Monday 25 January 2021

ಭರತನಾಟ್ಯ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಶ್ರೀದೇವಿ ಕೆ

 ಉಪ್ಪಳ: ಕರ್ನಾಟಕ ಫ್ರೌಢಶಿಕ್ಷಣ ಮಂಡಳಿಯು 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಸೀನಿಯರ್ ವಿಭಾಗದಲ್ಲಿ ಬಾಯಾರಿನ ಶ್ರೀದೇವಿ ಕೆ. ಶೇ.86 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುವಳು. ವಿದುಷಿಃ ಯೋಗೀಶ್ವರಿ ಜಯಪ್ರಕಾಶ್ ಅವರ ನಾಟ್ಯಾಲಯ ಪುತ್ತೂರು ಸಂಸ್ಥೆಯ ಬಾಯಾರು ಶಾಖಾ ವಿದ್ಯಾರ್ಥಿನಿಯಾಗಿದ್ದು, ಸಜಂಕಿಲ ಶ್ರೀದುರ್ಗಾಪರಮೇಶ್ವರಿ ಕಿರಿಯ ಪ್ರಾಥಮಿಕ ಶಾಲಾ ಸಿಬ್ಬಂದಿ ಶ್ರೀಧರ ಕೆ.ಆವಳ ಕೆದುಕೋಡಿ-ಶ್ರೀವಿದ್ಯಾ ಎಡಮಲೆ ದಂಪತಿಯ ಸುಪುತ್ರಿ. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನ ಪ್ರಥಮ ಪದವಿಪೂರ್ವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ. 


No comments:

Post a Comment