿಯಮ ಹಾಕಲಾಗುತ್ತದೆ, ‘ಗುಣಮಟ್ಟ ಕಾಯ್ದುಕೊಂಡು, ನಿಗದಿತ ಸಮಯದಲ್ಲಿ ಪೂರೈಸದಿದ್ದರೆ ದಿನಕ್ಕೆ ಇಷ್ಟು ಭಾಗದಷ್ಟು ದಂಡ ತೆರಬೇಕು. ಯೋಜನೆಯನ್ನು ಬೇಗ ಪೂರೈಸಿದರೆ,ದಿನಕ್ಕೆ ಇಂತಿಷ್ಟು ಬಹುಮಾನ ನೀಡಲಾಗುವುದು’ ಎಂದು! ಹೀಗಾಗಿಯೇ ಅಲ್ಲಿ ಯಾವ ಯೋಜನೆಯೂ ಆಮೆ ಗತಿಯಲ್ಲಿ ನಡೆಯುವುದಿಲ್ಲ. ನಿಯಮ ವ್ಯಾಪಕವಾಗಿಬಿಟ್ಟಿರುವುದರಿಂದ ಟೇಬಲ್ ಕೆಳಗಿನ ವ್ಯವಹಾರಕ್ಕೂ ಆಸ್ಪದವಿರುವುದಿಲ್ಲ. ವ್ಯಕ್ತಿಯೊಬ್ಬ ಸಮರ್ಥನಾದರೆ ವ್ಯವಸ್ಥೆಗಳೂ ನೆಟ್ಟಗಾಗಿಬಿಡುತ್ತವೆ ಎನ್ನುವುದಕ್ಕೆ ಮೋದಿ ಉತ್ತಮ ಉದಾಹರಣೆ.
ವರ್ಷಗಟ್ಟಲೆ ನಡೆಯುವ ರಸ್ತೆ ಕಾಮಗಾರಿಗಳು,ಅಭಿವೃದ್ಧಿ ಯೋಜನೆಗಳು ಜನ ಸಾಮಾನ್ಯರ ಸಾಮಾನ್ಯ ಬದುಕಿಗೂ ಹೊಡೆತವೇ. ಏನಾದರೂ ಮಾಡಿ, ಯೋಜನಾಬದ್ಧವಾಗಿ ಮಾಡಿ ಎಂಬುದನ್ನು ನಾವೀಗ ಗಟ್ಟಿದನಿಯಿಂದ ಸಂಬಂಧಿತರ ಕಿವಿ ಮುಟ್ಟಿಸಬೇಕಿದೆ.

Sunday 21 June 2015

ಮುಜಫ್ಫರ್‌ನಗರದಲ್ಲಿ ಮಿಡಿಯುವ ಮನ, ಕಾಶ್ಮೀರಿ ಪಂಡಿತರನ್ನೇಕೆ ಕರುಣೆಯಿಂದ ನೋಡುವುದಿಲ್ಲ?

 

ಹೆಸರು: ಸರ್ವಾನಂದ ಕೌಲ್
ಸ್ಥಳ: ಶಾಲಿ, ಅನಂತ್‌ನಾಗ್ ಜಿಲ್ಲೆಯ ಒಂದು ಗ್ರಾಮ
ವೃತ್ತಿ: ನಿವೃತ್ತ ಶಿಕ್ಷಕ ಹಾಗೂ ಕಾಶ್ಮೀರಿ ಕವಿ
ಸರ್ವಾನಂದ್ ಕೌಲ್ ಅವರು "ಪ್ರೇಮಿ"ಯೆಂದೇ ಪ್ರಚಲಿತರಾಗಿದ್ದರು. ಜಮ್ಮು-ಕಾಶ್ಮೀರ ಶಿಕ್ಷಣ ಇಲಾಖೆಯಲ್ಲಿ 23 ವರ್ಷ ಸೇವೆ ಸಲ್ಲಿಸಿದ್ದ ಅವರದ್ದು ಕಾಶ್ಮೀರಿ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕವಯತ್ರಿ ರೂಪಾ ಭವಾನಿಯವರ ಜೀವನಗಾಥೆ ಬರೆದಿದ್ದರು, ಸಂತ ಮಿರ್ಜಾ ಕಕ್ರ ಅವರ ಜೀವನಚರಿತ್ರೆ ರಚಿಸಿದ್ದರು. ಶ್ರೀಮದ್ ಭಗವದ್‌ಗೀತೆಯನ್ನು ಕಾಶ್ಮೀರಿಗೆ ಹಾಗೂ ಉರ್ದುಗೆ ಭಾಷಾಂತರ ಮಾಡಿದ ಹೆಗ್ಗಳಿಕೆ ಹೊಂದಿದ್ದರು. 1924ರಲ್ಲಿ ಜನಿಸಿದ್ದ ಅವರು ಮಹಾತ್ಮ ಗಾಂಧಿಯಿಂದ ಪ್ರಭಾವಿತರಾಗಿದ್ದರು ಹಾಗೂ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡಿದ್ದರು. 1947ರಲ್ಲಿ ಧರ್ಮದ ಆಧಾರದ ಮೇಲೆ ದೇಶ ವಿಭಜನೆಯಾದರೂ ಜಾತ್ಯತೀತತೆಯಲ್ಲಿ ಅಚಲ ನಂಬಿಕೆ ಹೊಂದಿದ್ದರು. ಅದಕ್ಕೆ ಉದಾಹರಣೆಯೆಂಬಂತೆ 1953ರಲ್ಲಿ ಶೇಖ್ ಅಬ್ದುಲ್ಲಾರನ್ನು ಬಂಧಿಸಿದಾಗ, 1963ರಲ್ಲಿ ಹಜರತ್ ಬಾಲ್ ಮಸೀದಿಯಿಂದ ಪ್ರವಾದಿ ಮೊಹಮ್ಮದರ ಪವಿತ್ರ ಕುರುಹು ಕಣ್ಮರೆಯಾದಾಗ, 1965ರಲ್ಲಿ ಪಾಕ್ ಆಕ್ರಮಣ ಮಾಡಿದಾಗ, 1967ರ ಪಂಡಿತರ ಪ್ರತಿಭಟನೆ ಸಂದರ್ಭದಲ್ಲಿ, 1968ರ ಅನಂತ್‌ನಾಗ್ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಪ್ರೇಮಿ ಲೇಖನಿಯನ್ನು ಖಡ್ಗದಂತೆ ಝಳಪಿಸಿ ಪ್ರತಿಭಟಿಸಿದ್ದರು.
ಇತ್ತ 1965 ಹಾಗೂ 1971 ಸೋಲಿನ ನಂತರ ಪಾಕಿಸ್ತಾನ ಭಯೋತ್ಪಾದನೆಯ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಮುಂದಾಯಿತು. ಸ್ವಾತಂತ್ರ್ಯಾನಂತರ ಇಸ್ಲಾಮಿಕ್ ಮೂಲಭೂತವಾದದ ಮೊದಲ ಪ್ರಯೋಗ ಕಾಶ್ಮೀರದಲ್ಲಿ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿನ ಹಿಂದುಗಳನ್ನು ಹೆಕ್ಕಿ ಕೊಲ್ಲಲು ಆರಂಭಿಸಿದರು. ಇಡೀ ಕಾಶ್ಮೀರದಾದ್ಯಂತ ಹಿಂದುಗಳು ಭಯಭೀತರಾದರು. ಬದುಕುಳಿಯಬೇಕೆಂದರೆ ಕಣಿವೆಯಿಂದ ಖಾಲಿ ಮಾಡಬೇಕು ಎಂಬಂತಾಯಿತು. 1990, ಜನವರಿ 19ರಂದು ಕಾಶ್ಮೀರ ಬಿಟ್ಟು ತೊಲಗಿ ಎಂಬ ಧಮಕಿ ಮಸೀದಿಯ ಮೈಕುಗಳಿಂದ ಮೊಳಗಿತು. ಆದರೂ ಪ್ರೇಮಿಯವರ ಜಾತ್ಯತೀತ ಮನಸ್ಸು ನೆರೆಹೊರೆಯ ಮುಸ್ಲಿಮರು ತಮ್ಮನ್ನು ರಕ್ಷಿಸುತ್ತಾರೆಂಬ ಭದ್ರತಾ ಭಾವನೆಯ ಮೊರೆಹೋಯಿತು. ಅದು 1990, ಏಪ್ರಿಲ್ 29. ಮೂವರು ಮುಸುಕುಧಾರಿ ಭಯೋತ್ಪಾದಕರು ಪ್ರೇಮಿಯವರ ಮನೆಯ ಕದ ಒಡೆದು ಒಳಬಂದರು. ಮನೆ ಮಂದಿಯೆಲ್ಲ ಒಂದು ರೂಮಿನೊಳಗೆ ಸೇರಿ ಎಂದು ಸೂಚಿಸಿದರು. ಮನೆಯೊಳಗಿರುವ, ಮೈಮೇಲಿರುವ ಎಲ್ಲ ಅಮೂಲ್ಯ ವಸ್ತುಗಳನ್ನು, ಚಿನ್ನ, ಆಭರಣಗಳನ್ನು, ಹಣ, ಸೀರೆ, ಶಾಲುಗಳನ್ನು ಕಲೆಹಾಕಿ ಎಂದರು. ಮೈಮೇಲಿದ್ದ ಆಭರಣಗಳನ್ನೂ ಬಿಡಲಿಲ್ಲ. ಎಲ್ಲವನ್ನೂ ಸೂಟ್‌ಕೇಸ್‌ಗೆ ತುಂಬಿಸಿ, ಅದನ್ನು ಹೊತ್ತು ನಮ್ಮನ್ನು ಹಿಂಬಾಲಿಸು ಎಂದು ಪ್ರೇಮಿಗೆ ಸೂಚಿಸಿದರು. ಮನೆಯವರು ಆತಂಕಕ್ಕೊಳಗಾದರು. ಅವರನ್ನುದ್ದೇಶಿಸಿ, "ಆತನಿಗೆ ಯಾವ ತೊಂದರೆಯನ್ನೂ ಮಾಡುವುದಿಲ್ಲ, ಸದ್ಯದಲ್ಲೇ ವಾಪಸ್ ಕಳುಹಿಸುತ್ತೇವೆ" ಎಂದರು ಭಯೋತ್ಪಾದಕರು. ಅದನ್ನು ಕೇಳಿದ ಪ್ರೇಮಿಯವರ 27 ವರ್ಷದ ಮಗ ಪಂಡಿತ್ ವೀರೇಂದರ್ ಕೌಲ್ ತಾನೂ ಕೂಡ ಬರುವುದಾಗಿ ಹೊರಟ. ಎರಡು ದಿನ ಕಳೆದರೂ ಅಪ್ಪ ಮಗ ಇಬ್ಬರೂ ವಾಪಸ್ಸಾಗಲಿಲ್ಲ.
ಎರಡು ದಿನಗಳ ನಂತರ ಹೃದಯವಿದ್ರಾವಕ ಸ್ಥಿತಿಯಲ್ಲಿದ್ದ ಎರಡು ಶವಗಳು ಸಿಕ್ಕವು!
ಪ್ರೇಮಿ ಪ್ರತಿ ದಿನ ಬೆಳಗ್ಗೆ ಎದ್ದು ದೇವರಿಗೆ ವಂದಿಸುವಾಗ ಹಣೆಗೆ ಗಂಧ ಹಚ್ಚಿಕೊಳ್ಳುತ್ತಿದ್ದರು. ಭಯೋತ್ಪಾದಕರು ಆ ಜಾಗವನ್ನು ರಾಡಿನಿಂದ ಸೀಳಿದ್ದರು. ಇಡೀ ದೇಹದ ಭಾಗಗಳನ್ನೂ ಸಿಗರೇಟಿನಿಂದ ಸುಟ್ಟಿದ್ದರು. ಅಪ್ಪ ಮಗ ಇಬ್ಬರ ಕಣ್ಣುಗಳನ್ನೂ ಕಿತ್ತಿದ್ದರು. ಕೈಕಾಲುಗಳನ್ನು ಮುರಿದುಹಾಕಿದ್ದರು. ಈ ಮನುಕುಲ ಕಂಡ ಮಹಾನ್ ರಕ್ಕಸ ಹಿಟ್ಲರ್‌ನ ಪಡೆಗಳಿಗಿಂತಲೂ ಪೈಶಾಚಿಕವಾಗಿ ಪ್ರೇಮಿ ಹಾಗೂ ಅವರ ಪುತ್ರನನ್ನು ಕೊಲೆಗೈದಿದ್ದರು.
ತೇಜ್ ಕೃಷ್ಣನ್ ರಾಜ್ದಾನ್
ಅಶೋಕ್ ಕುಮಾರ್ ಖಾಜಿ
ನವೀನ್ ಸಪ್ರೂ
ಪಿ.ಎನ್. ಕೌಲ್
ಬಿ.ಕೆ. ಗಂಜೂ
ದೀಪಕ್ ಗಂಜೂ
ಭೂಷಣ್ ಲಾಲ್ ರೈನಾ
ರಮೇಶ್ ಕುಮಾರ್ ರೈನಾ
ದೀನನಾಥ್ ಮುಜೂ
ಗಿರಿಜಾ ಟಿಕೂ
ಅಶೋಕ್ ಸೂರಿ
ಪ್ರೊ. ಕೆ.ಎಲ್. ಗಂಜೂ
ಚುನಿ ಲಾಲ್ ಶಲ್ಲಾ
ಇಂಥ ಒಬ್ಬೊಬ್ಬರ ಸಾವೂ ಒಂದೊಂದು ಕರುಣಾಜನಕ ಕಥೆಯನ್ನು ಹೇಳುತ್ತವೆ. ಬಾಲಿವುಡ್ ನಟ ಸಂಜಯ್ ಸೂರಿ ಗೊತ್ತಲ್ಲವೆ? ಆತ ಕೂಡಾ ಕಾಶ್ಮೀರಿಯೇ. ತನ್ನ ತಂದೆಯ ಹತ್ಯೆ ತನ್ನೆದುರೇ ನಡೆದಿದ್ದನ್ನು ಆತ ತೋಡಿಕೊಂಡ ಸಂದರ್ಶನವನ್ನು ಓದಿದರೇ ಮನಸ್ಸು ಭಾರವಾಗುತ್ತದೆ. ಕಾಶ್ಮೀರದಿಂದ ಬಲಾತ್ಕಾರವಾಗಿ ಹೊರದಬ್ಬಿಸಿಕೊಂಡವರ, ಹೆದರಿ ಕಾಲ್ಕಿತ್ತವರ ಸಂಖ್ಯೆ ಸರಿಸುಮಾರು 6 ಲಕ್ಷವಾದರೆ, ಕೊಲೆಯಾದವರ, ಅತ್ಯಾಚಾರಕ್ಕೊಳಗಾದವರ, ಹೆದರಿ ಮತಾಂತರಗೊಂಡವರ ಸಂಖ್ಯೆ ಅದೆಷ್ಟೋ! ಕಾಶ್ಮೀರದಲ್ಲಿ ಕೊಲೆಯಾದ ಪಂಡಿತರ ಸಂಖ್ಯೆ ಕೊಡಿ ಎಂದು ಇತ್ತೀಚೆಗೆ ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಲಾದ ಅರ್ಜಿಯನ್ನೇ ಜಮ್ಮು-ಕಾಶ್ಮೀರ ಸರ್ಕಾರ ತಿರಸ್ಕಾರ ಮಾಡಿಬಿಟ್ಟಿತು. ಇಂಥದ್ದೊಂದು ತಿರಸ್ಕಾರದ ಹಿಂದಿರುವ ಭಯ ಏನೆಂದುಕೊಂಡಿರಿ? ಲೆಕ್ಕ ಕೊಟ್ಟರೆ ಮುಸ್ಲಿಂ ಮೂಲಭೂತವಾದಕ್ಕೆ ಸಿಕ್ಕಿ ಸತ್ತ ಅಗಣಿತ ಹಿಂದುಗಳ ದುಸ್ಥಿತಿ ಜಗತ್ತಿಗೆ ಗೊತ್ತಾಗುತ್ತದೆ ಎಂಬ ಭಯವೇ ಅಲ್ಲವೆ? 790 ಮುಸಲ್ಮಾನರನ್ನು ಬಲಿತೆಗೆದುಕೊಂಡ ಗುಜರಾತ್ ಹಿಂಸಾಚಾರದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ, ಆದರೆ ಕಲ್ಪನೆಗೂ ಮೀರಿದಷ್ಟು, ಲೆಕ್ಕಕ್ಕೂ ಬಾರದಷ್ಟು ಪಂಡಿತರ, ಹಿಂದುಗಳ ಜೀವವನ್ನು ಬಲಿತೆಗೆದುಕೊಂಡ ಕಾಶ್ಮೀರಿ ಮುಸ್ಲಿಂ ಭಯೋತ್ಪಾದನೆಯ ಬಗ್ಗೆ ಎಷ್ಟು ಜನ ಮಾತನಾಡುತ್ತಾರೆ ಹೇಳಿ? ಗುಜರಾತ್ ಹಿಂಸಾಚಾರದ ಬಗ್ಗೆ ಜಗತ್ತಿನ ಗಮನ ಸೆಳೆಯುವ, ಹಿಂದುಗಳೆಂಥ ಕ್ರೂರಿಗಳೆಂದು ಚಿತ್ರಿಸುವ ಸಲುವಾಗಿಯೇ "ಫೈನಲ್ ಸಲ್ಯೂಷನ್‌", "ಫಿರಾಕ್‌", "ಪರ್ಝಾನಿಯಾ"ದಂಥ ಇಂಗ್ಲಿಷ್, ಹಿಂದಿ ಚಿತ್ರಗಳು, ಅವುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದವು. ಮಲೆಯಾಳದಲ್ಲಿ "ಕಥಾವಶೇಷನ್‌", "ವಿಲಪಾಂಗಳಕ್ಕಪುರಂ", "ಭೂಮಿಯುಡೆ ಅವಕಾಶಿಕುಲ್‌" ಮುಂತಾದ ಚಿತ್ರಗಳು ಬಂದವು. ಚೇತನ್ ಭಗತ್ ಅವರ "ತ್ರೀ ಸ್ಟೇಟ್ಸ್‌" ಆಧರಿಸಿ ಬಂದ ಹಿಂದಿ ಚಿತ್ರ "ಕಾಯ್ ಪೋ ಚೆ"ನಲ್ಲೂ ಅನಗತ್ಯವಾಗಿ ಗುಜರಾತ್ ಘಟನೆಯನ್ನು ಎಳೆದುತಂದರು. ಆದರೆ ಕಾಶ್ಮೀರಿ ಪಂಡಿತರ ಬಗ್ಗೆ ಹೊರಗಿನ ಯಾರು ಒಂದು ಚಿತ್ರ ತಯಾರಿಸಿದ್ದಾರೆ, ಜಗತ್ತಿನ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ ಹೇಳಿ? ಅಷ್ಟೇಕೆ, ಕಾಶ್ಮೀರಿಯೇ ಆದ ಪತ್ರಕರ್ತ ರಾಹುಲ್ ಪಂಡಿತ ಕಳೆದ ವರ್ಷ ಬರೆದ "ಅವರ್ ಮೂನ್ ಹ್ಯಾಸ್ ಬ್ಲಡ್ ಕ್ಲಾಟ್ಸ್‌" ಪುಸ್ತಕದ ಬಗ್ಗೆ ಒಂದು ಸಣ್ಣ ಟೀವಿ ಚರ್ಚೆಯೂ ನಡೆಯಲಿಲ್ಲ! ಗುಜರಾತ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಸುಮಾರು 600 ಜನರಿಗೆ ಶಿಕ್ಷೆಯಾಗಿದೆ. ಆದರೆ ಕಾಶ್ಮೀರಿ ಪಂಡಿತರ ರಕ್ತಹೀರಿದವರ ವಿರುದ್ಧ ಒಂದೇ ಒಂದು ಎಫ್‌ಐಆರ್ ಕೂಡಾ ದಾಖಲಾಗಿಲ್ಲ ಎಂದರೆ ನಂಬುತ್ತೀರಾ?! ಗುಜರಾತ್ ಹಿಂಸಾಚಾರವನ್ನು ಮುಂದಿಟ್ಟುಕೊಂಡು ಮೋದಿಗೆ ಅಮೆರಿಕ ವೀಸಾ ನಿರಾಕರಿಸುವಂತೆ ಮಾಡಿದರು. ಆದರೆ 6 ಲಕ್ಷ ಕಾಶ್ಮೀರಿ ಪಂಡಿತರು ತಾಯ್ನೆಲದಲ್ಲೇ ನಿರಾಶ್ರಿತರಾಗಲು ಅವಕಾಶ ಮಾಡಿಕೊಟ್ಟ, ಸಾವಿರಾರು ಕಾಶ್ಮೀರಿ ಪಂಡಿತ ಕೊಲೆ ನಡೆಯುವಾಗ ಕಣ್ಣುಮುಚ್ಚಿಕೊಂಡಿದ್ದ ಆಗಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಗ್ಗೆ ಧ್ವನಿಯೆತ್ತಿದ ಒಬ್ಬ ನರನನ್ನು ತೋರಿಸಿ ನೋಡೋಣ? ಮೂರೂವರೆ ಸಾವಿರ ಸಿಖ್ಖರ ಹತ್ಯಾಕಾಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಹಾಗೂ ಕಾಶ್ಮೀರಿಗರ ದುಸ್ಥಿತಿಗೆ ಕಾರಣರಾದ ಆಗಿನ ಪ್ರಧಾನಿ ರಾಜೀವ್ ಗಾಂಧಿಯನ್ನು ಯಾರಾದರೂ ದೂರಿದ್ದನ್ನು ನೋಡಿದ್ದೀರಾ? ರಾಜೀವ್ ಗಾಂಧಿ ಮಾಡಿದ್ದೇನು ಸಾಮಾನ್ಯ ಅಪಚಾರವೇ?
"ಆತ್ಮೀಯ ಶ್ರೀ ರಾಜೀವ್ ಗಾಂಧಿ,
ನಾನು ನಿಮಗೆ ನೆನಪಿಸಿಕೊಡಬೇಕಾ ಹೇಳಿ? ಕಾಶ್ಮೀರದಲ್ಲಿ ಬಿರುಗಾಳಿಯೊಂದು ಸೃಷ್ಟಿಯಾಗುತ್ತಿರುವುದರ ಬಗ್ಗೆ 1988ರ ಆರಂಭದಿಂದಲೇ ನಿಮಗೆ ಎಚ್ಚರಿಕೆ ಸೂಚನೆಗಳನ್ನು ಕಳುಹಿಸಲಾರಂಭಿಸಿದ್ದೆ. ಆದರೆ ನಿಮಗಾಗಲಿ ಅಥವಾ ನಿಮ್ಮ ಸುತ್ತ ಅಧಿಕಾರವನ್ನು ಝಳಪಿಸುತ್ತಿರುವ ಭಟ್ಟಂಗಿಗಳಿಗಾಗಲಿ ಆ ಸಂದೇಶಗಳನ್ನು ನೋಡುವುದಕ್ಕೆ ಸಮಯವಾಗಲಿ, ಆಸಕ್ತಿಯಾಗಲಿ ಇರಲಿಲ್ಲ. ಆ ಎಚ್ಚರಿಕೆಗಳನ್ನು ನಿರ್ಲಕ್ಷಿಸುವುದೆಂದರೆ ಐಸಿಹಾಸಿಕ ಪಾಪ ಮಾಡಿದಂತೆ ಎಂಬ ಸೂಚನೆ ಅಲ್ಲಿತ್ತು. ಭಯಾನಕ ಶಸ್ತ್ರಾಸ್ತ್ರಗಳು ಆಗಮಿಸಿವೆ ಹಾಗೂ ಹೆಚ್ಚಿನವು ಆಗಮಿಸುತ್ತಿವೆ ಎಂದು ತಿಳಿಸಿದ್ದೆ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮತ್ತೆಂದೂ ಹಿಂದಿರುಗಲಾಗದ ಸ್ಥಿತಿಗೆ ತಲುಪಬೇಕಾಗುತ್ತದೆ ಎಂದು 1989 ಏಪ್ರಿಲ್‌ನಲ್ಲಿ ನಿಮಗೆ ಬರೆದಿದ್ದೆ. ಆದರೆ ನಿಮ್ಮ ನಿರಾಸಕ್ತಿ ನಿಜಕ್ಕೂ ದಿಗ್ಭ್ರಮೆ ಹುಟ್ಟಿಸುತ್ತದೆ. ಆಶ್ಚರ್ಯವೆಂದರೆ ಇಂದು ಕಾಶ್ಮೀರದ ಸ್ಥಿತಿಗೆ ನಾನೇ ಕಾರಣವೆಂದು ನಿಮ್ಮ ಭಟ್ಟಂಗಿಗಳಾದ ಮಣಿಶಂಕರ್ ಅಯ್ಯರ್, ಎನ್ಕೆಪಿ ಸಾಳ್ವೆ, ಶಿವಶಂಕರ್ ತುತ್ತೂರಿ ಊದುತ್ತಿದ್ದಾರೆ. ನಿಮ್ಮ ಮತ್ತೊಬ್ಬ ಶಿಷ್ಯ ಫಾರೂಕ್ ಅಬ್ದುಲ್ಲಾ ಬಿಡುಗಡೆ ಮಾಡಿದ 70 ಕುಖ್ಯಾತ ಭಯೋತ್ಪದಕರೇ ಇಷ್ಟೆಲ್ಲಾ ಅವಾಂತರ ಸೃಷ್ಟಿಸುತ್ತಿದ್ದು ಅದಕ್ಕೂ ರಾಜ್ಯಪಾಲನಾದ ನಾನೇ ಕಾರಣ ಎನ್ನುತ್ತೀರಾ? 1990, ಜನವರಿ 19ರಂದು ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೊದಲೇ ಮಾನಸಿಕವಾಗಿ ಭಾರತ ಶರಣಾಗಿತ್ತು. 1600 ಹಿಂಸಾಕೃತ್ಯಗಳು ನಡೆದಿದ್ದವು. 351 ಬಾಂಬ್ ಸ್ಫೋಟಗಳು ಸಂಭವಿಸಿದ್ದವು, 72 ದೊಂಬಿಗಳು ನಡೆದಿದ್ದವು. ಆದರೆ ನೀವು ಯಾವತ್ತೂ ತಲೆಕೆಡಿಸಿಕೊಳ್ಳಲೇ ಇಲ್ಲ.
ಜಗಮೋಹನ್
1990, ಏಪ್ರಿಲ್ 21"
ಎರಡು ಬಾರಿ ಜಮ್ಮು-ಕಾಶ್ಮೀರದ ರಾಜ್ಯಪಾಲರಾಗಿದ್ದ ಜಗಮೋಹನ್ ಆಗ ನಡೆದ ಘಟನೆಗಳು, ಸೃಷ್ಟಿಯಾಗಿದ್ದ ಪರಿಸ್ಥಿತಿಯನ್ನು ತಮ್ಮ "ಫ್ರೋಜನ್ ಟರ್ಬುಲೆನ್ಸ್ ಇನ್ ಕಾಶ್ಮೀರ್‌"ನಲ್ಲಿ ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ. ಇಷ್ಟಾಗಿಯೂ ಅಂದು ಕೇಂದ್ರದಲ್ಲಿ ಚುಕ್ಕಾಣಿ ಹಿಡಿದಿದ್ದ ರಾಜೀವ್ ಗಾಂಧಿಯನ್ನಾಗಲಿ, ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾರನ್ನಾಗಲಿ, ಕಾಶ್ಮೀರಿ ಪಂಡಿತರನ್ನು ಹೊರದಬ್ಬಿದ ಮೂಲಭೂತವಾಗಿ ಮನಸ್ಸುಗಳನ್ನಾಗಲಿ ಯಾರೊಬ್ಬರೂ ಪ್ರಶ್ನಿಸುವುದಿಲ್ಲ. ಇನ್ನೊಂದು ಗಮನಾರ್ಹ ಅಂಶ ನೋಡಿ: ಹಿಂದುಗಳು ಬಹುಸಂಖ್ಯಾತರಾಗಿರುವ ಜಮ್ಮು ಗಾತ್ರದಲ್ಲಿ ಕಾಶ್ಮೀರಕ್ಕಿಂತ ದೊಡ್ಡದು. ಆದರೆ ವಿಧಾನಸಭೆ ಕ್ಷೇತ್ರಗಳು ಹೆಚ್ಚಿರುವುದು ಕಾಶ್ಮೀರದಲ್ಲಿ. ಏಕೆ ವಿಷಯ ಎತ್ತಲಾಗುತ್ತಿದೆಯೆಂದರೆ, ಭಾರತ ಪ್ರಜಾತಾಂತ್ರಿಕ ರಾಷ್ಟ್ರ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರಲ್ಲಾ ಕಾಶ್ಮೀರಕ್ಕೆ ಒಬ್ಬ ಹಿಂದುವನ್ನು ಮುಖ್ಯಮಂತ್ರಿಯಾಗಿ ಮಾಡಿ ನೋಡಿ?! ಮಹಾನ್ ರಾಷ್ಟ್ರವಾದಿ ಹಾಗೂ ಹಿಂದು ರಕ್ಷಕ ಶಿವಾಜಿ ಮಹಾರಾಜನ ಮಹಾರಾಷ್ಟ್ರಕ್ಕೆ ಅಬ್ದುರ್ ರೆಹಮಾನ್ ಅಂಟುಳೆ ಎಂಬ ಮುಸ್ಲಿಂ ಮುಖ್ಯಮಂತ್ರಿಯಾಗಬಲ್ಲ, ಹಿಂದುಗಳೇ ಬಹುಸಂಖ್ಯಾತರಾಗಿರುವ ಕೇರಳದಲ್ಲಿ ಆ್ಯಂಟನಿ, ಚಾಂಡಿಗಳೆಂಬ ಕ್ರೈಸ್ತರು ಮುಖ್ಯಮಂತ್ರಿಯಾದರೆ ಯಾರೂ ಬೇಸರಿಸಿಕೊಳ್ಳುವುದಿಲ್ಲ, ಹಿಂದುಗಳಿಂದ ತುಂಬಿರುವ ಆಂಧ್ರಪ್ರದೇಶ ಕ್ರೈಸ್ತರಾದ ಯೇಸುಪದ ಸ್ಯಾಮ್ಯುಯೆಲ್ ರಾಜಶೇಖರ ರೆಡ್ಡಿಯನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತದೆ ಹಾಗೂ ಅವರ ಪುತ್ರ ಜಗನ್ಮೋಹನ್‌ನನ್ನು ಅತ್ಯಂತ ಜನಪ್ರಿಯ ನಾಯಕನನ್ನಾಗಿ ಮಾಡುತ್ತದೆ, ಹಿಂದುಗಳೇ ಬಹುಸಂಖ್ಯಾತರಾಗಿರುವ ಕ್ಷೇತ್ರದಲ್ಲಿ ಮುಸ್ಲಿಮರು ಶಾಸಕ, ಸಂಸದರಾಗಿ ಆಯ್ಕೆಯಾಗುತ್ತಾರೆ. ಆದರೆ ಕಾಶ್ಮೀರಕ್ಕೆ ಒಬ್ಬ ಹಿಂದು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ! ಇಂತಹ ಮನಸ್ಥಿತಿಯೇ ನಮ್ಮ ಪಂಡಿತರು ಕಗ್ಗೊಲೆಯಾಗಲು, ಸ್ವಂತ ನಾಡಿನಲ್ಲೇ ನಿರಾಶ್ರಿತರಾಗಿ ಬದುಕಬೇಕಾದ ಸ್ಥಿತಿ ಬಂದಿದೆ. ಬಹಳ ಆಶ್ಚರ್ಯ ಹುಟ್ಟಿಸುವ ಸಂಗತಿಯೆಂದರೆ ಕಳೆದ 4 ತಿಂಗಳಿಂದ ಗ್ರಾಮ ಬಿಟ್ಟಿರುವ ಉತ್ತರ ಪ್ರದೇಶದ ಮುಜಫ್ಫರ್‌ನಗರದ ಆರು ಸಾವಿರ ನಿರಾಶ್ರಿತರ ಬಗ್ಗೆ ನಮ್ಮ ಟಿ.ವಿ. ಚಾನೆಲ್‌ಗಳು ನಿತ್ಯವೂ ಬೊಬ್ಬೆ ಹಾಕುತ್ತಿವೆ. ಅಲ್ಲಿನ ಜನ ಹಾಗೂ ಮಕ್ಕಳು ಅನುಭವಿಸುತ್ತಿರುವ ಕರುಣಾಜನಕ ಸ್ಥಿತಿಯ ಬಗ್ಗೆ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿವೆ. ಖಂಡಿತ ತಪ್ಪಲ್ಲ. ಆದರೆ ಕಳೆದ 25 ವರ್ಷಗಳಿಂದ ದಿಲ್ಲಿ ಹಾಗೂ ಜಮ್ಮು ಬಳಿಯ ನಿರಾಶ್ರಿತರ ಶಿಬಿರಗಳಲ್ಲಿ ಅತ್ಯಂತ ಅಮಾನವೀಯ ಸ್ಥಿತಿಯಲ್ಲಿ ಬದುಕು ದೂಡುತ್ತಿರುವ ನಾಲ್ಕು ಲಕ್ಷ ಕಾಶ್ಮೀರಿ ಪಂಡಿತರ ಪರಿಸ್ಥಿತಿ ನಮ್ಮ ಸಾಕ್ಷೀಪ್ರಜ್ಞೆಯನ್ನೇಕೆ ತಿವಿಯುವುದಿಲ್ಲ? ನಮ್ಮ ಮಾಧ್ಯಮಗಳ ಕರುಣಾಳು ಹೃದಯ ಕಾಶ್ಮೀರಿ ಪಂಡಿತರಿಗೇಕೆ ಮಿಡಿಯುವುದಿಲ್ಲ? ಈ ಮಧ್ಯೆ ಪ್ರಶಾಂತ್ ಭೂಷಣನೆಂಬ ಮಹಾಶಯ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಬೇಕು, ಅರ್ಥಾತ್ ಪಾಕಿಸ್ತಾನಕ್ಕೆ ಬಿಟ್ಟುಕೊಡಬೇಕು ಎನ್ನುತ್ತಿದ್ದಾರೆ. ಅದನ್ನು ಒಬ್ಬ ರಾಷ್ಟ್ರವಾದಿಯಾದವನು ಖಂಡಿಸಬೇಕು. ಆದರೆ ನಮ್ಮ ಕೇಜ್ರೀವಾಲ್ ಸಾಹೇಬರು ಅದು ಆತನ ವೈಯಕ್ತಿಕ ಅಭಿಪ್ರಾಯ ಎಂದು ನುಣುಚಿಕೊಳ್ಳುವ ಕಿಲಾಡಿತನ ತೋರಿಸುತ್ತಿದ್ದಾರೆ. ಇನ್ನು ಆರು ವರ್ಷಗಳ ಆಡಳಿತದಲ್ಲಿ ಬಿಜೆಪಿಯ ಬೊಗಳೆ ನಾಯಕರು ಮಾಡಿದ್ದೂ ಅಷ್ಟರಲ್ಲೇ ಇದೆ. ಇಂಥವರು ನಮ್ಮನ್ನಾಳುತ್ತಿರುವಾಗ ಕಾಶ್ಮೀರಿ ಪಂಡಿತರಿಗೆ ನ್ಯಾಯ ಸಿಗಲು ಸಾಧ್ಯವೇ? ಜನಾಭಿಪ್ರಾಯವೆಂದರೆ ಆರು ಲಕ್ಷ ಕಾಶ್ಮೀರಿ ಪಂಡಿತರ ಅಭಿಪ್ರಾಯವನ್ನೂ ಪಡೆಯಬೇಕು ಎಂಬುದು ಪ್ರಶಾಂತ್ ಭೂಷಣ್‌ನಂಥವರಿಗೆ ಅರ್ಥವಾಗುತ್ತದೆಯೇ? ಭಾರತದ ಅತ್ಯಂತ ಪ್ರತಿಷ್ಠಿತ ಗೂಢಚರ ಸಂಸ್ಥೆ "ರಾ" ಸ್ಥಾಪಿಸಿದ್ದು ಆರ್.ಎನ್. ಕಾವೋ ಎಂಬ ಕಾಶ್ಮೀರಿ ಪಂಡಿತ. ಅವರು 2002ರಲ್ಲಿ ತೀರಿಕೊಳ್ಳುವವರೆಗೂ ಪಂಡಿತರಿಗೆ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸಿದರು. ಆದರೆ ಸಂವೇದನೆಯನ್ನೇ ಕಳೆದುಕೊಂಡ ನಾಯಕರೇ ನಮ್ಮನ್ನಾಳುತ್ತಿರುವಾಗ ಏನನ್ನು ಮಾಡಲು ತಾನೇ ಸಾಧ್ಯ?
ಏಕೆ ವಿಷಯವನ್ನೀಗ ಪ್ರಸ್ತಾಪಿಸಲಾಗುತ್ತಿದೆಯೆಂದರೆ ಹಿಂದುಗಳೇ ಕಾಶ್ಮೀರ ಬಿಟ್ಟು ತೊಲಗಿ ಎಂಬ ಧಮಕಿ ಮಸೀದಿಗಳ ಮೈಕಿನಿಂದ ಮೊಳಗಿದ್ದು 1990, ಜನವರಿ 19ರಂದು. ನಾಳೆ ಆ ಘಟನೆಗೆ 24 ವರ್ಷಗಳು ತುಂಬಿ 25ಕ್ಕೆ ಕಾಲಿಡಲಿದೆ. ಪ್ರತಿವರ್ಷ ಆ ದಿನವನ್ನು "ಕಾಶ್ಮೀರಿ ಗುಳೇ ದಿನ" ಅಥವಾ "ಸಾಮೂಹಿಕ ಹತ್ಯಾಕಾಂಡ" ದಿನವಾಗಿ ಆಚರಿಸಲಾಗುತ್ತದೆ. ಇಪ್ಪತ್ನಾಲ್ಕು ವರ್ಷ ಕಳೆದರೂ ಪಂಡಿತರಿಗೆ ನ್ಯಾಯ ಕೊಡಲಾಗಿಲ್ಲದಿರುವುದು, ಇಂಥದ್ದೊಂದು ದಿನವನ್ನು ಆಚರಿಸಲಾಗುತ್ತಿರುವುದು ಈ ದೇಶದ ದುರಂತ ಹಾಗೂ ಹಿಂದುಗಳ ಷಂಡತನದ ಸಂಕೇತವಲ್ಲದೆ ಮತ್ತೇನು ಹೇಳಿ?

Saturday 20 June 2015

ಜನಸೇವೆಗೆ ರಾಜಕೀಯವೇ ಬೇಕಾಗಿಲ್ಲ, ಹೀಗೂ ಮಾಡಬಹುದು!

ಬಿಹಾರ, ಪಾಟ್ನಾ!
ಹೀಗೆಂದ ತಕ್ಷಣ ನಮ್ಮ ಕಣ್ಮುಂದೆ ಲಾಲೂ ಪ್ರಸಾದ್ ಯಾದವ್, ರಾಬ್ಡಿದೇವಿಯ ಚಿತ್ರಗಳು ಬಂದು ನಿಲ್ಲುತ್ತವೆ. ಅದರ ಹಿಂದೆಯೇ, ಬಿಹಾರದ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿರುವ ಕಳ್ಳರು, ಸುಳ್ಳರು, ಕೊಲೆಗಡುಕರು, ಕ್ರಿಮಿನಲ್‌ಗಳ ಮುಖಗಳೂ ಮೆರವಣಿಗೆ ಹೊರಡುತ್ತವೆ. ಇದೇ ಕಾರಣಕ್ಕೆ ಬಿಹಾರವನ್ನು ‘ಗೂಂಡಾರಾಜ್ಯ’ ಎಂದು ಕರೆಯುವ ಪರಿಪಾಠವೂ ಇದೆ. ಬಿಹಾರ ಅಂದ್ರೆ ಎಲ್ಲ ಅಕ್ರಮ, ಅವ್ಯವಹಾರಗಳಿಗೆ ಪರ್ಯಾಯ ಪದವೆನ್ನುವಂತಾಗಿದೆ. ಆದರೆ, ಈಗ ಅದೇ ಪಾಟ್ನಾದಿಂದ ದೇವರಂಥ ವ್ಯಕ್ತಿಯೊಬ್ಬ ಎದ್ದು ಬಂದಿದ್ದಾನೆ.
ಅವನ ಹೆಸರು ಆನಂದಕುಮಾರ್.
ಇವತ್ತು ಪಾಟ್ನಾದ ಬಸ್‌ನಿಲ್ದಾಣ ಅಥವಾ ರೈಲು ನಿಲ್ದಾಣದಲ್ಲಿ ನಿಂತು- ನಾಲ್ಕು ಮಂದಿಯ ಮುಂದೆ ಆನಂದಕುಮಾರ್ ಅಂದು ನೋಡಿ; ಜನ ಕಣ್ಣರಳಿಸುತ್ತಾರೆ. ನಿಂತಲ್ಲೇ ಕೈಮುಗಿಯುತ್ತಾರೆ. ‘ಓಹ್, ನಿಮ್ಗೆ ಮೇಷ್ಟ್ರು ಬೇಕಿತ್ತಾ’ ಎನ್ನುತ್ತಾರೆ. ಮರುಕ್ಷಣದಲ್ಲೇ ಈ ಆನಂದಕುಮಾರ್ ಅವರ ವಿಳಾಸವನ್ನು ಹೇಳುತ್ತಾರೆ. ಆನಂತರವೂ ಒಂದೆರಡು ನಿಮಿಷ ಅಲ್ಲಿಯೇ ನಿಂತರೆ- ಆನಂದಕುಮಾರ್ ಅವರನ್ನು ಹೊಗಳುತ್ತ ಹೊಗಳುತ್ತಾ ಮೈಮರೆಯುತ್ತಾರೆ.
ಸ್ವಾರಸ್ಯವೇನೆಂದರೆ- ಹೀಗೆ ಎಲ್ಲರಿಂದಲೂ ಹೊಗಳಿಸಿಕೊಳ್ಳುವ ಆನಂದಕುಮಾರ್ ರಾಜಕಾರಣಿಯಲ್ಲ. ಹಣವಂತನಲ್ಲ. ಯೋಗ ಗುರುವಲ್ಲ. ಚಿತ್ರನಟನಲ್ಲ. ರಾಬ್ಡಿದೇವಿಯ ಮಾವನಲ್ಲ. ಲಾಲೂ ಪ್ರಸಾದನಿಗೂ ಅವನಿಗೂ ಸಂಬಂಧವಿಲ್ಲ. ನಿತೀಶ್‌ಕುಮಾರನ ನೆಂಟನೂ ಅಲ್ಲ.  ಅಸಲಿಗೆ, ರಾಜಕೀಯದ ನೆರಳನ್ನು ಆತ ತನ್ನೆಡೆಗೆ ಬಿಟ್ಟುಕೊಂಡವನಲ್ಲ. ಆತ ಪೊಲೀಸ್ ಅಧಿಕಾರಿಯಲ್ಲ, ಕರಾಟೆ ಮಾಸ್ಟರ್ ಕೂಡ ಅಲ್ಲ. ಜ್ಯೋತಿಷಿಯೂ ಅಲ್ಲ. ಬದಲಿಗೆ, ಒಬ್ಬ ಟ್ಯೂಶನ್ ಮಾಸ್ಟರ್!
ನಂಬಿ ಮಹಾರಾಯರೆ, ಈ ಟ್ಯೂಶನ್ ಮಾಸ್ಟರ್, ಇವತ್ತು ಬಿಹಾರದಲ್ಲಿ ದೊಡ್ಡದೊಂದು ಕ್ರಾಂತಿ ಉಂಟುಮಾಡಿದ್ದಾನೆ. ವಿದ್ಯಾರ್ಥಿಗಳ ಪಾಲಿಗೆ ರೋಲ್‌ಮಾಡೆಲ್ ಆಗಿದ್ದಾನೆ. ತೀರಾ ಕಡಿಮೆ ಹಣ ಪಡೆದು ಎಲ್ಲರಿಗೂ ಟ್ಯೂಶನ್ ಮಾಡುತ್ತ ಶೈಕ್ಷಣಿಕ ಕ್ರಾಂತಿಯ ಹರಿಕಾರ ಎನಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಸೂಪರ್-೩೦ ಎಂಬ ಖಾಸಗಿ ಟ್ಯೂಶನ್ ಕೇಂದ್ರವನ್ನೂ ಆರಂಭಿಸಿದ್ದಾನೆ. ಆ ಕೇಂದ್ರದ ಮುಂದೆ ಆನೆಗಾತ್ರದ ಅಕ್ಷರದಲ್ಲಿ- ’ಇಲ್ಲಿ ಬಡವರ ಮಕ್ಕ ಳಿಗೆ ಉಚಿತವಾಗಿ ಪಾಠ ಹೇಳಲಾಗುವುದು’ ಎಂದು ಬೋರ್ಡ್ ಹಾಕಿದ್ದಾನೆ. ಅಷ್ಟೇ ಅಲ್ಲ, ನುಡಿದಂತೆಯೇ ನಡೆದುಕೊಂಡಿದ್ದಾನೆ.
ಈತನ ಬಳಿ ಟ್ಯೂಶನ್ ಹೇಳಿಸಿಕೊಂಡ ಹುಡುಗರು- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯವರು ನಡೆಸುವ ಐಐಟಿ-ಜೆಇಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಪಡೆದಿದ್ದಾರೆ. ಕೆಲವರು ಐಎಎಸ್‌ನಲ್ಲೂ ಪಾಸಾಗಿದ್ದಾರೆ. ಒಂದಷ್ಟು ಮಂದಿ ಬ್ಯಾಂಕ್ ಪರೀಕ್ಷೆ ಬರೆದು ಮ್ಯಾನೇಜರ್‌ಗಳಾಗಿದ್ದಾರೆ. ಹೀಗೆ, ದೊಡ್ಡ ದೊಡ್ಡ ಸ್ಥಾನ ತಲುಪಿಕೊಂಡವರೆಲ್ಲ ಕ್ಷಣಕ್ಷಣಕ್ಕೂ ತಮ್ಮ ಗುರು ಆನಂದಕುಮಾರ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ಗುರುಗಳಿಗೆ ಜೈ ಹೋ ಎಂದು ಸಂತೋಷದಿಂದ ಹೇಳಿದ್ದಾರೆ.
ಅಲ್ಲ, ಮೊನ್ನೆಮೊನ್ನೆಯವರೆಗೂ ರಕ್ತಸಿಕ್ತ ರಾಜಕಾರಣವನ್ನೇ ಉಸಿರಾಡುತ್ತಿದ್ದ ನಾಡು ಬಿಹಾರ. ಅಂಥ ಊರಿನಲ್ಲಿ ಆನಂದಕುಮಾರ್ ಥರದ ಜನ ಎದ್ದುನಿಲ್ಲಲು ಕಾರಣವಾದದ್ದು ಏನು? ಇಷ್ಟಕ್ಕೂ ಈ ಹುಡುಗ ಯಾರು? ಅವನ ಹಿನ್ನೆಲೆ ಏನು? ಅವನು ಟ್ಯೂಶನ್ ತರಗತಿ ಆರಂಭಿಸಲು ಕಾರಣವಾದರೂ ಏನು? ತೀರಾ ಬಡವರ ಮಕ್ಕಳಿಗೇ ಪಾಠ ಹೇಳುತ್ತೇನೆ ಎಂಬ ಆದರ್ಶದ ಹಂಬಲವಾದರೂ ಆ ಹುಡುಗನ ತಲೆಗೇರಿದ್ದೇಕೆ?
ಇಂಥ ಎಲ್ಲ ಕುತೂಹಲಗಳಿಗೂ ಇಲ್ಲಿ ಸ್ವಾರಸ್ಯಕರ ಉತ್ತರವಿದೆ.
ಈ ಆನಂದಕುಮಾರ್, ಬಿಹಾರದ ಒಂದು ಸಾಮಾನ್ಯ ಕುಟುಂಬದಿಂದ ಬಂದವನು. ಅವನ ತಂದೆ ಅಂಚೆ ಕಚೇರಿಯಲ್ಲಿ ಸೆಕೆಂಡ್ ಡಿವಿಜನ್ ಕ್ಲರ್ಕ್ ಆಗಿದ್ದ. ಬರುತ್ತಿದ್ದ ಸಂಬಳ ಹೊಟ್ಟೆ- ಬಟ್ಟೆಗೇ ಆಗಿಹೋಗುತ್ತಿತ್ತು. ಹಾಗಾಗಿ ಮಕ್ಕಳನ್ನು ಟ್ಯೂಶನ್‌ಗೆ ಕಳುಹಿಸುವ ಯೋಚನೆಯನ್ನೇ ಆನಂದ್‌ಕುಮಾರನ ತಂದೆ ಮಾಡಲಿಲ್ಲ. ಈ ಹುಡುಗ ಆನಂದ್, ಹಿಂದಿ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ. ಮನೆಯಲ್ಲಿ ಕಡುಬಡತನವಿತ್ತು ನಿಜ. ಆದರೆ, ಅದು ಈ ಹುಡುಗನ eನದಾಹಕ್ಕೆ ಅಡ್ಡಿಯಾಗಲಿಲ್ಲ. ಚಿಕ್ಕಂದಿನಲ್ಲಿಯೇ ಗಣಿತದತ್ತ ಆಕರ್ಷಿತನಾದ ಆನಂದಕುಮಾರ್, ಹೈಸ್ಕೂಲಿಗೆ ಬರುವ ವೇಳೆಗೆ ಕಾಲೇಜು ತರಗತಿಗಳ ಸಮಸ್ಯೆಗಳನ್ನೆಲ್ಲ ಬಿಡಿಸುವಷ್ಟು ಪ್ರಾವೀಣ್ಯ ಪಡೆದ. ಅಷ್ಟಕ್ಕೆ ಸುಮ್ಮನಾಗದೆ, ಗಣಿತ ಲೋಕದ ಪ್ರೊಫೆಸರ್‌ಗಳಿಗೇ ಸವಾಲು ಹಾಕುವಂತಿದ್ದ ಅವೆಷ್ಟೋ ಸಮಸ್ಯೆಗಳಿಗೆ ಉತ್ತರ ಕಂಡುಹಿಡಿದ. ಅವುಗಳನ್ನು ಇಂಗ್ಲೆಂಡಿನ ಮ್ಯಾಥಮೆಟಿಕಲ್ ಸ್ಪೆಕ್ಟ್ರಂ ಮತ್ತು ದಿ ಮ್ಯಾಥಮೆಟಿಕಲ್ ಗೆಜೆಟ್ ಪತ್ರಿಕೆಗಳಿಗೆ ಕಳಿಸಿಕೊಟ್ಟ.
ದಶಕಗಳ ಕಾಲದಿಂದಲೂ ಗಣಿತದ ಪ್ರೊಫೆಸರ್‌ಗಳಿಗೆ ಅರ್ಥವೇ ಆಗದಿದ್ದ ಸಮಸ್ಯೆಗಳನ್ನು, ಇನ್ನೂ ಮೀಸೆ ಚಿಗುರದ ಭಾರತದ ಹೈದನೊಬ್ಬ ಪರಿಹಾರ ಹುಡುಕಿದ್ದು ಕಂಡು ಅಮೆರಿಕ, ಇಂಗ್ಲೆಂಡಿನ ಪಂಡಿತರೆಲ್ಲ ಖುಷಿಯಾದರು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಈ ಹುಡುಗನಿಗೆ ಪ್ರವೇಶ ನೀಡಲೂ ಮುಂದಾಯಿತು. ಇನ್ನು ಕೆಲವೇ ವರ್ಷಗಳಲ್ಲಿ ನಾನೂ ಒಬ್ಬ ಗಣಿತದ ಪ್ರೊಫೆಸರ್ ಆಗುತ್ತೇನೆ ಎಂಬ ಖುಷಿಯಲ್ಲಿ ಈ ಆನಂದಕುಮಾರ್ ಪಾಸ್‌ಪೋರ್ಟ್, ವೀಸಾ ಮಾಡಿಸಿಕೊಳ್ಳಲು ಓಡಾಡತೊಡಗಿದ.
ಅಷ್ಟರಲ್ಲಿ ಆಗಬಾರದ ಅನಾಹುತವೊಂದು ಆಗಿಹೋಯಿತು. ಅದೊಂದು ದಿನ, ಕಚೇರಿಯಿಂದ ಮನೆಗೆ ಬಂದ ಆನಂದ್‌ಕುಮಾರನ ತಂದೆ, ಯಾಕೋ ಎದೆನೋವು ಎಂದು ಕುಸಿದು ಕೂತವರು ಮತ್ತೆ ಮೇಲೇಳಲಿಲ್ಲ!
ಅದುವರೆಗೂ ಕುಟುಂಬ ನಿರ್ವಹಣೆಗೆ ಆಧಾರವಾಗಿದ್ದುದೇ ತಂದೆಯ ಸಂಬಳ. ಅದೇ ಇಲ್ಲವೆಂದಮೇಲೆ, ಬದುಕಲು ಏನಾ ದರೂ ಮಾಡಲೇಬೇಕಿತ್ತು. ಈ ಸಂದರ್ಭದಲ್ಲಿ ಆನಂದಕುಮಾರ್, ಅನಿವಾರ್ಯವಾಗಿ ತನ್ನ ಉನ್ನತ ವ್ಯಾಸಂಗದ ಕನಸನ್ನು ಕೈಬಿಟ್ಟ. ಆನಂದ್‌ನ ತಾಯಿ, ಜೀವನ ನಿರ್ವಹಣೆಗೆಂದು ಹಪ್ಪಳ ತಯಾರಿಕೆಗೆ ನಿಂತಳು. ಬೆಳಗಿನಿಂದಲೂ ಮನೆಯಲ್ಲಿದ್ದುಕೊಂಡೇ ಗಣಿತದ ಸಮಸ್ಯೆಗಳನ್ನು ಬಿಡಿಸುತ್ತ, ಹೊಸ ಹೊಸ ಥಿಯರಿಗಳನ್ನು ಸೃಷ್ಟಿಸುತ್ತ ಕಾಲ ಕಳೆಯುತ್ತಿದ್ದ. ಸಂಜೆಯಾಗುತ್ತಿದ್ದಂತೆಯೇ ಮನೆಮನೆಯ ಬಾಗಿಲು ತಟ್ಟಿ ಹಪ್ಪಳ ಮಾರುತ್ತಿದ್ದ. ಹೀಗಿದ್ದಾಗಲೇ, ಹೀಗೆ ಮನೆಮನೆಗೂ ಹೋಗಿ ಹಪ್ಪಳ ಮಾರುವ ಬದಲು ಖಾಸಗಿಯಾಗಿ ಯಾಕೆ ಟ್ಯೂಶನ್ ಹೇಳಬಾರದು? ಹೇಗಿದ್ರೂ ನಿಂಗೆ ಗಣಿತ ಚೆನ್ನಾಗಿ ಗೊತ್ತಿದೆಯಲ್ಲ? ಅದೇ ವಿಷಯವನ್ನು ಯಾಕೆ ಹೇಳಿಕೊಡಬಾರದು ಎಂದು ಹಿತೈಷಿಯೊಬ್ಬರು ಸಲಹೆ ಮಾಡಿದರು. ಆಗ ಈ ಆನಂದಕುಮಾರ್‌ನ ವಯಸ್ಸೆಷ್ಟು ಗೊತ್ತೆ? ಬರೀ ೨೨ ವರ್ಷ. ಅಂದಹಾಗೆ, ಇದು 1995ರ ಮಾತು!
ಒಂದೆರಡು ದಿನ ಬಿಟ್ಟು ಯೋಚಿಸಿದಾಗ- ಹೌದಲ್ವಾ? ನಾನು ಹಾಗೇಕೆ ಮಾಡಬಾರದು ಎಂದು ಆನಂದ್‌ಕುಮಾರನಿಗೂ ಅನಿಸಿತು. ತಕ್ಷಣವೇ ೫೦೦ ರೂ. ಬಾಡಿಗೆಗೆ ಒಂದು ಪುಟ್ಟ ರೂಮ್ ಪಡೆದು ಅಲ್ಲಿ ಟ್ಯೂಶನ್ ಆರಂಭಿಸಿಯೇ ಬಿಟ್ಟ. ಗಣಿತದ ಮೇಲಿನ ಪ್ರೀತಿಯಿಂದ ತನ್ನ ಟ್ಯೂಶನ್ ಕೇಂದ್ರಕ್ಕೆ ಪ್ರಸಿದ್ಧ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಹೆಸರಿನಲ್ಲಿ- ‘ರಾಮಾನುಜನ್ ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್’ ಎಂದು ಹೆಸರಿಟ್ಟ.
ಮೊದಲ ವರ್ಷ ಟ್ಯೂಶನ್‌ಗೆಂದು ಬಂದವರು ಇಬ್ಬರೇ ಇಬ್ಬರು. ಆ ವರ್ಷ ಅವರಿಬ್ಬರೂ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದರು. ಮರುವರ್ಷ, ಟ್ಯೂಶನ್‌ಗೆ ಬಂದವರ ಸಂಖ್ಯೆ ೨೫ ದಾಟಿತು. ಹಾಗೆ ಪಾಠ ಹೇಳಿಸಿಕೊಂಡವರೆಲ್ಲ ನೂರಕ್ಕೆ ತೊಂಬತ್ತಕ್ಕೂ ಹೆಚ್ಚು ಅಂಕ ಪಡೆದರು. ಪರಿಣಾಮ, ಮೂರು ವರ್ಷ ತುಂಬು ವುದರೊಳಗೆ, ಆನಂದಕುಮಾರ್ ಬಳಿ ಟ್ಯೂಶನ್‌ಗೆ ಬಂದವರ ಸಂಖ್ಯೆ 500ನ್ನು ದಾಟಿತು.
ಒಂದು ವರ್ಷ ಟ್ಯೂಶನ್ ಹೇಳಿಸಿಕೊಳ್ಳಲು 1500 ರೂ. ಶುಲ್ಕ ಎಂದು ಈ ವೇಳೆಗೆ ಆನಂದಕುಮಾರ್ ಪ್ರಕಟಿಸಿದ್ದ. ಅಷ್ಟು ದುಡ್ಡು ಕೊಡಲು ವಿದ್ಯಾರ್ಥಿಗಳೂ ಸಿದ್ಧರಾಗಿದ್ದರು. ಹೀಗಿದ್ದಾಗಲೇ, ಅದೊಂದು ದಿನ ಆನಂದ್ ಬಳಿಗೆ ಬಂದ ಒಬ್ಬ ಹುಡುಗ- ‘ಸಾರ್, ನಾನು ತುಂಬಾ ಬಡವರ ಮನೆಯ ಹುಡುಗ. ನನಗೆ ಓದುವ ಆಸೆಯಿದೆ. ದೊಡ್ಡ ಅಧಿಕಾರಿ ಆಗಬೇಕೆಂಬ ಹಂಬಲವಿದೆ. ಗಣಿತದಲ್ಲಿ ತುಂಬಾ ಆಸಕ್ತಿಯಿದೆ. ಆದರೆ, ಟ್ಯೂಶನ್‌ಗೆ ಕೊಡುವಷ್ಟು ಹಣವಿಲ್ಲ’ ಎಂದನಂತೆ.
‘ಆ ಹುಡುಗನ ಮಾತು ಕೇಳಿ ತುಂಬಾ ಬೇಸರವಾಯಿತು. ನನ್ನ ತಂದೆ ಆಕಸ್ಮಿಕವಾಗಿ ಸತ್ತುಹೋದಾಗ ನಾನು ಎದುರಿಸಿದ ಪರಿಸ್ಥಿತಿ ನೆನಪಾಯಿತು. ತುಂಬಾ ಬಡಕುಟುಂಬದಿಂದ ಬಂದ ಮೂವತ್ತು ಮಂದಿಗೆ ಉಚಿತವಾಗಿ ಊಟ, ವಸತಿ, ಟ್ಯೂಶನ್ ಹೇಳುವ ನಿರ್ಧಾರಕ್ಕೆ ನಾನು ಬಂದದ್ದೇ ಆಗ. ಈ ವಿಷಯವನ್ನು ಅಮ್ಮನಿಗೆ ಹೇಳಿದಾಗ- ‘ನಾನು ಆ ಮಕ್ಕಳಿಗೆ ಅಡುಗೆ ಮಾಡಿಕೊಡ್ತೇನೆ ಕಂದಾ’ ಎಂದಳು ಅಮ್ಮ. ಆ ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯನ್ನು ನನಗೆ ಬಿಡು, ಆ ಜವಾಬ್ದಾರಿಯನ್ನು ನಾನು ತಗೋತೇನೆ ಎಂದು ವೃತ್ತಿಯಿಂದ ಸಂಗೀತಗಾರನಾಗಿರುವ ನಮ್ಮ ಅಣ್ಣ ಪ್ರಣವ್‌ಕುಮಾರ್ ಹೇಳಿದ. ಈ ಇಬ್ಬರ ಬೆಂಬಲದಿಂದ ನನ್ನ ಕೆಲಸ ಹಗುರಾಯಿತು. ಹೀಗೆ ಶುರುವಾದ ತರಗತಿಗೆ ಸೂಪರ್-30 ಎಂಬ ಹೆಸರು ಕೊಟ್ಟೆ ಎನ್ನುತ್ತಾನೆ ಆನಂದಕುಮಾರ್.
ನೀವು ಪಾಠ ಹೇಳುವುದರಲ್ಲಿ ಅಂಥದೇನಿದೆ ವಿಶೇಷ? ನಿಮ್ಮಲ್ಲಿ ಕಲಿತವರೆಲ್ಲ ಗಣಿತದಲ್ಲಿ ಪಂಡಿತರೇ ಆಗಿಬಿಡ್ತಾರಲ್ಲ? ಈ ಪವಾಡ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದರೆ ಆನಂದಕುಮಾರ್ ಹೇಳುವು ದಿಷ್ಟು- ‘ಗಣಿತ ಎಂದರೆ, ಹೆಚ್ಚುಕಮ್ಮಿ ಎಲ್ಲ ವಿದ್ಯಾರ್ಥಿಗಳಿಗೂ ಭಯ. ಆ ಭಯವನ್ನು ನಾವು ಮೊದಲ ದಿನವೇ ಹೋಗಲಾಡಿ ಸುತ್ತೇವೆ. ಕೂಡುವುದು, ಕಳೆಯುವುದು, ಗುಣಿಸುವುದು ಮತ್ತು ಭಾಗಿಸುವುದು ಇದಿಷ್ಟೇ ಗಣಿತ ಎಂದು ಒತ್ತಿ ಹೇಳುತ್ತೇವೆ. ಮುಖ್ಯವಾಗಿ, ಮೊದಲು ತುಂಬ ಸುಲಭವಾಗಿ ಅರ್ಥವಾಗುವ ಐವತ್ತರವತ್ತು ಸಮಸ್ಯೆಗಳನ್ನು ಬಿಡಿಸಿ, ನಂತರವಷ್ಟೇ ಕಷ್ಟದ ಸಮಸ್ಯೆಗಳಿಗೆ ಕೈಹಾಕುತ್ತೇವೆ. ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ತರಗತಿಯಲ್ಲೇ ಬಿಡಿಸುತ್ತೇವೆ. ಇದಿಷ್ಟೇ ನಮ್ಮ ಯಶಸ್ಸಿನ ಸೂತ್ರ…’
ಇವತ್ತು ಒಂದು ವಿಷಯಕ್ಕೆ ಭರ್ತಿ ಹತ್ತು ಸಾವಿರ ರೂ. ತಗೊಂಡು ಪಾಠ ಹೇಳುವ ಶಿಕ್ಷಕರಿದ್ದಾರೆ. ಟ್ಯೂಶನ್ ಮಾಫಿಯಾ ಕೂಡ ಎಲ್ಲ ನಗರಗಳಲ್ಲೂ ಇದೆ. ಹೀಗಿರುವಾಗ ಕಡಿಮೆ ಶುಲ್ಕ ಪಡೆಯುವುದರಿಂದ ನಿಮಗೆ ನಷ್ಟ ಆಗಿಲ್ಲವಾ? ಟ್ಯೂಶನ್ ಮಾಫಿ ಯಾದಿಂದ ಬೆದರಿಕೆ ಬಂದಿಲ್ಲವಾ ಎಂಬ ಪ್ರಶ್ನೆಗೆ ಆನಂದಕುಮಾರ್ ಹೇಳುತ್ತಾನೆ-
ಇವತ್ತು ಬಿಹಾರದಲ್ಲಿ ಟ್ಯೂಶನ್ ಕೇಂದ್ರಗಳನ್ನು ಹೆಸರಾಂತ ಕ್ರಿಮಿನಲ್‌ಗಳು ನಡೆಸುತ್ತಿದ್ದಾರೆ, ನಿಯಂತ್ರಿಸುತ್ತಿದ್ದಾರೆ. ನಾನು ತುಂಬಾ ಕಡಿಮೆ ಹಣಕ್ಕೆ ಟ್ಯೂಶನ್ ಮಾಡುತ್ತಿರುವುದರಿಂದ ಅವರ ವ್ಯಾಪಾರಕ್ಕೆ ಕೊಡಲಿಪೆಟ್ಟು ಬಿದ್ದಿದೆ. ಈ ಕಾರಣದಿಂದಲೇ ನನ್ನ ಮೇಲೆ ಹಲವರಿಗೆ ಸಿಟ್ಟಿದೆ. ಈಗಲೂ ನನಗೆ ದಿನಕ್ಕೆ ಎರಡಾದರೂ ಜೀವಬೆದರಿಕೆಯ ಕರೆಗಳು ಬರುತ್ತವೆ. ನನ್ನ ಮೇಲೆ ಒಂದೆರಡು ಬಾರಿ ಹಲ್ಲೆಯಾಗಿದೆ. ಒಮ್ಮೆ ಬಾಂಬ್ ದಾಳಿ ಕೂಡ ನಡೆದಿದೆ. ನನ್ನ ಬಳಿ ಪಾಠ ಹೇಳಿಸಿಕೊಂಡ ವಿದ್ಯಾರ್ಥಿಯೊಬ್ಬನಿಗೆ ಚೂರಿಯಿಂದ ಇರಿಯಲಾಗಿದೆ. ಇವೆಲ್ಲ ನನ್ನನ್ನು ಹೆದರಿಸುವ ತಂತ್ರಗಳೇ. ದೈವಕೃಪೆಯಿಂದ, ಎಲ್ಲ ಸಂದರ್ಭಗಳಲ್ಲೂ ನಾನು ಪ್ರಾಣಾಪಾಯ ದಿಂದ ಪಾರಾಗಿದ್ದೇನೆ. ಈಗ ಗನ್‌ಲೈಸೆನ್ಸ್ ಪಡೆದಿದ್ದೇನೆ. ಬೆಂಗಾವಲಿಗೆ ಅಂಗರಕ್ಷಕರನ್ನು ಇಟ್ಟುಕೊಂಡೇ ಓಡಾಡುತ್ತಿದ್ದೇನೆ. ಒಂದಂತೂ ನಿಜ, ದುಡ್ಡು ನನಗೆ ಮುಖ್ಯವಲ್ಲ. ಬಡವರ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಬೇಕು ಎಂಬುದು ನನ್ನ ಕನಸಾಗಿತ್ತು. ಅದನ್ನು ನನಸು ಮಾಡಿಕೊಂಡಿದ್ದೇನೆ. ಮೊನ್ನೆ ಮೊನ್ನೆಯವರೆಗೂ ಕ್ರೈಂ ಸಿಟಿ ಎಂದು ಕರೆಸಿಕೊಂಡಿದ್ದ ಪಾಟ್ನಾವನ್ನು ಈಗ ‘ಎಜುಕೇಷನ್ ಸಿಟಿ’ಎಂದು ಕರೆಯುವಂತೆ ಮಾಡಿದ್ದೇನೆ. ಇಂಥದೊಂದು ಅಪರೂಪದ ಬದಲಾವಣೆ ತಂದ ಹೆಮ್ಮೆ ನನಗಿದೆ…
ಈಗ ಏನಾಗಿದೆ ಗೊತ್ತೆ? ಪಾಟ್ನಾದ ಆ ಹಳ್ಳಿಹೈದನ ಯಶೋಗಾಥೆ ದೇಶದ ಗಡಿದಾಟಿ ಅಮೆರಿಕ ತಲುಪಿ ಅಲ್ಲೂ ಸುದ್ದಿಯಾಗಿದೆ. ಜಗತ್ತಿನ ಅತ್ಯುತ್ತಮ ಕೋಚಿಂಗ್ ತರಗತಿಗಳ ಪೈಕಿ ಆನಂದಕುಮಾರ್‌ನ ಸೂಪರ್-30 ಶಾಲೆಯೂ ಸ್ಥಾನ ಪಡೆದು ಕೊಂಡಿದೆ. ಅದನ್ನು ಭಾರತದ ಅತ್ಯುತ್ತಮ ಕೋಚಿಂಗ್ ಕ್ಲಾಸ್ ಎಂದೇ ಬಣ್ಣಿಸಲಾಗಿದೆ. ಈ ಅಪರೂಪದ ಸಾಧನೆಗೆ ಅಮೆರಿಕ ಸರಕಾರ ಒಂದು ವಿಶೇಷ ಪ್ರಶಸ್ತಿಯನ್ನೂ ನೀಡಿದೆ. ಒಬಾಮಾ ಅವರ ವಿಶೇಷ ಕಾರ್ಯದರ್ಶಿ ರಶೀದ್ ಹುಸೇನ್, ಈ ಪ್ರಶಸ್ತಿಯನ್ನು ಆನಂದಕುಮಾರ್‌ಗೆ ತಲುಪಿಸಿ ಬೆನ್ನುತಟ್ಟಿದ್ದಾರೆ. ಕೈ ಮುಗಿದಿದ್ದಾರೆ.
ಆ ಮಹಾರಾಯ ಒಬಾಮಾ ಅಷ್ಟಕ್ಕೇ ಸುಮ್ಮನಾಗಿಲ್ಲ. ಅಮೆರಿಕಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಗಣಿತದ ಹಲವು ಸಮಸ್ಯೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡುವಂತೆ ಅಮೆರಿಕದ ವಿಶ್ವವಿದ್ಯಾಲಯಗಳೂ ಆನಂದಕುಮಾರ್ ಅವರಿಗೆ ಆಹ್ವಾನ ನೀಡಿವೆ. ಅಮೆರಿಕದಲ್ಲಿ ಗಣಿತದ ಅಭ್ಯಾಸ ಮಾಡಬೇಕು ಎಂದುಕೊಂಡಿದ್ದ ಹುಡುಗ, ಇವತ್ತು ಅಲ್ಲಿನ ಅಧ್ಯಾಪಕರುಗಳಿಗೇ ಉಪನ್ಯಾಸ ನೀಡುವ ಮಟ್ಟ ತಲುಪಿಕೊಂಡಿದ್ದಾನೆ, ಕೇವಲ ಸ್ವಸಾಮರ್ಥ್ಯದಿಂದ!
ಇಂದು ಆನಂದನಿಂದಾಗಿ ಬಡಮಕ್ಕಳು ಉನ್ನತ ಹುದ್ದೆಗೇರು ವಂತಾಗಿದೆ. ಗಣಿತ ಸುಲಿದ ಬಾಳೆಹಣ್ಣಿನಂತಾಗಿದೆ. ಜನಸೇವೆ ಮಾಡಲು ರಾಜಕೀಯವೇ ಬೇಕಾಗಿಲ್ಲ. ದುರ್ದೈವವೆಂದರೆ ಜನ ಸೇವೆಯ ಹೆಸರಿನಲ್ಲಿ ರಾಜಕೀಯಕ್ಕೆ ಬರುವವರು ಟ್ಯೂಶನ್ ಹೇಳಿಸಿ ಕೊಂಡೂ ಎಲ್ಲಾ ವಿಷಯಗಳಲ್ಲೂ ಫೇಲಾದವರೇ. ಇರಲಿ ಬಿಡಿ.
ಆನಂದನಂಥವರು ಸ್ಫೂರ್ತಿಯ ಚಿಲುಮೆಯಾಗುತ್ತಾರೆ.

Thursday 18 June 2015

ದುಡ್ಡಿದ್ದೋರೆಲ್ಲ ಜುಗ್ಗರಲ್ಲ, ಖರ್ಚು ಮಾಡುವವರೆಲ್ಲ ಶ್ರೀಮಂತರಲ್ಲ!

ಒಮ್ಮೆ ಧೀರೂಭಾಯಿ ಅಂಬಾನಿ ಪಂಚತಾರಾ ಹೋಟೆಲ್ ಗೆ ಹೋಗಿದ್ದರಂತೆ. ವೇಟರ್ ಮೆನು ಕಾರ್ಡ್ ತಂದಿಟ್ಟನಂತೆ. ಅಂಬಾನಿ ಎಲ್ಲ ಐಟಮ್್ಗಳ ರೇಟುಗಳನ್ನು ಗಮನಿಸಿದರಂತೆ. ಯಾವ ಆಹಾರ ಪದಾರ್ಥಗಳ ಬೆಲೆಯೂ ಐನೂರು ರುಪಾಯಿಗಳಿಗಿಂತ ಕಡಿಮೆ ಇರಲಿಲ್ಲ. ಒಂದು ಕಪ್ ಚಹದ ಬೆಲೆ ಆರು ನೂರು ರುಪಾಯಿ ಎಂದು ಬರೆದಿತ್ತು. ಒಂದು ಚಪಾತಿ ಮತ್ತು ರೊಟ್ಟಿಗೆ ತಲಾ ನೂರೈವತ್ತು ರುಪಾಯಿ!
ಹೊಟ್ಟೆ ಹಸಿದಿತ್ತು. ಹಾಗಂತ ಕಿಸೆಯಲ್ಲಿ ಹಣ ಇರಲಿಲ್ಲ ಅಂತ ಅಲ್ಲ. ಸಾವಿರಾರು ಕೋಟಿ ರುಪಾಯಿಗಳ ಶ್ರೀಮಂತ. ಆದರೆ, ಜತೆಯಲ್ಲಿ ಯಾರೂ ಇರಲಿಲ್ಲ. ಯಾವ ಪ್ರತಿಷ್ಠೆ ಮೆರೆಯಬೇಕೂಂತ ಅಷ್ಟೆಲ್ಲ ಹಣ ಕೊಡಬೇಕು. ಇಷ್ಟೇ ಹಣದಲ್ಲಿ ವರ್ಷವಿಡೀ ಉಣಬಹುದಲ್ಲ, ಒಂದು ಕಪ್ ಚಹಕ್ಕೆ ಐನೂರು ರುಪಾಯಿ ಕೊಡುವುದಂದರೇನು, ವರ್ಷವಿಡೀ ಚಹ ಕುಡಿಯಬಹುದಲ್ಲ….
ಹೀಗೆಲ್ಲ ಯೋಚಿಸಿದ ಅಂಬಾನಿ ಹಿಂದೆ ಮುಂದೆ ನೋಡದೇ, ಹೋಟೆಲ್ ವೇಟರ ಮತ್ತು ಸುತ್ತಲಿನವರ ಪ್ರತಿಕ್ರಿಯೆಗೂ ಕಾಯದೇ ಹೊರ ನಡೆದು, ರಸ್ತೆ ಬದಿಯಲ್ಲಿ ತಮ್ಮ ಕಾರನ್ನು ನಿಲ್ಲಿಸಿ, ಹತ್ತು ರುಪಾಯಿಗೆ ಹೊಟ್ಟೆ ತುಂಬಾ ಊಟ ಮಾಡಿದರಂತೆ.
ಈ ಘಟನೆ ಬಗ್ಗೆ ಅಂಬಾನಿ ಹೀಗೆ ಹೇಳಿದರಂತೆ- “ನಾನು ಸ್ಟಾರ್ ಹೋಟೆಲ್ ಗಳಿಗೆ ಹೋಗಿಲ್ಲ ಅಂತಲ್ಲ. ಸಾಕಷ್ಟು ಸಲ ಹೋಗಿದ್ದೇನೆ. ನಮ್ಮ ಕಂಪನಿಯ ಹಲವಾರು ಔತಣಕೂಟಗಳನ್ನು ಅಲ್ಲಿ ಆಯೋಜಿಸಿದ್ದೇನೆ. ಅವೆಲ್ಲ ಅನಿವಾರ್ಯ. ಆದರೆ ನಾನೊಬ್ಬನೇ ಎಂದೂ ಅಲ್ಲಿಗೆ ಹೋಗಿ ಊಟ ಮಾಡಿಲ್ಲ. ಅಗತ್ಯ ಮತ್ತು ಅವಶ್ಯಕತೆ ಇದ್ದರೆ ಖರ್ಚು ಮಾಡಬಹುದು. ಹತ್ತು ರುಪಾಯಿಗೆ ಐನೂರು ರುಪಾಯಿ ಕೊಡುವಷ್ಟು ನಾನು ಶ್ರೀಮಂತನಿದ್ದಿರಬಹುದು. ಆದರೆ, ಅಷ್ಟು ಮೂರ್ಖನಲ್ಲ. ನಾನು ಅಂದು ಆ ಹೋಟೆಲ್್ನಿಂದ ಎದ್ದು ಬಂದ ಪ್ರಸಂಗಕ್ಕೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪ್ರತಿಕ್ರಿಯಿಸಿರಬಹುದು. ಅಂಬಾನಿ ಜುಗ್ಗ ಎನ್ನಬಹುದು, ನನಗೆ ಸ್ವಲ್ಪವೂ ವಿಷಾದವಿಲ್ಲ. ಇಂದಿಗೂ ಆ ನನ್ನ ನಿರ್ಧಾರದ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಉಳಿಸಿದ ಹಣ ಗಳಿಸಿದ ಹಣಕ್ಕಿಂತ ಹೆಚ್ಚು ಎಂಬುದು ನನಗೆ ಚೆನ್ನಾಗಿ ಅರಿವಿಗೆ ಬಂದಿದೆ. ನಾನು ಸ್ಟಾರ್ ಹೋಟೆಲ್್ನಲ್ಲಿ ಊಟ ಮಾಡಿದ ಬಿಲ್ ಕೊಟ್ಟವರಿಗೆ ಮಾತ್ರ ನನ್ನ ಬಗ್ಗೆ ಮಾತಾಡಲು ನೈತಿಕ ಹಕ್ಕಿದೆ. ಸ್ಟಾರ್ ಹೋಟೆಲ್್ಗಳಲ್ಲಿ ಒಂದಕ್ಕೆ ನೂರು ತೆತ್ತು ಬರುವವರ ಬಗ್ಗೆ ನನಗೆ ವಿಷಾದವಿದೆ. ಈ ಕಾರಣಕ್ಕಾಗಿಯೇ ನಾನು ಅಂಥ ಹೋಟೆಲ್ ಗಳನ್ನು ಕಟ್ಟಲಿಲ್ಲ.’
ಇನ್ನೊಮ್ಮೆ ಅಂಬಾನಿ ತಮ್ಮ ಮಕ್ಕಳ ಒತ್ತಾಯಕ್ಕೆ ಸ್ಟಾರ್ ಹೋಟೆಲ್್ಗೆ ಹೋಗಿದ್ದರಂತೆ. ಊಟವಾದ ಬಳಿಕ ಅನಿಲ್ ಅಂಬಾನಿ ವೇಟರ್ ಗೆ ಎರಡು ನೂರು ರುಪಾಯಿ ಟಿಪ್ಸ್ ಇಟ್ಟರಂತೆ. ಇದನ್ನು ಗಮನಿಸಿದ ಧೀರೂಭಾಯಿ ಅಂಬಾನಿ “ಪರವಾಗಿಲ್ಲ, ನಿನ್ನ ಅಪ್ಪ ಶ್ರೀಮಂತ, ಹೀಗಾಗಿ ಅಷ್ಟು ಟಿಪ್ಸ್ ಇಟ್ಟಿದ್ದೀಯ. ಆದರೆ ನನ್ನ ಅಪ್ಪ ಅಂಥ ಶ್ರೀಮಂತನಲ್ಲ. ಹೀಗಾಗಿ ನಾನು ಅಷ್ಟು  ಟಿಪ್ಸ್ ಇಡುವುದಿಲ್ಲ’ ಎಂದರಂತೆ.
ದುಡ್ಡಿನ ಬಗ್ಗೆ ಜನರ ಅಭಿಪ್ರಾಯವೇನು ಎಂಬ ಬಗ್ಗೆ ಇತ್ತೀಚೆಗೆ ಪ್ರತಿಷ್ಠಿತ “ಫೋರ್ಬ್ಸ್್’ ಪತ್ರಿಕೆ ನಡೆಸಿದ ಸಂದರ್ಶನದ ವಿವರಗಳನ್ನು ಓದುತ್ತಿದ್ದೆ. ಹಣದ ಬಗ್ಗೆ ಒಬ್ಬೊಬ್ಬರ ಧೋರಣೆ ಒಂದೊಂದು ರೀತಿ. ಹಣ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಗುಣ, ವ್ಯಕ್ತಿತ್ವವನ್ನು ತಂದುಕೊಟ್ಟಿದೆ. ಅತಿ ಶ್ರೀಮಂತನಾದವನಿಗೂ, ಬಡವನಿಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬ ತತ್ವಜ್ಞಾನಿಯ ಮಾತು ಈ ಸಮೀಕ್ಷೆಯನ್ನು ಓದಿದಾಗ ನೆನಪಿಗೆ ಬರದೇ ಇರದು.
ಜಗತ್ತಿನ ಅತ್ಯಂತ ಶ್ರೀಮಂತ ವಾರೆನ್ ಬಫೆಟ್ ಇದ್ದಾನಲ್ಲ, ಅವನಿಗೆ ಸ್ವಂತ ಮನೆಯೆಂಬುದೇ ಇಲ್ಲ. ಆತ ಒಂದು ಮೊಬೈಲ್ ಫೋನನ್ನೂ ಇಟ್ಟುಕೊಂಡಿಲ್ಲ. ತನ್ನ ಕಾರನ್ನು ತಾನೇ ಡ್ರೈವ್ ಮಾಡುತ್ತಾನೆ. ಅಂದರೆ ಡ್ರೈವರ್್ಗಳನ್ನು ಇಟ್ಟುಕೊಂಡಿಲ್ಲ. ತಾನೆ ಸ್ವತಃ ಮಾಲ್್ಗೆ ಹೋಗಿ ಮನೆಗೆ ಬೇಕಾಗುವ ಸಾಮಾನುಗಳನ್ನು ಶಾಪಿಂಗ್ ಮಾಡುತ್ತಾನೆ. ಮನೆ ತುಂಬಾ ಆಳು-ಕಾಳುಗಳನ್ನು ಇಟ್ಟುಕೊಂಡಿಲ್ಲ. ಬಾಡಿಗೆ ಮನೆಯಲ್ಲಿ ಆತ ಎಲ್ಲ ರೀತಿಯ ತುಂಬು ನೆಮ್ಮದಿಯ ಜೀವನವನ್ನು ಕಾಣುತ್ತಿದ್ದಾನೆ.
ಇಂಥ ವಾರೆನ್ ಬಫೆಟ್ ಒಂದು ದಿನ ತಾನು ದುಡಿದ ಹಣದ ಬಹುಪಾಲನ್ನು “ತಗೊಳ್ಳಿ ಚಾರಿಟಿಗೆ. ನಾನು ದುಡಿದಿದ್ದನ್ನೆಲ್ಲ ಇದೋ ದೇಣಿಗೆ ಕೊಡುತ್ತಿದ್ದೇನೆ’ ಎಂದುಬಿಟ್ಟ. ಮರುದಿನದಿಂದ ಮತ್ತಷ್ಟು ಆಸ್ಥೆಯಿಂದ ದುಡ್ಡು ಗಳಿಸಲು ಕುಳಿತ. ಹೆಚ್ಚು ಹಣ ಗಳಿಸುವ ಹೊಸ ಹೊಸ ಮಾರ್ಗಗಳ ಬಗ್ಗೆ ಚಿಂತಿಸಲಾರಂಭಿಸಿದ. ದೇಣಿಗೆ ಕೊಡುವುದನ್ನೇ ಹವ್ಯಾಸ ಮಾಡಿಕೊಂಡ. ಇದು ಅವನಿಗೆ ಹೆಚ್ಚು ದುಡಿಯುವುದು ಹೇಗೆ ಎಂಬುದನ್ನು ಕಲಿಸಲಾರಂಭಿಸಿತು. ಇನ್ನು ವಾರೆನ್ ಬಫೆಟ್್ನನ್ನು ನೋಡಿದವರು ಅವನೇಕೆ ರೋಲ್ಸ್ ರಾಯ್ಸ್ ಕಾರನ್ನು ಖರೀದಿಸಲಿಲ್ಲ, ಅವನೇಕೆ ಭವ್ಯ ಬಂಗಲೆ ಕಟ್ಟಿಸಲಿಲ್ಲ, ನಾವೇ ಆಳು-ಕಾಳುಗಳನ್ನು ಇಟ್ಟುಕೊಳ್ತೇವೆ ಅವನಿಗೇನು ಧಾಡಿ ಎಂದರೆ ಅವರಿಗೆ ಏನೆನ್ನೋಣ?
ಹಣದ ಬಗ್ಗೆ ಎಲ್ಲರ ಧೋರಣೆಯೂ ಒಂದೇ ರೀತಿ ಇರುವುದಿಲ್ಲ. ಭಾರತ ಪತ್ರಿಕೋದ್ಯಮದ ಧೀಮಂತ ರಾಮನಾಥ ಗೋಯೆಂಕಾ ಅವರ ಜೀವನದ ಘಟನೆಯೊಂದನ್ನು ಇಲ್ಲಿ ಉಲ್ಲೇಖಿಸಬಹುದಾದರೆ, ಒಮ್ಮೆ ಹಬ್ಬದ ನಿಮಿತ್ತ ಗೋಯೆಂಕಾ ಅವರಿಗೆ ಅವರ ಸೊಸೆ ಖಾದಿ ಜುಬ್ಬಾ, ಧೋತಿಯನ್ನು ಉಡುಗೊರೆಯಾಗಿ ಕೊಟ್ಟರಂತೆ. ಇದಕ್ಕೆ ಪ್ರತಿಯಾಗಿ ರಾಮನಾಥ ಗೋಯೆಂಕಾ ಅವರು ಸೊಸೆಗೆ ಪತ್ರ ಬರೆದರಂತೆ- “ಹಬ್ಬದ ನಿಮಿತ್ತ ನನಗೆ ಉಡುಗೊರೆಯಾಗಿ ಧೋತಿ, ಜುಬ್ಬವನ್ನು ಕೊಟ್ಟಿದ್ದಕ್ಕೆ ನನಗೆ ಬಹಳ ಸಂತಸವಾಗಿದೆ. ಆದರೆ ಇನ್ನು ಮುಂದೆ ನನಗೆ ಇಂಥ ವಸ್ತ್ರವನ್ನು ಖಾದಿ ಭಂಡಾರದಲ್ಲಿ ಶೇ.30ರಷ್ಟು ರಿಯಾಯತಿ ದರದಲ್ಲಿ ಮಾರಾಟವಿದ್ದ ಸಂದರ್ಭದಲ್ಲಿ ಖರೀದಿಸಿ ಕೊಡಬಹುದು.’
ಹಣದ ಬಗ್ಗೆ ಅಂಥ ಧೋರಣೆ ತಳೆದಿದ್ದರು ಗೋಯೆಂಕಾ. ಹಣದ ಮಹತ್ವ ಗೊತ್ತಿದ್ದವರು, ಜೀವನದಲ್ಲಿ ಶಿಸ್ತನ್ನು ರೂಪಿಸಿಕೊಂಡವರು, ಜೀವನದಲ್ಲಿ ಪರಿಶ್ರಮದ ಅರಿವು ಇರುವವರು ಮಾತ್ರ ಇಂಥ ನಿಲುವು ತಾಳಲು ಸಾಧ್ಯ.
ಪತ್ರಕರ್ತೆ ಬಚಿ ಕರ್ಕಾರಿಯಾ “ಟೈಮ್ಸ್ ಆಫ್ ಇಂಡಿಯಾ’ ಪತ್ರಿಕೆ ಹಾಗೂ ಸಂಸ್ಥೆಯ ಅಂತರಂಗ ಪರಿಚಯಿಸುವ ಪುಸ್ತಕವೊಂದನ್ನು ಬರೆದಿದ್ದಾರೆ. ಅದರ ಹೆಸರು Behind the Times ಅಂತ. ಈ ಕೃತಿಯಲ್ಲಿ ಆ ಪತ್ರಿಕೆಯ ಮಾಲೀಕ ಸಮೀರ್ ಜೈನ್ ಕುರಿತು ಸ್ವಾರಸ್ಯವಾಗಿ ಬರೆದಿದ್ದಾರೆ.
ಸಮೀರ್ ಜೈನ್ ಎಷ್ಟು ಧಾರಾಳಿಯೋ, ಅಷ್ಟೇ ದುಂದು ವೆಚ್ಚವನ್ನು ಕಂಡರೆ ಆಗದವರು. ಅನಗತ್ಯವಾಗಿ ಒಂದು ರುಪಾಯಿ ಹೆಚ್ಚು ಖರ್ಚಾಗುವುದನ್ನು ಸಹಿಸದವರು. ಒಮ್ಮೆ ಸಮೀರ್್ಜೈನ್ ಅವರು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳಲು ತಮ್ಮ ಜಾಹೀರಾತು ವಿಭಾಗದ ಮುಖ್ಯಸ್ಥೆ ಇಂದಿರಾ ಡೆಯಿಸ್ ಹಾಗೂ ಇತರರೊಂದಿಗೆ ವಿದೇಶಕ್ಕೆ ಹೋಗಿದ್ದರು. ತಾವು ತಂಗಿದ್ದ ಹೋಟೆಲ್್ನಲ್ಲಿ ಇಂದಿರಾ ಅವರು ರಿಸೆಪ್್ಶನ್ ಕೌಂಟರ್ ಬಳಿ ಹೋಗಿ ಮರುದಿನ ಆರು ಗಂಟೆಗೆ ತಮ್ಮನ್ನು ಎಬ್ಬಿಸುವಂತೆಯೂ, ಅದಾದ ಐದು ನಿಮಿಷದ ಬಳಿಕ ಬೆಡ್ ಟೀ ತರುವಂತೆಯೂ ಹೇಳಿದರು. ಅಲ್ಲಿಯೇ ಸನಿಹದಲ್ಲಿದ್ದ ಸಮೀರ್ ಜೈನ್ ಈ ಸಂಭಾಷಣೆಯನ್ನು ಕೇಳಿಸಿಕೊಂಡರು, ಇಂದಿರಾ ಹತ್ತಿರ ಹೋಗಿ  ತಮ್ಮ ಕೋಟಿನ ಜೇಬಿನಿಂದ ಏನನ್ನೋ ತೆಗೆದು ಅವಳ ಕೈಗೆ ಕೊಟ್ಟರು.
ನೋಡಿದರೆ ಎರಡು ಟೀ ಬ್ಯಾಗ್!
‘ಬೆಡ್ ಟೀ ಬದಲು ಬರೀ ಬಿಸಿ ನೀರನ್ನಷ್ಟೇ ತರಲು ಹೇಳಿ, ಈ ಟೀ ಬ್ಯಾಗ್ ಅದ್ದಿಕೊಳ್ಳಿ. ಅದಕ್ಯಾಕೆ ಸುಮ್ಮನೆ ಮುನ್ನೂರು-ನಾನೂರು ರುಪಾಯಿ ಖರ್ಚು ಮಾಡುತ್ತೀರಿ? ನಾನು ಸದಾ ಪಂಚತಾರಾ ಹೋಟೆಲ್್ನಲ್ಲಿ ಉಳಿದುಕೊಳ್ಳುವಾಗ ಟೀ ಬ್ಯಾಗನ್ನು ನನ್ನೊಂದಿಗೆ ಇಟ್ಟುಕೊಂಡಿರುತ್ತೇನೆ’ ಎಂದರು ಸಮೀರ್ ಜೈನ್. ಭಾರತದ ನಂ.1 ಪತ್ರಿಕಾ ಸಂಸ್ಥೆಯ, ಶ್ರೀಮಂತ ಮಾಲೀಕರು ರೂಪಿಸಿಕೊಂಡ ರೂಢಿಯಿದು.
ಇನ್ನೊಂದು ಸಂದರ್ಭ. ಸಮೀರ್ ಜೈನ್ ಅವರು ಪತ್ರಿಕೆಯ 175ನೇ ವಾರ್ಷಿಕೋತ್ಸವದ ನಿಮಿತ್ತ ಪಂಚತಾರಾ ಹೋಟೆಲ್್ನಲ್ಲಿ ಔತಣಕೂಟವನ್ನು ಏರ್ಪಡಿಸಿದ್ದರು. ಅವರ ಸಹದ್ಯೋಗಿಯೊಬ್ಬರು ಊಟ ಮಾಡುವಾಗ ಎರಡು-ಮೂರು ಸಲ ಪ್ಲೇಟನ್ನು ಬದಲಾಯಿಸಿದರು. ಇದನ್ನು ಗಮನಿಸಿದ ಸಮೀರ್ ಜೈನ್, “ನೋಡಿ, ಪಂಚತಾರಾ ಹೋಟೆಲ್್ನಲ್ಲಿ ಇಂಥ ಪಾರ್ಟಿಯಲ್ಲಿ ಎಷ್ಟು ಜನ ಊಟ ಮಾಡಿದ್ದಾರೆಂಬುದನ್ನು ಪ್ಲೇಟ್್ಗಳಿಂದ ಲೆಕ್ಕ ಹಾಕುತ್ತಾರೆ. ನೀವು ಊಟ ಮಾಡುವಾಗ ಪ್ರತಿಸಲ ಬೇರೆ ಬೇರೆ ಐಟೆಮ್್ಗಳನ್ನು ಹಾಕಿಕೊಳ್ಳುವಾಗ ಪ್ಲೇಟನ್ನು ಬದಲಿಸಿದರೆ, ಹೆಚ್ಚು ಜನ ಊಟ ಮಾಡಿದ್ದಾರೆಂದು ಹೆಚ್ಚು ಬಿಲ್ ಮಾಡುತ್ತಾರೆ. ಆದ್ದರಿಂದ ಒಂದೇ ಪ್ಲೇಟಿನಿಂದ ಊಟ ಮಾಡಿ’ ಎಂದು ಹೇಳಿದರು.
ಸಮೀರ್್ಜೈನ್ ಹಣ ಉಳಿಸುವ ಸಂಗತಿ ಬಂದಾಗ ಅವು ಎಷ್ಟೇ ಸಣ್ಣಪುಟ್ಟ ಅಂಶಗಳಾಗಿರಲಿ, ಅದನ್ನು ತಮ್ಮ ಸಹೋದ್ಯೋಗಿಗಳಿಗೆ ತಿಳಿಸದೇ ಬಿಡುತ್ತಿರಲಿಲ್ಲ. ಅಷ್ಟೇ ಅಲ್ಲ, ಅದನ್ನು ಭಾರತದಲ್ಲಿರುವ ತಮ್ಮ ಎಲ್ಲ ಆವೃತ್ತಿಗಳಲ್ಲೂ ಜಾರಿಗೆ ತರುತ್ತಾರೆ. ಒಮ್ಮೆ ಬಳಸಿದ ಕಾಗದ, ಲಕೋಟೆಗಳನ್ನು ಪುನಃ ಬಳಸುವಂತೆ ಸೂಚಿಸುತ್ತಾರೆ. ಒಂದೇ ಮಗ್ಗುಲಿಗೆ ಬಳಸಿದ ಕಾಗದವನ್ನು ಕಸದ ಬುಟ್ಟಿಗೆ ಎಸೆದಿದ್ದನ್ನು ಕಂಡರೆ ಸುಮ್ಮನೆ ಬಿಡುವುದಿಲ್ಲ. ಖಾಲಿಯಿರುವ ಮಗ್ಗುಲನ್ನು ಬಳಸಿ ಎಂದು ಸೂಚಿಸುತ್ತಾರೆ.
ಲೆಟರ್್ ಹೆಡ್ ನಲ್ಲಿ ಬರೆದಿದ್ದನ್ನು ನೇರವಾಗಿ ಫ್ಯಾಕ್ಸ್ ಮಾಡುವುದನ್ನು ಅವರು ಸಹಿಸುತ್ತಿರಲಿಲ್ಲ. ಹಾಗೆ ಮಾಡುವ ಬದಲು ಆ ಲೆಟರ್್ ಹೆಡ್ ಫೋಟೋಕಾಪಿ (ಜೆರಾಕ್ಸ್) ತೆಗೆದು ಫ್ಯಾಕ್ಸ್ ಮಾಡುವಂತೆ ಹೇಳುತ್ತಿದ್ದರು. ಕಾರಣ ಇಷ್ಟೆ. ಲೆಟರ್್ಹೆಡ್ ಬಳಸಿದ ಕಾಗದವನ್ನು ಫ್ಯಾಕ್ಸ್ ಮಾಡಲು ಹೆಚ್ಚು ಸಮಯ ಬೇಕಾಗುತ್ತದೆ, ಇದರಿಂದ ಫೋನ್್ಬಿಲ್ ಜಾಸ್ತಿಯಾಗುತ್ತದೆ. ಇದನ್ನು ತಪ್ಪಿಸಲು ಲೆಟರ್್ಹೆಡ್್ನ್ನು ಜೆರಾಕ್ಸ್ ಮಾಡಿ ಫ್ಯಾಕ್ಸ್ ಮಾಡುವಂತೆ ಹೇಳುತ್ತಿದ್ದರು.
‘ಟೈಮ್ಸ್ ಆಫ್ ಇಂಡಿಯಾ’ದಲ್ಲಿ ಸಂಪಾದಕೀಯ ಮಂಡಳಿಯಲ್ಲಿ ಹಿರಿಯರಲ್ಲೊಬ್ಬರಾಗಿರುವ ಜಗ್ ಸುರಯ್ಯ ಇತ್ತೀಚೆಗೆ ತಾವು ಬರೆದ “JS and The Times of My Life’ ಪುಸ್ತಕದಲ್ಲೂ ಸಮೀರ್ ಜೈನ್ ಕುರಿತು ಪ್ರಸ್ತಾಪಿಸಿದ್ದಾರೆ. ಒಮ್ಮೆ ಜಗ್ ಸುರಯ್ಯ ಅವರು ತಮ್ಮ ಸ್ನೇಹಿತರೊಬ್ಬರ ಮನೆಯಲ್ಲಿ ರಾತ್ರಿ ಗುಂಡು ಪಾರ್ಟಿ ಮಾಡುತ್ತಿದ್ದರಂತೆ. ಆಗ ಅಲ್ಲಿಗೆ ಬರುವುದಾಗಿ ಸಮೀರ್ ಜೈನ್ ಅವರಿಂದ ಫೋನ್ ಬಂತಂತೆ. ಕೆಲಕ್ಷಣಗಳಲ್ಲಿ ತಮ್ಮ ಪತ್ನಿಯೊಂದಿಗೆ ಆಗಮಿಸಿದರಂತೆ. ಏಳೆಂಟು ಜನರಿದ್ದ ಆ ಪಾರ್ಟಿಯಲ್ಲಿ ಸಮೀರ್ ಒಂದು ಮೂಲೆಯಲ್ಲಿ ಕುಳಿತು ಎಲ್ಲರ ಹರಟೆಯನ್ನು ಕುತೂಹಲದಿಂದ ಆಲಿಸುತ್ತಿದ್ದರಂತೆ. ದಿಲ್ಲಿಯಲ್ಲಿ ಗುಂಡು ಹಾಕಲು ಪ್ರಶಸ್ತವಾದ ಹೊಸ ತಾಣಗಳ ಬಗ್ಗೆ ಚರ್ಚೆ ನಡೆಯುತ್ತಿತ್ತಂತೆ. ಆಗ ತಾನೆ ಆರಂಭವಾದ ಸ್ಪಾನಿಶ್ ರೆಸ್ಟೋರೆಂಟ್ ಬಹಳ ಚೆನ್ನಾಗಿದೆ. ಆದರೆ ಬಹಳ ದುಬಾರಿ’ ಎಂದು ಯಾರೋ ಹೇಳಿದಾಗ, “ವಿಶೇಷ ಸಂದರ್ಭದಲ್ಲಿ ಮಾತ್ರ ಹೋಗಬಹುದು’ ಎಂದು ಇನ್ಯಾರೋ ಹೇಳಿದರಂತೆ. ಆಗ ಸಮೀರ್ ಜೈನ್ ಮಧ್ಯಪ್ರವೇಶಿಸಿದಾಗ ಎಲ್ಲರೂ ಮೌನರಾಗಿ ಅವರ ಮಾತಿನೆಡೆ ಲಕ್ಷ್ಯವಿಟ್ಟರಂತೆ. “ಏನು ಹೇಳ್ತಾ ಇದ್ದೀರಾ ನೀವು? ನಿಮಗೆ ಹೆಚ್ಚು ಹಣ ತೆತ್ತು ದುಬಾರಿ ಹೋಟೆಲ್್ಗೆ ಹೋಗೊದಂದ್ರೆ ಇಷ್ಟಾನಾ?’ ಇದರಿಂದ ನಿಮಗೆ ಸಂತಸವಾಗುತ್ತದಾ?’ ಎಂದು ಕೇಳಿದರಂತೆ.
ಅದಕ್ಕೆ ಜಗ್ ಸುರಯ್ಯ “ಹೌದು. ನಮಗೆ ಹಣ ಖರ್ಚು ಮಾಡುವುದೆಂದರೆ ಬಹಳ ಇಷ್ಟ, ಅದೂ ವಿಶೇಷ ಸಂದರ್ಭದಲ್ಲಿ. ನಾವೇನು ಅಲ್ಲಿಗೆ ದಿನಾ ಹೋಗುವುದಿಲ್ಲವಲ್ಲ? ನಮಗೆ ಅಷ್ಟು ಹಣ ಖರ್ಚು ಮಾಡುವ ಸಾಮರ್ಥ್ಯವಿರುವಾಗ ಆಗೊಮ್ಮೆ ಈಗೊಮ್ಮೆ ಹೋಗುತ್ತೇವೆ. ಅದಕ್ಕಾಗಿಯೇ ನಮಗೆ ಅಂಥ ಸಂದರ್ಭಗಳು ವಿಶೇಷವೆನಿಸುತ್ತವೆ’ ಎಂದರಂತೆ.
ಅವರ ಮಾತಿಗೆ ತಲೆಯಾಡಿಸಿದ ಸಮೀರ್ ಜೈನ್ “ಓಹೋ ಹೌದಾ? ನಿಮಗೆ ಹಣ ಖರ್ಚು ಮಾಡುವುದೆಂದರೆ ಇಷ್ಟವಾ? ಇಂಟರೆಸ್ಟಿಂಗ್!’ ಎಂದು ಗಂಭೀರವಾಗಿ ಉದ್ಗಾರ ತೆಗೆದರಂತೆ.
ಸಮೀರ್ ಜೈನ್ ಯಾಕೆ ಯಶಸ್ವಿ ಪತ್ರಿಕಾ ಮಾಲೀಕರು ಎಂಬುದು ಈಗ ಅರ್ಥವಾಗಿರಲಿಕ್ಕೆ ಸಾಕು.
ನೀವು ಹೊಂದಿರುವ ಹಣದಿಂದ ನೀವು ಶ್ರೀಮಂತರಾಗುವುದಿಲ್ಲ. ನೀವು ಹಣಕ್ಕೆ ಕೊಡುವ ಮರ್ಯಾದೆಯಿಂದ ಮಾತ್ರ ಶ್ರೀಮಂತರಾಗುತ್ತೀರಿ. ಶ್ರೀಮಂತರಾಗುವವರಿಗೆ ಈ ಅರ್ಹತೆ ಬೇಕು.

Tuesday 16 June 2015

ಜಗತ್ತನ್ನೇ ಜಯಿಸಿದವ ಅವನ ಮುಂದೆ ಸಣ್ಣವನಾಗಿದ್ದ!


ಕಳೆದ ಕೆಲ ದಿನಗಳಿಂದ ಈ ಪ್ರಸಂಗ ಬಿಟ್ಟೂ ಬಿಡದೇ ನೆನಪಾಗುತ್ತಿದೆ. ಅಲೆಕ್ಸಾಂಡರ್್ನ ಜೀವನದಲ್ಲಿ ನಡೆದ ಘಟನೆಯಿದು. ಅದ್ಯಾಕೆ ಈ ಸಂದರ್ಭದಲ್ಲಿ ನೆನಪಾಗುತ್ತಿದೆ?
ಅಲೆಕ್ಸಾಂಡರ್ ನಿಧನನಾಗಿದ್ದ. ಆತನ ಪಾರ್ಥಿವ ಶರೀರವನ್ನು ಶವದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇಡೀ ಜಗತನ್ನು ಜಯಿಸುವೆ ಎಂದು ಬೀಗುತ್ತಿದ್ದ ಮತ್ತು ಆ ದಿಸೆಯಲ್ಲಿ ತುಸು ಯಶಸ್ವಿಯೂ ಆದ ಪರಮ ಪರಾಕ್ರಮಿಯ ತಣ್ಣನೆಯ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಅಲೆಕ್ಸಾಂಡರ್ ಅಂದ್ರೆ ಭೌತಿಕ ಉಪಭೋಗದ ಸಂಕೇತ. ಅತ್ಯುತ್ತಮವಾದುದು ಏನೇ ಕಾಣಲಿ, ಅದು ತನಗಿರಲಿ ಎಂದು ಹಪಹಪಿಸುವ ಮನಸ್ಸು ಅವನದು. ಅವನ ಆ ದಾಹಕ್ಕೆ ಅಂತ್ಯವೇ ಇರಲಿಲ್ಲ. ಪ್ರದೇಶ, ದೇಶ, ಉಪಖಂಡ, ಖಂಡಗಳನ್ನು ಒಂದಾದ ನಂತರ ಒಂದರಂತೆ ಗೆಲ್ಲುತ್ತಾ ಹೋದರೂ ಅವನ ಈ ಗೆಲ್ಲುವ, ಸಮರ ಸಾರುವ, ದೇಶವನ್ನು ಕೊಳ್ಳೆ ಹೊಡೆಯುವ ಹುಚ್ಚು ಕೋಡಿ ಮಾತ್ರ ಭೋರ್ಗರೆಯುತ್ತ ಹರಿಯುತ್ತಲೇ ಇತ್ತು. ಜಗತ್ತನ್ನೇ ಜಯಿಸಲು ಹೊರಟವನಿಗೆ ದೇಶ, ಖಂಡಗಳೆಲ್ಲ ಯಾವ ಲೆಕ್ಕ?
ಅಲೆಕ್ಸಾಂಡರ್್ನ ಶವ ತಣ್ಣಗೆ ಮಲಗಿತ್ತು…!
ಬಹಳ ವರ್ಷಗಳ ಕಾಲ ಅವನ ಸಹಾಯಕನಾಗಿದ್ದವ ಪಾರ್ಥೀವ ಶರೀರದ ಹತ್ತಿರ ಬಂದವನೇ ಶವದ ಪೆಟ್ಟಿಗೆಯನ್ನು ತಬ್ಬಿಕೊಂಡು ರೋಧಿಸಲಾರಂಭಿಸಿದ. ಅವನ ಸುತ್ತಲಿದ್ದವರು ಸಹ ಆ ಕರುಣಾಜನಕ ದೃಶ್ಯಕ್ಕೆ ಮೂಕಸಾಕ್ಷಿಗಳಾಗುತ್ತಾ ಕಣ್ಣೀರು ಸುರಿಸಿದರು. ಇನ್ನೇನು ಪಾರ್ಥೀವ ಶರೀರವನ್ನಿಟ್ಟ ಪೆಟ್ಟಿಗೆಯನ್ನು ಮೇಲೆತ್ತಿಕೊಂಡು ಅಂತ್ಯ ಸಂಸ್ಕಾರಕ್ಕೆ ಅಣಿಯಾಗಬೇಕೆಂದು ಎಲ್ಲರೂ ಸಿದ್ಧತೆ ಮಾಡುವಾಗ ಅಲೆಕ್ಸಾಂಡರ್್ನ ಸಹಾಯಕ ಪಕ್ಕದಲ್ಲಿದ್ದ ಜನರಲ್್ಗೆ ಹೇಳಿದ- “ದಯವಿಟ್ಟು ಅಲೆಕ್ಸಾಂಡರ್್ನ ಕೊನೆ ಆಸೆಯನ್ನು ಈಡೇರಿಸಬೇಕು. ಆತ ಸಾಯುವ ಕೆಲ ದಿನಗಳ ಮೊದಲು ಅದೇನು ಎಂಬುದನ್ನು ನನ್ನ ಮುಂದೆ ಅವರು ನಿವೇದಿಸಿಕೊಂಡಿದ್ದರು.”
“ಅದೇನು ಬೇಡಿಕೆ? ಹೇಳು, ಖಂಡಿತಾ ನೆರವೇರಿಸೋಣ” ಎಂದರು.
“ಅದೇನು ಅಂಥ ಮಹಾನ್ ಬೇಡಿಕೆಯೇನಲ್ಲ. ಈಗಲೇ ಈಡೇರಿಸುವಂಥದ್ದು” ಅಂದ.
ಅದಕ್ಕೆ ಜನರಲ್್ಗಳು “ಹೇಳು ಹೇಳು, ಪರವಾಗಿಲ್ಲ. ಜಗತ್ತನ್ನೇ ಗೆದ್ದವನ ಆಸೆಯನ್ನು ಈಡೇರಿಸದೇ ಇರುವುದುಂಟಾ?” ಎಂದರು.
“ಅಲೆಕ್ಸಾಂಡರ್ ಸಾಯುವುದಕ್ಕೆ ಕೆಲ ದಿನಗಳ ಮೊದಲು ಹೀಗೆ ಹೇಳಿದಾಗ ನನಗೂ ನಂಬಲಾಗಲಿಲ್ಲ. ಇದೆಂಥ ಬೇಡಿಕೆ ಎಂದು ನಾನೂ ಉದ್ಗಾರ ತೆಗೆದೆ. ಆದರೆ ಅದಕ್ಕೆ ಅಲೆಕ್ಸಾಂಡರ್ ಕೇಳಲಿಲ್ಲ. ಈಡೇರಿಸಲೇಬೇಕು ಅಂದ.” ಇಷ್ಟು ಹೇಳಿ ಸಹಾಯಕ ಅಲೆಕ್ಸಾಂಡರ್್ನ ಪಾರ್ಥೀವ ಶರೀರವನ್ನೇ ದಿಟ್ಟಿಸಿದ. ಆಗ ಯಾರೂ ಮಾತಾಡಲಿಲ್ಲ.
ತುಸು ಸಾವರಿಸಿಕೊಂಡ ಸಹಾಯಕ ಕೇಳಿದ- “ನಾನು ಸತ್ತಾಗ ನನ್ನ ಮೃತ ದೇಹವನ್ನು ಶವಪೆಟ್ಟಿಗೆಯಲ್ಲಿಟ್ಟು ಹೋಗುತ್ತೀರಲ್ಲಾ, ಆಗ ನನ್ನ ಎರಡೂ ಕೈಗಳು ಶವಪೆಟ್ಟಿಗೆ ಹೊರಗೆ ಚಾಚಿರಲಿ. ಯಾವುದೇ ಕಾರಣಕ್ಕೂ ಇಲ್ಲ ಎನ್ನಬೇಡಿ ಎಂದು ಅಲೆಕ್ಸಾಂಡರ್ ಹೇಳಿದ್ದಾನೆ. ದಯವಿಟ್ಟು ಇದನ್ನು ನೆರವೇರಿಸಬೇಕು.”
ಜನರಲ್್ಗಳು ಕಕ್ಕಾಬಿಕ್ಕಿಯಾದರು. ಇದೆಂಥ ಬೇಡಿಕೆ? ಶವ ಪೆಟ್ಟಿಗೆ ಹೊರಗೆ ಎರಡೂ ಕೈಗಳು ಚಾಚಬೇಕಂತೆ? ಇದನ್ನು ಈಡೇರಿಸುವುದಾದರೂ ಹೇಗೆ? ಎಂಬ ಪೀಕಲಾಟಕ್ಕೆ ಬಿದ್ದ ಜನರಲ್್ಗಳು ಧರ್ಮಗುರುಗಳನ್ನು ಸಂಪರ್ಕಿಸಿದರು. “ಇದು ಸಾಧ್ಯವೇ ಇಲ್ಲ, ಇದು ಸಂಪ್ರದಾಯ ವಿರೋಧಿ, ಧರ್ಮ ವಿರೋಧಿ. ಅದಕ್ಕಿಂತ ಹೆಚ್ಚಾಗಿ ಶವಕ್ಕೆ ಅವಮರ್ಯಾದೆ ಮಾಡಿದ ಹಾಗೆ. ಹಾಗೆ ಮಾಡಲು ಸಾಧ್ಯವಿಲ್ಲ” ಎಂದಾಗ ನಿಜಕ್ಕೂ ಧರ್ಮಸಂಕಟ ಎದುರಾಯಿತು.
ಅಲೆಕ್ಸಾಂಡರ್ ನ ಶವದ ಮುಂದೆ ಪಂಚಾಯತಿ!
ಆಗ ಅಲೆಕ್ಸಾಂಡರ್ ನ ಸಹಾಯಕ ಹೇಳಿದ- “ಈ ಎಲ್ಲ ಪ್ರಶ್ನೆಗಳು ಎದುರಾಗಬಹುದು ಎಂದು ಅಲೆಕ್ಸಾಂಡರ್ ಗೂ ಗೊತ್ತಿತ್ತು. ಅದಕ್ಕೆ ಅವನೇ ಸಮಜಾಯಿಷಿಯನ್ನೂ ಕೊಟ್ಟಿದ್ದಾನೆ. ಆದ್ದರಿಂದ ಅವನ ಬೇಡಿಕೆಯಂತೆ ಕೈಗಳನ್ನು ಹೊರಗಿಡುವುದು ಪಾರ್ಥೀವ ಶರೀರಕ್ಕೆ ಮಾಡುವ ಅವಮಾನವಲ್ಲ. ಅವನ ದೃಷ್ಟಿಯಿಂದಲೂ ಯೋಚಿಸಿ. ಈ ಅಲೆಕ್ಸಾಂಡರ್ ಇದ್ದಾನಲ್ಲ ಆತ ಕೊನೆಗೆ ಹೋಗುವಾಗ ಏನನ್ನೂ ತೆಗೆದುಕೊಂಡು ಹೋಗಲಿಲ್ಲ ಎಂಬುದನ್ನು ಜನ ಕಣ್ಣಾರೆ ನೋಡಲಿ. ನಾನು ಬರುವಾಗ ಖಾಲಿ ಕೈಯಲ್ಲಿ ಬಂದೆ. ಹೋಗುವಾಗಲೂ ಹಾಗೇ ಹೋಗಲು ಬಯಸುತ್ತೇನೆ. ನಾನು ಬಂದಿದ್ದನ್ನು ಜನ ನೋಡಲಿಲ್ಲ. ಖಾಲಿ ಕೈಯಲ್ಲಿ ಹೋಗಿದ್ದನ್ನಾದರೂ ನೋಡಲಿ ಎಂಬುದು ಅವನ ಆಶಯವಾಗಿತ್ತು.
ಅನಂತರ ಅಲೆಕ್ಸಾಂಡರ್ ನ ಕೋರಿಕೆಯಂತೆ ಅವನ ಕೈಗಳನ್ನು ಶವಪೆಟ್ಟಿಗೆಯಿಂದ ಹೊರಗಿಟ್ಟೇ ಅಂತ್ಯಸಂಸ್ಕಾರ ಮಾಡಲಾಯಿತು!
ಅಲೆಕ್ಸಾಂಡರನಿಗೆ ಅಂಥ ಜರೂರೇನಿತ್ತು?
ಜಗತ್ತನ್ನೇ ಜಯಿಸ ಹೊರಟವನಿಗೆ ಎಲ್ಲವೂ ನಶ್ವರವಾಗಿತ್ತು, ಖಾಲಿಖಾಲಿಯಾಗಿತ್ತು. ತಾನು ಗಳಿಸಿದ್ದೆಲ್ಲ ನಿರರ್ಥಕ, ನಿಷ್ಪ್ರಯೋಜಕ ಎಂಬ ತೀರ್ಮಾನಕ್ಕೆ ಆತ ಬಂದಿದ್ದ. ಆತನಿಗೆ ಅದೆಂಥ ಅಪರಾಧ (Guilt) ಭಾವ ಕಾಡುತ್ತಿದ್ದೀರಬಹುದು? ಆತನಿಗೆ ತಾನು ಜೀವನವಿಡೀ ಸಾಧಿಸಿದ್ದಕ್ಕಿಂತ, ಪಡೆದುದಕ್ಕಿಂತ ಖಾಲಿಯಾಗಿರುವುದರಲ್ಲಿಯೇ ಅಂತಿಮ ಆನಂದ ಕಂಡಿದ್ದ. ತಾನು ಗಳಿಸಿದ್ದೆಲ್ಲವೂ ಶೂನ್ಯ ಎಂದು ಅವನಿಗೆ ಅನಿಸಿತ್ತು. ಶೂನ್ಯವೇ ಹಿತವೆನಿಸಿತ್ತು. ಅದನ್ನು ಇಡೀ ಜಗತ್ತಿನ ಜನ ನೋಡಲಿ ಎಂಬುದು ಆವನ ಆಶಯವಾಗಿತ್ತು.
ಸಾಯುವುದಕ್ಕಿಂತ ಕೆಲ ದಿನಗಳ ಮೊದಲು ತನ್ನ ಪರಮಾಪ್ತ ಜನರಲ್್ನನ್ನು ಕರೆದ ಅಲೆಕ್ಸಾಂಡರ್, “ನಾನು ದೇಶಗಳನ್ನು ಗೆಲ್ಲುವ ಭರದಲ್ಲಿ ನನ್ನನ್ನೇ ಕಳೆದುಕೊಂಡು ಬಿಟ್ಟೆ. ಅದೇ ಮಹಾನ್ ಸಾಧನೆ ಎಂದುಕೊಂಡು ಬಿಟ್ಟೆ. ಈಗ ಅನಿಸುತ್ತಿದೆ ನಾನು ನನ್ನ ಇಡೀ ಬದುಕನ್ನೇ ವೃಥಾ ವ್ಯರ್ಥಗೊಳಿಸಿಕೊಂಡು ಬಿಟ್ಟೆ. ದೇಶದೇಶಗಳನ್ನು ಜಯಿಸಿ ನಾನಾದರೂ ಈಗ ಏನು ಮಾಡಲಿ? ನನ್ನ ಅಹಂಕಾರಕ್ಕೆ ನಾನೇ ಬಲಿಯಾಗಿ ಬಿಟ್ಟೆನಾ ಎಂಬ ಭಯಂಕರ ಭಯ ನನ್ನನ್ನು ಕಾಡುತ್ತಿದೆ. ನನ್ನ ಬದುಕನ್ನು ಈ ಭಯ ಸುಡುತ್ತಿದೆ. ನಾನು ಸಾವರಿಸಿಕೊಳ್ಳಲಾಗದಷ್ಟು ಜರ್ಝರಿತನಾಗಿ ಬಿಟ್ಟಿದ್ದೇನೆ” ಎಂದು ತನ್ನ ಮನದಾಳದಲ್ಲಿ ಹೊತ್ತಿ ಉರಿಯುತ್ತಿದ್ದ ಭುಗಿಲನ್ನು ತೋಡಿಕೊಂಡಿದ್ದ.
ಅಲೆಕ್ಸಾಂಡರ್ ಕೊನೆ ಕೊನೆಗೆ ತನ್ನ ಸಾಧನೆಯನ್ನು ನೆನೆನೆನೆದು ಸಣ್ಣವನಾಗುತ್ತಿದ್ದ. ತನ್ನ ಆಪ್ತರ ಮುಂದೆ ಈ ನೋವನ್ನು ಹಂಚಿಕೊಳ್ಳುತ್ತಿದ್ದ. ಇದರಿಂದ ಹೊರಬರುವ ಮಾರ್ಗಗಳ ಬಗ್ಗೆ ಗಾಢವಾಗಿ ಚಿಂತಿಸುತ್ತಿದ್ದ.      ಎಂಥ ವಿಚಿತ್ರ ಅಂದ್ರೆ ಅಲೆಕ್ಸಾಂಡರನಿಗೆ ಸಮಯ ಸಿಕ್ಕಾಗಲೆಲ್ಲ ಡಿಯೋಜಿನಸ್ ಎಂಬ ಭಿಕ್ಷುಕನ ಜತೆ ಕಾಲ ಕಳೆಯಲು ಬಯಸುತ್ತಿದ್ದ. ಡಿಯೋಜಿನಸ್ ಅಲೆಕ್ಸಾಂಡರ್ ನ ವಾರಿಗೆಯವ. ಆತನಿಗೆ ಅವನದ್ದು ಎಂಬುದು ಏನೂ ಇರಲಿಲ್ಲ. ಆತ ಎಲ್ಲವನ್ನೂ ಬಿಟ್ಟಿದ್ದ. ಅವನ ಬಳಿ ಭಿಕ್ಷೆ ಬೇಡಲು ಒಂದು ಭಿಕ್ಷಾ ಪಾತ್ರೆಯಿತ್ತು. ಕೈಗಳಿರುವಾಗ ಆ ಪಾತ್ರೆಯೇಕೆ ಎಂದು ಅದನ್ನು ಬಿಸಾಡಿಬಿಟ್ಟ. ನೀರು ಕುಡಿಯಲು ಅವನ ಬಳಿ ಒಂದು ಪುಟ್ಟ ಲೋಟ ಇತ್ತು. ಒಂದು ದಿನ ಡಿಯೋಜಿನಸ್ ನದಿಯಲ್ಲಿ ನಾಯಿಯೊಂದು ನೀರು ಕುಡಿಯುವುದನ್ನು ನೋಡಿದ. ನಾಯಿಗೆ ನೀರು ಕುಡಿಯಲು ಲೋಟವಾಗಲಿ, ಪಾತ್ರೆಯಾಗಲಿ ಬೇಡ ಎಂತಾದರೆ ನನಗೇಕೆ ಬೇಕು ಎಂದು ತನ್ನ ಕೈಯಲ್ಲಿದ್ದ ಲೋಟವನ್ನು ಸಹ ಬಿಸಾಡಿ ಬಿಟ್ಟ. ಆಗ ಅವನ ಬಳಿ ಏನೇನೂ ಇರಲಿಲ್ಲ. ಅದು ತನ್ನ ಅತ್ಯಂತ ಸಂಭ್ರಮದ ಕ್ಷಣ ಅಂತ ಆತ ಹೇಳಿಕೊಂಡಿದ್ದ.
ಡಿಯೋಜಿನಸ್ ಬಗ್ಗೆ ಅಲೆಕ್ಸಾಂಡರ್ ಕಾಲಕಾಲಕ್ಕೆ ಸುದ್ದಿ ಬರುತ್ತಿದ್ದವು. ಅವನ ಬಗ್ಗೆ ತರೇಹವಾರಿ ಕತೆಗಳನ್ನು ಜನ ಹೇಳುತ್ತಿದ್ದರು. ಡಿಯೋಜಿನಸ್್ನನ್ನು ಒಮ್ಮೆ ಭೇಟಿಯಾಗಲೇಬೇಕು ಎಂದು ಅಲೆಕ್ಸಾಂಡರ್್ಗೆ ಅನಿಸಿತು. ಆದರೆ ಡಿಯೋಜಿನಸ್ ಅಲೆಗ್ಸಾಂಡರ್ ನನ್ನು ಭೇಟಿಯಾಗಲು ಅಂಥ ಆಸಕ್ತಿ ತೋರಲಿಲ್ಲ. ಇದರಿಂದ ಅಲೆಕ್ಸಾಂಡರ್ ಗೆ ಆತನಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿತು. ಇಡೀ ಜಗತ್ತನ್ನೇ ಜಯಿಸಿದವನು ತನ್ನನ್ನು ಕಾಣಲು ಮುಂದೆ ಬಂದರೆ, ನಿರ್ಲಕ್ಷಿಸುತ್ತಿದ್ದಾನಲ್ಲ ಎಂದು ಅವನಲ್ಲಿ ಬೆರಗು ಹುಟ್ಟಿತು. ಬಿಡಲಿಲ್ಲ ಕೊನೆಗೆ ಅಲೆಕ್ಸಾಂಡರ್ ಡಿಯೋಜಿನಸ್್ನನ್ನು ಭೇಟಿಯಾದ.
ಡಿಯೋಜಿನಸ್ ನನ್ನು ಭೇಟಿಯಾದಾಗ ಅವನ ಮೇಲೆ ತುಂಡು ಬಟ್ಟೆಯೂ ಇರಲಿಲ್ಲ. ಅವನದೆಂಬುದು ಏನೂ ಇರಲಿಲ್ಲ. ಆದರೆ ಅವನ ಮುಖದಲ್ಲಿ ಅದ್ಭುತ ಕಾಂತಿ, ಸಮಾಧಾನದ ಮುದ್ರೆ ನೆಲೆಸಿತ್ತು. ನೆಮ್ಮದಿ ಅವನ ಮನಸ್ಸಿನಲ್ಲಿ ಜೋಕಾಲಿಯಾಡುತ್ತಿದೆಯೆಂದು ಯಾರು ಬೇಕಾದರೂ ಹೇಳಬಹುದಿತ್ತು.
ಡಿಯೋಜಿನಸ್್ನನ್ನು ಭೇಟಿಯಾದ ಮರುಗಳಿಗೆಯಲ್ಲೇ ಅಲೆಕ್ಸಾಂಡರ್ ಗೆ ಅನಿಸಿತು, ನನ್ನಲ್ಲಿ ಯಾವುದು ಇಲ್ಲವೋ ಅವೆಲ್ಲವೂ ಇವನಲ್ಲಿದೆ. ಯಾಕೆಂದರೆ ನನ್ನಲ್ಲಿ ಇರುವ ಯಾವ ಸಂಗತಿಯೂ ಇವನಲ್ಲಿ ಇಲ್ಲ. ಹೀಗಾಗಿ ಈತ ಇಷ್ಟೊಂದು ನಿಶ್ಚಿಂತೆಯಿಂದ ಇದ್ದಾನೆ. ಅಲೆಕ್ಸಾಂಡರ್ ಬಂದ ಕೂಡಲೇ ಡಿಯೋಜಿನಸ್್ನಲ್ಲಿ ಯಾವ ಬದಲಾವಣೆಯೂ ಆಗಲಿಲ್ಲ. ಕಾರಣ ಅವನಿಗೆ ಅಲೆಕ್ಸಾಂಡರ್್ನಿಂದ ಆಗುವುದೇನೂ ಇರಲಿಲ್ಲ. ಹೀಗಾಗಿ ಆತ ಬರುತ್ತಿದ್ದಂತೆ ಡಿಯೋಜಿನಸ್ ತನ್ನ ಪಾಡಿಗೆ ನೆಲದ ಮೇಲೆ ಮಲಗಿಬಿಟ್ಟ. ತುಸು ಹೊತ್ತು ನಿದ್ದೆ ಹೋದ. ಅಲೆಕ್ಸಾಂಡರ್ ಅವನ ಪಕ್ಕದಲ್ಲಿಯೇ ಸುಮ್ಮನೆ ಕುಳಿತಿದ್ದ. ಅದಾದ ನಂತರ ಡಿಯೋಜಿನಸ್ ಪಕ್ಕದ ನದಿಗೆ ಹೋಗಿ ಬೊಗಸೆ ತುಂಬಾ ನೀರು ಕುಡಿದ. ಅಲ್ಲಿಯೇ ಸ್ನಾನ ಮಾಡಿದ. ಆನಂತರ ಅದೇ ನದಿ ತಟದ ಮರಳು ಹಾಸಿನ ಮೇಲೇ ಮಲಗಿ ಸೂರ್ಯನ ಶಾಖಕ್ಕೆ ಮೈಯೊಡ್ಡಿದ. ಆತನ ಮುಖದಲ್ಲಿ ಸಂತೃಪ್ತಿಯ ಭಾವ ಹಾಸಿತ್ತು.
ಇದನ್ನು ಕಂಡ ಅಲೆಕ್ಸಾಂಡರ್,”ಡಿಯೋಜಿನಸ್, ನಾನು ಅಲೆಕ್ಸಾಂಡರ್. ನಿನ್ನನ್ನು ನೋಡಲೆಂದೇ ಬಂದಿದ್ದೇನೆ. ಹೆಚ್ಚು ಕಮ್ಮಿ ಇಡೀ ಜಗತ್ತನ್ನೇ ಜಯಿಸಿದವನು ನಾನು. ನಿನಗೆ ನನ್ನಿಂದ ಏನಾಗಬೇಕು ಹೇಳು, ಈಗಲೇ ನಿನಗೆ ಎಲ್ಲವನ್ನೂ ಕರುಣಿಸುತ್ತೇನೆ’ ಎಂದ. ಅದಕ್ಕೆ ಡಿಯೋಜಿನಸ್ ಶಾಂತವಾಗಿ ಹೇಳಿದ-”ನಾನು ಸೂರ್ಯನ ಬಿಸಿಲಿಗೆ ಮೈಯೊಡ್ಡಿ ಮಲಗಿದ್ದೇನೆ. ದಯವಿಟ್ಟು ನನ್ನ ಹಾಗೂ ಸೂರ್ಯನ ಮಧ್ಯೆ ನಿಲ್ಲದಿದ್ದರೆ ಅದೇ ನನಗೆ ನೀನು ಮಾಡುವ ಮಹದುಪಕಾರ’ ಎಂದವನೇ ಮಗ್ಗಲು ಬದಲಿಸಿ ಆ ಉಸುಕು ಹಾಸಿನ ಮೇಲೆ ಮಲಗಿಬಿಟ್ಟ.
ಆ ದಿನವಿಡೀ ಅಲೆಕ್ಸಾಂಡರ್ ಡಿಯೋಜಿನಸ್ ಪಕ್ಕದಲ್ಲೇ ಕುಳಿತು ಅವನ ಚಲನವಲನಗಳನ್ನೆಲ್ಲ ದಿಟ್ಟಿಸುತ್ತಿದ್ದ. ಒಂದು ಇರುವೆ, ಹುಳ ಹೋದರೆ ಹೇಗೆ ಗೊತ್ತಾಗುವುದಿಲ್ಲವೋ, ಅಲೆಕ್ಸಾಂಡರ್ ಸುತ್ತಮುತ್ತ ಸುಳಿದಾಡುತ್ತಿದ್ದುದು ಕೂಡ ಡಿಯೋಜಿನಸ್ ಗೆ ಗೊತ್ತಾಗಲಿಲ್ಲ. ಆತ ಒಮ್ಮೆಯೂ ಅಲೆಕ್ಸಾಂಡರ್ ನ ಕಡೆಗೆ ಗಮನವನ್ನು ಹರಿಸಲಿಲ್ಲ.
ಅಲೆಕ್ಸಾಂಡರ್ ಗೆ ಆ ಫಕೀರನ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿತು. ಅವನ ಗಮನ ಸೆಳೆಯಲು ಇನ್ನಿಲ್ಲದ ಕಸರತ್ತು ಮಾಡಿ, ಕೊನೆಗೆ ಇನ್ನು ಪರೀಕ್ಷಿಸಿ ಫಲವಿಲ್ಲವೆಂದು ಭಾವಿಸಿದ. ಡಿಯೋಜಿನಸ್ ನ ಸಾಚಾತನ ಅವನಲ್ಲಿ ಅಸಾಧಾರಣ ಪರಿವರ್ತನೆಯನ್ನು ತಂದಿತು. ಜಗತ್ತಿನಲ್ಲಿ ಹೀಗೂ ಸಮಾಧಾನ, ಸಾರ್ಥಕ್ಯವಾಗಲು ಸಾಧ್ಯವಾ ಎಂದೆನಿಸಿತು.
ಡಿಯೋಜಿನಸ್್ನ ಮುಂದೆ ತಲೆಬಾಗಿ,”ಮುಂದಿನ ಜನ್ಮ ಎಂಬುದೇನಾದರೂ ಇದ್ದರೆ, ದೇವರೇ, ನನ್ನನ್ನು ಪುನಃ ಅಲೆಗ್ಸಾಂಡರ್ ನನ್ನಾಗಿ ಹುಟ್ಟಿಸಬೇಡ. ಡಿಯೋಜಿನಸ್್ನಾಗಿ ಹುಟ್ಟಿಸು ಎಂದು ಪ್ರಾರ್ಥಿಸುತ್ತೇನೆ’ ಎಂದು ವಿನಮ್ರನಾಗಿ ನುಡಿದ.
ಆಗ ಡಿಯೋಜಿನಸ್ ಜೋರಾಗಿ ನಕ್ಕು ಬಿಟ್ಟ.”ಅಲೆಕ್ಸಾಂಡರ್, ನಿನ್ನ ಆಸೆಯನ್ನು ಈಡೇರಿಸಿಕೊಳ್ಳಲು ಮುಂದಿನ ಜನ್ಮದವರೆಗೆ ಕಾಯಬೇಕಿಲ್ಲ. ಈಗಲೇ, ನಿಂತಲ್ಲೇ ಡಿಯೋಜಿನಸ್ ಆಗಬಹುದು. ಅಲೆಕ್ಸಾಂಡರ್ ಆಗುವುದು ಕಷ್ಟ. ಡಿಯೋಜಿನಸ್ ಆಗುವುದು ಭಲೇ ಸುಲಭ. ನೀನ್ಯಾಕೆ ಈ ಪಾಟಿ ಸಂಘರ್ಷಕ್ಕೆ ಬಿದ್ದಿದ್ದೀಯಾ?  ಈ ಹೋರಾಟ ಯಾರಿಗಾಗಿ ಎಂದು ಕೇಳಿದ. ಅದಕ್ಕೆ ಅಲೆಕ್ಸಾಂಡರ್ ಹೇಳಿದ- ಮೊದಲು ನಾನು ಮಧ್ಯ ಏಷ್ಯಾವನ್ನು ಗೆದ್ದೆ. ಆನಂತರ ಭಾರತವನ್ನು ಗೆದ್ದೆ. ಬಳಿಕ ಪೂರ್ವ ದೇಶಗಳು….’
‘ಅದಾದ ಬಳಿಕ ಮುಂದೇನು ಮಾಡ್ತೀಯಾ?’ ಎಂದು ಡಿಯೋಜಿನಸ್ ಕೇಳಿದ್ದಕ್ಕೆ ಅಲೆಕ್ಸಾಂಡರ್”ಇಡೀ ಜಗತ್ತನ್ನು ಗೆದ್ದು ವಿರಮಿಸಬೇಕೆಂದಿದ್ದೇನೆ’ ಎಂದ. ಅವನ ಮಾತಿಗೆ ಜೋರಾಗಿ ನಕ್ಕ ಡಿಯೋಜಿನಸ್”ಮುಠ್ಠಾಳ, ನನ್ನನ್ನು ನೋಡು, ನಾನು ಜಗತ್ತನ್ನು ಗೆಲ್ಲದೇ ಸುಖವಾಗಿ ವಿರಮಿಸುತ್ತಿದ್ದೇನೆ. ಬಾ, ನನ್ನ ಪಕ್ಕದಲ್ಲಿ ಬಂದು ಮಲಗು. ನದಿ ತಟ ಬಹಳ ವಿಶಾಲವಾಗಿದೆ. ಇಲ್ಲಿ ಯಾರೂ ಯಾರಿಗೆ ಉಪದ್ರವ ಕೊಡುವುದಿಲ್ಲ. ಇಲ್ಲಿ ಮಲಗಿ ನೋಡು. ನಿನಗೆ ಜಗತ್ತನ್ನೇ ಗೆಲ್ಲಬೇಕೆಂದು ಅನಿಸುವುದಿಲ್ಲ. ಮೈ ಚೆಲ್ಲಿದರೆ ಸುಖ ನಿದ್ದೆ ಆವರಿಸುತ್ತದೆ’ ಎಂದವನೇ ಎರಡೂ ಕೈಗಳನ್ನು ತಲೆದಿಂಬಾಗಿಸಿಕೊಂಡು ಮಲಗಿ ಬಿಟ್ಟ!
 
ಅಲೆಕ್ಸಾಂಡರ್ ಆತನೆದುರು ಸಣ್ಣವನಾಗಿಬಿಟ್ಟ.
ಅಲ್ಲಿಂದ ಹೊರಡುವ ಮುನ್ನ ಅಲೆಕ್ಸಾಂಡರ್ ಹೇಳಿದ-”ನೀನು ಹೇಳೋದು ಸತ್ಯ. ನಾನು ಮುಠ್ಠಾಳನೇ. ಆದರೆ ನಾನು ಜಗತ್ತನ್ನು ಗೆಲ್ಲಬೇಕು. ಗೆದ್ದು ಬಂದು ನಿನ್ನ ಪಕ್ಕ ಮಲಗುತ್ತೇನೆ.’
ಅದಕ್ಕೆ ಡಿಯೋಜಿನಸ್ ಹೇಳಿದ-”ನಿನ್ನಲ್ಲಿ ಅರಿವು ಮೂಡದಿದ್ದರೆ ನೀನು ವಾಪಸ್ ಬರಲಾರೆ. ನಿನ್ನಲ್ಲಿ ಅರಿವು ಮೂಡದಿದ್ದರೆ ನೀನು ಇಲ್ಲಿಂದ ಕದಲುತ್ತಿರಲಿಲ್ಲ. ನೀನಂತೂ ಇಲ್ಲಿಗೆ ಪುನಃ ಬರುವುದಿಲ್ಲವೆಂಬುದು ನನಗೆ ಖಾತ್ರಿಯಾಗಿದೆ.’
ಅಲೆಕ್ಸಾಂಡರ್ ವಾಪಸ್ ಬರಲಿಲ್ಲ. ಮನೆ ತಲುಪುವ ಮೊದಲೇ ನಿಧನನಾದ.

Monday 15 June 2015

ಮಕ್ಕಳ ಮೋಹದ ಮುಂದೆ ಯಾವ ಆಸ್ತಿಯೂ ದೊಡ್ಡದಲ್ಲ…!


ಮಕ್ಕಳ ಮೇಲೆ ತಾಯ್ತಂದೆಯರು ಹೊಂದಿರುವ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ನಿಜ ಹೇಳಬೇಕೆಂದರೆ, ಮಕ್ಕಳ ಹೊರತಾಗಿ ಪೋಷಕರಿಗೆ ಬೇರೊಂದು ಜಗತ್ತೇ ಇರುವುದಿಲ್ಲ. ಒಬ್ಬ ವ್ಯಕ್ತಿ ದಿನಕ್ಕೆ ಕೋಟಿ ಕೋಟಿ ದುಡಿಯುವವನಾಗಿರಬಹುದು. ಅಥವಾ ಭಿಕ್ಷೆ ಯಾಚಿಸುತ್ತಾ ಹೊಟ್ಟೆ ಹೊರೆಯುವವನೇ ಆಗಿರಬಹುದು. ಈ ಎರಡೂ ವರ್ಗಕ್ಕೆ ಸೇರಿದ ಜನರಿಗೆ ಅಷ್ಟೈಶ್ವರ್ಯ ಕಂಡಾಗ ಆಗುತ್ತದಲ್ಲ, ಅದಕ್ಕಿಂತ ಹೆಚ್ಚಿನ ಖುಷಿ ಮಕ್ಕಳನ್ನು ಕಂಡಾಗ ಆಗುತ್ತದೆ. ಪ್ರತಿಯೊಬ್ಬ ಪೋಷಕರ ಕನಸು ಹಾಗೂ ಭವಿಷ್ಯದ ಲೆಕ್ಕಾಚಾರದಲ್ಲಿ ಮಕ್ಕಳೇ ಇರುತ್ತಾರೆ. ಮಕ್ಕಳು ತಮ್ಮ ಕೊನೆಗಾಲದಲ್ಲಿ ಹೇಗೆಲ್ಲಾ ಆಸರೆಯಾಗಬಹುದು ಎಂದು ಕನಸು ಕಾಣದ ಪೋಷಕರೇ ಇಲ್ಲ ಎನ್ನಬಹುದು. ಆದರೆ ಕಂಡ ಕನಸುಗಳೆಲ್ಲ ನನಸಾಗುವುದಿಲ್ಲ. ಒಂದೊಂದು ಸಂದರ್ಭದಲ್ಲಿ ಪೋಷಕರನ್ನು ಅವರ ಕಡೆಗಾಲದಲ್ಲಿ ಪ್ರೀತಿಯಿಂದ ಜೋಪಾನ ಮಾಡಬೇಕು ಎಂದು ಮಕ್ಕಳೂ ಆಸೆಪಟ್ಟಿರುತ್ತಾರೆ. ಆದರೆ ಅದಕ್ಕೆ ವಿಧಿ ಎಂಬುದು ಅವಕಾಶ ಮಾಡಿಕೊಡುವುದಿಲ್ಲ. ಇಂಥ ಸಂದರ್ಭದಲ್ಲಿ ಪೋಷಕರಿಗೆ ಉಂಟಾಗುವ ಆಘಾತ ಹಾಗೂ ಮಕ್ಕಳ ವಿಷಯದಲ್ಲಿ ಅವರು ಹೊಂದಿದ ಆದಮ್ಯ ಪ್ರೀತಿಗೆ ಸಾಕ್ಷಿ ಹೇಳುವ ಕಥೆಯೊಂದು ಇಲ್ಲಿದೆ:
>>>>>>>
ಅವನ ಪೂರ್ತಿ ಹೆಸರು ಗಣಾಚಾರಿ. ಜನ ಅವನನ್ನು ‘ಆಚಾರ್ರೇ’ ಎಂದು ಕರೆಯುತ್ತಿದ್ದರು. ಈ ಗಣಾಚಾರಿ, ಶಿಲ್ಪ ಕಲಾವಿದ. ಬಗೆಬಗೆಯ ಮೂರ್ತಿಗಳನ್ನು ಕೆತ್ತುವುದು, ಹಳೆಯ ವಿಗ್ರಹಗಳನ್ನು ಸಂಗ್ರಹಿಸಿ ಮಾರುವುದು ಅವನ ಕಸುಬಾಗಿತ್ತು. ಇದರಲ್ಲಿ ಒಳ್ಳೆಯ ಲಾಭವೂ ಇತ್ತು. ಜೀವನದಲ್ಲಿ ಸೆಟಲ್ ಆಗುವ ವೇಳೆಗೆ ಗಣಾಚಾರಿಗೂ ನಲವತ್ತು ದಾಟಿತ್ತು. ಹೀಗಿರುವಾಗಲೇ ಆಗಬಾರದ್ದು ಆಗಿಹೋಯ್ತು. ಮದುವೆಯ ಹತ್ತನೇ ವಾರ್ಷಿಕೋತ್ಸವ ನಡೆದ ಕೆಲವೇ ದಿನಗಳಲ್ಲಿ ಗಣಾಚಾರಿಯ ಪತ್ನಿ ಕಾಯಿಲೆಯ ಕಾರಣದಿಂದ ತೀರಿಹೋದಳು. ಈ ವೇಳೆಗೆ ಗಣಾಚಾರಿಗೆ ಒಬ್ಬ ಮಗನಿದ್ದ.
ಮುದ್ದಿನ ಮಗನಿಗೆ ಮಲತಾಯಿಯ ಕಾಟ ಶುರುವಾಗಬಹುದು ಎಂಬ ಚಿಂತೆಯಿಂದ ಗಣಾಚಾರಿ ಎರಡನೇ ಮದುವೆಯಾಗಲಿಲ್ಲ. ತನಗೆ ಗೊತ್ತಿದ್ದ ಎಲ್ಲವನ್ನೂ ಮಗನಿಗೆ ಹೇಳಿಕೊಟ್ಟ. ಚೆನ್ನಾಗಿ ಓದಿಸಿದ. ಡಿಗ್ರಿ ಮುಗಿಸಿದ ಮಗ ಮಿಲಿಟರಿಗೆ ಸೇರುವೆನೆಂದಾಗ ಒಲ್ಲದ ಮನಸ್ಸಿಂದ ಒಪ್ಪಿಗೆ ಕೊಟ್ಟ. ವರ್ಷದ ಕೊನೆಯಲ್ಲಿ ರಜೆಗೆಂದು ಬಂದಾಗ, ಅಪ್ಪನೊಂದಿಗೆ ಮಗನೂ ಶಿಲ್ಪಗಳ ತಯಾರಿಗೆ ಮುಂದಾಗುತ್ತಿದ್ದ. ವ್ಯಾಪಾರ ವ್ಯವಹಾರದಲ್ಲಿ ಮುಳುಗಿ ಹೋಗುತ್ತಿದ್ದ. ಪರಿಣಾಮವಾಗಿ ಅವನ ಮನೆ ಎಂಬುದು ಮಿನಿ ಸಂಗ್ರಹಾಲಯವೇ ಆಗಿಹೋಯಿತು. ದೇಶ ವಿದೇಶಗಳ ಹೆಸರಾಂತ ಚಿತ್ರಕಲಾವಿದರ ಕಲಾಕೃತಿಗಳು ಈ ಅಪ್ಪ-ಮಗನ ಸಂಗ್ರಹದಲ್ಲಿದ್ದವು.
ಹೀಗೇ, ಇಪ್ಪತ್ತು ವರ್ಷಗಳು ಕಳೆದು ಹೋದವು. ಅದೊಮ್ಮೆ ಅಲ್ಪಾವಧಿ ರಜೆ ಹಾಕಿ ಮನೆಗೆ ಬಂದ ಮಗ ತಂದೆಗೆ ಹೇಳಿದ. ‘ಇನ್ನು ನಾಲ್ಕು ತಿಂಗಳು ಕೆಲಸ ಮಾಡಿದರೆ ನಂತರ ನಿವೃತ್ತಿ ಸಿಗುತ್ತದೆ. ಮುಂದೆ ಶಾಶ್ವತವಾಗಿ ನಿನ್ನೊಂದಿಗೇ ಇದ್ದು ಬಿಡುತ್ತೇನೆ.’ ಹೀಗೆ ಹೇಳಿದ್ದು ಮಾತ್ರವಲ್ಲ, ಮನೆಯಲ್ಲಿದ್ದ ಎಲ್ಲ ಕಲಾಕೃತಿಗಳನ್ನು ಒಪ್ಪವಾಗಿ ಜೋಡಿಸಿಟ್ಟು ಹೋದ ಮಗನನ್ನು ಕಂಡು ಗಣಾಚಾರಿಗೆ ತುಂಬ ಖುಷಿಯಾಯಿತು. ನಾಲ್ಕು ತಿಂಗಳ ನಂತರ ಮಗನ ಆರೈಕೆಯ ಮಧ್ಯೆ ತಾನು ಹೇಗೆಲ್ಲಾ ಸಂಭ್ರಮಿಸಬಹುದು ಎಂದು ಊಹಿಸಿಕೊಳ್ಳುತ್ತಾ ಗಣಾಚಾರಿ ಮೇಲಿಂದ ಮೇಲೆ ಖುಷಿಪಡುತ್ತಿದ್ದ.
ಆದರೆ, ಆನಂತರದಲ್ಲಿ ಯಾರೂ ಊಹಿಸದ ಘಟನೆಗಳು ನಡೆದು ಹೋದವು. ನೆರೆಯ ರಾಷ್ಟ್ರ ದಿಢೀರನೆ ಯುದ್ಧ ಸಾರಿತು. ಪತ್ರಿಕೆ ಹಾಗೂ ಟಿ.ವಿ.ಗಳಲ್ಲಿ ದಿನವೂ ಯುದ್ಧದ ಸುದ್ದಿಗಳೇ ಕೇಳಿ ಬರತೊಡಗಿದವು . ಗಣಾಚಾರಿ, ಜೀವವನ್ನು ಕೈಲಿ ಹಿಡಿದುಕೊಂಡು ದಿನಕ್ಕೆ ಹತ್ತು ಬಾರಿ ದೇವರ ಮುಂದೆ ಕೂತು ಪ್ರಾರ್ಥಿಸುತ್ತಿದ್ದ: ‘ದೇವರೇ, ನನ್ನ ಮಗನಿಗೆ ಯಾವುದೇ ತೊಂದರೆ ಬಾರದಿರಲಿ. ಅವನೊಂದಿಗೆ ಬದುಕಿನ ಕೊನೆಯ ದಿನಗಳನ್ನು ಕಳೆಯಬೇಕು ಅಂದುಕೊಂಡಿರುವ ನನ್ನ ಆಸೆ ಕನಸಾಗಿಯೇ ಉಳಿಯದಿರಲಿ…’
ಗಣಾಚಾರಿಯ ಪ್ರಾರ್ಥನೆ ದೇವರಿಗೆ ಕೇಳಲಿಲ್ಲವೋ ಅಥವಾ ಅವನ ಮಗನ ಅದೃಷ್ಟವೇ ಖೊಟ್ಟಿಯಿತ್ತೋ ಗೊತ್ತಿಲ್ಲ. ಅದೊಂದು ಮಧ್ಯಾಹ್ನ ಗಣಾಚಾರಿಗೆ ಒಂದು ಟೆಲಿಗ್ರಾಂ ಬಂತು. ಹೌದು. ಅವನ ಒಬ್ಬನೇ ಮಗ ಸತ್ತುಹೋಗಿದ್ದ. ಶತ್ರುಗಳ ಗುಂಡೇಟಿಗೆ ಬಲಿಯಾಗುವ ಮುನ್ನ ಹನ್ನೆರಡು ಮಂದಿ ಸೈನಿಕರ ಜೀವ ಉಳಿಸಿ ಆತ ಹುತಾತ್ಮನಾಗಿದ್ದ. ಎರಡು ದಿನಗಳ ನಂತರ ಮೃತ ಯೋಧನ ಶವವಿದ್ದ ಕಾಫಿನ್ ಬಂತು. ಆಗಲೂ ಸೇನೆಯ ಹಿರಿಯ ಅಧಿಕಾರಿಗಳು ಗಣಾಚಾರಿಯ ಮಗನ ಶೌರ್ಯವನ್ನು ಬಗೆಬಗೆಯಲ್ಲಿ ಬಣ್ಣಿಸಿದರು.
ಸಂಧ್ಯಾ ಕಾಲದಲ್ಲಿ ಆಸರೆಯಾಗುವನೆಂದು ಭಾವಿಸಿದ್ದ ಮಗನ ದಿಢೀರ್ ಅಗಲಿಕೆ ಗಣಾಚಾರಿಗೆ ಚೇತರಿಸಿಕೊಳ್ಳಲಾಗದಂಥ ಪೆಟ್ಟು ನೀಡಿತು. ಆತ ಮಗನ ಕನವರಿಕೆಯಲ್ಲಿ ಊಟ ಮರೆತ. ನಿದ್ರೆ ಮರೆತ. ಒಂದರ್ಥದಲ್ಲಿ ಅರಳುಮರಳಿಗೆ ಒಳಗಾದವನಂತೆ ಬದುಕಲು ಆರಂಭಿಸಿದ. ಪರಿಣಾಮವಾಗಿ, ಮನೆಯೊಳಗಿನ ಕಲಾಕೃತಿಗಳಿಗೆ ಧೂಳು ಮೆತ್ತಿಕೊಂಡಿತು. ನಂತರದ ಕೆಲವೇ ದಿನಗಳಲ್ಲಿ ಜೇಡವೂ ಅಲ್ಲಿ ಬಲೆ ಹೆಣೆಯಿತು. ಇಷ್ಟಾದರೂ ಗಣಾಚಾರಿ ಯಾವುದನ್ನೂ ತಲೆಗೆ ಹಾಕಿಕೊಳ್ಳಲಿಲ್ಲ. ಮುತ್ತಿನಂಥ ಮಗನೇ ಹೋದ ಮೇಲೆ ಈ ಆಸ್ತಿಯ ಮೋಹವೇಕೆ ಎಂದುಕೊಂಡು ಸುಮ್ಮನೆ ಉಳಿದು ಬಿಟ್ಟ. ಆತ ಮನೆಯಿಂದ ಹೊರಗೇ ಬರುತ್ತಿರಲಿಲ್ಲ. ಆರಂಭದ ಒಂದೆರಡು ತಿಂಗಳು ಅಯ್ಯೋ ಪಾಪ ಎಂದು ಅನುಕಂಪ ತೋರಿಸಿದ ಜನ ನಂತರದ ದಿನಗಳಲ್ಲಿ ಅವನನ್ನು ಮರೆತವರಂತೆ ಉಳಿದುಬಿಟ್ಟರು.
ಈ ಮಧ್ಯೆಯೇ ಕಣ್ಮರೆಯಾಗಿದ್ದ ಮಗನ ಹುಟ್ಟುಹಬ್ಬದ ದಿನ ಬಂತು. ಅವತ್ತು ಗಣಾಚಾರಿ ತುಂಬ ಉತ್ಸಾಹದಿಂದ ಎದ್ದು ಕೂತ. ಮಗನ ಭಾವಚಿತ್ರವನ್ನು ಒರೆಸಿದ. ಅದಕ್ಕೆ ಹೂವಿನ ಹಾರ ಹಾಕಿದ. ಆ ಭಾವಚಿತ್ರದ ಮುಂದೆ ನಿಂತು ಮಾತಾಡಿದ. ಹಳೆಯದೆಲ್ಲಾ ನೆನಪಾಗಿ ಕಣ್ತುಂಬಿಕೊಂಡ. ಹೀಗಿರುವಾಗಲೇ ಯಾರೋ ಬಾಗಿಲು ಬಡಿದಂತಾಯಿತು. ಹಿಂದೆಯೇ -ಸ್ವಾಮೀ, ಬಾಗಿಲು ತೆಗೀತೀರಾ ಎಂಬ ದನಿಯೂ ಕೇಳಿಬಂತು. ಗಣಾಚಾರಿ, ಅನುಮಾನಿಸುತ್ತಲೇ ಬಂದು ಬಾಗಿಲು ತೆರೆದ. ಎದುರಿಗೆ ಅಪರಿಚಿತ ಯುವಕನನ್ನು ಕಂಡು, ನೀವು ಯಾರು, ನನ್ನಿಂದ ಏನಾಗಬೇಕಿತ್ತು ಎಂದು ಪ್ರಶ್ನಿಸಿದ.
‘ಯಜಮಾನರೇ ನಾನೊಬ್ಬ ಯೋಧ. ನಿಮ್ಮ ಮಗನಿಂದಾಗಿ ಜೀವ ಉಳಿಸಿಕೊಂಡವ ನಾನು. ನನ್ನಂಥ ಹನ್ನೆರಡು ಮಂದಿಯ ಜೀವ ಉಳಿಸಿದ ಧೀರ ನಿಮ್ಮ ಮಗ. ಅವನ ಅಗಲಿಕೆ ನಿಮಗೆ ಎಂಥ ನೋವು ಕೊಟ್ಟಿದೆ ಎಂದು ನಾನು ಅಂದಾಜು ಮಾಡಿಕೊಳ್ಳಬಲ್ಲೆ. ಇವತ್ತು ಅವನ ಹುಟ್ಟುಹಬ್ಬದ ದಿನ ಎಂಬುದನ್ನೂ ನಾನು ಬಲ್ಲೆ. ಮತ್ತೊಂದು ಮುಖ್ಯ ವಿಷಯ. ಏನೆಂದರೆ, ನಾನೂ ಒಬ್ಬ ಚಿತ್ರ ಕಲಾವಿದ. ಈ ಸಂಗತಿ ನಿಮ್ಮ ಮಗನಿಗೂ ಗೊತ್ತಿತ್ತು. ನನ್ನದೊಂದು ಚಿತ್ರ ಬರೆದಿಡು. ನನ್ನ ಹುಟ್ಟುಹಬ್ಬದ ದಿನ ನಿನ್ನನ್ನು ಊರಿಗೆ ಕರೆದೊಯ್ಯುತ್ತೇನೆ. ಹುಟ್ಟುಹಬ್ಬದ ನೆಪದಲ್ಲಿ ನನಗೆ ಈ ಕಾಣಿಕೆ ಕೊಡು. ಹಾಗೆ ಮಾಡಿದರೆ, ಹಳ್ಳಿಯಲ್ಲಿರುವ ನಮ್ಮ ತಂದೆಯ ಕಂಗಳಲ್ಲಿ ಸಾವಿರ ಮಿಂಚು ಕೊರೈಸಿದಾಗ ಕಾಣುವಂಥ ಸಂತೋಷ ಕಾಣಿಸುತ್ತದೆ. ನಮ್ಮ ತಂದೆ ಕೂಡ ಹೆಸರಾಂತ ಶಿಲ್ಪಿ. ನಮ್ಮ ಮನೆಯೆಂಬುದು ಕಲಾಕೃತಿಗಳ ಸಂಗ್ರಹಾಲಯದಂತಿದೆ’ ಎಂದೆಲ್ಲ ನಿಮ್ಮ ಮಗನೇ ಹೇಳಿದ್ದ. ಅವನ ಅಭಿಲಾಷೆಯಂತೆಯೇ ಚಿತ್ರ ಬರೆದು ತಂದಿದ್ದೇನೆ. ನೀವು ಕೃಪೆ ಮಾಡಿ ಸ್ವೀಕರಿಸಬೇಕು ಎಂದವನೇ ಆಳೆತ್ತರದ ಕಲಾಕೃತಿಯೊಂದನ್ನು ನೀಡಿದ.
ನಿಜಕ್ಕೂ ಆ ಚಿತ್ರ ಅದ್ಭುತವಾಗಿತ್ತು. ಅದನ್ನು ನೋಡಿ ಆನಂದಪರವಶನಾದ ಗಣಾಚಾರಿ, ಕಂದಾ, ಮಗೂ, ದೊರೇ ಎಂದು ಚೀರುತ್ತಾ, ಕಣ್ಣೀರಾಗಿ ಹೋದ. ನಂತರ ಚೇತರಿಸಿಕೊಂಡು ಮಗನ ಗೆಳೆಯನನ್ನು ಆದರಿಸಿದ. ಹೊಗಳಿದ. ಪ್ರೀತಿಯಿಂದ ಮಾತಾಡಿಸಿದ. ತನ್ನ ಸಂಗ್ರಹದಲ್ಲಿದ್ದ ಅಪರೂಪದ ಕಲಾಕೃತಿಯೊಂದನ್ನು ನೀಡಿ, ಇದು ನನ್ನ ಹಾಗೂ ಮಗನ ನೆನಪಾಗಿ ನಿಮ್ಮಲ್ಲಿರಲಿ ಎಂದು ಬೀಳ್ಕೊಟ್ಟ. ಈ ಸೈನಿಕ ಬರೆದುಕೊಂಡು ಬಂದಿದ್ದನಲ್ಲ, ಆ ಚಿತ್ರದಲ್ಲಿದ್ದ ಯೋಧ ಹೆಗಲ ಮೇಲೆ ಇಬ್ಬಿಬ್ಬರನ್ನು ಹೊತ್ತೊಯ್ಯುತ್ತಿದ್ದ. ಗುಂಡೇಟಿನ ಕಾರಣದಿಂದ ಅವನ ಮೈಯಿಂದ ರಕ್ತ ಹರಿಯುತ್ತಿತ್ತು. ಮುಖ ವಿಕಾರವಾಗಿತ್ತು. ಶತ್ರುಗಳಿಂದ ತಪ್ಪಿಸಿಕೊಂಡು ಬರುವ ಸಂದರ್ಭದಲ್ಲಿ ನಡೆದ ಹೊಡೆದಾಟದಲ್ಲಿ ಮುಂದಿನ ಹಲ್ಲುಗಳೇ ಉದುರಿ ಹೋಗಿದ್ದವು. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಆ ಕಲಾಕೃತಿಯಲ್ಲಿದ್ದ ಯೋಧ ಭಯ ಹುಟ್ಟಿಸುವಂತಿದ್ದ. ಊಹುಂ, ಒಂದೇ ಒಂದು ಕ್ಷಣಕ್ಕೂ ಗಣಾಚಾರಿಗೆ ಇಂಥ ಭಾವನೆ ಬರಲಿಲ್ಲ. ಆಕಸ್ಮಿಕವಾಗಿ ಆಗೊಮ್ಮೆ ಈಗೊಮ್ಮೆ ಮನೆಗೆ ಬಂದವರು ಆ ಚಿತ್ರವನ್ನು ಕಂಡು ಬೆಚ್ಚುತ್ತಿದ್ದರು. ಇದನ್ನು ನೋಡಿದ್ರೆ ಹೆದರಿಕೆ ಆಗುತ್ತೆ. ಅದನ್ನು ಎತ್ತಿ ಬೇರೊಂದು ಕಡೆಯಲ್ಲಿಡಿ ಎಂದು ಸಲಹೆ ಮಾಡಿದರು. ಗಣಾಚಾರಿ ಯಾರ ಮಾತೂ ತನಗೆ ಕೇಳಿಸಲೇ ಇಲ್ಲ ಎಂಬಂತೆ ಉಳಿದುಬಿಟ್ಟ. ಹೆಚ್ಚಿನ ಸಂದರ್ಭದಲ್ಲಿ ಮಗನ ಚಿತ್ರವನ್ನೇ ತದೇಕಚಿತ್ತದಿಂದ ನೋಡುತ್ತಾ ಕೂತು ಬಿಡುತ್ತಿದ್ದ. ಹೀಗೇ ಆರೇಳು ತಿಂಗಳು ಕಳೆದವು. ಅದೊಂದು ಸಂಜೆ, ಮಗನ ಕಲಾಕೃತಿಯ ಮುಂದೆ ಕುಳಿತೇ ಗಣಾಚಾರಿ ಸತ್ತುಹೋದ.
ಒಂದು ರೀತಿಯಲ್ಲಿ ಅನಾಥನಂತೆ ಸತ್ತು ಹೋದ ಈ ಪ್ರಖ್ಯಾತ ಕಲಾವಿದನ ಮನೆಗೆ, ಅಂತ್ಯಸಂಸ್ಕಾರದ ನೆಪದಲ್ಲಿ ಬಂದವರಿಗೆ ಅಚ್ಚರಿಯೊಂದು ಕಾದಿತ್ತು. ಸಾಯುವ ಮುನ್ನ ಗಣಾಚಾರಿ ಒಂದು ಪತ್ರ ಬರೆದಿಟ್ಟಿದ್ದ. ಅದರಲ್ಲಿ ತನ್ನ ಮನೆಯಲ್ಲಿರುವ ಎಲ್ಲ ಕಲಾಕೃತಿಗಳನ್ನೂ ಹರಾಜು ಹಾಕಬೇಕೆಂಬ ವಿನಂತಿಯಿತ್ತು. ಮತ್ತೊಂದು ವಿಶೇಷವೆಂದರೆ, ಹರಾಜು ಪ್ರಕ್ರಿಯೆ ಹೇಗೆ ನಡೆಯಬೇಕೆಂದೂ ಆತ ವಿಲ್ ಬರೆದು ಇಟ್ಟಿದ್ದ.
ರಾಜಾ ರವಿವರ್ಮರು ಬರೆದದ್ದೂ ಸೇರಿದಂತೆ, ದೇಶ ವಿದೇಶಗಳ ಖ್ಯಾತ ಕಲಾವಿದರ ಕಲಾಕೃತಿಗಳೇ ಅಲ್ಲಿದ್ದವು. ಗಣಾಚಾರಿಯ ಆಸೆಯಂತೆ ಅವುಗಳನ್ನು ಹರಾಜು ಹಾಕಲು ಪ್ರಕಟಣೆ ಹೊರಡಿಸಿದ್ದಾಯ್ತು. ಒಂದು ದಿನಾಂಕವನ್ನೂ ನಿಗದಿ ಮಾಡಿದ್ದಾಯ್ತು. ಅಪರೂಪದ ಕಲಾಕೃತಿಗಳನ್ನು ಖರೀದಿಸಲು ಶ್ರೀಮಂತರೆಲ್ಲ ನುಗ್ಗಿ ಬಂದರು. ಸರ್ಕಾರದ ಕಡೆಯಿಂದ ಹರಾಜು ಪ್ರಕ್ರಿಯೆ ನಡೆಸಲು ಬಂದಿದ್ದ ಅಧಿಕಾರಿ, ವಿಕಾರವಾಗಿ ಕಾಣುತ್ತಿದ್ದ. ಗಣಾಚಾರಿಯ ಮಗನ ಕಲಾಕೃತಿಯನ್ನು ಮುಂದಿಟ್ಟು ಹೇಳಿದ: ಈ ಚಿತ್ರಕ್ಕೆ 10 ಲಕ್ಷ ರೂ. ಬೆಲೆ ನಿಗದಿ ಮಾಡಲಾಗಿದೆ. ಇಷ್ಟವಿರುವವರು 10 ಲಕ್ಷದಿಂದ ಆರಂಭಿಸಿ ಬೆಲೆ ಕೂಗಬಹುದು ಅಂದ. ಶ್ರೀಮಂತರೆಲ್ಲ ಒಕ್ಕೊರಲಿನಿಂದ ಅದು ಭಯ ಹುಟ್ಟಿಸುವಂತಿದೆ. ನಮಗಂತೂ ಅದು ಬೇಕಿಲ್ಲ. ಇಲ್ಲಿ ನೂರಾರು ಕಲಾಕೃತಿಗಳಿವೆ. ಅವುಗಳನ್ನು ಹರಾಜು ಹಾಕಲು ಮುಂದಾಗು ಎಂದು ಒತ್ತಾಯಿಸಿದರು. ಈ ಅಧಿಕಾರಿ ಒಪ್ಪಲಿಲ್ಲ. ಈ ಕಲಾಕೃತಿಯ ಮಾರಾಟದ ನಂತರವೇ ಮುಂದಿನ ಮಾತು ಎಂದು ಪಟ್ಟುಹಿಡಿದ. ಆದರೆ, ವಿಕಾರ ಮುಖದ, ರಕ್ತ ಸುರಿಯುತ್ತಿದ್ದಂಥ ದೇಹದ, ಮುಂದಿನ ಹಲ್ಲುಗಳೇ ಇಲ್ಲದಿದ್ದ ಸೈನಿಕನ ಚಿತ್ರದ ಮೇಲೆ ಯಾರೂ ಆಸಕ್ತಿ ತೋರಲಿಲ್ಲ. ಕಡೆಗೂ ಒಬ್ಬ ಮುಂದೆ ಬಂದು 8.50 ಲಕ್ಷ ರೂ. ಎಂದ. ಇದಾಗಿ ಇಪ್ಪತ್ತು ನಿಮಿಷ ಕಳೆದರೂ ಯಾರೊಬ್ಬರೂ ಮಾತಾಡಲಿಲ್ಲ. ಹಾಗಾಗಿ, ಅದೇ ಬೆಲೆಗೆ ಮಾರಾಟ ಮಾಡಿದ್ದಾಯಿತು. ಎರಡು ನಿಮಿಷ ಸುಮ್ಮನಿದ್ದ ಅಧಿಕಾರಿ, ನಂತರ ಗಂಭೀರವಾಗಿ ಹೇಳಿದ: ‘ಹರಾಜು ಪ್ರಕ್ರಿಯೆ ಮುಗಿದಿದೆ. ಮೊದಲ ಕಲಾಕೃತಿಯನ್ನು ಕೊಂಡವರಿಗೇ ಉಳಿದೆಲ್ಲ ಕಲಾಕೃತಿಗಳೂ ಸೇರುತ್ತವೆ…’
ಈ ಮಾತು ಕೇಳಿ, ಬಂದಿದ್ದ ಶ್ರೀಮಂತರೆಲ್ಲ ಗಲಾಟೆ ಆರಂಭಿಸಿದರು. ಇದು ಮೋಸ ಎಂದು ವಾಗ್ವಾದಕ್ಕೆ ನಿಂತರು. ಆಗ, ಕಲಾವಿದ ಗಣಾಚಾರಿ ಬರೆದಿದ್ದ ವಿಲ್್ನ ಪ್ರತಿಯನ್ನು ಅಧಿಕಾರಿಗಳು ಎಲ್ಲರ ಎದುರಿಗಿಟ್ಟರು. ಅದರಲ್ಲಿ ಹೀಗಿತ್ತು: ‘ಬದುಕಲ್ಲಿ ನನಗೆ ಮಗನೇ ಸರ್ವಸ್ವವಾಗಿದ್ದ. ಅವನಲ್ಲದೆ ನನಗೆ ಬೇರೊಂದು ಜಗತ್ತೇ ಇರಲಿಲ್ಲ, ಆತ ಸತ್ತುಹೋದ ನಂತರವೂ ಈ ಭಾವಚಿತ್ರ ಹಲವರಿಗೆ ಭಯ ಹುಟ್ಟಿಸುವಂತಿರಬಹುದು. ಆದರೆ, ಇದರಲ್ಲಿ ನನಗೆ ಮಗ ಕಾಣಿಸುತ್ತಾನೆ. ಆತನ ಕಣ್ಣು ಮಾತಾಡುತ್ತವೆ. ಸುರಿಯುತ್ತಿರುವ ರಕ್ತ ಕತೆ ಹೇಳುತ್ತದೆ. ಯಾರಾದರೂ ಈ ಚಿತ್ರವನ್ನು ಜೋಪಾನವಾಗಿ ಇಡಲು ಮುಂದಾದರೆ ಆಗ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ. ಈ ಚಿತ್ರವನ್ನು ಕೊಂಡವರಿಗೇ ಉಳಿದೆಲ್ಲ ಚಿತ್ರಗಳ ಹಕ್ಕನ್ನೂ ಬಿಟ್ಟು ಕೊಡುತ್ತೇನೆ. ಏಕೆಂದರೆ, ನನ್ನ ಪಾಲಿಗೆ ಮಗನ ಚಿತ್ರಕ್ಕಿರುವ ಬೆಲೆ ಇನ್ಯಾವ ಕಲಾಕೃತಿಗೂ ಇಲ್ಲ. ಹೌದಲ್ಲವಾ? ಮಕ್ಕಳ ಮಮತೆಯ ಮುಂದೆ, ಮಕ್ಕಳ ಸ್ಮರಣೆಯ ಮುಂದೆ ಬೇರಾವ ಆಸ್ತಿಗೂ ಬೆಲೆ ಇರುವುದಿಲ್ಲ…’
ಇದನ್ನು ಓದುತ್ತಿದ್ದಂತೆ ಅಲ್ಲಿದ್ದ ಶ್ರೀಮಂತರೆಲ್ಲ ಮಾತು ಹೊರಡದೆ ನಿಂತುಬಿಟ್ಟರು…

Sunday 14 June 2015

ಕತೆಗಳ ತೋರಣ ಕಟ್ಟಿಡಲು ಬೇಕೇ ಇಲ್ಲ ಕಾರಣ...

ಬಾಲ್ಯದಲ್ಲಿ ಅಜ್ಜಿ ಕತೆಗಳನ್ನು ಕೇಳಿಕೊಂಡು ಬೆಳೆದವರು ಆ ದಿನಗಳ ಮಧುರಾನುಭೂತಿಯನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಾರೆ. ಕಾರಣ, ಆ ಕಥೆಗಳಲ್ಲಿ ಎಲ್ಲ ಪಾತ್ರಗಳೂ ಮಾತಾಡುತ್ತಿದ್ದವು! ಪ್ರತಿಯೊಂದು ಕತೆಯಲ್ಲೂ ನೀತಿಯಿರುತ್ತಿತ್ತು, ಪಾಠವಿರುತ್ತಿತ್ತು, ತಮಾಷೆ ಇರುತ್ತಿತ್ತು, ಸಸ್ಪೆನ್ಸ್ ಇರುತ್ತಿತ್ತು. ಒಂದೊಂದು ಸಂದರ್ಭದಲ್ಲಿ ಕತೆ-ಜೋಗುಳದಂತೆಯೂ ಕೇಳಿಸುತ್ತಿತ್ತು. ಎಷ್ಟೋ ಸಂದರ್ಭಗಳಲ್ಲಿ ಮಕ್ಕಳು- ಹೂಂ, ಆಮೇಲೆ ಎಂದು ಪ್ರಶ್ನಿಸದಿದ್ದರೆ ಅಜ್ಜಿ ಕತೆಯನ್ನು ಮುಂದುವರಿಸುತ್ತಲೇ ಇರಲಿಲ್ಲ. ಆಗ ಅಜ್ಜಿ-ಮೊಮ್ಮಗ ಸಣ್ಣಗೆ ದುಸುಮುಸುಮಾಡಿ ರಾಜಿಯಾಗುತ್ತಿದ್ದರು. ಕತೆ ಮುಂದುವರಿಯುತ್ತಿತ್ತು…
ಈಗ, ಕತೆ ಕೇಳುವ ಹಂಬಲ ಎಲ್ಲರಿಗೂ ಇದೆ. ಆದರೆ ಹೇಳಲು ಅಜ್ಜಿಯರೇ ಇಲ್ಲ. ಅದನ್ನೆಲ್ಲ ನೆನಪು ಮಾಡಿಕೊಂಡಾಗಲೇ ಮನದಲ್ಲಿ ಅರಳಿಕೊಂಡ ಕತೆಗಳಿವೆ. ಇನ್ನು ಮುಂದೆ ನೀವುಂಟು, ಈ ಕಥೆಗಳುಂಟು…
>>>>>>
ಒಂದು ಮನೆ ಬಹಳ ದಿನಗಳಿಂದ ಖಾಲಿ ಉಳಿದಿತ್ತು. ಕಡೆಗೂ ಅಲ್ಲಿಗೆ ಬಾಡಿಗೆದಾರರೊಬ್ಬರು ಬಂದರು. ಈ ಬಾಡಿಗೆ ಮನೆಯ ಎದುರಿನಲ್ಲಿದ್ದ ಮನೆಯಲ್ಲಿ ಒಂದು ಕುಟುಂಬ ವಾಸವಿತ್ತು. ಈ ಮನೆಯ ಹೆಂಗಸಿಗೆ ಸದಾ ಬೇರೆಯವರ ಹುಳುಕು ತೋರಿಸುವ ಅಭ್ಯಾಸವಿತ್ತು. ಯಾರು ಎಷ್ಟೇ ಶುಚಿಯಾಗಿದ್ದರೂ ಆಕೆ ಏನಾದರೂ ಒಂದು ತಪ್ಪು ತೋರಿಸಿ ಬಿಡುತ್ತಿದ್ದಳು.
ಅವತ್ತು, ಈ ಹೆಂಗಸು ಮನೆಯ ಹಾಲ್್ನಲ್ಲಿ ಕೂತು ಗಂಡನೊಂದಿಗೆ ತಿಂಡಿ ತಿನ್ನುತ್ತಿದ್ದಳು. ಆಗಲೇ ಹೊಸದಾಗಿ ಬಾಡಿಗೆಗೆ ಬಂದಿದ್ದಾಕೆ ತಂತಿಯ ಮೇಲೆ ಬಟ್ಟೆಗಳನ್ನು ಒಣಗಲು ಹಾಕಿದ್ದು ಕಾಣಿಸಿತು. ಅದನ್ನು ಗಮನಿಸಿದ ಈಕೆ ತಕ್ಷಣವೇ ಹೇಳಿದಳು: ‘ಅಲ್ಲಿ ನೋಡ್ರಿ, ಬಟ್ಟೆಗಳಲ್ಲಿ ಮಸಿ ಹಾಗೇ ಉಳ್ಕೊಂಡಿರೋದು ಚನ್ನಾಗಿ ಕಾಣಿಸ್ತಾ ಇದೆ. ಹಾಗಿದ್ರೂ ಆ ಹೆಂಗಸು ಒಣಗಲು ಹಾಕ್ತಾ ಇದಾಳೆ. ಬಹುಶಃ ಆಕೆಗೆ ಬಟ್ಟೆ ಒಗೆಯುವುದಕ್ಕೆ ಬರೋದಿಲ್ಲ ಅನಿಸುತ್ತೆ. ಅಥವಾ ಆಕೆ ಬಳಸ್ತಾ ಇರೋ ಸೋಪು ತುಂಬಾ ಕಳಪೆ ಗುಣಮಟ್ಟದ್ದು ಇರಬೇಕು ಕಣ್ರೀ…’
ಅವತ್ತಿನಿಂದ ನಂತರದ ಒಂದು ತಿಂಗಳ ಅವಧಿಯವರೆಗೂ ಈ ಮನೆಯ ದಂಪತಿ ತಿಂಡಿಗೆ ಕೂತ ಸಂದರ್ಭದಲ್ಲಿಯೇ ಆ ಮನೆಯ ಹೆಂಗಸು ಬಟ್ಟೆಗಳನ್ನು ಒಣಗಲು ಹಾಕುತ್ತಿದ್ದಳು. ಪ್ರತಿದಿನವೂ ಈ ಮನೆಯ ಹೆಂಗಸು ಅದೇ ಹಳೆಯ ಡೈಲಾಗನ್ನು ರಿಪೀಟ್ ಮಾಡುತ್ತಿದ್ದಳು. ‘ಆ ಹೆಂಗಸಿಗೆ ಏನಾಗಿದೆ? ಸರಿಯಾಗಿ ಕೊಳೆ ಹೋಗದಿದ್ರೂ ಒಗೆದು ಆಗಿದೆ ಅಂತ ಭಾವಿಸ್ತಾಳಲ್ಲ, ಚನ್ನಾಗಿರೋ ಸೋಪ್ ಬಳಸಿ ಬಟ್ಟೆ ಒಗೆಯಲಿಕ್ಕೆ ಅವಳಿಗೆ ಏನು ಧಾಡಿ?’
ಮರುದಿನ ಗಂಡನೊಂದಿಗೆ ತಿಂಡಿಗೆ ಕುಳಿತ ಈ ಮನೆಯ ಹೆಂಗಸು ತನ್ನ ಕಣ್ಣನ್ನೂ ತಾನೇ ನಂಬಲಿಲ್ಲ. ಕಾರಣ, ಎದುರು ಮನೆಯ ತಂತಿಯ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳು ಟಿ.ವಿ. ಜಾಹೀರಾತಿನಲ್ಲಿ ತೋರಿಸುವ ಬಟ್ಟೆಗಳಂತೆಯೇ ಫಳಫಳ ಹೊಳೆಯುತ್ತಿದ್ದವು. ಅದನ್ನು ಕಂಡು ಈಕೆ ಗಂಡನ ಕಿವಿಯಲ್ಲಿ ಪಿಸುಗುಟ್ಟಿದಳು: ‘ನೋಡಿದ್ರಾ, ಕಡೆಗೂ ಆ ಮನೆಯ ಹೆಂಗಸು ಚನ್ನಾಗಿ ಬಟ್ಟೆ ಒಗೆಯಲು ಕಲಿತು ಬಿಟ್ಟಳು. ಇದನ್ನು ಅವಳಿಗೆ ಯಾರು ಹೇಳಿಕೊಟ್ರು ಅಂತ ಗೊತ್ತಾಗಲಿಲ್ಲ…
ಈಕೆಯ ಪತಿರಾಯ ತಣ್ಣಗೆ ಹೇಳಿದ: ‘ಇವತ್ತು ಬೆಳಗ್ಗೆ ನಾನು ಎಲ್ಲರಿಗಿಂತ ಮುಂಚೆ ಎದ್ದು ನಮ್ಮ ಮನೆಯ ಕಿಟಕಿಗಳನ್ನು ಮೂರು ಬಾರಿ ಚೆನ್ನಾಗಿ ಉಜ್ಜಿ ತೊಳೆದೆ. ಎರಡು ತಿಂಗಳಿಂದ ಕಿಟಕಿಗೆ ಅಂಟಿಕೊಂಡಿದ್ದ ಧೂಳು, ಕಸವನ್ನು ನಾವು ಕ್ಲೀನ್ ಮಾಡಿಯೇ ಇರಲಿಲ್ಲ…’
>>>>>>>
ಒಂದು ಹಡಗಿನಲ್ಲಿ ಒಬ್ಬ ಯಕ್ಷಿಣಿಗಾರನಿದ್ದ. ಈ ಹಡಗು ವಾರಕ್ಕೊಂದು ಪ್ರದೇಶಕ್ಕೆ ಹೋಗಿ ಬರುತ್ತಿತ್ತು. ಹಡಗಿನಲ್ಲಿರುವ ಪ್ರಯಾಣಿಕರ ಮುಂದೆ ಯಕ್ಷಿಣಿ ಪ್ರದರ್ಶಿಸಿ ಅವರನ್ನು ಖುಷಿಪಡಿಸುವುದು ಯಕ್ಷಿಣಿಗಾರನ ಕೆಲಸವಾಗಿತ್ತು. ಪ್ರತಿ ವಾರವೂ ನಾನಾ ದೇಶದ, ನಾನಾ ಸಂಸ್ಕೃತಿಯ ಜನ ಬರುತ್ತಿದ್ದರು. ಹಾಗಾಗಿ ಪ್ರದರ್ಶನದಲ್ಲಿ ಏಕತಾನ ಕಾಣದಂತೆ ಈ ಮ್ಯಾಜಿಶಿಯನ್ ಎಚ್ಚರ ವಹಿಸಬೇಕಿತ್ತು.
ಈ ಹಡಗಿನ ಕ್ಯಾಪ್ಟನ್ ಒಂದು ಗಿಣಿಯನ್ನು ಸಾಕಿಕೊಂಡಿದ್ದ. ಅದು ಪ್ರಚಂಡ ಬುದ್ಧಿಯ ಮಾತನಾಡುವ ಗಿಣಿ. ಈ ಯಕ್ಷಿಣಿಗಾರನ ಪ್ರದರ್ಶನದ ಹಿಂದಿರುವ ಗುಟ್ಟುಗಳನ್ನು ಅದು ಕದ್ದು ನೋಡುತ್ತಿತ್ತು. ಈತ ಪ್ರದರ್ಶನ ಆರಂಭಿಸಿದ ಕೆಲವೇ ನಿಮಿಷದಲ್ಲಿ ಮೆಲ್ಲಗೆ ಬಂದು ಪ್ರಯಾಣಿಕರ ಮಧ್ಯೆ ಕೂತು ಬಿಡುತ್ತಿತ್ತು. ಹೇಳಿ ಕೇಳಿ ಅದು ಕ್ಯಾಪ್ಟನ್್ನ ಮುದ್ದಿನ ಗಿಣಿ ಆಗಿದ್ದುದರಿಂದ ಅದನ್ನು ಹೊಡೆಯುವುದಾಗಲಿ, ಗದರಿಸುವುದಾಗಲಿ, ಓಡಿಸುವುದಾಗಲಿ ಸಾಧ್ಯವೇ ಇರಲಿಲ್ಲ. ಪ್ರದರ್ಶನ ಆರಂಭಿಸುವ ಮೊದಲೇ, ಅದರ ಹಿಂದಿರುವ ಗುಟ್ಟು ಏನೆಂಬುದನ್ನು ಈ ಮಾತನಾಡುವ ಗಿಣಿ ಹೇಳಿ ಬಿಡುತ್ತಿತ್ತು. ಪರಿಣಾಮ, ಮ್ಯಾಜಿಕ್ ಶೋ ನೋಡಲು ಯಾರೊಬ್ಬರೂ ಆಸಕ್ತಿ ತೋರುತ್ತಿರಲಿಲ್ಲ. ಒಂದೆರಡು ಬಾರಿ ಪ್ರೇಕ್ಷಕರ ನಿರಾಸಕ್ತಿ ಗಮನಿಸಿದ ಕ್ಯಾಪ್ಟನ್, ಏನೂ ಕೆಲಸವಿಲ್ಲದವರಿಗೆ ಸುಮ್ಮನೇ ಸಂಬಳ ಕೊಡುವುದಾದರೂ ಏಕೆ ಎಂದು ನಿಷ್ಠುರವಾಗಿ ಹೇಳಿಬಿಟ್ಟ.
ಹೀಗಿರುವಾಗಲೇ ಅದೊಂದು ದಿನ ಅನಾಹುತಕ್ಕೆ ಸಿಕ್ಕಿ ಹಡಗು ಮುಳುಗಿ ಹೋಯಿತು. ಕಡೆಯ ಕ್ಷಣದಲ್ಲಿ ಒಂದು ಮರದ ಹಲಗೆಯ ಆಶ್ರಯ ಸಿಕ್ಕಿದ್ದರಿಂದ ಮ್ಯಾಜಿಶಿಯನ್ ಹೇಗೋ ಬದುಕಿಕೊಂಡ. ಸ್ವಾರಸ್ಯವೆಂದರೆ ಅವನು ಆಶ್ರಯ ಪಡೆದಿದ್ದ ಮರದ ಹಲಗೆಯ ಮತ್ತೊಂದು ತುದಿಯಡಿ ಮಾತನಾಡುವ ಗಿಣಿಯೂ ಇತ್ತು.
ಹಡಗಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಗಿಣಿ ನೀಡಿದ್ದ ಕಿರಿಕಿರಿಯೆಲ್ಲ ನೆನಪಿಗೆ ಬಂದಿದ್ದರಿಂದ ಈ ಯಕ್ಷಿಣಿಗಾರ ಅದನ್ನೇ ಕೆಕ್ಕರಿಸಿಕೊಂಡು ನೋಡಿದ. ಸೇರಿಗೆ ಸವ್ವಾಸೇರು ಎಂಬಂತೆ ಆ ಪಕ್ಷಿಯೂ ಹಾಗೇ ಮಾಡಿತು. ಹೀಗೇ ಎರಡು ದಿನ ಕಳೆದು ಹೋದವು. ಕಡೆಗೆ ಗಿಣಿ ಹೀಗೆಂದಿತು: ‘ಆಯ್ತು, ಈ ಬಾರಿ ನಾನೇ ಸೋಲ್ತೇನೆ. ಬೇಗ ಹೇಳು. ಇಲ್ಲಿಂದ ಪಾರಾಗಲು ದೋಣಿ ಎಲ್ಲಿದೆ ಎಂಬುದಕ್ಕೆ ನಿನಗೆ ಉತ್ತರ ಗೊತ್ತಿದೆಯಾ?’
>>>>>>>
ಅಜ್ಜನಿಗೆ ಕತೆ ಹೇಳುವ ಹುಮ್ಮಸ್ಸಿತ್ತು. ಮೊಮ್ಮಗನಿಗೆ ತಾತನ ಮುಂದೆ ಕೂತು ಕಥೆ ಕೇಳುವ ಹುಚ್ಚು ಹಿಡಿದುಕೊಂಡಿತ್ತು. ಅವತ್ತು ಅಜ್ಜನ ಮುಂದೆ ಕೂತ ಹುಡುಗ ಆದೇಶ ಜಾರಿ ಮಾಡಿದ: ತಾತಾ, ಕತೆ ಶುರು ಮಾಡು…
ಆ ಅಜ್ಜ ಹೇಳಿದರು: ‘ಅರ್ಥ ಮಾಡ್ಕೋ ಮಗಾ, ನಮ್ಮ ಮನಸ್ಸೊಳಗೆ ಎರಡು ಥರದ ತೋಳಗಳು ಇರ್ತವೆ. ಅವೆರಡಕ್ಕೂ ಯಾವಾಗ್ಲೂ ಫೈಟಿಂಗ್ ನಡೀತಾನೇ ಇರುತ್ತೆ. ಈ ಎರಡರ ಪೈಕಿ ಒಂದು ತೋಳ ಕೇಡಿ ನನ್ಮಗಂದು. ಅದಕ್ಕೆ ಎಲ್ಲರ ಮೇಲೂ ಸಿಟ್ಟು. ಅಸೂಯೆ, ದ್ವೇಷ, ವಿಪರೀತ ಅಹಂಕಾರ. ಇನ್ನೊಂದಿದೆಯಲ್ಲ, ಅದು ತುಂಬಾ ಒಳ್ಳೆಯದು. ಅದಕ್ಕೆ ಬೇರೆಯವರನ್ನು ಕಂಡ್ರೆ ಪ್ರೀತಿ, ಗೌರವ, ಅನುಕಂಪ. ಸುತ್ತಲಿನವರಿಗೆ ಸಾಧ್ಯವಾದಷ್ಟೂ ಸಹಾಯ ಮಾಡಬೇಕು ಎಂಬುದು ಅದರ ಉದ್ದೇಶ. ಎಲ್ಲರಿಗೂ ಒಳ್ಳೆಯದಾಗಲಿ ಎಂಬುದೇ ಅದರ ಅನುದಿನದ ಪ್ರಾರ್ಥನೆ. ಮನಸ್ಸಿನ ಒಳಗಿರುವ ಒಂದು ಮೂಲೇಲಿ ನಿಂತ್ಕೊಂಡು ಈ ಒಳ್ಳೆಯ ಮತ್ತು ಕೆಟ್ಟ ತೋಳಗಳು ದಿನದ ಇಪ್ಪತ್ನಾಲ್ಕು ಗಂಟೆಯೂ ಫೈಟಿಂಗ್ ಮಾಡ್ತಾನೇ ಇರ್ತವೆ…’
‘ತಾತ, ತಾತ, ಈ ಫೈಟಿಂಗ್್ನಲ್ಲಿ ಕೊನೆಗೆ ಯಾವ ತೋಳ ಗೆಲ್ಲುತ್ತೆ?’ ಮೊಮ್ಮಗ ಆಸೆಯಿಂದ ಕೇಳಿದ.
‘ನೀನು ಯಾವುದನ್ನು ಹೆಚ್ಚು ಸಪೋರ್ಟ್ ಮಾಡ್ತಿಯೋ ಅದೇ ಗೆಲ್ಲುತ್ತೆ’ ಎಂದು ಅಜ್ಜ ಕತೆ ಮುಗಿಸಿದ.
>>>>>>>>
ಬಾರ್್ನಲ್ಲಿ ಆತ ಏಕಾಂಗಿಯಾಗಿದ್ದ. ಒಂಟಿಯಾಗಿದ್ದೇನೆ ಎಂಬ ಭಾವವೇ ಅವನಿಗೆ ಇರಲಿಲ್ಲ. ಒಂದರ ಹಿಂದೊಂದು ಪೆಗ್ ವಿಸ್ಕಿಗೆ ಆರ್ಡರ್ ಮಾಡಿ ಪರಮಾತ್ಮನನ್ನು ಏರಿಸುತ್ತಲೇ ಇದ್ದ. ಪ್ರತಿ ಬಾರಿ ತುಟಿಯ ಬಳಿಗೆ ಗ್ಲಾಸ್ ಒಯ್ಯುವ ಮೊದಲು ಜೇಬಿನಿಂದ ಅದೇನನ್ನೋ ತೆಗೆದು ಒಮ್ಮೆ ಕುತೂಹಲದಿಂದ ಮಿಕಿಮಿಕಿ ನೋಡುತ್ತಿದ್ದ. ನಂತರ ಗಟಗಟನೆ ಕುಡಿದು ಬೇರೊಂದು ಪೆಗ್್ಗೆ ಆರ್ಡರ್ ಮಾಡುತ್ತಿದ್ದ.
ಹೀಗೇ ಎರಡು ಗಂಟೆಗಳ ಕಾಲ ನಡೆಯಿತು. ಈ ಕುಡುಕನನ್ನೇ ಅಷ್ಟೂ ಹೊತ್ತಿನಿಂದ ಗಮನಿಸುತ್ತಿದ್ದ ಹೋಟೆಲ್ ಮ್ಯಾನೇಜರ್ ಕಡೆಗೊಮ್ಮೆ ಆತನ ಮುಂದೆ ನಿಂತು ವಿನಯದಿಂದ ಹೀಗೆಂದ: ‘ಸರ್, ತುಂಬಾ ಹೊತ್ತಿನಿಂದ ಗಮನಿಸ್ತಾ ಇದೀನಿ. ನೀವು ಜೇಬಿನಿಂದ ಅದೇನನ್ನೋ ತೆಗೆದು ನೋಡ್ತೀರಿ. ನಂತರ ಗಟಗಟನೆ ಕುಡೀತೀರಿ. ಏನಾದ್ರೂ ಅನಾಹುತ ಸಂಭವಿಸಿದೆಯಾ ಸರ್? ನಾನು ನಿಮಗೆ ಏನಾದ್ರೂ ಸಹಾಯ ಮಾಡಬಹುದಾ? ಜೇಬಿನಿಂದ ಹಾಗೆ ಪದೇ ಪದೆ ನೋಡ್ತೀರಲ್ಲ, ಏನ್ಸಾರ್ ಅದು?’
ಈ ಕುಡುಕ ಕೆಳಗಿಟ್ಟು ಹೇಳಿದ: ‘ಜೇಬಲ್ಲಿ ಇರೋದು ನನ್ನ ಹೆಂಡ್ತಿ ಫೋಟೋ. ತುಂಬಾ ಹೊತ್ತಿಂದ ನೋಡ್ತಾನೇ ಇದೀನಿ. ಅವಳು ಅಪ್ಸರೆಯ ಥರ ಕಾಣಿಸ್ತಾನೇ ಇಲ್ಲ. ಅವಳು ರಂಬೆಯ ಥರ, ಊರ್ವಶಿಯ ಥರಾ ಕಾಣಿಸಿದ ತಕ್ಷಣ ಕುಡಿಯೋದು ನಿಲ್ಲಿಸಿ ಮನೆಯ ದಾರಿ ಹಿಡೀತೀನಿ…
>>>>>>>>
ಒಂದು ಊರು. ಅಲ್ಲಿಗೊಬ್ಬ ರಾಜ. ಅವನಿಗೆ ವಿಚಿತ್ರ ಎಂಬಂಥ ಹವ್ಯಾಸವೊಂದಿತ್ತು. ಆತ ವಾರದ ಕೊನೆಯಲ್ಲಿ ರಾಜ್ಯದ ಅಧಿಕಾರಿಗಳು ಮತ್ತು ಪ್ರಜೆಗಳ ಸಭೆ ಕರೆಯುತ್ತಿದ್ದ. ಅವತ್ತು ರಾಜ್ಯದ ಯಾರಾದರೂ ಒಬ್ಬನನ್ನು ತನ್ನೊಂದಿಗೆ ಊಟಕ್ಕೆ ಆಹ್ವಾನಿಸುತ್ತಿದ್ದ. ರಾಜನ ಆಹ್ವಾನವನ್ನು ಯಾರೂ ತಿರಸ್ಕರಿಸುವಂತಿರಲಿಲ್ಲ. ಊಟ ಮುಗಿಸಿದ ವ್ಯಕ್ತಿ ನಂತರ ಹೊಸ ಹೊಸ ಪದಗಳಿಂದ ರಾಜನನ್ನು ಸಾರ್ವಜನಿಕರ ಮುಂದೆ ಹೊಗಳಿ ಭಾಷಣ ಮಾಡಬೇಕಿತ್ತು. ಹಾಗೆ ಮಾಡದಿದ್ದರೆ ಸಿಂಹದ ಬಾಯಿಗೆ ಕೊಡುವ ಕ್ರೂರ ಶಿಕ್ಷೆಯೂ ಅಲ್ಲಿ ಜಾರಿಯಲ್ಲಿತ್ತು? ಸುಖಾಸುಮ್ಮನೆ, ಅದೂ ಹೊಸ ಹೊಸ ಪದಗಳಿಂದ ರಾಜನನ್ನು ಹೊಗಳುವುದು ಸುಲಭದ ಕೆಲಸವಲ್ಲ ತಾನೆ? ಇದು ಗೊತ್ತಿದ್ದುದರಿಂದಲೇ ರಾಜನಿಂದ ಸಹಭೋಜನಕ್ಕೆ ಆಹ್ವಾನ ಬರದೇ ಇರಲಿ ಎಂದೇ ಎಲ್ಲರೂ ಪ್ರಾರ್ಥಿಸುತ್ತಿದ್ದರು.
ಹೀಗಿರುವಾಗ, ಅದೇ ರಾಜ್ಯದಲ್ಲಿ ಡ್ರಾಮಾ ಮಾಡಿಕೊಂಡು ಆರಾಮವಾಗಿದ್ದ ಯಶವಂತ ಸರದೇಶಪಾಂಡೆಗೆ ರಾಜನಿಂದ ಆಹ್ವಾನ ಬಂತು. ಯಶವಂತ ತುಂಬ ಖುಷಿಯಿಂದಲೇ ಅರಮನೆಗೆ ಹೋಗಿ ಗಡದ್ದಾಗಿ ಊಟ ಮುಗಿಸಿ, ಭಾಷಣ ಗೀಷಣ ಮಾಡೋದಿಲ್ರಿ, ಅದೇನ್ ಮಾಡ್ತಿರೋ ಮಾಡ್ಕೊಳ್ಳಿ ಎಂದು ಬಿಡುವುದೇ?
ಮಹಾರಾಜನಿಗೆ ಸಿಟ್ಟು ಬಂತು. ಆತ ಕಣ್ಣಲ್ಲೇ ಆಜ್ಞೆ ಜಾರಿ ಮಾಡಿದ. ತಕ್ಷಣವೇ ರಾಜಭಟರು ಯಶವಂತನನ್ನು ಎಳೆದೊಯ್ದು ಸಿಂಹದ ಪಂಜರಕ್ಕೆ ನೂಕಿ ಬಿಟ್ಟರು. ಅರ್ಧಗಂಟೆ ಕಳೆಯಿತು. ಏನಾಗಿದೆಯೋ ನೋಡೋಣ ಎಂದುಕೊಂಡು ಬಾಗಿಲು ತೆರೆದರೆ, ಯಶವಂತ ಗಲಗಲ ನಗುತ್ತಾ ಹೊರಗೆ ಬಂದ. ಅದನ್ನು ಕಂಡು ಎಲ್ಲರಿಗೂ ಬೆರಗಾಯಿತು. ರಾಜ ಧಡಧಡನೆ ಸಿಂಹಾಸನ ಇಳಿದು ಬಂದು ಹೇಳಿದ: ‘ಸರದೇಶಪಾಂಡೆಯವರೆ, ಕ್ಷಮಿಸಿ. ನೀವು ಸಿಂಹವನ್ನೇ ಗೆದ್ದ ಸಾಹಸಿ. ಆದರೆ ನಾಲ್ಕು ದಿನದಿಂದ ಊಟವಿಲ್ಲದೆ ಹಸಿದಿದ್ದ ಅದು ನಿಮ್ಮನ್ನು ಯಾಕೆ ತಿನ್ನಲಿಲ್ಲ. ಅದಕ್ಕೆ ನೀವು ಏನು ಮಾಡಿದ್ರಿ. ದಯವಿಟ್ಟು ಹೇಳಿ…’
ಆಗ ಯಶವಂತ ಹೇಳಿದ್ದು: ‘ನೋಡೂ, ಈಗೇನಾದ್ರೂ ನಿನ್ನನ್ನು ತಿಂದು ಹಾಕಿದ್ರೆ, ಸಂಜೆಗೆ ಮಹಾರಾಜರು ನಿನ್ನನ್ನೇ ಸಹಭೋಜನಕ್ಕೆ ಕರೀತಾರೆ. ಊಟ ಮುಗಿದ ತಕ್ಷಣ ರಾಜರನ್ನು ಹೊಗಳಿ ನೀನೂ ಅರ್ಧಗಂಟೆ ಭಾಷಣ ಮಾಡಬೇಕು. ಹಾಗೆ ಮಾಡಲಿಲ್ಲ ಅಂದ್ರೆ ಮಹಾರಾಜರು ಬಿಡೋದಿಲ್ಲ. ಅಂತ ಹೇಳ್ದೆ ನೋಡಿ, ಆ ಸಿಂಹ ಬಾಯಿ ಮುಚ್ಕೊಂಡು ಬಿದ್ಕೊಳ್ತು…
>>>>>>>>
ಪ್ರವಾಸಿಯೊಬ್ಬ ಮುಂಬಯಿಗೆ ಹೋಗಿದ್ದ. ಪ್ರವಾಸದ ನೆನಪಿಗೆ ಏನನ್ನಾದರೂ ಖರೀದಿಸಲು ಒಂದು ಅಂಗಡಿಗೆ ಹೋದ. ಅಲ್ಲಿ ಬೆಳ್ಳಿಯಿಂದ ತಯಾರಿಸಲಾದ ಇಲಿಯೊಂದರ ವಿಗ್ರಹವಿತ್ತು. ಅದರ ಜೊತೆಗೇ ಪ್ರಸಾದದಂತೆ ಕಾಣುವ ಒಂದು ಪ್ಯಾಕೆಟ್ ಹಾಗೂ ತಿಳಿದಿರಲೇಬೇಕಾದ ಗುಟ್ಟು ಎಂಬ ಶೀರ್ಷಿಕೆಯ ಪುಸ್ತಕವಿತ್ತು. ಇದಕ್ಕೆ ರೇಟ್ ಎಷ್ಟು ಎಂದು ಪ್ರವಾಸಿ ವಿಚಾರಿಸಿದ. ಇಲಿಯ ವಿಗ್ರಹಕ್ಕೆ 500 ರೂ. ಜೊತೆಗಿರುವ ಕತೆ ಪುಸ್ತಕಕ್ಕೆ 1000 ರೂ. ಎಂದ ಅಂಗಡಿಯವ.
‘ಕಥೆ ಪುಸ್ತಕ ಬೇಕಿಲ್ಲ. ಇಲಿಯ ವಿಗ್ರಹ ಮಾತ್ರ ಸಾಕು’ ಎಂದ ಪ್ರವಾಸಿ, ಅದನ್ನಷ್ಟೇ ಖರೀದಿಸಿ ಬಸ್ ನಿಲ್ದಾಣದ ಕಡೆಗೆ ಹೆಜ್ಜೆ ಹಾಕಿದ. ಐದು ನಿಮಿಷದ ನಂತರ ಹಿಂದಿನಿಂದ ಏನೋ ಸದ್ದಾಯಿತು. ತಿರುಗಿ ನೋಡಿದವನು ಬೆಚ್ಚಿ ಬಿದ್ದ. ಕಾರಣ, ಈತನ ಹಿಂದೆ ನೂರಾರು ಇಲಿಗಳು ನಡೆದು ಬರುತ್ತಿದ್ದವು.
ಪ್ರವಾಸಿಗೆ ಗಾಬರಿಯಾಯಿತು. ಆತ ಓಡಲು ಆರಂಭಿಸಿದ. ಇಲಿಗಳು ಸುಮ್ಮನಿರಲಿಲ್ಲ. ಅವೂ ಓಡಿದವು. ನಂತರದ ಇಪ್ಪತ್ತು ನಿಮಿಷದಲ್ಲಿ ಇಲಿಗಳ ಸಂಖ್ಯೆ ಸಾವಿರವಾಯಿತು. ಅವು ಪ್ರವಾಸಿಯ ಕೈಲಿದ್ದ ಬೆಳ್ಳಿ ಇಲಿಯನ್ನೇ ನೋಡುತ್ತಾ ಇವನ ಹಿಂದೆ ಬರುತ್ತಿದ್ದವು. ಈ ಆಕಸ್ಮಿಕ ಬೆಳವಣಿಗೆಯಿಂದ ಕಂಗಾಲಾದ ಈತ ಬೇರೇನೋ ತೋಚದೆ ಸಮುದ್ರ ತೀರಕ್ಕೆ ಬಂದ. ಇಲಿಗಳು ಅಲ್ಲಿಗೂ ಬಂದವು. ಈತ ಒಂದು ಎತ್ತರದ ಪ್ರದೇಶಕ್ಕೆ ಹೋಗಿ, ಅಲ್ಲಿಂದ ಬೆಳ್ಳಿ ವಿಗ್ರಹದ ಇಲಿಯನ್ನು ಸಮುದ್ರಕ್ಕೆ ಎಸೆದ. ಮರುಕ್ಷಣವೇ ಎಲ್ಲ ಇಲಿಗಳೂ ದುಢುಂ ಎಂದು ಸಮುದ್ರಕ್ಕೆ ಜಿಗಿದು ಮುಳುಗಿ ಹೋದವು.
ನಂತರ ಈ ಪ್ರವಾಸಿ ಸರಸರನೆ ಇಲಿಯ ವಿಗ್ರಹ ಖರೀದಿಸಿದ್ದ ಅಂಗಡಿಗೇ ಬಂದ. ಇವನನ್ನು ಕಂಡಾಕ್ಷಣ ಮುಖ ಅರಳಿಸಿದ ಮಾಲೀಕ-’ನೀವು ಬಂದೇ ಬರ್ತೀರ ಅಂತ ಗೊತ್ತಿತ್ತು. ಕಥೆ ಪುಸ್ತಕ ಬೇಕು ತಾನೆ?’ ಎಂದು ಕೇಳಿದ.
‘ಕಥೆ ಪುಸ್ತಕ ಬೇಡ ಮಾರಾಯ. ನಮ್ಮ ರಾಜಕಾರಣಿಗಳದ್ದು ಒಂದು ಬೆಳ್ಳಿ ವಿಗ್ರಹ ಇದ್ರೆ ಬೇಗ ಕೊಡು’ ಎಂದ ಪ್ರವಾಸಿ.

Saturday 6 June 2015

ಎಲ್ಲರ ಬದುಕಿನಲ್ಲೂ ದೇವರಂತೆ ಯಾರಾದರೂ ಬಂದೇ ಬರುತ್ತಾರೆ!

ತುಂಬ ಕಷ್ಟದ ಸಂದರ್ಭ ಎದುರಿಗಿದ್ದಾಗ, ತೀರಾ ಆಕಸ್ಮಿಕವಾಗಿ ಯಾರೋ ಒಬ್ಬರು ನೆರವಿಗೆ ಬರುತ್ತಾರೆ. ಅದನ್ನು ನೆನಪಿಸಿಕೊಂಡು ನಾವೆಲ್ಲ-’ದೇವರ ರೂಪದಲ್ಲಿ ಬಂದು ನಮ್ಮನ್ನು ಕಾಪಾಡಿಬಿಟ್ಟಿರಿ’ ಎಂದು ಉದ್ಗರಿಸಿರುತ್ತೇವೆ. ವಾಸ್ತವ ಏನೆಂದರೆ, ಬೇರೊಬ್ಬರ ಪಾಲಿಗೆ ದೇವರ ರೂಪದಲ್ಲಿ ನೆರವಾಗುವಂಥ ಸಂದರ್ಭಗಳು ಎಲ್ಲರ ಬದುಕಿನಲ್ಲೂ ಒಂದಲ್ಲ ಒಂದು ಸಂದರ್ಭದಲ್ಲಿ ಬಂದೇ ಬರುತ್ತದೆ. ಈ ಮಾತಿಗೆ ಸಾಕ್ಷಿಯಾಗುವಂಥ ಹೃದ್ಯ ಪ್ರಸಂಗವೊಂದನ್ನು ಓದುಗ ನಿಮಗೆ ಹೇಳಲೇಬೇಕು ಎನಿಸುತ್ತಿದೆ. ಖಂಡಿತವಾಗಿಯೂ ಇದು ನಿಮಗೆ ಇಷ್ಟವಾಗುತ್ತದೆ.
ಆ ಸೇನಾ ತುಕಡಿಯಲ್ಲಿ ಹದಿನೈದು ಮಂದಿ ಯೋಧರಿದ್ದರು. ಅವರಿಗೆ ನಾಯಕನಾಗಿ ಒಬ್ಬ ಮೇಜರ್ ಇದ್ದ. ಆತ ಎರಡು ಯುದ್ಧಗಳಲ್ಲಿ ಪಾಲ್ಗೊಂಡಿದ್ದ, ಎರಡು ಬಾರಿಯೂ ಗೆಲುವಿನ ಸವಿ ಕಂಡಿದ್ದ ಅನುಭವಿ. ಅವನ ಮುಂದಾಳತ್ವದ ತಂಡವನ್ನು ಹಿಮಾಲಯದ ತಪ್ಪಲಿನಲ್ಲಿ ಸೇವೆಗೆ ನಿಯೋಜಿಸಲಾಗಿತ್ತು. ಮೂರು ತಿಂಗಳ ಸುದೀರ್ಘ ಅವಧಿಯವರೆಗೂ ಆ ಗಡಿ ಪ್ರದೇಶದಲ್ಲಿ ತುಂಬ ಎಚ್ಚರದಿಂದ ಪಹರೆ ಕಾಯುವ ಕೆಲಸ ಈ ಸೇನಾ ತುಕಡಿಯ ಯೋಧರದ್ದಾಗಿತ್ತು. ಪಹರೆ ಕಾಯಬೇಕಿದ್ದ ಜಾಗಕ್ಕೆ ವಾಹನ ಸೌಲಭ್ಯವಿರಲಿಲ್ಲ. ಸೇನೆಯ ವಾಹನ ಇಳಿದ ನಂತರ 18 ಕಿಲೋಮೀಟರ್ ದೂರವನ್ನು ನಡೆದೇ ಕ್ರಮಿಸಬೇಕಿತ್ತು. ಈ ಹೊಸದೊಂದು ತುಕಡಿ ಕರ್ತವ್ಯ ನಿರ್ವಹಿಸಲು ಬರುತ್ತಿದೆ ಎಂಬ ಸುದ್ದಿ ತಿಳಿದು ಈಗಾಗಲೇ ಹಿಮಾಲಯದ ತಪ್ಪಲಿನಲ್ಲಿ ಕಾವಲಿಗೆ ನಿಂತಿದ್ದ ಯೋಧರು ಖುಷಿಯಾಗಿದ್ದರು. ಹೊಸ ತಂಡ ಅಲ್ಲಿಗೆ ತಲುಪಿದ ಮರುದಿನದಿಂದಲೇ ಈಗಾಗಲೇ ಕಾವಲಿಗೆ ನಿಂತಿದ್ದ ತುಕಡಿಯ ಯೋಧರಿಗೆ ರಜೆ ಮಂಜೂರಾಗುತ್ತಿತ್ತು. ರಜೆಯ ನೆಪದಲ್ಲಿ ಹುಟ್ಟಿದೂರಿಗೆ ತೆರಳುವ, ಹೆಂಡತಿ-ಮಕ್ಕಳೊಂದಿಗೆ ನಲಿದಾಡುವ, ಪೋಷಕರೊಂದಿಗೆ ಬೆರೆಯುವ ಸವಿಗನಸುಗಳೊಂದಿಗೆ ಹಳೆಯ ಯೋಧರ ತಂಡ ಉಳಿದಿತ್ತು.
ತನ್ನನ್ನು ಹಿಂಬಾಲಿಸುತ್ತಿದ್ದ ಸೈನಿಕರಿಗೆ ಮೇಜರ್, ಒಂದೊಂದೇ ಹಳೆಯ ಸಾಹಸವನ್ನು ನೆನಪಿಸಿಕೊಂಡು ಹೇಳುತ್ತಿದ್ದ. ಅವರು ಸಾಗುತ್ತಿದ್ದ ಹಾದಿ ಹಿಮಾಲಯದ ಕೊರಕಲುಗಳಿಂದ ಕೂಡಿತ್ತು. ಮಿಗಿಲಾಗಿ ಗಡಿ ಪ್ರದೇಶ ಬೇರೆ. ಹಾಗಾಗಿ, ಅವರು ತುಂಬ ಎಚ್ಚರದಿಂದ ಹೆಜ್ಜೆ ಇಡುತ್ತಿದ್ದರು. ಉಗ್ರರು, ಶತ್ರುಗಳು ಎದುರಾಗುವ ಆತಂಕ ಎಲ್ಲರಿಗೂ ಇದ್ದೇ ಇತ್ತು. ಹಾಗಾಗಿ ಎಷ್ಟೇ ಬಿರುಸಾಗಿ ನಡೆದರೂ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಸ್ಥಳವನ್ನು ತಲುಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಕತ್ತಲು ಆವರಿಸತೊಡಗಿದಂತೆ ಎಲ್ಲ ಯೋಧರನ್ನೂ ಒಂದೆಡೆ ಕೂರಿಸಿದ ಮೇಜರ್-’ಈಗ ಊಟ ಮುಗಿಸಿ ಬಿಡಿ. ಕತ್ತಲಾದ ನಂತರ ಏನೂ ಕಾಣಿಸದೆ ತೊಂದರೆಯಾಗಬಹುದು’ ಎಂದರು. ನಂತರದ ಅರ್ಧಗಂಟೆಯಲ್ಲಿ ಎಲ್ಲರೂ ಊಟ ಮುಗಿಸಿದರು. ಹೇಗಿದ್ದರೂ ಬೆಳದಿಂಗಳಿದೆ. ರಾತ್ರಿ 12 ಗಂಟೆಯವರೆಗೂ ನಡೆದು ಬಿಡೋಣ. ಆನಂತರ ಸೂಕ್ತ ಜಾಗದಲ್ಲಿ ನಿದ್ರಿಸಿ ಬೆಳಗ್ಗೆ ಪ್ರಯಾಣ ಮುಂದುವರಿಸೋಣ ಎಂದರು ಮೇಜರ್. ಎಲ್ಲ ಯೋಧರೂ ಈ ಮಾತಿಗೆ ಒಪ್ಪಿಕೊಂಡರು.
ಮಧ್ಯರಾತ್ರಿ ಒಂದು ಗಂಟೆಯ ವೇಳೆಗೆ ಅವರೆಲ್ಲ ಒಂದು ಸಮತಟ್ಟಾದ ಪ್ರದೇಶಕ್ಕೆ ಬಂದರು. ಅಲ್ಲಿ ತುಂಬ ಹಳೆಯದೆಂದು ತಕ್ಷಣಕ್ಕೆ ಗೊತ್ತಾಗುವಂತಿದ್ದ ಹಳೆಯ ಪೆಟ್ಟಿಗೆ ಅಂಗಡಿಯೊಂದಿತ್ತು. ಅದಕ್ಕೆ ಬೀಗ ಹಾಕಲಾಗಿತ್ತು. ಆ ನಡುರಾತ್ರಿಯಲ್ಲಿ (ಅದೂ ಹಿಮಾಲಯದ ಪ್ರದೇಶ ಬೇರೆ) ಗಢಗಢ ನಡುಗಿಸುವಂಥ ಛಳಿಯಿತ್ತು. ಇಂಥ ಸಂದರ್ಭದಲ್ಲಿ ಹೇಗಾದರೂ ಅರ್ಧ ಕಪ್ ಟೀ ಸಕ್ಕರೆ ಸಾಕು ಎಂದು ಎಲ್ಲ ಸೈನಿಕರೂ ಅಂದುಕೊಂಡರು. ಆದರೆ, ಯಾರೂ ಬಾಯಿ ಬಿಟ್ಟು ಹೇಳಲಿಲ್ಲ. ನಡೆದೂ ನಡೆದೂ ಆಯಾಸವಾಗಿದ್ದ ಕಾರಣದಿಂದ ಮೇಜರ್‌ಗೂ ಈ ಸಂದರ್ಭದಲ್ಲಿ ಅರ್ಧ ಕಪ್ ಚಹಾ ಕುಡಿದಿದ್ದರೆ ರಿಲೀಫ್ ಸಿಗುತ್ತಿತ್ತು ಅನ್ನಿಸಿತು. ಆತ ಮನದ ಮಾತನ್ನು ಯೋಧರೊಂದಿಗೆ ಹೇಳಿಕೊಂಡ.
ಆದರೆ ಅವರ ಬಳಿ ಟೀ ಮಾಡಲು ಅಗತ್ಯವಿರುವ ಪಾತ್ರೆ, ಹಾಲು, ನೀರು, ಸಕ್ಕರೆ, ಟೀ ಪುಡಿ, ಸ್ಟವ್… ಈ ಯಾವುದೂ ಇರಲಿಲ್ಲ.
ಇದನ್ನು ಎಲ್ಲರಿಗಿಂತ ಮೊದಲೇ ಅರ್ಥ ಮಾಡಿಕೊಂಡ ಮೇಜರ್ ಹೇಳಿದ: ‘ಮೈ ಬಾಯ್ಸ್! ಇವತ್ತು ನಿಮ್ಮ ಪಾಲಿಗೆ ದುರಾದೃಷ್ಟ ಅಂದುಕೊಳ್ಳಿ. ಈಗಾಗಲೇ ನಡುರಾತ್ರಿಯಾಗಿದೆ. ಸಮೀಪದಲ್ಲಿ ಯಾವುದಾದರೂ ಹಳ್ಳಿ ಇರಬಹುದೇನೋ. ಆದರೆ ಅಪರಾತ್ರಿಯಲ್ಲಿ ಹೋಗಿ ಬಾಗಿಲು ಬಡಿಯುವುದರಿಂದ ಜನ ಹೆದರಬಹುದು. ನಡುರಾತ್ರಿಯಲ್ಲಿ ಊರುಗಳಿಗೆ ಹೋಗುವುದು ಸೇನಾ ನೀತಿಯಲ್ಲ.
ಹಾಗಾಗಿ ನಾವ್ಯಾರೂ ಇಲ್ಲಿಂದ ಕದಲುವುದು ಬೇಡ. ಈ ರಾತ್ರಿಯನ್ನು ಹೇಗಾದರೂ ಕಳೆಯೋಣ. ನಾಳೆ ಬೆಳಗ್ಗೆ ಬೇಗ ಪ್ರಯಾಣ ಆರಂಭಿಸೋಣ ಎಂದರು.
ಆಗ ಯೋಧರೆಲ್ಲ ಒಟ್ಟಾಗಿ ಹೇಳಿದರು: ‘ಮೇಜರ್ ಸಾಬ್, ಒಂದು ಟೀ ಕುಡಿಯಲೇಬೇಕು ಎಂಬ ಆಸೆ ಎಲ್ಲರಿಗೂ ಇದೆ. ಎದುರಿಗೆ ಹೇಗಿದ್ದರೂ ಪೆಟ್ಟಿಗೆ ಅಂಗಡಿ ಇದೆ ತಾನೆ? ಅದರ ಬೀಗ ಒಡೆದು ನೋಡೋಣ. ಅಲ್ಲಿ ಟೀ ಮಾಡಲು ಅನುಕೂಲವಾಗುವಂಥ ವಸ್ತುಗಳಿದ್ದರೆ ಸರಿ. ಇಲ್ಲವಾದರೆ ಏನನ್ನೂ ಮುಟ್ಟದೆ ಬಾಗಿಲು ಹಾಕಿಬಿಡೋಣ. ದೇಶಕ್ಕಾಗಿ ಹೋರಾಡುವವರು ನಾವು. ತೀರಾ ಅನಿವಾರ್ಯ ಅನಿಸಿದ್ದರಿಂದ ಮಾತ್ರ ಇಂಥದೊಂದು ತಪ್ಪು ಮಾಡುತ್ತಿದ್ದೇವೆ. ಇದು ಖಂಡಿತ ಮಹಾಪರಾಧ ಆಗುವುದಿಲ್ಲ…’
ಯೋಧರ ಬೇಡಿಕೆಗೆ ಮೇಜರ್, ಒಲ್ಲದ ಮನಸ್ಸಿನಿಂದಲೇ ಸಮ್ಮತಿ ಸೂಚಿಸಿದರು. ಯೋಧರೆಲ್ಲರ ಅದೃಷ್ಟ ಚೆನ್ನಾಗಿತ್ತು. ಕಾರಣ, ಆ ಪೆಟ್ಟಿಗೆ ಅಂಗಡಿಯಲ್ಲಿ ಹಾಲು, ಟೀ ಪುಡಿ, ಟೀ ತಯಾರಿಸಲು ಪಾತ್ರೆ, ಸಕ್ಕರೆ, ಕುಡಿಯಲು ಬಳಸುವ ಕಪ್‌ಗಳು, ಸ್ಟವ್… ಹೀಗೆ ಎಲ್ಲವೂ ಇತ್ತು. ಬಿಸ್ಕತ್‌ಗಳಿದ್ದವು. ಎಂಟು ಪ್ಯಾಕ್ ಸಿಗರೇಟ್‌ಗಳೂ ಇದ್ದವು. ಯೋಧರ ಖುಷಿಗೆ ಪಾರವೇ ಇಲ್ಲ. ಅವರೆಲ್ಲ ತುಂಬ ಸಡಗರದಿಂದ ಟೀ ತಯಾರಿಸಿದರು. ಸಿಗರೇಟುಗಳನ್ನು ಹಂಚಿಕೊಂಡರು. ಆ ನಡುರಾತ್ರಿಯಲ್ಲಿ ಚಪ್ಪರಿಸುತ್ತಾ, ಟೀ ಕುಡಿದು ತಮ್ಮ ಇಷ್ಟದ ಹಾಡು ಹೇಳಿ ಖುಷಿಪಟ್ಟರು. ನಂತರ ಎಲ್ಲರೂ ಒಂದೆರಡು ಗಂಟೆ ಕಾಲ ನಿದ್ರೆ ತೆಗೆದರು. ಬೆಳಕು ಹರಿಯುವ ಮುನ್ನವೇ ಎಲ್ಲರೂ ಎದ್ದು, ಹತ್ತು ನಿಮಿಷದ ವ್ಯಾಯಾಮ ಮಾಡಿ, ತಲುಪಬೇಕಿರುವ ಗಮ್ಯದತ್ತ ಹೊರಡಲು ಎದ್ದು ನಿಂತರು.
ಈ ಸಂದರ್ಭದಲ್ಲಿ ಮೇಜರ್ ಯೋಚಿಸಿದ. ನಮ್ಮ ಯೋಧರು ಈ ಅಂಗಡಿಯ ಬೀಗ ಮುರಿದು, ಟೀ ಮಾಡಿಕೊಂಡು ಕುಡಿದಿದ್ದಾರೆ. ಬಿಸ್ಕತ್ ತಿಂದಿದ್ದಾರೆ. ಸಿಗರೇಟು ಹಂಚಿಕೊಂಡಿದ್ದಾರೆ. ಹೀಗೆ ಮಾಡಿರುವುದರಿಂದ ಅಂಗಡಿಯ ಮಾಲೀಕನಿಗೆ ಖಂಡಿತ ಲಾಸ್ ಆಗಿದೆ. ಅದನ್ನು ತುಂಬಿಕೊಡಬೇಕಾದುದು ನನ್ನ ಧರ್ಮ. ಹೀಗೊಂದು ಯೋಚನೆ ಬರುತ್ತಿದ್ದಂತೆಯೇ ಪರ್ಸ್‌ನಿಂದ ಒಂದು ಸಾವಿರ ರು.ನ ನೋಟು ತೆಗೆದ ಮೇಜರ್, ಅದನ್ನು ಸಕ್ಕರೆ ಡಬ್ಬದ ಕೆಳಗಿಟ್ಟ. ನಂತರ ಅಂಗಡಿಯ ಬಾಗಿಲು ಮುಚ್ಚಿ, ಬೀಗ ಸಿಕ್ಕಿಸಿದ. (ಹದಿನೈದು ಜನ ಟೀ ಕುಡಿದು, ಬಿಸ್ಕತ್ ತಿಂದು, ಸಿಗರೇಟ್ ಸೇದಿದರೆ 1000ರು. ಆಗುವುದಿಲ್ಲ ನಿಜ. ಆದರೆ ಆ ಅಪರಾತ್ರಿಯಲ್ಲಿ ಟೀ ಸಿಕ್ಕಾಗ ದೊರೆತ ಖುಷಿಗೆ ಬೆಲೆ ಕಟ್ಟಲಾಗದು ಎಂದು ಮೇಜರ್ ಲೆಕ್ಕಹಾಕಿದ.) ಬೀಗ ಒಡೆದಿರುವುದನ್ನು ಕಂಡು ಗಾಬರಿಯಿಂದಲೇ ಬಾಗಿಲು ತೆರೆಯುವ ಮಾಲೀಕನಿಗೆ, ತುಂಬ ಬೇಗನೆ ಸಾವಿರ ರು.ಗಳ ನೋಟು ಕಾಣಿಸುತ್ತದೆ ಎಂಬುದು ಮೇಜರ್ ನಂಬಿಕೆಯಾಗಿತ್ತು. ಹೊರಟು ನಿಂತಿದ್ದ ಯೋಧರು ತಮ್ಮ ನಾಯಕನನ್ನು ಅಚ್ಚರಿ ಬೆರೆತ ಪ್ರೀತಿಯಿಂದ ನೋಡುತ್ತಿದ್ದರು.
ಅವರೊಂದಿಗೆ ಹೆಜ್ಜೆಯಿಡುತ್ತಾ ಮೇಜರ್ ಹೇಳಿದ: ಒಂದು ವೇಳೆ ಬೆಳಗ್ಗೆಯೋ, ಮಧ್ಯಾಹ್ನವೋ ನಾವೆಲ್ಲಾ ಅಲ್ಲಿಗೆ ಹೋಗಿದ್ದರೆ, ಅಂಗಡಿಯ ಮಾಲೀಕನಿಗೆ ಹಣ ನೀಡಿಯೇ ಟೀ ಕುಡಿಯುತ್ತಿದ್ದೆವು. ನಡುರಾತ್ರಿಯಲ್ಲಿ ಅಂಗಡಿಯ ಮಾಲೀಕ ಇದ್ದಿದ್ದರೆ ನೀವೇ ಮುಂದಾಗಿ ಹಣ ನೀಡುತ್ತಿದ್ದೀರಿ ಎಂಬುದನ್ನೂ ನಾನು ಬಲ್ಲೆ. ಆದರೆ, ಯಾರೂ ಇಲ್ಲದ ಕಾರಣದಿಂದ ನಾವು ಹಾಗೇ ಹೋಗಬಾರದು. ಹಣ ಪಾವತಿಸದೇ ಹೋದರೆ, ಬೀಗ ಒಡೆದವರು ಕಳ್ಳರು ಎಂಬ ಭಾವನೆ ಅಂಗಡಿಯ ಮಾಲೀಕನಿಗೆ ಬರುತ್ತದೆ. ಉಹುಂ, ನಾವ್ಯಾರೂ ಕಳ್ಳರಲ್ಲ. ನಾವು ಭಾರತಾಂಬೆಯ ಹೆಮ್ಮೆಯ ಪುತ್ರರು. ದೇಶಭಕ್ತರು, ಈ ಕಾರಣದಿಂದಲೇ ನಾನು ಹಣ ಇಟ್ಟು ಬಂದೆ…’
ಈ ಮಾತು ಕೇಳಿದ ಯೋಧರ ಕಂಗಳಲ್ಲಿ ಮೆಚ್ಚುಗೆಯಿತ್ತು.
ಅವತ್ತೇ ಈ ತುಕಡಿ ಗಡಿ ಕಾಯುವ ಕೆಲಸ ವಹಿಸಿಕೊಂಡಿತು. ಹೀಗೇ ವಾರಗಳು, ತಿಂಗಳುಗಳು ಕಳೆದವು. ಈ ತುಕಡಿಯವರಿಗೆ ರಜೆ ಘೋಷಣೆಯಾಯಿತು. ಈ ಯೋಧರಿದ್ದ ಪ್ರದೇಶಕ್ಕೆ ಹೊಸದೊಂದು ತುಕಡಿ ಬಂತು. ರಜೆ ಸಿಕ್ಕಿತೆಂಬ ಖುಷಿಯಲ್ಲಿ ಮೇಜರ್ ಮತ್ತು ಯೋಧರು ಮಿಲಿಟರಿ ಕ್ಯಾಂಪ್ ಕಡೆಗೆ ಹೆಜ್ಜೆ ಹಾಕಿದರು.
‘ಕಾಕತಾಳೀಯವೆಂಬಂತೆ ತಿಂಗಳುಗಳ ಹಿಂದೆ ನಡೆದು ಹೋದ ಹಾದಿಯಲ್ಲೇ ಅವರು ಹಿಂತಿರುಗಿದ್ದರು. ಅದೃಷ್ಟಕ್ಕೆ ಅವತ್ತು ಟೀ ಅಂಗಡಿಯಲ್ಲಿ ಮಾಲೀಕನಿದ್ದ. ಅವನಿಗೆ ತುಂಬಾ ವಯಸ್ಸಾಗಿತ್ತು. ಮೇಜರ್ ಮತ್ತು ಯೋಧರೆಲ್ಲ ಟೀ ಕುಡಿದರು. ಬಿಸ್ಕತ್ ತಿಂದರು. ನಂತರ ಮಾಲೀಕನೊಂದಿಗೆ ಮಾತಿಗಿಳಿದ ಮೇಜರ್, ಅವನ ಸುಖ-ದುಃಖ ವಿಚಾರಿಸಿದ. ಜನಸಂಚಾರ ವಿರಳವಾಗಿರುವ ಈ ಪ್ರದೇಶದಲ್ಲಿ ಅಂಗಡಿ ಇಟ್ಟುಕೊಂಡು ಬದುಕುವುದು ಕಷ್ಟವಲ್ಲವೆ ಎಂದು ಪ್ರಶ್ನೆ ಹಾಕಿದ. ನಂತರ -’ನೀವು ಏನೇ ಹೇಳಿ, ಈ ಜಗತ್ತಿನಲ್ಲಿ ದೇವರಿಲ್ಲ. ಆತ ನಿಜವಾಗ್ಲೂ ಇದ್ದಿದ್ರೆ ನಿಮಗೆ ಇಷ್ಟೊಂದು ಕಷ್ಟದ ಮಧ್ಯೆ ಬದುಕಬೇಕಾದ ಪರಿಸ್ಥಿತಿ ಬರ್ತಾ ಇರಲಿಲ್ಲ’ ಅಂದ.
‘ಇದಕ್ಕೆ ಮರುಕ್ಷಣವೇ ಪ್ರತಿಕ್ರಿಯಿಸಿದ ಆ ವೃದ್ಧ – ‘ಸಾಬ್, ದಯವಿಟ್ಟು ಹಾಗೆನ್ನಬೇಡಿ. ದೇವರು ಇದ್ದಾನೆ. ಆತ ಕರೆದಾಗ ನಮ್ಮ ನೆರವಿಗೆ ಯಾವ ರೂಪದಲ್ಲಾದ್ರೂ ಬಂದೇ ಬರ್ತಾನೆ. ಈ ಮಾತಿಗೆ ಕೆಲವೇ ತಿಂಗಳುಗಳ ಹಿಂದೆ, ಈ ಅಂಗಡಿಯಲ್ಲಿಯೇ ಸಾಕ್ಷಿ ಸಿಕ್ಕಿದೆ. ನನ್ನ ಅಂಗಡಿಗೆ ಆ ದಯಾಮಯಿ ಭಗವಂತ ಬಂದು ಹೋಗಿದ್ದಾನೆ’ ಎಂದುಬಿಟ್ಟ. ಈ ಮಾತು ಕೇಳುತ್ತಿದ್ದಂತೆಯೇ ಎಲ್ಲ ಯೋಧರ ಕಿವಿಗಳು ನೆಟ್ಟಗಾದವು. ಅವರೆಲ್ಲ -ಹೌದಾ? ಏನಾಯ್ತು ಎಂದರು. ಅದಕ್ಕೆ ಉತ್ತರವೆಂಬಂತೆ ವೃದ್ಧ ಹೀಗೆಂದ: ‘ತಿಂಗಳುಗಳ ಹಿಂದೆ ಉಗ್ರಗಾಮಿಗಳ ತಂಡವೊಂದು ಈ ಕಡೆಗೆ ಬಂತು. ಅವರು ನನ್ನ ಒಬ್ಬನೇ ಮಗನನ್ನು ಹಿಡಿದುಕೊಂಡು ಕೆಲವು ಸೂಕ್ಷ್ಮ ಮಾಹಿತಿ ನೀಡುವಂತೆ ಒತ್ತಾಯಿಸಿದರು. ನನ್ನ ಮಗ ಒಪ್ಪಲಿಲ್ಲ.
ಅವನನ್ನು ಸಾಯುವಂತೆ ಬಡಿದು ಹೋಗಿಬಿಟ್ಟರು. ವಿಷಯ ತಿಳಿದಾಕ್ಷಣ ಅಂಗಡಿಗೆ ಬೀಗ ಹಾಕಿ ಓಡಿಹೋದೆ. ಮಗನನ್ನು ಆಸ್ಪತ್ರೆಗೆ ಸೇರಿಸಿದೆ. ಅವತ್ತು ಕೆಲವು ಔಷಧಿಗಳ ಪಟ್ಟಿ ನೀಡಿದ ವೈದ್ಯರು, ಇದಿಷ್ಟನ್ನು ತಂದರೆ, ನಾಳೆ ಚಿಕಿತ್ಸೆ ಆರಂಭಿಸುತ್ತೇವೆ ಎಂದರು. ಅವತ್ತಿಗೆ ನನ್ನ ಬಳಿ ನಯಾ ಪೈಸೆ ಇರಲಿಲ್ಲ. ನೆರೆಹೊರೆಯವರ ಬಳಿ ಸಾಲ ಕೇಳಿದೆ. ಉಗ್ರಗಾಮಿಗಳ ಮೇಲಿನ ಭಯದಿಂದ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ. ಅವತ್ತು, ನನಗೆ ದಿಕ್ಕೇ ತೋಚಲಿಲ್ಲ. ರಾತ್ರಿ ಒಬ್ಬನೇ ಕೂತು ದೇವರನ್ನು ಪ್ರಾರ್ಥಿಸಿದೆ. ಭಗವಂತಾ, ಹೇಗಾದ್ರೂ ಸಹಾಯ ಮಾಡು ತಂದೇ ಎಂದು ಮತ್ತೆ ಮತ್ತೆ ಬೇಡಿಕೊಂಡೆ.
ಒಂದಿಷ್ಟು ವ್ಯಾಪಾರ ಮಾಡಿಕೊಂಡು ಆಸ್ಪತ್ರೆಗೆ ಹೋಗೋಣ ಎಂದುಕೊಂಡೇ ಬೆಳಗ್ಗೆ ಎದ್ದು ಅಂಗಡಿಗೆ ಬಂದೆ. ಅಂಗಡಿಯ ಬೀಗ ಮುರಿದು ಹೋಗಿತ್ತು. ಓಹ್, ಕಳ್ಳತನವಾಗಿದೆ. ನನ್ನ ಬದುಕು ಬೀದಿಗೆ ಬಿತ್ತು ಎಂದುಕೊಳ್ಳುತ್ತಲೇ ಒಳಗೆ ಬಂದರೆ ಆಶ್ಚರ್ಯ ಕಾದಿತ್ತು. ಸಕ್ಕರೆ ಡಬ್ಬಿಯ ಕೆಳಗೆ 1000 ರುಪಾಯಿನ ನೋಟಿತ್ತು. ಅವತ್ತು ನನ್ನ ಪಾಲಿಗೆ ಅದು ಲಕ್ಷ ರೂಪಾಯಿಗಿಂತಲೂ ಹೆಚ್ಚು ಅನ್ನಿಸಿತು. ಆ ಹಣದಿಂದಲೇ ಮಗನಿಗೆ ಚಿಕಿತ್ಸೆ ಕೊಡಿಸಿದೆ. ಈಗ ಹೇಳಿ ಸಾಹೇಬ್, ಅವತ್ತು ನನ್ನ ಅಂಗಡಿಗೆ ದೇವರಲ್ಲದೆ ಬೇರೆ ಯಾರಾದರೂ ಬಂದಿರಲು ಸಾಧ್ಯವೇ?
ಒಂದಂತೂ ಸತ್ಯ. ನಾವು-ನೀವೆಲ್ಲ ಆಗಿಂದಾಗ್ಗೆ ದೇವರಿಲ್ಲ ಎಂದು ವಾದಿಸುತ್ತಲೇ ಇರುತ್ತೇವೆ. ಆದರೆ ಆತ ಯಾವುದೋ ರೂಪದಲ್ಲಿ ಕಾಣಿಸಿಕೊಂಡು ತನ್ನ ಲೀಲೆ ತೋರಿಸಿರುತ್ತಾನೆ. ತಿಂಗಳುಗಳ ಹಿಂದೆ ಈ ಟೀ ಶಾಪ್‌ಗೆ ಬಂದು ಹಣವಿಟ್ಟು ಹೋದನಲ್ಲ… ಹಾಗೆ… ದೇವರಲ್ಲದೆ ಬೇರೆ ಯಾರೂ ಹಾಗೆ ಮಾಡು ಸಾಧ್ಯವೇ ಇಲ್ಲ…’
ವೃದ್ಧ ಮಾತು ಮುಗಿಸಿದ ತಕ್ಷಣವೇ ಯೋಧನೊಬ್ಬ ಏನೋ ಹೇಳಲು ಮುಂದಾದ. ಅವನನ್ನು ಕಣ್ಸನ್ನೆಯಿಂದಲೇ ಎಚ್ಚರಿಸಿದ ಮೇಜರ್, ಏನೊಂದೂ ಮಾತನಾಡದಿರುವಂತೆ ಸೂಚಿಸಿದ. ಮಾತಾಡಲು ಬಿಟ್ಟರೆ, ಆ ಯೋಧ ಮೂರು ತಿಂಗಳ ಹಿಂದೆ ಈ ಅಂಗಡಿಯಲ್ಲಿ 1000 ರು.ನ ನೋಟು ಇಟ್ಟು ಹೋಗಿದ್ದು ಮೇಜರ್ ಸಾಹೇಬರೇ ಹೊರತು ದೇವರಲ್ಲ ಎಂದು ಬಿಡುತ್ತಾನೆ ಎಂಬುದು ಆ ಸೇನಾಧಿಕಾರಿಗೆ ಅರ್ಥವಾಗಿ ಹೋಗಿತ್ತು. ಆತ ಟೀ ಅಂಗಡಿಯ ಮಾಲೀಕನಾಗಿದ್ದ ವೃದ್ಧನ ಹೆಗಲು ತಟ್ಟುತ್ತಾ- ಹೌದು ಅಜ್ಜಾ, ನಿಮ್ಮ ಮಾತು ನಿಜ. ದೇವರು ಎಲ್ಲೆಲ್ಲೂ ಇದ್ದಾನೆ. ಅವನಿಗೆ ಬೇಕು ಅನ್ನಿಸಿದಾಗ ತನಗೆ ಇಷ್ಟವಾದ ರೂಪದಲ್ಲಿ ಕಾಣಿಸಿಕೊಳ್ಳುತ್ತಾನೆ’ ಎಂದ.
ಈ ಮಾತು ಹೇಳುವಾಗ ಮೇಜರ್‌ನ ಕಂಗಳಲ್ಲಿ ವಿಚಿತ್ರ ಕಾಂತಿಯಿತ್ತು. ಈ ಸಂದರ್ಭಕ್ಕೆ ಸಾಕ್ಷಿಯಾಗಿದ್ದ ಹದಿನೈದು ಯೋಧರೂ ಭಾವಪರವಶರಾಗಿ, ಮಾತು ಹೊರಡದೆ ನಿಂತು ಬಿಟ್ಟಿದ್ದರು.

Friday 5 June 2015

ದೇವರ ಮೇಲೆ ನಂಬಿಕೆ ಇದ್ದರೆ ತರ್ಕವನ್ನು ಗೌರವಿಸಬಾರದಾ?


ಬಾಳಿಗೊಂದು ನಂಬಿಕೆ ಇರಬೇಕು ಖರೆ. ಆ ಬಗ್ಗೆ ದೂಸರಾ ಮಾತೇ ಇಲ್ಲ. ಆದರೆ ನಾವು ಭಾರತೀಯರ ಮೇಲೆ ಒಂದು ಆರೋಪವಿದೆ. ಅದೆಂದರೆ, ನಮಗೆ ವೈಜ್ಞಾನಿಕ ಮನೋಭಾವ ಇಲ್ಲ ಅನ್ನೋದು. ಅಂದರೆ ನಾವೇನೋ ವಿಜ್ಞಾನ ಕ್ಷೇತ್ರದಲ್ಲಿ ಭಾರಿ ಹಿಂದುಳಿದುಬಿಟ್ಟಿದ್ದೇವೆ, ತಂತ್ರಜ್ಞಾನದಲ್ಲಿ ನಾವು ಗ್ರೇಸ್್ಮಾರ್ಕ್ ಪಡೆಯುವುದಕ್ಕೂ ತಡಬಡಾಯಿಸುತ್ತಿದ್ದೇವೆ ಎಂಬ ಚಿಂತನೆಯ ಮುನ್ನುಡಿಯೇನೂ ಇದಲ್ಲ. ಬದಲಿಗೆ ನಮ್ಮ ನಿತ್ಯಜೀವನದಲ್ಲಿ ನಾವು ವರ್ತಿಸುತ್ತಿರುವ ರೀತಿ-ನೀತಿ ಎಂಥಾದ್ದು ಎಂಬುದನ್ನು ಗಮನಕ್ಕೆ ತೆಗೆದುಕೊಂಡಾಗ ನಮ್ಮಲ್ಲಿ ವೈಜ್ಞಾನಿಕ ಮನೋಭಾವ ಕಮ್ಮಿ ಇದೆ ಎಂಬುದನ್ನು ಬಡಪೆಟ್ಟಿಗೆ ತಳ್ಳಿಹಾಕಲಿಕ್ಕಾಗುವುದಿಲ್ಲ.
ನಾವು ಕರಾರುವಾಕ್ಕಾಗಿ ಒಂದು ಯೋಚನಾ ಧಾಟಿಯನ್ನು ರೂಢಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದವರು. ಸಾವಿರಾರು ವರ್ಷಗಳಿಂದ ಯಾವುದನ್ನೋ ಮಾಡಿಕೊಂಡು ಬರಲಾಗುತ್ತಿದೆ ಎಂಬ ಕಾರಣಕ್ಕೆ ಅದನ್ನೇ ಮುಂದುವರಿಸಿಕೊಂಡು ಹೋಗುವ ನಮಗೆ ಅದರ ಕಾರಣವನ್ನು ಕೆದಕುವ, ಪ್ರಸ್ತುತತೆ ಇದೆಯಾ ಎಂದು ತರ್ಕಿಸುವ ಗುಣಗಳೇ ಇಲ್ಲ. ನಮ್ಮ ದೇಶ ವೈವಿಧ್ಯದ ಗೂಡು ಹಾಗೂ ಶ್ರೇಷ್ಠತೆಯ ನೆಲ. ತನ್ನಲ್ಲಿ ಅಸಾಧಾರಣ ಸಾಮರ್ಥ್ಯವನ್ನು ಹಿಡಿದಿಟ್ಟುಕೊಂಡಿರುವ ರಾಷ್ಟ್ರವಿದು. ಇದನ್ನು ನಾವು ಸರಿಯಾಗಿ ಬಳಸಿಕೊಂಡಿದ್ದೇ ಆದರೆ ನಮ್ಮ ಜೀವನದ ಗುಣಮಟ್ಟ ಹಾಗೂ ಬದುಕಿನ ಎಲ್ಲ ಆಯಾಮಗಳಲ್ಲಿ ಉತ್ಪಾದಕತೆ ಹೆಚ್ಚುವುದರಲ್ಲಿ ಸಂಶಯವಿಲ್ಲ. ಆದರೆ ಇವೆಲ್ಲ ಸಾಕಾರವಾಗಬೇಕು ಎಂದಾದರೆ ಮೂಲಭೂತವಾಗಿ ನಮ್ಮಲ್ಲಿ ಬೇಕಾಗಿರುವುದು ವೈಜ್ಞಾನಿಕ ದೃಷ್ಟಿಕೋನ. ನಂಬಿಕೆ ಮತ್ತು ತರ್ಕಗಳ ಪ್ರಶ್ನೆ ಬಂದಾಗ ನಾವು ಯಾವತ್ತೂ ಇಡಿ ಇಡಿಯಾಗಿ ನಂಬಿಕೆಯ ದಡಕ್ಕೆ ಆತುಕೊಳ್ಳುತ್ತ ಬಂದವರು. ಅದು ಸರ್ವನಾಶಕ್ಕೆ ಕಾರಣವಾಗಹೊರಟಿದೆ ಎಂಬ ಸೂಚನೆ ಸಿಕ್ಕರೂ ಅದನ್ನು ನಾವು ಬಿಡಲೊಲ್ಲೆವು. ನಂಬಿಕೆ ಹಾಗೂ ತರ್ಕಗಳೆರಡರ ಹದ ಮಿಳಿತ ಬೇಕು ಬದುಕಿಗೆ. ಯಾವುದಕ್ಕೆ ಅತಿಯಾಗಿ ತಗುಲಿಕೊಂಡರೂ ಅಪಸವ್ಯಗಳೇ ಎದುರಾಗುತ್ತವೆ. ತರ್ಕ ಹಾಗೂ ನಂಬಿಕೆಗಳ ವಿಷಯದಲ್ಲಿ ಹೀಗೊಂದು ಸಮತೂಕ ಸಾಧಿಸಿದಾಗಮಾತ್ರ ಜಗತ್ತು ನಮ್ಮನ್ನು ಗುರುತಿಸುತ್ತದೆ.ಸಮುದ್ರ ಮಧ್ಯದಲ್ಲಿ ಹಡಗೊಂದು ಮುರಿದುಹೋಯಿತು. ಎಲ್ಲರೂ ಬಚಾವಾಗುವುದಕ್ಕೆ ತಮ್ಮ ಹಾದಿ ಹುಡುಕತೊಡಗಿದರು. ಆ ಹಡಗಿನಲ್ಲಿ ಆಸ್ತಿಕನೊಬ್ಬನಿದ್ದ. ಆತ ಯಾವ ಗಾಬರಿಗೂ ಒಳಗಾಗದೇ ‘ದೇವರೇ, ನನ್ನನ್ನು ಕಾಪಾಡು’ ಎಂದು ಪ್ರಾರ್ಥನೆಯಲ್ಲಿ ತೊಡಗಿಕೊಂಡ. ಅಷ್ಟರಲ್ಲಿ ಮತ್ತೊಂದು ದೊಡ್ಡ ಹಡಗು ಸಾಗಿ ಬಂತು. ಹಡಗಿನ ಕ್ಯಾಪ್ಟನ್ ಇವನನ್ನು ಗುರುತಿಸಿ ಇವನತ್ತ ರಕ್ಷಣೆಯ ಹಗ್ಗ ಎಸೆದು ಹೇಳಿದ- ‘ಈ ಹಡಗಿಗೆ ಹತ್ತಿಕೋ..’ ಅದಕ್ಕೆ ಈ ಕಟ್ಟರ್ ಆಸ್ತಿಕ ಉತ್ತರಿಸಿದ- ‘ಇಲ್ಲ, ಇಲ್ಲ ನೀವು ಹೊರಡಿ. ನನಗೆ ದೇವರಲ್ಲಿ ಅಸೀಮ ನಂಬಿಕೆ. ಆತನೇ ಕಾಪಾಡುತ್ತಾನೆ. ನನ್ನ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.’ ಆ ಹಡಗು ಮುಂದೆ ಹೋಯಿತು.
ನಂತರ ಮೀನುಗಾರರ ಸಣ್ಣ ದೋಣಿಯೊಂದು ಸಮೀಪ ಹೋಯಿತು. ಅಲ್ಲಿನವರೂ ಈ ವ್ಯಕ್ತಿಯನ್ನು ತಮ್ಮ ದೋಣೆಗೆ ದಾಟಿ ಬರುವಂತೆ ಹೇಳಿ ಸಹಾಯಕ್ಕೆ ಮುಂದಾದರು. ಇವನದು ಮತ್ತದೇ ಅಚಲ ಉತ್ತರ- ‘ದೇವರು ನನ್ನನ್ನು ಕಾಪಾಡುತ್ತಾನೆ.’ ಅವರೂ ಮುಂದೆ ಸಾಗಿದರು. ಹಡಗು ಮತ್ತಷ್ಟು ಮುಳುಗುತ್ತಾ ಬಂತು. ಆ ಸಮಯಕ್ಕೆ ಆಕಾಶದಲ್ಲಿ ಹೆಲಿಕಾಫ್ಟರ್ ಒಂದು ಗಿರ್ಕಿ ಹೊಡೆಯಿತು. ಅವರೂ ಮುಳುಗುತ್ತಿರುವ ಈತನಿಗೆ ಏಣಿ ಇಳಿಬಿಟ್ಟು ರಕ್ಷಿಸುವುದಕ್ಕೆ ಮುಂದಾದರು. ಈತನ ಉತ್ತರ – ‘ನೀವು ಹೊರಡಬಹುದು. ನನಗೆ ದೇವರಲ್ಲಿ ಅಚಲ ನಂಬಿಕೆ ಇದೆ. ಆತ ಕಾಪಾಡಿಯೇ ಕಾಪಾಡುತ್ತಾನೆ.’ ಬೇರೆ ದಾರಿಯಿಲ್ಲದೇ ಹೆಲಿಕಾಪ್ಟರ್ ಕೂಡ ದೂರವಾಯಿತು.
ಇತ್ತ ಹಡಗು ಮುಳುಗಿಹೋಗಿ ಈ ಆಸ್ತಿಕ ಸ್ವರ್ಗದಲ್ಲಿ ಕಣ್ಣು ತೆರೆದ. ಇವನೆದುರು ದೇವರು ಸಿಂಹಾಸನದಲ್ಲಿ ಪವಡಿಸಿದ್ದ. ಈತ ಕೇಳಿದ, ‘ದೇವರೇ, ನಾನು ಎಲ್ಲ ರೀತಿಯಲ್ಲೂ ನಿನ್ನ ಮೇಲೆ ನಂಬಿಕೆ ಇರಿಸಿದ್ದೆ. ಅದೇಕೆ ನೀನು ಕಾಪಾಡಲಿಲ್ಲ?’
ದೇವರು ಉತ್ತರಿಸಿದ- ‘ಅಲ್ಲಯ್ಯಾ, ನಿನ್ನನ್ನು ಕಾಪಾಡುವುದಕ್ಕೋಸ್ಕರ ನಾನು ಒಮ್ಮೆ ಹಡಗು, ಇನ್ನೊಮ್ಮೆ ಮೀನುಗಾರರ ದೋಣಿ, ಮತ್ತೊಮ್ಮೆ ಹೆಲಿಕಾಪ್ಟರ್ ಕಳುಹಿಸಿದೆ. ನನ್ನಿಂದ ಇನ್ನೂ ಏನು ನಿರೀಕ್ಷೆ ಮಾಡ್ತೀಯಾ?’
>>>
ಬಹುತೇಕ ನಾವೆಲ್ಲ ಈ ಕಟ್ಟರ್ ಆಸ್ತಿಕನಂತೆಯೇ ಬದುಕುತ್ತಿದ್ದೇವೆ. ದಿನನಿತ್ಯದ ಜೀವನದಲ್ಲಿ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೇವೆ. ನಾವು ಭಾರಿ ದೈವಭೀರುಗಳು, ದೇವರಿಗೆ ಹೆದರುವವರು ಎಂದು ತೋರಿಸಿಕೊಳ್ಳುತ್ತೇವೆ. ಎಲ್ಲವನ್ನೂ ನಂಬಿಕೆಯ ಮೇಲೆ ಹೇರುತ್ತೇವೆ. ಆದರೆ ಕಾನೂನು- ನಿಯಮಗಳನ್ನು ಪಾಲಿಸುವ ವಿಷಯ ಬಂದಾಗ ನಮ್ಮದು ಘೋರ ಅಸಡ್ಡೆ. ನಮ್ಮನ್ನು ಸುರಕ್ಷಿತವಾಗಿ, ಕ್ಷೇಮವಾಗಿ ಇಡಪ್ಪಾ ಎಂದು ದೇವರನ್ನು ಅನುಕ್ಷಣವೂ ಬೇಡಿಕೊಳ್ಳುತ್ತೇವೆಯೇ ಸಿವಾಯ್, ಆ ನಿಯಮಗಳೂ ನಮ್ಮ ಸುರಕ್ಷತೆಗೆ ಇರುವುದು ಎಂಬುದನ್ನು ಅರ್ಥ ಮಾಡಿಕೊಳ್ಳುವುದೇ ಇಲ್ಲ.
ರಸ್ತೆ ಮೇಲೆ ಸುಮ್ಮನೇ ಕಣ್ಣು ಹಾಯಿಸಿ. ಬೈಕು ಒಂದು ಹೋಗುತ್ತಿರುತ್ತದೆ. ಅದನ್ನು ಚಲಾಯಿಸುತ್ತಿರುವ ಅಪ್ಪನ ತಲೆಯಲ್ಲಿ ಹೆಲ್ಮೆಟ್ ಇದೆ. ಏಕಿದೆ ಅಂದರೆ, ಹಾಗಂತ ನಿಯಮವಿದೆ; ಪೊಲೀಸರು ನೋಡಿ ದಂಡ ಹಾಕಬಾರದಲ್ಲಾ ಎಂಬ ಒಂದೇ ಕಾರಣಕ್ಕೆ. ಆದರೆ ಹಿಂದೆ ಮಗುವನ್ನು ಹಿಡಿದು ಕುಳಿತ ಅಮ್ಮನ ತಲೆಗೆ ಶಿರಸ್ತ್ರಾಣವಿಲ್ಲ. ಅದಕ್ಕೂ ಕಾರಣ ಬಹಳ ಸುಲಭದ್ದು. ಹಿಂದೆ ಕುಳಿತವರು ಹೆಲ್ಮೆಟ್ ಧರಿಸಿರಬೇಕು ಎಂಬುದು ಕಾನೂನಿನಲ್ಲಿ ಕಡ್ಡಾಯ ಮಾಡಿಲ್ಲವಲ್ಲ! ಅಲ್ಲೇ ಬೈಕ್್ನ ನಡುಭಾಗದಲ್ಲಿ ಪೋರನೊಬ್ಬ ತೂರಿಕೊಂಡು ಕುಳಿತಿದ್ದಾನೆ. ಇನ್ನೊಬ್ಬನನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರತಿಷ್ಠಾಪಿಸಲಾಗಿದೆ. ಇವರಿಬ್ಬರಿಗೂ ಹೆಲ್ಮೆಟ್ ಇಲ್ಲ. ಅವರ ಸುರಕ್ಷತೆಯ ಕತೆಯೇನು? ಕ್ಷಮಿಸಿ, ಹಾಗೆಲ್ಲ ಕೇಳಲೇಬಾರದು. ಅವರಿಗೆಲ್ಲ ಹೆಲ್ಮೆಟ್ ಕಡ್ಡಾಯ ಎಂಬ ನಿಯಮವಿಲ್ಲ.
ಕಾಯಿದೆಯ ಬಿಗಿ ಇಲ್ಲ ಎಂದಾದರೆ ಹೆಲ್ಮೆಟ್ ಧರಿಸಿ ಪ್ರಯಾಣ ಮಾಡುವವರ ಸಂಖ್ಯೆ ಶೇ. 20ರಷ್ಟೂ ಇರುವುದಿಲ್ಲ. ಬಹುಶಃ ಜಗತ್ತಿನಲ್ಲಿ ಹೆಲ್ಮೆಟ್ ಬಗ್ಗೆ ಇಷ್ಟು ಉಡಾಫೆ ಇಟ್ಟುಕೊಂಡಿರುವ ಮಂದಿ ನಾವು ಮಾತ್ರ ಆಗಿದ್ದಿರಬಹುದು.
ಬೈಕ್ ಹಿಂದೆ ಕುಳಿತವರಿಗೂ ಹೆಲ್ಮಟ್ ಕಡ್ಡಾಯ ಎಂಬ ನಿಯಮ ತರುವುದಕ್ಕೆ ಮುಂದಾದಾಗಲೆಲ್ಲ, ನಾವು ಸರ್ಕಾರದ ಆ ನಡೆಯ ವಿರುದ್ಧ ಭಾರಿ ಒಗ್ಗಟ್ಟಿನಲ್ಲಿ ಬೀದಿಗಿಳಿದು ಪ್ರತಿಭಟಿಸಿದ್ದೇವೆ! ನೋಡಿ, ನಮ್ಮ ಸ್ಥಳೀಯ ಆಡಳಿತ ಬಲವಂತವಾಗಿ ನಮ್ಮ ಮೇಲೆ ಹೆಲ್ಮೆಟ್ ಹೇರುತ್ತಿದೆ ಎಂದು ಆಕ್ಷೇಪಿಸುತ್ತ ನ್ಯಾಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಗಳನ್ನು ಹೂಡಿದ್ದೇವೆ. ಇಂಥ ಪ್ರತಿರೋಧಗಳಿಗೆ ಪೆಚ್ಚಾಗಿ ಕಾನೂನೇ ಹಿಂದೆ ಸರಿದಿದೆ. ಇದರ ಪರಿಣಾಮ ಆಗುತ್ತಿರುವುದೆಲ್ಲಿ? ರಸ್ತೆಗಳಲ್ಲಿ ಅಪಘಾತಗಳು ಹೆಚ್ಚಾಗಿವೆ. ತುರ್ತುಚಿಕಿತ್ಸೆಯ ಖರ್ಚುಗಳನ್ನು ಭರಿಸುವುದಕ್ಕೆ ಅಪಘಾತಕ್ಕೆ ಒಳಗಾದವನಿಗೆ ಸಾಧ್ಯವಾಗುತ್ತದೋ ಇಲ್ಲವೋ ಎಂಬ ಅನುಮಾನದಲ್ಲಿ ಆಸ್ಪತ್ರೆಗಳು ಅಂಥ ಪ್ರಕರಣಗಳನ್ನು ದಾಖಲಿಸಿಕೊಳ್ಳುವುದಕ್ಕೇ ಹಿಂದೆ-ಮುಂದೆ ನೋಡುತ್ತಿವೆ. ಅಪಘಾತಕ್ಕೀಡಾದವನು ಅರ್ಜಿ ತುಂಬುವ ಸ್ಥಿತಿಯಲ್ಲಿದ್ದಿರುವುದಿಲ್ಲ. ಕೆಲವೇ ಸಂವೇದನಾಶೀಲ ಅಧಿಕಾರಿಗಳು ಮಾತ್ರವೇ ಈ ಕಾಯಿದೆ ಚೌಕಟ್ಟನ್ನು ಮಾನವೀಯ ನೆಲೆಯಲ್ಲಿ ಪಕ್ಕ ಸರಿಸಿ, ಅಗತ್ಯ ಕ್ರಮಕ್ಕೆ ದಾರಿ ಮಾಡಿಕೊಡುತ್ತಾರೆ.
ಹೆಲ್ಮೆಟ್ ಧರಿಸುವುದರಿಂದ ಸುರಕ್ಷತೆ ಹೆಚ್ಚು ಎಂದು ನಿರೂಪಿಸುವ ಅಂಕಿ-ಅಂಶ, ಮಾಹಿತಿಗಳನ್ನೆಲ್ಲ ಎಷ್ಟೇ ಎದುರಿಗಿಟ್ಟರೂ ಆ ಮೂಲಕ ಜನರು ಹೆಲ್ಮೆಟ್ ಹಾಕಿಕೊಳ್ಳುವಂತೆ ಮಾಡಲಿಕ್ಕಾಗುವುದಿಲ್ಲ. ಕಾಯಿದೆ ಇರಲಿ, ಇಲ್ಲದಿರಲಿ ನೀವು ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸಿರಲೇ ಬೇಕು ಎಂದು ಕೆಲವೇ ಸಂಸ್ಥೆಗಳಷ್ಟೇ ತಮ್ಮ ಉದ್ಯೋಗಿಗಳಿಗೆ ಷರತ್ತು ವಿಧಿಸಿವೆ. ಜಗತ್ತಿನಾದ್ಯಂತ, ನಾಗರಿಕವಾಗಿ ಮುಂದುವರಿದಿವೆ ಎಂಬ ರಾಷ್ಟ್ರಗಳಲ್ಲೆಲ್ಲ ಹೆಲ್ಮೆಟ್ ಧಾರಣೆ ಕಡ್ಡಾಯವಾಗಿದೆ. ಅಲ್ಲೆಲ್ಲ ರಸ್ತೆಗಳು ಉತ್ತಮವಾಗಿವೆ, ಸಂಚಾರ ವ್ಯವಸ್ಥೆಯೂ ಅಚ್ಚುಕಟ್ಟಾಗಿದೆ. ಹಾಗಿದ್ದೂ ಅವರು ಬೈಕ್್ಗಳಿಗಷ್ಟೇ ಅಲ್ಲ, ಬೈಸಿಕಲ್ ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ ಮಾಡಿಕೊಂಡಿದ್ದಾರೆ. ಕೇವಲ ಚಾಲಕನಿಗೆ ಮಾತ್ರವಲ್ಲದೇ ಸವಾರನಿಗೂ ಹೆಲ್ಮೆಟ್ ಧಾರಣೆ ಕಡ್ಡಾಯ. ಅದು ತಮ್ಮ ಲಾಭಕ್ಕಾಗಿಯೇ ಎಂದು ಅರ್ಥ ಮಾಡಿಕೊಂಡಿರುವ ಅಲ್ಲಿನ ಜನರೆಲ್ಲ ಗೊಂದಲಗಳಿಗೆ ಅವಕಾಶ ಮಾಡಿಕೊಡದೇ ನಿಯಮವನ್ನು ಪಾಲಿಸುತ್ತಾರೆ.
ಆದರೆ ನಮ್ಮಲ್ಲಿ? ರಸ್ತೆಯಲ್ಲಿ ಅಡ್ಡಡ್ಡ ಕಾರು ನಿಲ್ಲಿಸಿ ಕರ್ಕಶವಾಗಿ ಹಾರನ್ ಬಜಾಯಿಸುತ್ತಾರೆ. ಸಂಚಾರ ನಿಯಮಗಳು ಲೆಕ್ಕಕ್ಕೇ ಇಲ್ಲ. ಸಂಚಾರಸೂಚಿಯ ದೀಪಗಳಲ್ಲೂ ಅಸ್ತವ್ಯಸ್ತತೆ, ರಸ್ತೆಯಲ್ಲಿ ಯಮಪುರಿಯ ದಾರಿ ತೋರಿಸುವ ಹೊಂಡಗಳು, ಇವೆಲ್ಲದರ ನಡುವೆಯೇ ಹೆಲ್ಮೆಟ್್ರಹಿತ ಬೈಕ್ ಚಾಲನೆ. ಆಸ್ಟ್ರೇಲಿಯಾದಂಥ ರಾಷ್ಟ್ರ 1961ರಿಂದಲೇ ಹೆಲ್ಮೆಟ್ ಕಡ್ಡಾಯ ನೀತಿ ಅನುಸರಿಸಿಕೊಂಡು ಬಂದಿದೆ ಎಂಬುದು ಗೊತ್ತೇನು? ‘ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜನರಿಗೇ ಹೆಲ್ಮೆಟ್ ಬೇಡ ಎಂದಿರುವಾಗ ಅದನ್ನು ಹೇರುವುದಕ್ಕೆ ಯಾವ ಸರ್ಕಾರಕ್ಕೆ ಅಧಿಕಾರವಿದೆ?’ ಎಂದೇ ನಾವು ಅಬ್ಬರಿಸುತ್ತೇವೆ!?
ಹಾಗಾದರೆ ನಮಗೆ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯೇ ಇಲ್ಲವೇಉಹುಂ. ಹಾಗೆ ಅಂದುಕೊಳ್ಳುವಂತೆಯೇ ಇಲ್ಲ! ಏಕೆಂದರೆ ವಾಹನ ಖರೀದಿಸುವಾಗಲೇ ನಮ್ಮ ಅದೃಷ್ಟ ಸಂಖ್ಯೆಯ ಲೆಕ್ಕಾಚಾರಗಳು ಶುರು. ಇದೇ ನಂಬರಿನಿಂದ ಶುರುವಾದರೆ, ಕೂಡಿಸಿ- ಕಳೆದರೆ ಇಂತಿಷ್ಟೇ ಸಂಖ್ಯೆ ಉತ್ತರವಾಗಿ ಬಂದರೆ ಆಯುಷ್ಯ ಪೂರ್ತಿ ಅದರಲ್ಲಿ ಆರಾಮ ಪ್ರಯಾಣ ಎಂದು ನಂಬುವವರು ನಾವು. ದೇವಸ್ಥಾನಕ್ಕೆ ಕೊಂಡೊಯ್ದು ಪೂಜೆ ಆದ ನಂತರವೇ ವಾಹನದ ಬಳಕೆ. ಯಾವತ್ತೂ ಅಪಘಾತಕ್ಕೆ ಈಡಾಗದಿರಲಿ ದೇವರೇ ಎಂಬ ಪ್ರಾರ್ಥನೆ. ಕಾರಿನ ಡ್ಯಾಶ್್ಬೋರ್ಡ್ ಮೇಲೆ ಗಣಪ. ಬೈಕ್್ನ ಮೂತಿಗೆ ಇಂಥಾ ದೇವರ ಆಶೀರ್ವಾದ ಎಂಬ ಒಕ್ಕಣೆ. ಎಲ್ಲವೂ ಸರಿ. ಆದರೆ ನಂತರ ಗಾಡಿಯ ಇನ್ಷೂರೆನ್ಸ್ ಕಂತನ್ನೇ ಕಟ್ಟುವುದಿಲ್ಲ. ನಿಯಮವಿದೆಯಲ್ಲಾ ಎಂಬ ಕಾರಣಕ್ಕೆ ವಿಮೆ ಮಾಡಿಸುವವರೇ ಅಧಿಕ. ಅವಘಡದ ಸಂದರ್ಭದಲ್ಲಿ ನಮಗೆ, ನಮ್ಮ ಕುಟುಂಬದವರಿಗೆ ರಕ್ಷಣೆಗೆ ಬರುವಂಥದ್ದು ಇದೇ ಎಂಬ ಸುರಕ್ಷತೆಯ ಅರಿವೇಕೆ ನಮ್ಮಲ್ಲಿ ಒಡಮೂಡುವುದಿಲ್ಲ? ನಮಗೆ ಸುರಕ್ಷತೆ ಬೇಕು. ಆದರೆ ನಾವು ಸುರಕ್ಷತೆಯ ಭಾರವನ್ನೆಲ್ಲಾ ದೇವರ ಮೇಲೆ ಹಾಕಿ ಹೆಲ್ಮೆಟ್ ಪಕ್ಕಕ್ಕೆ ಸರಿಸುತ್ತೇವೆ! ಹೆಲ್ಮೆಟ್ ಧರಿಸಿಯೂ ಅಪಘಾತದಲ್ಲಿ ಸತ್ತ ವ್ಯಕ್ತಿಯ ಯಾವುದಾದರೂ ಒಂದು ಉದಾಹರಣೆ ಇಟ್ಟುಕೊಂಡು, ‘ಹೆಲ್ಮೆಟ್ ಹಾಕಿದ ಮಾತ್ರಕ್ಕೆ ಬದುಕುಳಿಯುತ್ತೇವೆ ಅನ್ನೋದಕ್ಕೆ ಗ್ಯಾರಂಟಿ ಏನು? ಎಲ್ಲ ಆ ದೇವರಿಚ್ಛೆ’ ಎಂಬ ಅಸಡ್ಡಾಳ ವಾದ ನಮ್ಮದು.
ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್್ಬೆಲ್ಟ್ ಕಟ್ಟಿಕೊಳ್ಳುವುದರ ಬಗ್ಗೆಯೂ ನಮ್ಮ ನಿರ್ಲಕ್ಷ್ಯ ಕಣ್ಣಿಗೆ ರಾಚುವಂಥದ್ದೇ. ಕ್ಯಾಬ್್ಡ್ರೈವರ್್ಗಳು ಸೀಟ್್ಬೆಲ್ಟ್ ಧರಿಸಿ ಚಾಲನೆ ಮಾಡುವ ದೃಶ್ಯ ಕಾಣಸಿಗುವುದೇ ಅಪರೂಪ. ‘ನಿಯಮದ ಪ್ರಕಾರ ಅದೇನೂ ಕಟ್ಟುನಿಟ್ಟು ಅಲ್ಲ ಬಿಡಿ. ಇಷ್ಟಕ್ಕೂ ಅದನ್ನೆಲ್ಲ ಯಾರು ಗಮನಿಸುತ್ತಾರೆ?’ ಎಂಬ ಸಮಜಾಯಿಷಿ ನಮ್ಮ ಬಳಿ ಯಾವತ್ತೂ ಸಿದ್ಧ. ಡ್ಯಾಶ್್ಬೋರ್ಡ್ ಮೇಲೆ ಗಣಪತಿ ಇದ್ದ ಮೇಲೆ ಸೀಟ್್ಬೆಲ್ಟ್್ನ ಹರಕತ್ತೇನು ಎಂಬ ಲಹರಿ ನಮ್ಮದು.
ಇಷ್ಟೆಲ್ಲ ನ್ಯೂನತೆಗಳಿದ್ದೂ ಅವನ್ನು ಯಾರಾದರೂ ತೋರಿಸಿ, ನಿಮ್ಮ ನಡತೆ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಒಗ್ಗುವಂಥದ್ದಲ್ಲ ಎಂದರೆ ಸಿಡಿಸಿಡಿಯಾಗುತ್ತೇವೆ. ಸುಳ್ಳೇ ನಮ್ಮಲ್ಲೊಂದು ಸ್ವಾಭಿಮಾನ ಹೆಡೆ ಎತ್ತಿ ಬುಸುಗುಡುತ್ತದೆ. ಈಗ ಹೇಳಿ, ಮುಳುಗುತ್ತಿರುವ ಹಡಗಿನಲ್ಲಿ ಎಲ್ಲರ ಸಹಾಯಹಸ್ತಗಳನ್ನು ದೂರತಳ್ಳಿ ಭಜನೆ ಮಾಡುತ್ತಾ ಕುಳಿತು ನೆಗೆದುಬಿದ್ದ ಆ ಅಸಾಮಿ ನಮ್ಮದೇ ಪ್ರತಿನಿಧಿಯಂತೆ ಭಾಸವಾಗುತ್ತಿಲ್ಲವೇ?

Thursday 4 June 2015

ಯಶಸ್ಸು ಗಳಿಸುವುದು ಕಷ್ಟವಲ್ಲ, ಆದರೆ ಇಟ್ಟುಕೊಳ್ಳುವುದು!


ಅನೇಕ ಮಂದಿ ಜೀವನದಲ್ಲಿ ಎಡವುತ್ತಾರೆ, ಸೋಲುತ್ತಾರೆ. ಹಾಗೆಂದು ಇವರು ಸಾಮಾನ್ಯರಲ್ಲ. ಅವರವರ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮೆರೆದವರೇ. ಯಶಸ್ಸಿನ ನೆತ್ತಿ ಮೇಲೆ ಗುದ್ದಿ ಗೆಲುವನ್ನು ಎದೆಗವಚಿಕೊಂಡವರೇ. ಇಂಥ ಯಶಸ್ವಿ ವ್ಯಕ್ತಿಗಳು ವೈಯಕ್ತಿಕ ಜೀವನದಲ್ಲಿ ಮುಗ್ಗರಿಸುತ್ತಾರೆ. ಬಾಳನ್ನು ಗಾಳುಮೇಳಾಗಿಸಿಕೊಂಡು ತೊಳಲಾಡುತ್ತಾರೆ. ಇಂಥವರ ಬಹಳ ದೊಡ್ಡ ದುರಂತವೇನೆಂದರೆ ಇವರಿಗೆ ತಮಗೆ ಒದಗಿ ಬಂದ ಯಶಸ್ಸನ್ನು ಹೇಗೆ ನಿಭಾಯಿಸಬೇಕೆಂಬುದು ಗೊತ್ತಿಲ್ಲದಿರುವುದು. ಯಶಸ್ಸೇ ಅವರಿಗೆ ಮುಳುವಾಗಿರುತ್ತದೆ. ಯಶಸ್ಸನ್ನು ಹೇಗೆ ಇಟ್ಟುಕೊಳ್ಳಬೇಕೆಂದು ಗೊತ್ತಿಲ್ಲದೇ, ತಲೆಯ ಕಿರೀಟವೇ ಭಾರವಾದಂತಾಗಿ ಇನ್ನಿಲ್ಲದ ಸಮಸ್ಯೆಗೆ ಈಡುಮಾಡಿಕೊಳ್ಳುತ್ತಾರೆ. ಹೀಗಾಗಿ ಯಶಸ್ಸು ಗಳಿಸಿ ಸೆಲಬ್ರೆಟಿಯಾದಷ್ಟೇ ಬೇಗ ನೇಪಥ್ಯಕ್ಕೆ ಸರಿದು ಬಿಡುತ್ತಾರೆ. ಯಶಸ್ಸು ಗಳಿಸುವುದು ಕಷ್ಟವಲ್ಲ. ಆದರೆ ಗಳಿಸಿದ ಯಶಸ್ಸನ್ನು ಇಟ್ಟುಕೊಳ್ಳುವುದಿದೆಯಲ್ಲ, ಅದು ಬಹಳ ಕಷ್ಟ. ಬೇಕಾದರೆ ನೋಡಿ, ಇದು ಸರಳ ಸಂಗತಿ ಎಂದೆನಿಸಬಹುದು. ಆದರೆ ಅನೇಕರ ಹೋರಾಟ ಇದರ ಬಗ್ಗೆಯೇ ನಡೆದಿರುತ್ತದೆ. ಯಶಸ್ಸು ಗಳಿಸಲು ಹಗಲಿರುಳು, ನಿದ್ದೆಗೆಟ್ಟು ದುಡಿಯುತ್ತಾರೆ. ಕೊನೆಗೆ ಅದನ್ನು ಇಟ್ಟುಕೊಳ್ಳಲು ಹಗಲಿರುಳು, ನಿದ್ದೆ ಬಿಟ್ಟು ದುಡಿಯುತ್ತಾರೆ. ಕೆಲವೇ ಕೆಲವು ಮಂದಿ ಎರಡರಲ್ಲೂ ಜಯಶಾಲಿಗಳಾಗುತ್ತಾರೆ. ಉಳಿದವರಿಗೇ ಯಶಸ್ಸೇ ಮುಳುವಾಗುತ್ತದೆ. ಹೀಗಾಗಿ ಯಶಸ್ಸಿನ ಭಾರಕ್ಕೆ ಕುಸಿಯುತ್ತಾರೆ.
 
ಇದರ ಬಗ್ಗೆಯೇ ಹೇಳಬೇಕು.
ಆ ಮನೆಯಲ್ಲಿದ್ದುದು ಅವರಿಬ್ಬರೇ-ಅಪ್ಪ ಮತ್ತು ಮಗಳು. ಅಪ್ಪನ ಹೆಸರು ಸ್ವಾಮಿನಾಥನ್, ಮಗಳ ಹೆಸರು ಸ್ವಾತಿ. ಅಮ್ಮನಿಲ್ಲದ ಕಾರಣಕ್ಕೆ ಆ ಹುಡುಗಿ ಅಪ್ಪನನ್ನು ತುಂಬಾ ಹಚ್ಚಿಕೊಂಡಿದ್ದಳು. ಒಂದಿಷ್ಟೂ ಸಂಕೋಚವಿಲ್ಲದೆ ಅಪ್ಪನೊಂದಿಗೆ ಎಲ್ಲವನ್ನೂ ಹೇಳಿಕೊಳ್ಳುತ್ತಿದ್ದಳು. ಕಾಲೇಜಿಗೆ ಹೋಗುತ್ತಿದ್ದ ದಿನಗಳಲ್ಲಿ ಯಾವ ತರಗತಿಗೆ ಚಕ್ಕರ್ ಹೊಡೆದೆ, ಯಾವ ಅಧ್ಯಾಪಕರನ್ನು ರೇಗಿಸಿದೆ, ಯಾವ ಹೋಟೆಲಿನಲ್ಲಿ ಮಸಾಲೆದೋಸೆ ತಿಂದೆ, ಸಿಟಿಬಸ್ ಕಂಡಕ್ಟರ್್ನನ್ನು ಹೇಗೆ ಯಾಮಾರಿಸಿ ದುಡ್ಡು ಉಳಿಸಿದೆ ಎಂಬುದನ್ನೆಲ್ಲ ತಂದೆಯೊಂದಿಗೆ ವರ್ಣಿಸಿ ಹೇಳುತ್ತಿದ್ದಳು.
ಮಗಳ ಇಂಥ ಸಾಹಸಗಳನ್ನೆಲ್ಲ ಸ್ವಾಮಿನಾಥನ್ ಹುಸಿನಗೆಯಿಂದಲೇ ಕೇಳುತ್ತಿದ್ದ. ಸುಳ್ಳು ಸುಳ್ಳೇ ಎಂದು ಗದರಿಸುತ್ತಿದ್ದ. ಅದು ಅಪ್ಪನ ಪ್ರೀತಿಯ ಇನ್ನೊಂದು ಮುಖ ಎಂದು ಸ್ವಾತಿಗೂ ಅರ್ಥವಾಗುತ್ತಿತ್ತು. ಹೀಗೆ, ಹರಟೆ ಹೊಡೆದುಕೊಂಡೇ ಸ್ವಾತಿ ಎಂಬಿಎ ಮುಗಿಸಿದ್ದಳು. ಒಂದು ಎಂಎನ್್ಸಿಯಲ್ಲಿ ದೊಡ್ಡ ಸಂಬಳದ ನೌಕರಿಯೂ ಸಿಕ್ಕಿತ್ತು. ಮೊದಲ ವರ್ಷ ಈ ಹುಡುಗಿ ತುಂಬ ಉತ್ಸಾಹದಿಂದ ಕೆಲಸ ಮಾಡಿದ್ದಳು. ತತ್ಫಲವಾಗಿ ‘ಬೆಸ್ಟ್ ಎಂಪ್ಲಾಯ್ ಆಫ್ ದ ಇಯರ್್’ ಪ್ರಶಸ್ತಿ ಅವಳಿಗೇ ಸಿಕ್ಕಿತ್ತು.
ಒಂದು ಶನಿವಾರದ ವೀಕೆಂಡ್ ಪಾರ್ಟಿಯಲ್ಲಿ ಪ್ರಶಸ್ತಿ ವಿತರಣೆಯೂ ಆಯಿತು. ಆ ಕಾರ್ಯಕ್ರಮಕ್ಕೆ ಮಗಳೊಂದಿಗೆ ಸ್ವಾಮಿನಾಥನ್ ಕೂಡ ಹೋಗಿಬಂದ. ಆತ ಗಮನಿಸಿದಂತೆ, ಸಹೋದ್ಯೋಗಿಗಳೊಂದಿಗೆ ಅವತ್ತು ಸ್ವಾತಿ ಸಂಭ್ರಮದಿಂದ ಬೆರೆಯಲಿಲ್ಲ. ಆಕೆಯ ಕಣ್ಣಲ್ಲಿ ಸಣ್ಣದೊಂದು ತಿರಸ್ಕಾರ ಕಾಣಿಸಿತು. ಮಾತಲ್ಲಿ ಉದಾಸೀನ ಭಾವವಿತ್ತು. ಇಂಥ ವರ್ತನೆಗೆ ಕಾರಣ ಏನಿರಬಹುದು ಎಂದು ಮತ್ತೆ ಮತ್ತೆ ಯೋಚಿಸಿದ ಸ್ವಾಮಿನಾಥನ್. ಅವನಿಗೆ ಏನೂ ಅರ್ಥವಾಗಲಿಲ್ಲ.
ಮರುದಿನ ಮುಂಜಾನೆ ಬಾಲ್ಕನಿಯಲ್ಲಿದ್ದ ಈಸಿಛೇರ್್ನಲ್ಲಿ ಕೂತು ಪೇಪರ್ ಕೈಗೆತ್ತಿಕೊಂಡ ಸ್ವಾಮಿನಾಥನ್. ಅದೇ ವೇಳೆಗೆ ಅಡುಗೆಮನೆಯಲ್ಲಿದ್ದ ಸ್ವಾತಿ, ತನ್ನ ಗೆಳತಿಗೆ ಪೋನ್್ನಲ್ಲಿ ಹೇಳುತ್ತಿದ್ದಳು- ‘ನಿನ್ನೆಯ ಕಾರ್ಯಕ್ರಮದಲ್ಲಿ ಮ್ಯಾನೇಜರ್್ಗಳ ಮಾತು ಕೇಳಿ ಮೈಯೆಲ್ಲ ಉರಿದುಹೋಯ್ತು. ಈಡಿಯಟ್್ಗಳು. ಏನಂತ ತಿಳ್ಕಂಡಿದಾರೆ ನನ್ನನ್ನ? ಬೆಸ್ಟ್ ಎಂಪ್ಲಾಯ್ ಪ್ರಶಸ್ತಿಗೆ ತುಂಬಾ ಸ್ಪರ್ಧೆ ಇತ್ತು ಅಂದ್ರು. ಆ ಮಾತೇ ಡಬ್ಬಾ ನೀನೇ ಹೇಳು: ನಂಗೆ ಸರಿಸಮನಾಗಿ ದುಡಿಯೋ ಮತ್ತೊಬ್ಬ ಎಂಪ್ಲಾಯ್ ಕಂಪನೀಲಿ ಇದ್ದಾನಾ? ನಿಜ ಹೇಳಬೇಕು ಅಂದ್ರೆ ಈ ಮ್ಯಾನೇಜರ್್ಗಳಿಗಿಂತ ನನಗೇ ಜಾಸ್ತಿ ಗೊತ್ತಿದೆ. ಅವರೆಲ್ಲ ವಾರಕ್ಕೊಮ್ಮೆ ಮೀಟಿಂಗ್ ಮಾಡೋದು, ಕಂಪನಿ ದುಡ್ಡಲ್ಲಿ ಈಟಿಂಗ್ ಮಾಡೋದು… ಇದಕ್ಕೇ ಲಾಯಕ್ಕು ವೇಸ್ಟ್ ಬಾಡಿಗಳು…..’
ಮಗಳ ಮಾತು ಕೇಳಿ ಸ್ವಾಮಿನಾಥನ್್ಗೆ ಬೇಜಾರಾಯಿತು. ಏಕೆಂದರೆ ಆತ ಮಗಳ ವಿಷಯದಲ್ಲಿ ತುಂಬಾ ಆಸೆಗಳನ್ನು ಇಟ್ಟುಕೊಂಡಿದ್ದ. ಮಗಳು ಚೆನ್ನಾಗಿ ಓದದಿದ್ದರೂ ಪರವಾಗಿಲ್ಲ. ಆಕೆ ಸೌಜನ್ಯದ ನಡವಳಿಕೆ ಹೊಂದಿರಬೇಕು. ಹಿರಿಯರ ವಿಷಯವಾಗಿ ಭಕ್ತಿ, ಗೌರವ ಹೊಂದಿರಬೇಕು ಎಂದು ಆಸೆಪಟ್ಟಿದ್ದ. ಆದರೆ ಈಗಿನ ಮಾತುಗಳನ್ನು ಕೇಳಿದರೆ, ತನ್ನ ನಂಬಿಕೆಗೆ ವಿರುದ್ಧ ದಿಕ್ಕಿನಲ್ಲಿ ಮಗಳು ಬೆಳೆಯುತ್ತಿದ್ದಾಳೆ ಎಂಬೊಂದು ಭಾವ ಸ್ವಾಮಿನಾಥನ್್ಗೆ ಬಂತು. ಆತ ತಕ್ಷಣವೇ ಒಂದು ನಿರ್ಧಾರಕ್ಕೆ ಬಂದು- ‘ಸ್ವಾತೀ, ಐದು ನಿಮಿಷ ಮಾತನಾಡಲಿಕ್ಕಿದೆ. ಇಲ್ಲಿ ಬರ್ತೀಯಾ?’ ಎಂದ.
ಟೀ ಕಪ್ ಜೊತೆಗೇ ಬಂದಳು ಸ್ವಾತಿ. ‘ಥ್ಯಾಂಕ್ ಯೂ’ ಎನ್ನುತ್ತಾ ಟೀ ಗುಟುಕರಿಸಿದ ಸ್ವಾಮಿನಾಥನ್ ಹೇಳಿದ- ಹೌದಲ್ವೇನಮ್ಮಾ, ನಿನ್ನೆಯ ಸಂಭ್ರಮ ಈಗಲೂ ನಿನ್ನ ಕಂಗಳಲ್ಲಿದೆ. ಬೆಸ್ಟ್ ಎಂಪ್ಲಾಯ್ ಅನ್ನಿಸಿಕೊಂಡ ಖುಷಿಗೆ ನಿನ್ನ ಮನಸ್ಸು ಜಿಂಕೆಯಾಗಿ ಕುಣೀತಿದೆ. ಎದೆಯೊಳಗೆ ಹೊಸ ಹಾಡು ಹುಟ್ಟಿದೆ. ಮುಂದಿನ ತಿಂಗಳುಗಳಲ್ಲಿ ಎಷ್ಟು ಸಂಬಳ ಹೆಚ್ಚಾಗಬಹುದು? ಯಾವತ್ತು ಪ್ರೊಮೋಷನ್ ಸಿಗಬಹುದು ಎಂದೂ ಈಗಲೇ ನೀನು ಯೋಚಿಸಿರುವಂತೆ ಕಾಣುತ್ತಿದೆ. ಅದೆಲ್ಲಾ ಓ.ಕೆ.
ಆದರೆ ಮಗಳೇ, ಈಗ ಕೆಲವೇ ನಿಮಿಷಗಳ ಹಿಂದೆ ನೀನು ಫೋನ್್ನಲ್ಲಿ ಮಾತಾಡಿದ ಧಾಟಿ ಹಾಗೂ ಅದರ ಅರ್ಥವಿತ್ತಲ್ಲ; ಅದು ಅಹಂಕಾರದ ಲಕ್ಷಣ. ನೀನು ಏನೇನಂದೆ ಗೊತ್ತಾ? ಮ್ಯಾನೇಜರ್್ಗಳನ್ನು ಈಡಿಯಟ್ಸ್ ಅಂದೆ. ಸಹೋದ್ಯೋಗಿಗಳನ್ನೆಲ್ಲ ವೇಸ್ಟ್ ಬಾಡಿಗಳು ಅಂದೆ. ಕಂಪನೀಲಿ ನಂಗೆ ಪ್ರತಿಸ್ಪರ್ಧಿಗಳೇ ಇಲ್ಲ ಅಂದೆ. ಇನ್ನೂ ಮುಂದುವರಿದು- ಮ್ಯಾನೇಜರ್್ಗಳಿಗೆ ಗೊತ್ತಿರುವಷ್ಟೇ ನನಗೂ ಗೊತ್ತಿದೆ ಅಂದೆ! ಕೇವಲ ಬೆಸ್ಟ್ ಎಂಪ್ಲಾಯ್ ಎಂಬ ಒಂದೇ ಒಂದು ಪ್ರಶಸ್ತಿ ಬಂದಿದ್ದಕ್ಕೆ ನೀನು ಹೀಗೆಲ್ಲಾ ಹಗುರವಾಗಿ ಮಾತಾಡಿಬಿಟ್ಟೆ ಅಲ್ವಾ? ಒಂದು ಸತ್ಯ ತಿಳ್ಕೊ. ನಿಮ್ಮ ಕಂಪನೀಲಿ ಮ್ಯಾನೇಜರ್್ಗಳು ಅಂತ ಇದ್ದಾರಲ್ಲ, ಅವರೆಲ್ಲ ಈ ಹಿಂದೆ ನಿನ್ನಂತೆಯೇ ನೌಕರರಾಗಿ ಸೇರಿದವರು. ಕಾಲಾಂತರದಲ್ಲಿ ಅವರೆಲ್ಲ ತುಂಬ ಶ್ರಮಪಟ್ಟು ಕಂಪನೀನ ಬೆಳೆಸಿದ್ದಾರೆ. ತಾವೂ ಬೆಳೆದಿದ್ದಾರೆ. ಅಂಥವರನ್ನು ನೀನು ಅಯೋಗ್ಯರು, ತಿಂಡಿಪೋತರು ಎಂದೆಲ್ಲಾ ಜರಿದೆಯಲ್ಲ ಸರೀನಾ…?’
ಅಪ್ಪನ ದನಿಯಲ್ಲಿ ಸಿಡಿಮಿಡಿಯಿಲ್ಲ. ಮಾತಿನಲ್ಲಿ ಸಿಟ್ಟಿಲ್ಲ. ಅದು ಟೀಕೆಯೂ ಅಲ್ಲ. ಅವನ ಮಾತಿನ ಹಿಂದಿರುವುದು ಮಗಳ ಮೇಲಿನ ಮಮತೆ ಎಂಬುದು ಸ್ವಾತಿಗೆ ತಕ್ಷಣ ಅರ್ಥವಾಯಿತು. ಆಕೆ ತಕ್ಷಣವೇ-ಸಾರಿ ಕಣಪ್ಪಾ, ಬಾಯಿಗೆ ಬಂದಂತೆ ಮಾತಾಡಿ ತಪ್ಪು ಮಾಡಿಬಿಟ್ಟೆ. ನನ್ನ ಮಾತು ಹಾಗೂ ವರ್ತನೆ ಹೇಗಿರಬೇಕು ಎಂಬುದನ್ನು ವಿವರಿಸಿ ಹೇಳಪ್ಪಾ’ ಅಂದಳು. ಸ್ವಾಮಿನಾಥನ್ ಮುಂದುವರಿಸಿದ.
ಗೆಲುವು ಅಥವಾ ಯಶಸ್ಸು ಎಂಬುದೇ ಹಾಗೆ. ಅದು ಎಂಥವರನ್ನೂ ಯಾಮಾರಿಸುತ್ತದೆ. ಅಹಂಕಾರ ತಲೆಗೇರುವಂತೆ, ನನಗೆ ಎಲ್ಲವೂ ಗೊತ್ತಿದೆ ಎಂದು ಬೀಗುವಂತೆ ಮಾಡಿಬಿಡುತ್ತದೆ. ಗೆಲುವು ಜೊತೆಯಾದ ನಂತರ ಎಷ್ಟೋ ಜನರ ತಲೆ ಹೆಗಲ ಮೇಲೇ ಇರುವುದಿಲ್ಲ. ಈ ಮಾತು ಜನಸಾಮಾನ್ಯರಿಗೆ ಮಾತ್ರವಲ್ಲ, ಸೆಲೆಬ್ರಿಟಿಗಳಿಗೂ ಅನ್ವಯಿಸುತ್ತದೆ. ಗೆಲುವಿನಲ್ಲಿ ಮೈಮರೆತವರು ನಾನು, ನನ್ನಿಷ್ಟ ಎಂಬಂತೆ ವರ್ತಿಸುತ್ತಾರೆ. ಕಿವಿಮಾತುಗಳನ್ನೂ, ಎಚ್ಚರಿಕೆಗಳನ್ನೂ ನಿರ್ಲಕ್ಷಿಸುತ್ತಾರೆ. ಒಂದೇ ಬಾರಿಗೆ ಆರು ಮೆಟ್ಟಿಲು ಹತ್ತಲು ಹೋಗುತ್ತಾರೆ. ಸಾಧ್ಯವಾಗದೆ ಜಾರಿ ಬೀಳುತ್ತಾರೆ. ಆ ಕ್ಷಣದವರೆಗೂ ಅವರೊಂದಿಗೇ ಇದ್ದ ಗೆಲುವು, ಒಂದೇ ನಿಮಿಷದಲ್ಲಿ ಬೇರೊಂದು ಕಡೆಗೆ ಹಾರಿಹೋಗುತ್ತದೆ. ಯಶಸ್ಸು ಕೈತಪ್ಪಿ ಹೋಯ್ತು ಎಂಬುದು ಗೊತ್ತಾದ ನಂತರ, ಬಿದ್ದವರ ಪಾಲಿಗೆ ಸಂಕಟವೇ ಸಂಗಾತಿಯಾಗುತ್ತದೆ. ಈ ಕ್ಷಣದಲ್ಲಿ ಗೆಲುವು ನಿನ್ನದಾಗಿದೆ ನಿಜ. ಹಾಗಂತ ಮೈಮರೆಯಬೇಡ. ಉಡಾಫೆಯಿಂದ ಮಾತಾಡಿ ಹತ್ತು ಮಂದಿಯ ಮಧ್ಯೆ ಗೌರವ ಕಳೆದುಕೊಳ್ಳಬೇಡ…’
ಅಪ್ಪನ ಕಾಳಜಿ ಕಂಡು ಸ್ವಾತಿಗೆ ಮನಸ್ಸು ಭಾರವಾಯಿತು. ಆಕೆ ಕಣ್ತುಂಬಿಕೊಂಡು ಹೇಳಿದಳು: ಅಪ್ಪಾ, ನನ್ನ ವರ್ತನೆಯಿಂದ ನಿಮಗೆ ತುಂಬಾ ಬೇಜಾರಾಯ್ತಾ?’
ಸ್ವಾಮಿನಾಥನ್ ಚಹಾದ ಕಡೆಯ ಗುಟುಕು ಚಪ್ಪರಿಸಿ ಹೇಳಿದ- ಕೆಲಸದ ವಿಷಯವಾಗಿ, ನಡವಳಿಕೆಯ ವಿಷಯವಾಗಿ  ‘ಛೆ ಛೆ, ಹಾಗೇನೂ ಇಲ್ಲ. ಒಂದು ಟೀಕೆ ಕೇಳಿಬಂದರೆ- ನೀನು ದೊಡ್ಡ ತಪ್ಪು ಮಾಡಿದೆ ಎಂದು ಅರ್ಥವಲ್ಲ. ತಪ್ಪು ಮಾಡೋದು ಎಲ್ಲರಲ್ಲೂ ಸಹಜ. ಅದನ್ನು ತಕ್ಷಣವೇ ತಿದ್ದಿಕೊಳ್ಳುವುದು ಜಾಣರ ಲಕ್ಷಣ. ಅಂಥ ಜಾಣೆಯ ಸಾಲಿಗೆ ನೀನು ಸೇರ್ಕೋಬೇಕು. ಕೆಲವರು ಮೊದಲು ಮುಗ್ಗರಿಸುತ್ತಾರೆ. ನಂತರ ಎದ್ದು ನಿಲ್ತಾರೆ. ಹಲವರು ಮೊದಲು ಸರಿಯಾಗಿ ನಿಂತಿದ್ದು, ನಂತರ ಮುಗ್ಗರಿಸಿಬಿಡ್ತಾರೆ! ಯಶಸ್ಸು ಎಂಬುದು ಮಾಯಾಜಿಂಕೆ. ಅದು ಹಗ್ಗದ ಮೇಲಿನ ನಡಿಗೆ. ಯಶಸ್ಸೆಂಬುದು ನಮ್ಮ ನಿರೀಕ್ಷೆಗಳನ್ನೆಲ್ಲ ನಿಜ ಮಾಡುವುದಿಲ್ಲ. ಆದರೆ ಜವಾಬ್ದಾರಿಯನ್ನು ಖಂಡಿತ ಹೆಚ್ಚಿಸುತ್ತೆ. ಭಾರತ ಕ್ರಿಕೆಟ್ ತಂಡದ ನಾಯಕನಾಗೋದು ಅಂದ್ರೆ ಕೇವಲ ಒಂದು ತಂಡವನ್ನು ಮುನ್ನಡೆಸುವುದು ಮಾತ್ರವಲ್ಲ, ಗೆಲ್ಲಲೇ ಬೇಕು ಎಂಬ ಈ ದೇಶದ ಕೋಟ್ಯಂತರ ಕ್ರೀಡಾಪ್ರೇಮಿಗಳ ನಿರೀಕ್ಷೆಯನ್ನು ನಿಜ ಮಾಡುವ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ. ಪ್ರಧಾನಮಂತ್ರಿ ಅನ್ನಿಸಿಕೊಂಡವನ ಬೆನ್ನ ಮೇಲೆ ಇಡೀ ದೇಶದ ಭವಿಷ್ಯ ನಿಂತಿರುತ್ತದೆ. ರಾಷ್ಟ್ರಪತಿ ಅನ್ನಿಸಿಕೊಂಡವರು ಎಲ್ಲ ರಾಜ್ಯಗಳ ಜನಪ್ರತಿನಿಧಿಗಳೂ ಒಪ್ಪುವಂತೆ ಆಡಳಿತ ನಿರ್ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದು ಅಗತ್ಯವಾಗಿರುತ್ತದೆ.
ಶಿಕ್ಷಣದ ನಿಮಿತ್ತ, ನೌಕರಿಯ ನಿಮಿತ್ತ ಅಥವಾ ವಾಸ್ತವ್ಯದ ನಿಮಿತ್ತ ಒಂದು ಸ್ಥಳದಲ್ಲಿ ಉಳಿಬೇಕು ಅಂದರೆ, ಅಲ್ಲಿ ಬಾಂಧವ್ಯದ ಹೊಸ ಕೊಂಡಿಯೊಂದು ಅರಳಿಕೊಂಡಿತು ಎಂದೇ ಅರ್ಥ. ಈ ಸಂದರ್ಭದಲ್ಲಿ ಯಾರ್ಯಾರೋ ಪರಿಚಯವಾಗುತ್ತಾರೆ. ಅವರಿಂದ ಕಲಿಯುವುದು, ಕಲಿಯದಿರುವುದು ಎರಡೂ ಇರುತ್ತದೆ. ಈ ಸಂಬಂಧ ಎಂಬುದು ಒಂದು ರೀತಿಯಲ್ಲಿ ಬ್ಯಾಂಕ್ ಅಕೌಂಟ್ ಇದ್ದ ಹಾಗೆ. ಖಾತೆ ತೆರೆಯುವುದು ಸುಲಭ. ಆದರೆ ಅಕೌಂಟ್ ಕ್ಲೋಸ್ ಮಾಡುವುದು (ಸಂಬಂಧವನ್ನು ಕಡಿದುಕೊಳ್ಳುವುದು) ಕಷ್ಟ. ಕೆಲವೊಂದು ಸಂದರ್ಭದಲ್ಲಿ ನಾವೆಲ್ಲ ಅಂದಿರುತ್ತೇವೆ- ‘ನನಗೆ ಯಾರ ಸಹಾಯವೂ ಬೇಕಿಲ್ಲ. ನನ್ನ ಬದುಕನ್ನು ನಾನೊಬ್ಬನೇ ರೂಪಿಸಿಕೊಳ್ಳಬಲ್ಲೆ..’
ಆದರೆ ಕಣ್ಣೆದುರಿಗಿರುವ ವಾಸ್ತವವೇ ಬೇರೆ. ಏನೆಂದರೆ- ಬಹಳಷ್ಟು ಸಂದರ್ಭದಲ್ಲಿ ಎಲ್ಲರ ಬದುಕೂ ಇನ್ನೊಬ್ಬರ ಮೇಲೆ ಅವಲಂಬಿಸಿರುತ್ತದೆ. ಎಂಥ ಪ್ರಚಂಡ ವೈದ್ಯನಿಗೂ ನರ್ಸ್ ಸಹಾಯ ಬೇಕಾಗುತ್ತದೆ. ಕೋಟ್ಯಧಿಪತಿಗೆ ಅಕೌಂಟೆಂಟ್್ನ ನೆನಪಾಗುತ್ತದೆ. ಕಚೇರಿಯ ಒಳಗಿರುವಾತ ಜಿಲ್ಲಾಧಿಕಾರಿಯೇ ಆಗಿದ್ದರೂ, ಅದೇ ಕಚೇರಿಯ ಬೀಗ ತೆಗೆಯಲು ಅಟೆಂಡರ್್ನ ನೆರವು ಅಗತ್ಯವಿರುತ್ತದೆ. ನಾನು ಹೇಗೆ ಬದುಕಬೇಕು ಮತ್ತು ಹೇಗೆ ಬದುಕಬಾರದು ಎಂಬ ಮಾತಿಗೆ ಈಗಾಗಲೇ ಕತೆಯಾಗಿ ಹೋದವರ ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ. ಇಲ್ಲಿ ಗೆದ್ದವರೂ ಇದ್ದಾರೆ, ಬಿದ್ದವರೂ ಇದ್ದಾರೆ. ಇಬ್ಬರಿಂದಲೂ ಪಾಠ ಕಲಿಯಬಹುದಾಗಿದೆ…
ಹಾಗಂತ, ಖಂಡಿತ ನಾನು ನಿನ್ನನ್ನು ದೂರುತ್ತಿಲ್ಲ ಮಗಳೇ. ಇವತ್ತಿನ ಯಶಸ್ಸು ಖಂಡಿತ ನಿನ್ನದು ನಿಜ. ಆದರೆ ಆನಂತರ ನೀನು ವರ್ತಿಸಿದ ರೀತಿಯಿತ್ತಲ್ಲ; ಅದನ್ನು ಅರಗಿಸಿಕೊಳ್ಳಲು ನನ್ನಿಂದ ಸಾಧ್ಯವಾಗಿಲ್ಲ. ಒಂದು ಮಾತು ಅರ್ಥ ಮಾಡಿಕೊ. ಒಬ್ಬ ಪ್ರಚಂಡ ಕುಶಲಕರ್ಮಿಯ ಪರಿಶ್ರಮದಿಂದ ಮಾತ್ರ ಬಿದಿರು ಎಂಬ ಮರದ ತುಂಡು ಮಧುರ ನಾದ ಹೊರಡಿಸುವ ‘ಕೊಳಲು’ ಆಗುತ್ತದೆ. ನೀನು ಈಗ ‘ಬಿದಿರಿ’ನ ಲೆವಲ್್ನಲ್ಲಿದ್ದೀ. ಮುಂದೆ ಒಂದೊಂದೇ ಅನುಭವೀ ಮನಸ್ಸಿನ ಕೆಳಗೆ ನೀನು ಪಳಗಬೇಕು. ಯಶಸ್ಸಿನ ಗುಣ, ಅವಗುಣ, ಒಂದು ಗೆಲುವು ಜತೆಯಾದ ಸಂದರ್ಭದಲ್ಲೇ ಹೆಗಲೇರುವ ಜವಾಬ್ದಾರಿ…. ಇದೆಲ್ಲವನ್ನೂ ಅರ್ಥೈಸಿಕೊಳ್ಳಬೇಕು. ಹಿಮಾಲಯದೆತ್ತರ ಬೆಳೆದು ನಿಂತರೂ, ತಲೆ ಭುಜದ ಮೇಲೇ ಇರುವಂತೆ ನೋಡಿಕೊಳ್ಳಬೇಕು. ಅಂಥ ಸಂದರ್ಭದಲ್ಲಿ ಯಶಸ್ಸು ಎಂಬುದು ಸುದೀರ್ಘ ಕಾಲದವರೆಗೂ ನಮ್ಮ ಜತೆಗಿರುತ್ತದೆ. ಈ ಸೂಕ್ಷ್ಮ ನಿನಗೆ ಅರ್ಥವಾಗಬೇಕು. ಸ್ವಾಮಿನಾಥನ್ ಮಾತು ನಿಲ್ಲಿಸಿದ.
ಯಶಸ್ಸು ಬಂದಾಗ ಬೀಗಬಾರದು. ಹತ್ತಿದ ಏಣಿಯನ್ನು ಒದೆಯಬಾರದು. ಸಹೋದ್ಯೋಗಿಗಳನ್ನು ಜರಿಯಬಾರದು. ಅಹಂಕಾರದ ಕೈಗೆ ಬುದ್ಧಿ ಕೊಡಬಾರದು. ಸೌಜನ್ಯವನ್ನು ಎಂದೂ ಮರೆಯಬಾರದು ಎಂಬುದನ್ನು ತುಂಬ ಸರಳವಾಗಿ ಹೇಳಿದ್ದಕ್ಕೆ ಥ್ಯಾಂಕ್ಸ್ ಅಪ್ಪಾ. ಈಗಿನಿಂದಲೇ ನನ್ನ ನಡವಳಿಕೇನ ತಿದ್ದಿಕೊಳ್ತೇನೆ ಎಂದಳು ಸ್ವಾತಿ. ಇದುವರೆಗೂ ಎದುರಿನ ಮಾವಿನಮರದಲ್ಲಿ ಮೌನವಾಗಿ ಕುಳಿತಿದ್ದ ಎರಡು ಗಿಳಿಗಳು, ಇವರ ಮಾತು ಮುಗಿದ ತಕ್ಷಣ ತಾವೂ ಕಿಚಪಿಚ ಎನ್ನಲು ಶುರುಮಾಡಿದವು. ಪಕ್ಷಿಗಳ ಸಡಗರ, ಈ ಅಪ್ಪ-ಮಗಳ ಕಂಗಳಲ್ಲೂ ಪ್ರತಿಫಲಿಸಿತ್ತು…
ಜೀವನದಲ್ಲಿ ಯಶಸ್ಸನ್ನು ಇಟ್ಟುಕೊಳ್ಳುವುದು ಹೇಗೆ. ಅದನ್ನು ಸದಾ ನಿಮ್ಮ ಪರವಾಗಿಟ್ಟುಕೊಳ್ಳುವುದು ಹೇಗೆ, ಗಳಿಸಿದ ಯಶಸ್ಸನ್ನು ನಿಮಗೆ ವೈರಿಯಾಗದಂತೆ ಕಾಪಿಡುವುದು ಹೇಗೆ ಎಂಬುದನ್ನು ಇಷ್ಟು ಸರಳವಾಗಿ, ಪರಿಣಾಮಕಾರಿಯಾಗಿ ಹೇಳಲು ಯಶಸ್ವಿಯಾದ, ನನಗೆ ಬಹುಬೇಗ ಪ್ರಿಯರಾದ ಟಿ.ಟಿ. ರಂಗರಾಜನ್ ಅವರಿಗೆ ಒಂದು ಥ್ಯಾಂಕ್ಸನ್ನಾದರೂ ಹೇಳದಿದ್ದರೆ ಹೇಗೆ?
ಮುಂದಿನ ಸಲ ನಿಮಗೆ ಯಶಸ್ಸು ಬಂದಾಗ ಈ ಎಲ್ಲ ಮಾತುಗಳನ್ನು ನೆನಪಿಸಿಕೊಳ್ಳಿ. ನಿಮ್ಮ ಯಶಸ್ಸು ನಿಮ್ಮಲ್ಲೇ ಬೆಚ್ಚಗೆ ಭದ್ರವಾಗಿರುತ್ತದೆ.

Tuesday 2 June 2015

ಗೆಲುವು ಆಕಸ್ಮಿಕವಾಗುವ ಬದಲು ಚಟವಾಗಲಿ!

ನೀವು ಯಾವುದೇ ಹೊಸ ಸಾಹಸಕ್ಕೆ ಅಣಿಯಾಗಿ, ನಿಮ್ಮ ಸ್ನೇಹಿತರ ಮುಂದೋ, ಸಂಬಂಧಿಕರ ಮುಂದೋ ನಿಮ್ಮ ಕನಸಿನ ಯೋಜನೆಯನ್ನು ಹಂಚಿಕೊಳ್ಳಿ. ಯಾರೂ ಅದನ್ನು ಪ್ರೋತ್ಸಾಹಿಸುವುದಿಲ್ಲ.  ‘ಎಲ್ಲಾ ಬಿಟ್ಟ ಬಂಗಿ ನೆಟ್ಟ ಅನ್ನೋ ಹಾಗೆ ಆಯ್ತಲ್ಲಾ? ನಿನ್ನ ಪಾಡಿಗೆ ನೀನು ಸುಮ್ಮನಿರಬಾರದಾ? ಅಂಥ ಸಾಹಸ ಮಾಡಿ ಯಾರೂ ಉದ್ಧಾರ ಆಗಿಲ್ಲ.’ ಅಂತಾನೇ ಎಲ್ಲರೂ ಹೇಳೋದು. ‘ಇದು ಗ್ರೇಟ್ ಐಡಿಯಾ, ಮುನ್ನುಗ್ಗು’ ಅಂತ ಯಾರೂ ಹೇಳುವುದಿಲ್ಲ.
ಇನ್ನು ಕೆಲವರು ಹೊಸ ಸಾಹಸಕ್ಕೇನೋ ಅಣಿಯಾಗುತ್ತಾರೆ. ಆದರೆ ಬೇರೆಯವರು ನಡೆದ ಹಾದಿಯಲ್ಲೇ ನಡೆಯುತ್ತಾರೆ. ಹೊಸ ಮಾರ್ಗ ಅರಸಲು, ಎಲ್ಲರೂ ತುಳಿದ ಹಾದಿ ಬಿಟ್ಟು ತಮ್ಮದೇ ದಾರಿ ನಿರ್ಮಿಸಲು ಬಯಸುವುದಿಲ್ಲ. ಅಂದರೆ ಹೊಸತಾಗಿ ಏನನ್ನೂ ಯೋಚಿಸುವುದಿಲ್ಲ. ಎಲ್ಲರೂ ದರ್ಶಿನಿ ಆರಂಭಿಸಿದರೆ ಇವರೂ ದರ್ಶಿನಿಯನ್ನೇ ತೆರೆಯುತ್ತಾರೆ. ಎಲ್ಲರೂ ಮಾಲ್ ಅನ್ನು ಕಟ್ಟಿದರೆ ಇವರೂ ಅದನ್ನೇ ಕಟ್ಟುತ್ತಾರೆ. ಯಾರೋ ಒಂದು ರೀತಿಯ ಸಿನಿಮಾ ನಿರ್ಮಿಸಿದರೆ ಇವರೂ ಅಂಥದೇ ಸಿನಿಮಾ ನಿರ್ಮಿಸುತ್ತಾರೆ. ಈ ಮಾತನ್ನು ಎಲ್ಲ ಕ್ಷೇತ್ರಗಳಿಗೂ ಅನ್ವಯಿಸಬಹುದು. ಹೊಸತಾಗಿ ಯೋಚಿಸುವವರು ಮಾತ್ರ ಅಚ್ಚರಿ, ಸೋಜಿಗವನ್ನುಂಟು ಮಾಡಲು ಸಾಧ್ಯ. ಹೊಸ ದಾರಿ ಅರಸುವವರು ಹೊಸ ನೋಟವನ್ನು, ಹೊಸ ಊರನ್ನು ಕಾಣಲು ಸಾಧ್ಯ.
ಇದನ್ನು ಮಾಡದವರು ಜೀವನದಲ್ಲಿ ನಕಲು ಮಾಡುತ್ತಾರೆ, ಕಾಪಿ-ಪೇಸ್ಟ್ ಮಾಡುತ್ತಾರೆ, ಬೇರೆಯವರು ಹೋದ ದಾರಿಯಲ್ಲಿಯೇ ನಡೆಯುತ್ತಾರೆ. ಇಂಥವರು ಇದ್ದದ್ದನ್ನು ಮುನ್ನಡೆಸಿಕೊಂಡು ಹೋಗಬಲ್ಲರು. ಆದರೆ ಹೊಸತೇನನ್ನೂ ಸೃಷ್ಟಿಸಲಾರರು.
ಇನ್ನೊಂದು ರೀತಿ ಯೋಚನೆ ಮಾಡುವ ಮಂದಿಯಿರುತ್ತಾರೆ, ಅವರು ಸ್ಥಾಪಿತ ಯೋಚನೆಯಾಚೆ ತಮ್ಮನ್ನು ವಿಸ್ತರಿಸಿಕೊಳ್ಳಲು ಬಯಸುವುದಿಲ್ಲ. ‘ಮನುಷ್ಯನಿಗೆ ವಿಶ್ರಾಂತಿ ಅಗತ್ಯ, ಆದರೆ ನಿದ್ದೆಯ ಅಗತ್ಯ ಇಲ್ಲ’ ಅಂತ ಹೇಳಿ ಅವರು ‘ಇಲ್ಲ, ಇಲ್ಲ, ಮನುಷ್ಯನಿಗೆ ಕನಿಷ್ಠ ಎಂಟು ಗಂಟೆ ನಿದ್ದೆ ಬೇಕೇ ಬೇಕು’ ಅಂತ ವಾದಿಸುತ್ತಾರೆ. ಈ ವಿಷಯದಲ್ಲಿ ಅವರ ನಿಲುವನ್ನು ಬದಲಿಸಲು ಸಾಧ್ಯವೇ ಇಲ್ಲ. ಇವರು ಮಾತ್ರ ತಮ್ಮ ಅಭಿಪ್ರಾಯವನ್ನು ಬದಲಿಸಲಾರರು.
ಆದರೆ ಈ ಜಗತ್ತಿನಲ್ಲಿ ಸ್ಥಾಪಿತ ಅಭಿಪ್ರಾಯಕ್ಕೆ ಸವಾಲನ್ನು ಎಸೆದವರೇ ಸಾಧನೆಯ ಶಿಖರಕ್ಕೇರಿದವರು. ಅದು ಅರಿಸ್ಟಾಟಲ್ ಇರಬಹುದು, ನ್ಯೂಟನ್ ಇರಬಹುದು, ಕೋಪರ್್ನಿಕಸ್ ಇರಬಹುದು ಅಥವಾ ಸ್ಟೀವ್ ಜಾಬ್ಸ್ ಇರಬಹುದು, ಎಲ್ಲರೂ ಈ ಸಾಲಿಗೆ ಸೇರಿದವರೇ. ಭಿನ್ನವಾಗಿ ಯೋಚಿಸಿದವರೇ. ಅಪ್ಪ ನೆಟ್ಟ ಆಲದಮರಕ್ಕೆ ಜೋತುಬಿದ್ದಿದ್ದರೆ ಇವರು ಯಾರೆಂಬುದೇ ಗೊತ್ತಾಗುತ್ತಿರಲಿಲ್ಲ. ಇವರೆಲ್ಲ ಜೀವನದಲ್ಲಿ ರಿಸ್ಕ್ ತೆಗೆದುಕೊಂಡವರೇ. ಅಂಥ ರಿಸ್ಕ್ ತೆಗೆದುಕೊಳ್ಳದಿದ್ದರೆ ನಾವು ಇವರ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತಿರಲಿಲ್ಲ.
ವಿ.ಅರ್.ಎಲ್ ಸಂಸ್ಥೆಯ ಮಾಲೀಕರಾದ ವಿಜಯ ಸಂಕೇಶ್ವರ ಅವರ ಬಗ್ಗೆ ಹೇಳಬೇಕು. ಕಾಲೇಜ್ ವಿದ್ಯಾಭ್ಯಾಸ ಮುಗಿದ ಬಳಿಕ ಅವರು ತಮ್ಮ ತಂದೆಯವರ ಪ್ರಿಂಟಿಂಗ್ ಪ್ರೆಸ್್ನಲ್ಲಿ ಪ್ರೂಫ್ ರೀಡರ್ ಆಗಿ ಸೇರಿಕೊಂಡರು. ಇವರ ತಂದೆಯವರಾದ ಬಸವೆಣ್ಣಪ್ಪ ಸಂಕೇಶ್ವರರು ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರು ಪ್ರಕಾಶಿಸಿದ ಭಾರಧ್ವಜ್ ಡಿಕ್ಷನರಿ ಇಲ್ಲದ ಕನ್ನಡ ಮನೆಗಳಿರಲಿಕ್ಕಿಲ್ಲ. ಅಲ್ಲಿ ವಿಜಯ ಸಂಕೇಶ್ವರರು ತಂದೆಯವರಿಗೆ ಸಹಾಯಕರಾಗಿ ಮತ್ತು ಕರಡು ತಿದ್ದುವವರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಪ್ರಾಯಶಃ ಅವರು ತಂದೆಯವರ ವೃತ್ತಿಯಲ್ಲಿ ಮುಂದುವರಿದಿದ್ದರೆ ಹೆಚ್ಚೆಂದರೆ ಒಬ್ಬ ಪ್ರಕಾಶಕರಾಗುತ್ತಿದ್ದರೇನೋ.
ಒಂದು ದಿನ ಅವರಿಗೆ ಅನಿಸಿತು. ತಾನು ಸ್ವಂತವಾಗಿ ಏನಾದರೂ ಸಾಧಿಸಬೇಕು, ತಂದೆಯವರ ನೆರಳನ್ನು ಬಿಟ್ಟು ಭಿನ್ನವಾಗಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು. ಒಂದು ದಿನ ಏಕಾಏಕಿ ತಂದೆಯವರ ಪ್ರೆಸ್ಸನ್ನು ಬಿಟ್ಟು, ಸಾಲ ಮಾಡಿ ಒಂದು ಸೆಕೆಂಡ್ ಹ್ಯಾಂಡ್ ಟ್ರಕ್ಕನ್ನು ಖರೀದಿಸಿದರು. ಅದಕ್ಕೆ ಅವರೇ ಮಾಲೀಕರು ಮತ್ತು ಅವರೇ ಚಾಲಕರು! ‘ನಿನಗೆ ಟ್ರಕ್ ದಂಧೆಯಲ್ಲಿ ಏನು ಅನುಭವವಿದೆ? ಅದು ನಮ್ಮಂಥವರು ಮಾಡುವ ದಂಧೆಯಾ? ಇದೆಲ್ಲ ನಿನ್ನ ಕೈಹಿಡಿಯುವಂಥದ್ದಲ್ಲ. ಸುಮ್ಮನೆ ಕೈ ಸುಟ್ಟುಕೊಳ್ಳಬೇಡ.’ ಎಂದು ಅವರ ತಂದೆ ಪರಿಪರಿಯಾಗಿ ಹೇಳಿದರು. ಮನೆಯಲ್ಲಿದ್ದವರ್ಯಾರೂ ಅವರ ಈ ಹೊಸ ಮತ್ತು ಹುಚ್ಚು ಸಾಹಸವನ್ನು ಹುರಿದುಂಬಿಸಲಿಲ್ಲ.
ಆದರೆ ವಿಜಯ ಸಂಕೇಶ್ವರ ಅವರು ಕೇಳಲಿಲ್ಲ. ಕುಟುಂಬದಲ್ಲಿ ಯಾರೂ ಮಾಡದಿದ್ದರೇನಂತೆ, ನಾನು ಮಾಡುತ್ತೇನೆ ಎಂಬ ಛಲ ಮತ್ತು ಹಠದಿಂದ ಟ್ರಾನ್ಸ್್ಪೋರ್ಟ್ ದಂಧೆಯನ್ನು ಆರಂಭಿಸಿದರು. ಒಂದಿದ್ದ ಟ್ರಕ್ಕು ಎರಡಾಯಿತು, ಎರಡಿದ್ದಿದ್ದು ನಾಲ್ಕಾಯಿತು. ನಾಲ್ಕಿದ್ದದ್ದು ಹತ್ತಾಯಿತು. ಹತ್ತು ಇದ್ದಿದ್ದು ನೂರಾಯಿತು. ಇಂದು ಅವರು ಹತ್ತಿರ ಹತ್ತಿರ ನಾಲ್ಕು ಸಾವಿರ ಟ್ರಕ್ಕು ಮತ್ತು ಐನೂರಕ್ಕೂ ಹೆಚ್ಚು ಬಸ್ಸುಗಳನ್ನು ಹೊಂದಿದ್ದಾರೆ. ದೇಶದ ಹದಿನೆಂಟು ರಾಜ್ಯಗಳಲ್ಲಿ ತಮ್ಮ ವ್ಯಾಪಾರ-ವಹಿವಾಟು ಜಾಲವನ್ನು ಹೊಂದಿದ್ದಾರೆ. ನಮ್ಮ ದೇಶದಲ್ಲಿ ಖಾಸಗಿ ವಲಯದಲ್ಲಿ ಅತಿ ಹೆಚ್ಚು ವಾಹನಗಳನ್ನು ಹೊಂದಿದವರಲ್ಲಿ ಅಗ್ರಗಣ್ಯರಾಗಿದ್ದಕ್ಕೆ ಲಿಮ್ಕಾ ದಾಖಲೆ ಪುಸ್ತಕ ಇವರ ಹೆಸರನ್ನು ದಾಖಲಿಸಿಕೊಂಡಿದೆ.
ಬಹುತೇಕ ಸಂದರ್ಭಗಳಲ್ಲಿ ನಾವು ನಮ್ಮ ಸುತ್ತ ಸುರಕ್ಷ ವಲಯ (Comfort Zone) ವನ್ನು ನಿರ್ಮಿಸಿಕೊಳ್ಳುತ್ತೇವೆ. ತಪ್ಪೇನಿಲ್ಲ. ಆದರೆ ಅದರಿಂದ ಹೊರಬರುವುದೇ ಇಲ್ಲ. ಆ ವಲಯದ ಐಷಾರಾಮಕ್ಕೆ ಒಗ್ಗಿಕೊಂಡುಬಿಡುತ್ತೇವೆ. ಹೀಗಾಗಿ ಹೊಸ ಸಾಹಸಕ್ಕೆ ಮುಂದಾಗುವುದಿಲ್ಲ.
ನಾನು ಇತ್ತೀಚೆಗೆ ಕ್ಲಿಫ್ ಯಂಗ್ ಎಂಬ ಒಬ್ಬ ಸಾಮಾನ್ಯ ವ್ಯಕ್ತಿಯ ಅಸಾಮಾನ್ಯಗಾಥೆ ಕುರಿತು ಓದುತ್ತಿದ್ದೆ. ಈತ ಆಸ್ಟ್ರೇಲಿಯಾದ ಆಲೂಗಡ್ಡೆ ರೈತ. ತನ್ನ ಅರವತ್ತೊಂದನೆ ವಯಸ್ಸಿನಲ್ಲಿ ಅವನಿಗೆ ಅನಿಸಿತು. ತಾನು ಇಲ್ಲಿಯವರೆಗಿನ ಬದುಕನ್ನು ಬರೀ ಅಲೂಗಡ್ಡೆ ಬೆಳೆಯುತ್ತಾ, ಅದರಲ್ಲಿ ಸುಖ ಕಾಣುತ್ತಾ, ಅದಷ್ಟೇ ಜೀವನವೆಂದು ಭಾವಿಸಿ ತನ್ನ ಇಡೀ ಯೌವನವನ್ನು ವ್ಯರ್ಥವಾಗಿ ಕಳೆದುಬಿಟ್ಟೆನಾ ಎಂದು ಅನಿಸಲಾರಂಭಿಸಿತು. ಆತ ಆ ಕ್ಷಣವೇ ನಿರ್ಧರಿಸಿದ. ಮುಂದಿನ ದಿನಗಳನ್ನಾದರೂ ಅತ್ಯಂತ ರೋಚಕವಾಗಿ ಕಳೆಯಬೇಕೆಂದು. ಇನ್ನು ಮಾಡುವ ಸಾಧನೆಯಿಂದ ಜನ ತನ್ನನ್ನು ನೆನಪಿನಲ್ಲಿಟ್ಟುಕೊಳ್ಳಬೇಕು, ಆ ರೀತಿ ನನ್ನ ಸಾಧನೆಯಿರಬೇಕು ಎಂದು ತೀರ್ಮಾನಿಸಿದ.
ಇದಕ್ಕೆ ಕ್ಲಿಫ್ ಯಂಗ್ ಆಯ್ದುಕೊಂಡಿದ್ದು ಮ್ಯಾರಥಾನ್ ಓಟದ ಸ್ಪರ್ಧೆಯನ್ನು. 1983ರಲ್ಲಿ ಆತ ತನ್ನ ಅರವತ್ತೊಂದನೆಯ ವಯಸ್ಸಿನಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಿಂದ ಮೆಲ್ಬೋರ್ನ್ ತನಕ  875 ಕಿಮೀ ಉದ್ದದ ಅಲ್ಟ್ರಾ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ನಿರ್ಧರಿಸಿದ! ಆ ಸ್ಪರ್ಧೆಯ ಸಂಘಟಕರು ಅವನನ್ನು ಕೇಳಿದರು – ‘ಈ ವಯಸ್ಸಿನಲ್ಲಿ ಇಂಥ ದುಸ್ಸಾಹಸವೇ? ಸಾಮಾನ್ಯವಾಗಿ ಇಪ್ಪತ್ತರಿಂದ-ಮೂವತ್ತು ವರ್ಷ ವಯಸ್ಸಿನವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ನಿಮ್ಮ ವಯಸ್ಸನ್ನು ನೋಡಿದರೆ ನಮಗೆ ಆತಂಕವಾಗುತ್ತದೆ. ನಿಮ್ಮ ಆರೋಗ್ಯಕ್ಕೆ ಏನಾದರೂ ಆದರೆ ಏನು ಗತಿ? ದಯವಿಟ್ಟು ಹಠ ಮಾಡಬೇಡಿ. ಈ ಸ್ಪರ್ಧೆ ನಿಮಗಲ್ಲ.’  ಅದಕ್ಕೆ ಕ್ಲಿಫ್ ಯಂಗ್ ಹೇಳಿದ – ‘ನಾನು ಒಬ್ಬ ಸಾಮಾನ್ಯ ರೈತ. ಜೀವನದಲ್ಲಿ ಹಿಂದೆಂದೂ ನಾನು ಇಂಥ ಸ್ಪರ್ಧೆಯಲ್ಲಿ ಭಾಗವಹಿಸಿಲ್ಲ ಅನ್ನೋದು ನಿಜ. ಇತ್ತೀಚೆಗೆ ನನ್ನ ಕುರಿಗಳೆಲ್ಲ ಕಾಣೆಯಾಗಿದ್ದವು. ನಾನು ಮೂರು ದಿನಗಳ ಕಾಲ ನಿದ್ದೆಯನ್ನೂ ಮಾಡದೇ ಓಡುತ್ತಾ ಇದ್ದೆ. ಆಗ ನನಗೆ ಅನಿಸಿತು, ನಾನು ಈ ಓಟದಲ್ಲಿ ಭಾಗವಹಿಸಬಹುದು ಅಂತ. ಅದಕ್ಕಿಂತ ಹೆಚ್ಚಾಗಿ ನಾನು ನನ್ನ ಜೀವನವನ್ನು ವ್ಯರ್ಥವಾಗಿ ಕಳೆದಿದ್ದೇನೆಂದು ನನಗೆ ಈಗ ಅನಿಸುತ್ತಿದೆ. ಇನ್ನು ಮುಂದಿನ ಜೀವನವನ್ನು ರೋಚಕವಾಗಿ ಕಳೆಯಬೇಕೆಂಬುದು ನನ್ನ ಇರಾದೆ. ಅದಕ್ಕಾಗಿ ಈ ಹುಚ್ಚು ಸಾಹಸಕ್ಕೆ ಅಣಿಯಾಗಿದ್ದೇನೆ. ದಯವಿಟ್ಟು ಇಲ್ಲ ಅಂತ ಹೇಳಬೇಡಿ.’
ಮ್ಯಾರಥಾನ್್ನಲ್ಲಿ ಭಾಗವಹಿಸಿದವರು ಪ್ರತಿದಿನ ಹದಿನಾರು ತಾಸು ಓಡಿ, ಎಂಟು ತಾಸು ನಿದ್ದೆ ಮಾಡುತ್ತಾರೆ. ಇದೇ ಕ್ರಮವನ್ನು ಐದು ದಿನಗಳ ಕಾಲ ಅನುಸರಿಸುತ್ತಾರೆ. ಆದರೆ ಕ್ಲಿಫ್ ಯಂಗ್  ಒಂದು ಗಂಟೆ ಸಹ ಮಲಗಲೇ ಇಲ್ಲ. ಸತತ ಮೂರು ದಿನಗಳ ಕಾಲ ಓಡಿದ. ಎಲ್ಲರಿಗಿಂತ ಒಂದೂವರೆ ದಿನ ಮುಂಚೆಯೇ ಗುರಿ ತಲುಪಿದ. ಮೂವತ್ತೈದು ತಾಸುಗಳ ಅಂತರದಲ್ಲಿ ಹಿಂದಿನ ದಾಖಲೆಯನ್ನು ಮುರಿದ.
ಈತನ ಜತೆ ಓಡಿದವರೆಲ್ಲ ಕ್ಲಿಫ್ ಅನ್ನು ಲಘುವಾಗಿ ಪರಿಗಣಿಸಿದ್ದರು. ಈ ಮುದುಕ ಹೆಚ್ಚೆಂದರೆ ಎರಡು ತಾಸು ಓಡಿ ಕಾಲು ಊದಿಸಿಕೊಂಡು ಸುಮ್ಮನೆ ಕುಳಿತುಕೊಳ್ಳಬಹುದು ಎಂದು ಪ್ರತಿಸ್ಪರ್ಧಿಗಳು ಭಾವಿಸಿದ್ದರು. ನಿದ್ದೆಯಿಲ್ಲದೇ ಎರಡು-ಮೂರು ದಿನ ಓಡುವುದು ಸಾಧ್ಯವಿದೆ ಎಂದಾಗ ಯಾರೂ ನಂಬಿರಲಿಲ್ಲ. ಹದಿನಾರು ತಾಸು ಓಡಿದ ಬಳಿಕ ಎಂಟು ತಾಸು ಮಲಗಲೇಬೇಕು ಎಂಬುದು ಎಲ್ಲರ ನಂಬಿಕೆಯಾಗಿತ್ತು. ಆದರೆ ಕ್ಲಿಫ್ ಅವೆಲ್ಲ ನಂಬಿಕೆಗಳನ್ನು ಮುರಿದ. ಅರವತ್ತು ದಾಟಿದವರೂ ಮ್ಯಾರಥಾನ್್ನಲ್ಲಿ ಭಾಗವಹಿಸಬಹುದು ಎಂಬುದನ್ನು ತೋರಿಸಿಕೊಟ್ಟ.
ಕ್ಲಿಫ್ ಬಗ್ಗೆ ಓದುವಾಗ ಆತ ಹೇಳಿದ ಒಂದು ಮಾತು – ‘ನಿಮಗೆ ಸಾಧನೆ ಮಾಡಬೇಕೆಂದೆನಿಸಿದಾಗ ಈಗ ಇರುವ ಸೂತ್ರಗಳ ಹಿಂದೆ ಹೋಗಬೇಡಿ. ನಿಮ್ಮ ಸೂತ್ರವೇನು ಎಂಬುದನ್ನು ನಿರ್ಧರಿಸಿ. ಅದೇನು ಎಂಬುದು ನಿಮಗೆ ಮಾತ್ರ ಗೊತ್ತಿರಲು ಸಾಧ್ಯ.’
ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ಜಾಕ್ ಕೇನ್್ಫೀಲ್ಡ್್ನ ಸಂದರ್ಶನ ಓದುತ್ತಿದ್ದೆ. ಇವನ ಹೆಸರನ್ನು ಕೇಳಿದರೆ ತಟ್ಟನೆ ಇವನ್ಯಾರೆಂದು ಗೊತ್ತಾಗಲಿಕ್ಕಿಲ್ಲ. ಆದರೆ ಈತ ಬರೆದ ಪುಸ್ತಕಗಳ ಹೆಸರನ್ನು ಹೇಳಿದರೆ, ಸಂಶಯವೇ ಇಲ್ಲ, ನಿಮಗೆ ಗೊತ್ತಾಗುತ್ತದೆ. ಅಂದ ಹಾಗೆ ಈತ ಬರೆದ ಪುಸ್ತಕದ ಹೆಸರು  chicken soup for the soul.ಇಲ್ಲಿ ತನಕ ಈ ಪುಸ್ತಕದ ಎಷ್ಟು ಪ್ರತಿಗಳು ಜಗತ್ತಿನಾದ್ಯಂತ ಎಷ್ಟು ಮಾರಾಟವಾಗಿವೆ ಎಂಬುದು ಯಾರಿಗೂ ಗೊತ್ತಿಲ್ಲ. ಮಿಲಿಯನ್, ಬಿಲಿಯನ್ ಬಿಡಿ, ಗ್ಯಾಜಿಲಿಯನ್್ಗಳಲ್ಲಿ ಲೆಕ್ಕ ಹಾಕಬೇಕು. ಓದುಗರನ್ನು ತಟ್ಟನೆ ಆಕರ್ಷಿಸುವುದಕ್ಕೆ ಅದರ ಹೆಸರೂ ಒಂದು ಕಾರಣ. ಈ ಪುಸ್ತಕ ಬರೆದಾಗ ಅದಕ್ಕೆ ಹೆಸರೇನಿಡಬೇಕೆಂದು ಆತ ತಿಂಗಳುಗಟ್ಟಲೆ ತಲೆಕೆಡಿಸಿಕೊಂಡಿದ್ದನಂತೆ. ‘ಚಿಕನ್ ಸೂಪ್ ಫಾರ್ ದಿ ಸೋಲ್್’ ಎಂಬ ಹೆಸರಿನಲ್ಲಿ ಬೇರೆ ಬೇರೆ ವಿಷಯಗಳಿಗೆ ಸೇರಿದ ಅನೇಕ ಕೃತಿಗಳು ಹೊರಬಂದಿವೆ.
ಮೊದಲ ಬಾರಿಗೆ ಈ ಪುಸ್ತಕವನ್ನು ಬರೆದಾಗ ಯಾವ ಪ್ರಕಾಶಕನೂ ಅದನ್ನು ಪ್ರಕಟಿಸಲು ಮುಂದೆ ಬರಲಿಲ್ಲ. ಒಬ್ಬರು ಇಬ್ಬರಾಗಿದ್ದರೆ ಪರವಾಗಿರಲಿಲ್ಲ. ಜಾಕ್ ಸುಮಾರು 140 ಪ್ರಕಾಶಕರಿಗೆ ಹಸ್ತಪ್ರತಿಗಳನ್ನು ತೋರಿಸಿದ. ಅವರ್ಯಾರೂ ಈ ಪುಸ್ತಕದ ಬಗ್ಗೆ ಸ್ವಲ್ಪವೂ ಉತ್ಸಾಹ ತೋರಲಿಲ್ಲ. ಆದರೆ ಜಾಕ್ ಸುಮ್ಮನಾಗಲಿಲ್ಲ. ಬೇರೆಯವರಾಗಿದ್ದರೆ, ಪುಸ್ತಕದ ಹಸ್ತಪ್ರತಿಯನ್ನು ‘ತೂಕ’ಕ್ಕೆ ಹಾಕಿ ಕೈತೊಳೆದುಕೊಳ್ಳುತ್ತಿದ್ದರು. ಆದರೆ ಜಾಕ್್ಗೆ ತನ್ನ ಕೃತಿಯ ಬಗ್ಗೆ ವಿಶ್ವಾಸವಿತ್ತು. ಇಂಥದ್ದೊಂದು ಪ್ರಯತ್ನವನ್ನು ಯಾರೂ ಮಾಡಿಯೇ ಇಲ್ಲ ಎಂಬ ಬಗ್ಗೆ ಹೆಮ್ಮೆಯೂ ಇತ್ತು. ಹೀಗಾಗಿ ಆತ ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. ತನ್ನ ಯೋಚನೆ ಅರ್ಥವಾಗುವ ತನಕ ಈ ಸಮಸ್ಯೆ ಇದ್ದೇ ಇರುತ್ತದೆ, ಆನಂತರ ಎಲ್ಲ ಸರಿ ಹೋಗುತ್ತದೆ ಎಂದೇ ಆತ ಭಾವಿಸಿದ್ದ. ಹಾಗೇ ಆಯಿತು. ಆತನ ಎಣಿಕೆ ನಿಜವಾಗಿತ್ತು.
ಮೊದಲ ಕೃತಿಯ ಕೊನೆಯಲ್ಲಿ ಜಾಕ್ ಬರೆದಿದ್ದ- ‘ನಿಮ್ಮ ಬಳಿ ಬೇರೆಯವರೊಂದಿಗೆ ಹಂಚಿಕೊಳ್ಳುವ ಅದ್ಭುತವೆನಿಸುವ ಕತೆಗಳಿದ್ದರೆ, ಪ್ರಸಂಗಗಳಿದ್ದರೆ, ನೈಜ ಘಟನೆಗಳಿದ್ದರೆ ಅವುಗಳನ್ನೆಲ್ಲ ನಮಗೆ ಕಳಿಸಿಕೊಡಿ. ಅವನ್ನೆಲ್ಲ ಎರಡನೆ ಪುಸ್ತಕದಲ್ಲಿ ಸೇರಿಸುತ್ತೇನೆ.’
ಜಾಕ್ ಕನಸು -ಮನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ದಿನಕ್ಕೆ 200ಕ್ಕೂ ಹೆಚ್ಚು ಕತೆಗಳು ಬರಲಾರಂಭಿಸಿದವು. ಅವುಗಳನ್ನೆಲ್ಲ ಸೇರಿಸಿ ‘ಚಿಕನ್ ಸೂಪ್ ಫಾರ್ ದಿ ಸೋಲ್್’ ಹೆಸರಿನಡಿಯಲ್ಲಿ ಪ್ರಕಟಿಸಲಾರಂಭಿಸಿದ. ಇಲ್ಲಿ ತನಕ ಇದೇ ಶೀರ್ಷಿಕೆಯಡಿಯಲ್ಲಿ ಇನ್ನೂರಕ್ಕೂ ಹೆಚ್ಚು ವಿಷಯಗಳ ಕುರಿತ ಪುಸ್ತಕಗಳು ಪ್ರಕಟವಾಗಿವೆ. ಒಂದೊಂದು ಪುಸ್ತಕ ಐದು-ಹತ್ತು ಕೋಟಿ ಪ್ರತಿಗಳು ಮಾರಾಟವಾಗಿವೆ. ಇಂದು ‘ಚಿಕನ್ ಸೂಪ್…’ ಕೇಳದವರಿಲ್ಲ.
‘ಸಾಧನೆ, ಯಶಸ್ಸಿನ ಮಜಾ ಏನೆಂಬುದು ಅದರ ರುಚಿ ಹತ್ತಿಸಿಕೊಂಡವರಿಗೆ ಮಾತ್ರ ಗೊತ್ತು. ನೀವು ಏನನ್ನೂ ಸಾಧಿಸದಿದ್ದಾಗ ಸಾಲ ಕೊಡಲು ಯಾವ ಬ್ಯಾಂಕೂ ಮುಂದೆ ಬರುವುದಿಲ್ಲ. ಒಮ್ಮೆ ನೀವು ಗೆಲ್ಲುವ ಕುದುರೆ ಎಂಬುದು ಗೊತ್ತಾದರೆ, ಸಾವಿರಾರು ಮಂದಿ ಸಾಲ ಕೊಡಲು, ನಿಮ್ಮ ಮೇಲೆ ಹಣ ಹೂಡಲು ಮುಂದೆ ಬರುತ್ತಾರೆ. ಗೆಲುವು ಆಕಸ್ಮಿಕವಾಗಬಾರದು. ಅದೊಂದು ಚಟವಾಗಬೇಕು. ಅದರ ಆನಂದವೇನೆಂಬುದನ್ನು ಅನುಭವಿಸಿದವನೇ ಬಲ್ಲ’ ಅಂತಾನೆ ಜಾಕ್.
ಹೌದು, ಗೆಲುವಿನಂಥ ಚಟ ಇನ್ನೊಂದಿಲ್ಲ. ಈ ‘ದುರಭ್ಯಾಸ’ವನ್ನು ರೂಢಿಸಿಕೊಳ್ಳಬೇಕು!

Monday 1 June 2015

ಎಲ್ಲ ಸಮಸ್ಯೆಗಳಿಗೂ ಪರಿಹಾರದ ಪಾಠ ಹೇಳುತ್ತದೆ ಪ್ರಕೃತಿ!

Go back to nature!
ಹಾಗಂತ ಹೇಳಿದವನು ಆಪಲ್ ಕಂಪ್ಯೂಟರ್ ಮುಖ್ಯಸ್ಥ ದಿವಂಗತ ಸ್ಟೀವ್ ಜಾಬ್ಸ್. ಸ್ಟೀವ್ ಜಾಬ್ಸ್‌ಗೆ ಬ್ಲಾಗರ್‌ನೊಬ್ಬ ‘ಜಗತ್ತಿನೆಲ್ಲೆಡೆ ನಿಮ್ಮ ಕಂಪನಿಯ ಕಂಪ್ಯೂಟರ್, ಐಫೋನ್, ಐಪಾಡ್, ಐಪಾಡ್ ಟಚ್ ಮುಂತಾದ ಉಪಕರಣಗಳೆಲ್ಲ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವುದನ್ನು ನೋಡಿದರೆ ಭಯವಾಗುತ್ತದೆ. ಇವೆಲ್ಲವುಗಳನ್ನು ತಯಾರಿಸುವುದರಿಂದ ಪ್ರಕೃತಿ ಮೇಲೆ ಎಂಥ ಪರಿಣಾಮವಾಗಬಹುದು? ಈ ಉಪಕರಣಗಳನ್ನು ರೀಚಾರ್ಜ್ ಮಾಡಲು ಪ್ರತಿದಿನ ಎಷ್ಟು ಕರೆಂಟು ಬೇಕು? ಪರಿಸರದ ಮೇಲೆ ನೀವು ಎಂಥ ಆಕ್ರಮಣ ಮಾಡುತ್ತಿದ್ದೀರಿ ಎಂಬುದರ ಕಲ್ಪನೆ ನಿಮಗಿದೆಯಾ?’ ಎಂದು ಕೇಳಿದ್ದಕ್ಕೆ ಆತ ಸರಳವಾಗಿ, ನಿರುದ್ವಿಗ್ನನಾಗಿ ಹೇಳಿದ್ದು: Please go back to nature. And nature will find solutions”. ಪ್ರಾಯಶಃ ಇದಕ್ಕಿಂತ ಚುಟುಕಾದ, ಸಮರ್ಪಕ ಉತ್ತರ ಇದ್ದಿರಲಾರದು.
‘ನಮ್ಮ ಎಲ್ಲ ಸಮಸ್ಯೆಗಳಿಗೂ ಪ್ರಕೃತಿಯಲ್ಲಿ ಉತ್ತರವಿದೆ’. ಹಾಗೆಂದು ಕಾಲಕಾಲಕ್ಕೆ ತತ್ತ್ವಜ್ಞಾನಿಗಳು, ದಾರ್ಶನಿಕರು, ಸಾಧು-ಸಂತರು, ಆರ್ಥಿಕ ತಜ್ಞರು, ತಂತ್ರಜ್ಞಾನಿಗಳು, ವಿಜ್ಞಾನಿಗಳು ಹೇಳುತ್ತಲೇ ಬಂದಿದ್ದಾರೆ. ಓಶೋ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ‘ನೀವು ಹೊಸದೇನನ್ನೂ ಆವಿಷ್ಕಾರ ಮಾಡಬೇಕಿಲ್ಲ. ಎಲ್ಲವೂ ಪ್ರಕೃತಿಯಲ್ಲಿಯೇ ಇದೆ. ನೀವೇನಾದರೂ ಮಾಡಬಹುದಾದ್ದು ಇದ್ದರೆ ಅದನ್ನು ನಕಲು ಮಾಡುವುದು ಅಷ್ಟೇ’ ಎಂದಿದ್ದು ಗೊತ್ತಿರಬಹುದು. ಟಾಟಾ ಸಂಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಆರ್. ಗೋಪಾಲಕೃಷ್ಣ ತಮ್ಮ The Case of the Bonsai Manager ಪುಸ್ತಕದಲ್ಲೂ ಮ್ಯಾನೇಜ್‌ಮೆಂಟ್‌ಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಪ್ರಕೃತಿಯಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪ್ರಾಯಶಃ ಸ್ಟೀವ್ ಜಾಬ್ಸ್ ಹೇಳಿದ್ದು ಸಹ ಇದೇ ಅರ್ಥದಲ್ಲಿರಬೇಕು. ಪ್ರತಿಯೊಂದು ಸಮಸ್ಯೆಗೂ ಪ್ರಕೃತಿಯಲ್ಲಿ ಮದ್ದಿದೆ, ಉಪಾಯವಿದೆ. ನಮಗೆ ಜೀವನ ಅರ್ಥವಾಗಿಲ್ಲ ಅಂದ್ರೆ ಪ್ರಕೃತಿ ಅರ್ಥವಾಗಿಲ್ಲ, ಅರ್ಥ ಮಾಡಿಕೊಂಡಿಲ್ಲ ಎಂದರ್ಥ. ಅದೆಂಥ ಅಬ್ಬರ, ಉಬ್ಬರವೇ ಇರಬಹುದು, ಅದನ್ನು ಒಂದು ಹದಕ್ಕೆ, ಪಾತಳಿಗೆ ತರುವುದು ಹೇಗೆಂಬುದು ಪ್ರಕೃತಿಗೆ ಗೊತ್ತು. ಹೀಗಾಗಿ ಅದೆಂಥ ಸ್ಥಿತ್ಯಂತರಗಳಾಗಲಿ, ಏನೂ ಆಗಿಯೇ ಇಲ್ಲವೇನೋ ಎಂಬಂತೆ ಪ್ರಕೃತಿ ಮುಸುಕೆಳೆದುಕೊಂಡು ತನ್ನ ಕೆಲಸ ಮಾಡುತ್ತಿರುತ್ತದೆ.
ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ‘ಪ್ರಕೃತಿ ಪಾಠ’ ಮಾಡುತ್ತಿರುವುದರ ಕುರಿತಾದ ಚಿತ್ರವದು. ಪಾಠ ಮಾಡುತ್ತಿದ್ದ ಮೇಷ್ಟ್ರು ಹೇಳುತ್ತಿದ್ದರು-’ನೀವು ಕೆಲಸ ಮಾಡುವ ಕಂಪನಿ ಅದೆಷ್ಟೇ ದೊಡ್ಡದಾಗಿರಬಹುದು, ಚಿಕ್ಕದಾಗಿರಬಹುದು, ಬಹುರಾಷ್ಟ್ರೀಯ ಕಂಪನಿಯೇ ಆಗಿರಬಹುದು. ಅದೆಂಥ ಬಿಕ್ಕಟ್ಟಿನ ಪ್ರಸಂಗವೇ ಎದುರಾಗಲೀ, ಪ್ರಕೃತಿ ಆ ಸ್ಥಿತಿಯಲ್ಲಿ ಇದ್ದರೆ ಹೇಗೆrespond ಮಾಡಬಹುದು ಎಂಬುದನ್ನು ಯೋಚಿಸಿ.
ಪ್ರಕೃತಿಯಲ್ಲಿರುವ ಪ್ರಾಣಿ, ಪಕ್ಷಿ, ಜಲಚರ, ಕೋಟ್ಯಂತರ ಕ್ರಿಮಿ, ಕೀಟ, ಜಂತು ಹಾಗೂ ಸಸ್ಯರಾಶಿಗಳು ಎಂಥ ಪ್ರತಿಕೂಲ ಪರಿಸ್ಥಿತಿಯಲ್ಲೂ ತಮ್ಮಷ್ಟಕ್ಕೆ ತಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತವೆ. ಅವುಗಳ ರಕ್ಷಣೆ, ಸಹಾಯಕ್ಕೆ ಯಾರೂ ಮುಂದಾಗುವುದಿಲ್ಲ. ಪ್ರಕೃತಿಯಲ್ಲಿಯೇ ಅವು ತಮ್ಮ ಸಮಸ್ಯೆಗಳಿಗೆ, ಅಂದರೆ ಮ್ಯಾನೇಜ್‌ಮೆಂಟ್ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಪ್ರಾಣಿ-ಪಕ್ಷಿಗಳಿಂದ, ಸುತ್ತಲಿನ ಪರಿಸರದಿಂದ ಕಲಿಯುವಂಥದ್ದು ಬಹಳಷ್ಟಿರುತ್ತವೆ.’
ಬಹುರಾಷ್ಟ್ರೀಯ ಕಂಪನಿಯೊಂದು ನೌಕರರಿಗೆ ಎಲ್ಲ ರೀತಿಯ ಸೌಲಭ್ಯ-ಸುವಿಧಾಗಳನ್ನು ನೀಡಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅವರು ದುಡಿಯುತ್ತಿರಲಿಲ್ಲ. ಬಹುತೇಕ ಕೆಲಸಗಾರರಿಗೆ ಯಾರ ಹೆದರಿಕೆಯೂ ಇರದಿರುವುದೇ ಇದಕ್ಕೆ ಕಾರಣವೆಂದು ತಿಳಿಯಿತು. ಹೊಸದಾಗಿ ಬಂದ ಬಾಸ್ಗೆ ಈ ಸಮಸ್ಯೆ ಬಗೆಹರಿಸಲು ಪ್ರೇರಣೆ ನೀಡಿದ್ದು ಒಂದು ಮೀನಿನ ಪ್ರಸಂಗ.

ಜಪಾನಿಯರಿಗೆ ಮೀನು ಅಂದ್ರೆ ಪಂಚಪ್ರಾಣ. ಅದರಲ್ಲೂ ಅವರಿಗೆ ಮೀನು ಬಹಳ ಫ್ರೆಶ್ ಆಗಿರಬೇಕು. ಒಮ್ಮೆ ಎಂಥ ಸ್ಥಿತಿ ಬಂತೆಂದರೆ ಜಪಾನಿನ ಸುತ್ತಮುತ್ತ ಮೀನುಗಳೇ ಇಲ್ಲವಾದವು. ಸಮುದ್ರತೀರದಿಂದ 400-500 ಕಿಮೀ ದೂರ ಕ್ರಮಿಸಿದರೆ ಮಾತ್ರ ಮೀನುಗಳು ಬಲೆಗೆ ಬೀಳುತ್ತಿದ್ದವು. ಮೀನು ಹಿಡಿಯಲು ದೂರದೂರ ಸಾಗಿದಂತೆ, ಅದನ್ನು ತರಲು ಹೆಚ್ಚು ಸಮಯ ತಗುಲುತ್ತಿತ್ತು. ಇದರಿಂದ ಮೀನುಗಳು ಫ್ರೆಶ್ ಆಗಿ ಇರುತ್ತಿರಲಿಲ್ಲ. ಕೆಲವೊಮ್ಮೆ ಬೋಟ್, ಹಡಗು ವಾಪಸ್ ಬರಲು ನಾಲ್ಕೈದು ದಿನಗಳಾಗುತ್ತಿದ್ದವು. ಹೀಗೆ ಹಿಡಿದು ತಂದ ಮೀನುಗಳನ್ನು ಜಪಾನಿಯರು ಇಷ್ಟಪಡುತ್ತಿರಲಿಲ್ಲ.
ಈ ಸಮಸ್ಯೆಯನ್ನು ಬಗೆಹರಿಸಲು ಫಿಶಿಂಗ್ ಕಂಪನಿಗಳು ಬೋಟಿನಲ್ಲಿಯೇ ಬೃಹತ್ ಫ್ರೀಜರ್ (ಶೈತ್ಯಾಗಾರ) ಅಳವಡಿಸಲು ನಿರ್ಧರಿಸಿದವು. ಸಮುದ್ರದಲ್ಲಿ ಹಿಡಿದ ಮೀನುಗಳನ್ನು ಫ್ರೀಜರ್‌ನಲ್ಲಿ ಸಂಗ್ರಹಿಸಿಡಲಾರಂಭಿಸಿದವು. ಜಪಾನಿಯರು ಅದೆಂಥ ಶಾಣ್ಯಾರೆಂದರೆ ಅವರಿಗೆ ಗೊತ್ತಾಗಿಬಿಡುತ್ತಿತ್ತು ಈ ಮೀನು ಫ್ರೆಶ್ ಅಲ್ಲವೆಂದು. ಫ್ರೆಶ್ ಫಿಶ್‌ಗೂ ಫ್ರೋಜನ್ ಫಿಶ್‌ಗೂ ನಡುವಿನ ವ್ಯತ್ಯಾಸವನ್ನು ತಕ್ಷಣ ಪತ್ತೆ ಮಾಡುತ್ತಿದ್ದರು. ಹೀಗಾಗಿ ಫ್ರೋಜನ್ ಫಿಶ್‌ಗೆ ಬೇಡಿಕೆ ಇಲ್ಲದಂತಾಯಿತು.
ಇದಕ್ಕೆ ಪರಿಹಾರ ಕಂಡುಕೊಳ್ಳಲು ಫಿಶಿಂಗ್ ಕಂಪನಿಗಳು ಹಡಗುಗಳಲ್ಲಿಯೇ ದೊಡ್ಡ ಫಿಶ್ ಟ್ಯಾಂಕ್‌ಗಳನ್ನು ನಿರ್ಮಿಸಲು ನಿರ್ಧರಿಸಿದವು. ಸಮುದ್ರದಲ್ಲಿ ಹಿಡಿದ ಮೀನುಗಳನ್ನು ತಟ್ಟನೆ ಟ್ಯಾಂಕಿನಲ್ಲಿ ಹಾಕುತ್ತಿದ್ದವು. ಆ ಮೀನುಗಳನ್ನು ದಡಕ್ಕೆ ತಂದು, ಫ್ರೆಶ್ ಪಿಶ್ ಎಂದು ಮಾರಾಟ ಮಾಡಲು ಆರಂಭಿಸಿದವು.
ಇಲ್ಲಿಗೆ ಈ ಸಮಸ್ಯೆ ಮುಗಿಯಬೇಕಿತ್ತು ತಾನೆ. ಆದರೆ ಹಾಗೆ ಆಗಲಿಲ್ಲ. ಸಮುದ್ರದಲ್ಲಿ ಹಿಡಿದ ಮೀನುಗಳನ್ನು ಹಡಗಿನಲ್ಲಿನ ಟ್ಯಾಂಕಿನೊಳಗೆ ಹಾಕುತ್ತಿದ್ದಂತೆ, ಅವುಗಳಿಗೆ ಒಳ್ಳೆಯ ಆಹಾರ ಪೂರೈಸುತ್ತಿದ್ದಂತೆ, ಅವು ತಿಂದುಂಡು ಆಲಸಿಗಳಾದವು. ತಿರುಗಾಟ ಕಡಿಮೆ ಮಾಡಿದವು. ಇದ್ದಕ್ಕಿದ್ದಂತೆ ಡಲ್ ಆದವು. ಜೀವವಿದೆಯೆಂಬುದನ್ನು ಬಿಟ್ಟರೆ ಅವುಗಳಲ್ಲಿ ಯಾವುದೇ ಲವಲವಿಕೆ ಕಾಣುತ್ತಿರಲಿಲ್ಲ.
ವಿಚಿತ್ರವೆಂದರೆ ಜಪಾನಿಯರು ಈ ಹಡಗಿನ ಟ್ಯಾಂಕಿನಲ್ಲಿ ಹಿಡಿದು ತಂದ ಮೀನುಗಳಲ್ಲೂ ತುಸು ವ್ಯತ್ಯಾಸ ಕಾಣಲಾರಂಭಿಸಿದರು. ಅವರು ಫ್ರೆಶ್ ಫಿಶ್ ಅನ್ನು ಬಯಸಿದರೇ ಹೊರತು ಈ ಸೊರಗಿದ ಮೀನುಗಳಲ್ಲ! ಹಾಗೆಂದು ಈ ಸಮಸ್ಯೆಗೆ ಒಂದು ಉಪಾಯವನ್ನು ಹುಡುಕಲೇಬೇಕಿತ್ತು. ಕಾರಣ ಈ ಮತ್ಸ್ಯೋದ್ಯಮದಲ್ಲಿ ಸಾವಿರಾರು ಕೋಟಿ ರು. ವಹಿವಾಟಿತ್ತು. ಫಿಶ್ ಮಾರಾಟದಲ್ಲಿ ಭಾರಿ ಪೈಪೋಟಿಯಿತ್ತು.
ಹಡಗಿನ ಫಿಶ್ ಟ್ಯಾಂಕಿನಲ್ಲಿ ಒಂದು ಪುಟ್ಟ ಶಾರ್ಕ್ ಬಿಟ್ಟರೆ ಹೇಗೆ? ಯಾರಿಗೋ ಈ ಐಡಿಯಾ ಹೊಳೆಯಿತು. ಶಾರ್ಕ್ ಕೆಲವು ಮೀನುಗಳನ್ನು ತಿಂದುಹಾಕಬಹುದು. ಆದರೆ ಮೀನುಗಳಿಗೆ ಆಲಸಿಯಾಗಿ, ಜಡವಾಗಲು ಬಿಡುವುದಿಲ್ಲ. ಇದರಿಂದ ಟ್ಯಾಂಕಿನಲ್ಲಿರುವ ಮೀನುಗಳು ಕ್ರಿಯಾಶೀಲವಾದುವಲ್ಲದೇ, ಸಮುದ್ರದಲ್ಲಿರುವ ಮೀನುಗಳಿಗೂ ಇವುಗಳಿಗೂ ವ್ಯತ್ಯಾಸವಿಲ್ಲದಂತಾದವು. ಇದರಿಂದ ಜಪಾನಿಯರಿಗೆ ಎಂದಿನಂತೆ ಫ್ರೆಶ್ ಫಿಶ್‌ಗಳು ಸಿಗಲಾರಂಭಿಸಿದವು. ಪ್ರಕೃತಿಯಲ್ಲಿನ ಪರಿಹಾರವೇ ಸಮಸ್ಯೆಗೆ ಉತ್ತರವಾಗಿತ್ತು. ಯಾವುದೇ ಕಂಪನಿಯಲ್ಲಿ, ಸಂಸ್ಥೆಯಲ್ಲಿ ಮೇಲೊಬ್ಬರು ಬಡಿಗೆ, ಬೆತ್ತ ಹಿಡಿದು ಕೊಂಡವರು ಇಲ್ಲದಿದ್ದರೆ ಆಲಸ್ಯ ಮನೆಮಾಡುತ್ತದೆ.
2004 ಅಕ್ಟೋಬರ್ 25ರ ‘ಇಂಟರ್‌ನ್ಯಾಷನಲ್ ಹೆರಾಲ್ಡ್ ಟ್ರಿಬ್ಯೂನ್ ಪತ್ರಿಕೆಯಲ್ಲಿ ಒಂದು ವರದಿ ಪ್ರಕಟವಾಗಿತ್ತು. ಥಾಯ್ಲೆಂಡ್‌ನಿಂದ ಚೀನಾಕ್ಕೆ ಮೊಸಳೆಗಳನ್ನು ಆಮದು ಮಾಡಿಕೊಂಡ ಕುರಿತ ವರದಿಯದು. ಚೀನಾದಲ್ಲಿ ಮೊಸಳೆ ಮಾಂಸಕ್ಕೆ ಅಪಾರ ಬೇಡಿಕೆ. ಆದರೆ ಅದು ಎಲ್ಲೆಡೆ ಸಿಗುತ್ತಿರಲಿಲ್ಲ. ಮೊಸಳೆ ಮಾಂಸ ಎಲ್ಲೆಡೆ ಸಿಗುವಂತೆ ಮಾಡಲು ಚೀನಾ ಸರಕಾರ ಸ್ವತಃ ತಾನೇ ಮೊಸಳೆಗಳನ್ನು ಸಾಕಲು ನಿರ್ಧರಿಸಿತು. 1997-98ರಲ್ಲಿ ಚೀನಾ ಸರಕಾರ ಸುಮಾರು 40 ಸಾವಿರ ಮೊಸಳೆಗಳನ್ನು ಥಾಯ್ಲೆಂಡ್‌ನಿಂದ ತರಿಸಿಕೊಂಡಿತು. ಗುವಾಂಗ್ಜುವಾ ಪ್ರದೇಶದಲ್ಲಿ ಕ್ರೋಕೊ ಪಾರ್ಕ್ (ಮೊಸಳೆ ಉದ್ಯಾನ) ಸ್ಥಾಪಿಸಿತು. ಐದು ಬೋಯಿಂಗ್ 747 ಕಾರ್ಗೋ ವಿಮಾನದಲ್ಲಿ ಮೊಸಳೆಗಳು ಚೀನಾಕ್ಕೆ ಬಂದವು. ಚೀನಾದ ದೃಷ್ಟಿಯಿಂದ ಇದೊಂದು ಲಾಭದಾಯಕ ಡೀಲ್ ಆಗಿತ್ತು.
ಚೀನಾದ ಈ ಕ್ರಮದಿಂದ ಮೊಸಳೆ ಉದ್ಯಮದಲ್ಲಿ ಕ್ರಾಂತಿಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಗುವಾಂಗ್ಜುವಾ ಪ್ರಾಂತದ ರಸ್ತೆ, ಸೇತುವೆ, ಕಟ್ಟಡಗಳು ಅಭಿವೃದ್ಧಿಗೊಂಡವು. ಮೂಲಸೌಕರ್ಯಗಳು ಸುಧಾರಿಸಿದವು. ಮೊಸಳೆ ಮಾಂಸ, ಚರ್ಮಕ್ಕೆ ಬೇಡಿಕೆ ಬರಬಹುದೆಂದು ಎಲ್ಲರೂ ನಿರೀಕ್ಷಿಸಿದ್ದರು. ಮೊಸಳೆಗಳ ಬಗ್ಗೆ ಎಲ್ಲಿಲ್ಲದ ಮೋಹ ತಾಳಿದ ಚೀನಾದವರು ಅವುಗಳಿಗೆ ಅಗತ್ಯಕ್ಕಿಂತ ಹೆಚ್ಚು ಆಹಾರ ನೀಡಿ, ದಷ್ಟಪುಷ್ಟಗೊಳಿಸಿದರು.
ಥಾಯ್ಲೆಂಡ್‌ನ ಮೊಸಳೆಗಳಿಗೆ ಚೀನಾದಲ್ಲಿ ತಿನ್ನುವುದನ್ನು ಬಿಟ್ಟರೆ ಬೇರೆ ಕೆಲಸಗಳೇ ಇರಲಿಲ್ಲ. ಈ ಮೊಸಳೆಗಳಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದಕ್ಕೂ ಪುರುಸೊತ್ತು ಸಿಗದಷ್ಟು ಆಹಾರಗಳ ಪೂರೈಕೆಯಾಗುತ್ತಿತ್ತು. ಇದರ ಪರಿಣಾಮವಾಗಿ ಆ ಮೊಸಳೆಗಳು ವಿಚಿತ್ರವಾಗಿ ಕೊಬ್ಬಿ ಬೆಳೆದವು. ಲೈಂಗಿಕ ಆಸಕ್ತಿ ಕುಂದಲು ಇದೂ ಕಾರಣವಾಯಿತು. ಚೀನಾದ ಹವಾಮಾನ ಹೇಗಿತ್ತೆಂದರೆ ಎಷ್ಟು ತಿಂದರೂ ಬೇಕೆನಿಸುತ್ತಿತ್ತು. ಇದು ಥಾಯ್ಲೆಂಡ್‌ಗೆ ಹೋಲಿಸಿದರೆ ವ್ಯತಿರಿಕ್ತವಾಗಿತ್ತು. ಕೇವಲ ಏಳು ವರ್ಷಗಳಲ್ಲಿ ಮೊಸಳೆಗಳ ಸಂಖ್ಯೆ ಅರ್ಧಕ್ಕರ್ಧ ಕಡಿಮೆಯಾಯಿತು. ನಿರೀಕ್ಷಿಸಿದ ಮಟ್ಟಕ್ಕೆ ಸಂತಾನೋತ್ಪತ್ತಿ ಆಗಲಿಲ್ಲ. ಚೀನಾದ ಮೊಸಳೆ ಕನಸು ಈಡೇರಲೇ ಇಲ್ಲ. ಯಾವುದೇ ಕಂಪನಿಯಿರಬಹುದು ಅಲ್ಲಿನ ಸಿಬ್ಬಂದಿಯನ್ನು ಚೀನಾದ ಮೊಸಳೆ ಗಳಂತೆ ಠಛಟಠಜ್ಠ ಮಾಡಿದರೆ ಪರಿಣಾಮ ಹೀಗೇ ಆಗುತ್ತದೆ!
ಯಾವುದೇ ಸಂಸ್ಥೆಯಿರಬಹುದು, ಬಹುರಾಷ್ಟ್ರೀಯ ಕಂಪನಿಯಿರಬಹುದು, ಅಲ್ಲಿ ಕೆಲವೇ ಕೆಲವು ಜನರು ಐಡಿಯಾಕ್ಕೆ ಕಾವು ಕೊಡುತ್ತಾರೆ. ಹೊಸ ಯೋಜನೆ, ಯೋಚನೆಯನ್ನು ಹುಟ್ಟುಹಾಕುತ್ತಾರೆ. ಅದನ್ನು ತಮ್ಮ ಸಹೋದ್ಯೋಗಿಗಳ ಜತೆಗೆ ಹಂಚಿಕೊಳ್ಳುತ್ತಾರೆ ಹಾಗೂ ಅನಂತರ ಉಳಿದವರೆಲ್ಲರೂ ಅದನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಾರೆ. ಕಾಲಕಾಲಕ್ಕೆ ಸನ್ನಿವೇಶಕ್ಕೆ ತಕ್ಕ ಹಾಗೆ ಸವಾಲುಗಳನ್ನು ಎದುರಿಸುತ್ತಾ ಮುನ್ನಡೆಯುತ್ತಾರೆ. ಇದು ಎಲ್ಲೆಡೆ ಇರುವ ಸಾಮಾನ್ಯ ನಿಯಮ ತಾನೆ. ಈ ಅಂಶವನ್ನು ಪ್ರಕೃತಿ ಯಲ್ಲಿರುವ ಪಕ್ಷಿಗಳು ಎಷ್ಟೊಂದು ಸೊಗಸಾಗಿ ಮೈಗೂಡಿಸಿಕೊಂಡಿವೆಯೆಂಬುದನ್ನು ಗಮನಿಸಬಹುದು. ಇಂಗ್ಲೆಂಡ್‌ನಲ್ಲಿರುವ ರಾಬಿನ್ ಹಾಗೂ ಬ್ಲೂ ಟಿಟ್ ಪಕ್ಷಿಗಳು ಸನ್ನಿವೇಶವೊಂದನ್ನು ಹೇಗೆ ನಿಭಾಯಿಸಿದವು ಎಂಬುದು ನಮಗೆ ಪಾಠವಾಗಬೇಕು.
1900ರ ಆರಂಭದಲ್ಲಿ ಇಂಗ್ಲೆಂಡ್‌ನಲ್ಲಿ ಮನೆ ಬಾಗಿಲಿಗೆ ಹಾಲನ್ನು ಬಾಟಲಿಯಲ್ಲಿ ತುಂಬಿ ಸಣ್ಣ ಟ್ರಕ್‌ಗಳ ಮೂಲಕ ತಲುಪಿಸುವ ರೂಢಿಯಿತ್ತು. ಈ ಬಾಟಲಿಗಳಿಗೆ ಕ್ಯಾಪ್ ಇರುತ್ತಿರಲಿಲ್ಲ. ಹಾಲಿನ ಕೆನೆ (ಕ್ರೀಮ್)ಬಾಟಲಿಯ ತುದಿಯಲ್ಲಿ ಶೇಖರಗೊಳ್ಳುತ್ತಿತ್ತು. ಬೆಳಗ್ಗೆ ಬೆಳಗ್ಗೆ ರಾಬಿನ್ ಹಾಗೂ ಬ್ಲೂ ಟಿಟ್ ಮನೆಯ ಮುಂದೆ ಇಟ್ಟಿರುತ್ತಿದ್ದ ಈ ಹಾಲಿನ ಬಾಟಲಿಗಳಲ್ಲಿನ ಕೆನೆಯನ್ನು ಮಾಲೀಕ ಬರುವುದಕ್ಕಿಂತ ಮೊದಲೇ ತಮ್ಮ ಕೊಕ್ಕಿನಿಂದ ಹೀರಿ ಕುಡಿಯುತ್ತಿದ್ದವು. ಉಳಿದ ಆಹಾರಕ್ಕಿಂತ ಈ ಹಾಲಿನ ಕೆನೆ ಪೌಷ್ಟಿಕವಾಗಿರುತ್ತಿದ್ದುದರಿಂದ ಈ ಹಕ್ಕಿಗಳು ದಷ್ಟಪುಷ್ಟವಾಗಿ ಬೆಳೆಯಲಾರಂಭಿಸಿದವು.
1940 ಹೊತ್ತಿಗೆ ತಂತ್ರಜ್ಞಾನ ಅಭಿವೃದ್ಧಿ ಹೊಂದಿದ ಪರಿಣಾಮ ಈ ಹಾಲಿನ ಬಾಟಲಿಯ ಸ್ವರೂಪ ಬದಲಾಯಿತು. ಬಾಟಲಿ ಬಾಯಿಗೆ ಅಲ್ಯುಮಿನಿಯಮ್ ಸೀಲ್ ಬಿತ್ತು. ಇದರಿಂದ ಹಾಲಿನ ಕೆನೆ ಹೀರುವುದು ಈ ಪಕ್ಷಿಗಳಿಗೆ ಅಸಾಧ್ಯವಾಯಿತು. ಅವುಗಳ ಮೇಲೆ ಇದರ ಪರಿಣಾಮ ಭಿನ್ನವಾಗಿತ್ತು.
ಕೆಲವು ತಿಂಗಳುಗಳ ಅವಧಿಯಲ್ಲಿ ಬ್ಲೂ ಟಿಟ್ ಪಕ್ಷಿಯಿದೆಯಲ್ಲಾ, ಅದು ಅಲ್ಯುಮಿನಿಯಮ್ ಸೀಲನ್ನು ಕೊಕ್ಕಿನಿಂದ ಕುಕ್ಕಿ ಕುಕ್ಕಿ ತೂತು ಮಾಡಿ ಕೆನೆ ಹೀರುವ ಕಲೆಯನ್ನು ಕರಗತ ಮಾಡಿಕೊಂಡಿತು. ಇದರಿಂದ ಬ್ಲೂ ಟಿಟ್, ರಾಬಿನ್ ಪಕ್ಷಿಗಿಂತ ದೈಹಿಕವಾಗಿ ದಷ್ಟಪುಷ್ಟವಾಯಿತಲ್ಲದೇ ಬದುಕುವ ದಾರಿಯನ್ನು ರೂಢಿಸಿಕೊಂಡಿತು. ಆದರೆ ಇದು ರಾಬಿನ್‌ಗೆ ಸಾಧ್ಯವಾಗದೇ ಸೊರಗಲಾರಂಭಿಸಿತು. ಆಗೊಮ್ಮೆ ಈಗೊಮ್ಮೆ ಒಂದೊಂದು ರಾಬಿನ್ ಸೀಲು ತೂತು ಮಾಡಿ ಕೆನೆ ಹೀರುತ್ತಿತ್ತು. ಆದರೆ ಈ ಗುಟ್ಟು ಎಲ್ಲ ರಾಬಿನ್‌ಗಳಿಗೂ ಗೊತ್ತಾಗಲೇ ಇಲ್ಲ.
ಆದರೆ ಈ ಟ್ರಿಕ್ ಎಲ್ಲ ಬ್ಲೂ ಟಿಟ್‌ಗಳಿಗೆ ಗೊತ್ತಾಯಿತು, ಅದೇ ಎಲ್ಲ ರಾಬಿನ್ಗಳಿಗೆ ಗೊತ್ತಾಗಲಿಲ್ಲ, ಹೇಗೆ? ಇದಕ್ಕೆ ಕಾರಣವೇನು?
ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಅಲನ್ ವಿಲ್ಸನ್ ಎಂಬಾತ ಅತ್ಯಂತ ಕುತೂಹಲ ಹುಟ್ಟಿಸುವ ಈ ಎರಡು ಪಕ್ಷಿಗಳ ವರ್ತನೆ ಬಗ್ಗೆ ಸಂಶೋಧನೆ ಮಾಡಿದ. ಅದರಿಂದ ತಿಳಿದು ಬಂದಿದ್ದೇನೆಂದರೆ-ವಸಂತ ಕಾಲದಲ್ಲಿ ಗಂಡು -ಹೆಣ್ಣು ಬ್ಲೂಟಿಟ್ ಜತೆಜತೆಯಾಗಿ ಇರುತ್ತವೆ. ಒಂದು ಹೆಣ್ಣು ಹಕ್ಕಿಯ ಸುತ್ತ ಹತ್ತಾರು ಗಂಡುಗಳು ರೌಂಡ್ ಹೊಡೆಯುತ್ತಿರುತ್ತವೆ. ಹೆಣ್ಣು ಹಕ್ಕಿ ಹಾರಿದರೆ ಅದರ ಹಿಂದೆ ಬುರ್ರ್ ಎಂದು ಹತ್ತಾರು ಗಂಡುಗಳು ಹಾರುತ್ತವೆ. ಅಂದರೆ ಬ್ಲೂಟಿಟ್ ಎಂದಿಗೂ ಏಕಾಂಗಿಯಲ್ಲ. ಮರಿ ಹಾಕಿದರೆ ಬ್ಲೂಟಿಟ್ ಜಗತ್ತಿಗೆಲ್ಲ ಸಂಭ್ರಮ. ಅಂದರೆ ಅವು ಸಂಘ ಜೀವಿ. ಸದಾ ಹಿಂಡಿನಲ್ಲೇ ಇರುತ್ತವೆ.
ಅದೇ ರಾಬಿನ್ ಹಾಗಲ್ಲ. ಬಹಳ reserved. ಒಂದು ಹೆಣ್ಣಿನ ಸುತ್ತ ಒಂದೇ ಗಂಡು. ಮತ್ತೊಂದು ಗಂಡು ಸುಳಿಯುವಂತಿಲ್ಲ. ಒಂದರ ಗಡಿಯೊಳಗೆ ಮತ್ತೊಂದು ಪ್ರವೇಶಿಸುವಂತಿಲ್ಲ. ಎರಡು ರಾಬಿನ್‌ಗಳ ಮಧ್ಯೆ ಎಂದಿಗೂ ದೀರ್ಘ ಸಂಬಂಧ ಅಸಾಧ್ಯ. ಹಾಲಿನ ಕೆನೆ ಕುಡಿಯುವುದನ್ನು ಒಂದೆರಡು ರಾಬಿನ್ ಕಲಿತರೂ ತನ್ನ ಇಡೀ ಸಮೂಹಕ್ಕೆ ಕಲಿಸಲು ಆಗಲೇ ಇಲ್ಲ. social propagation ಅವುಗಳಿಂದ ಸಾಧ್ಯ ವಾಗಲೇ ಇಲ್ಲ.
ನಾವು ಪ್ರಕೃತಿಯಿಂದ ಕಲಿಯುವುದು, ಪ್ರಕೃತಿಯನ್ನು ಅರ್ಥಮಾಡಿಕೊಕೊಳ್ಳುವುದು ಬೇಕಾದಷ್ಟಿದೆ ಎಂದು ಅನಿಸುವುದಿಲ್ಲವೇ?