Sunday 31 March 2024
Saturday 30 March 2024
ಅಗಲ್ಪಾಡಿಯಲ್ಲಿ ರುದ್ರಹೋಮ | ಸಹಸ್ರಚಂಡಿಕಾ ಯಾಗ | ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ (ರಿ.) ಅಗಲ್ಪಾಡಿ ಇವರ ನೇತೃತ್ವದಲ್ಲಿ ಮಾರ್ಚ್ 27 ಬುಧವಾರದಿಂದ ಏಪ್ರಿಲ್ 3 ಬುಧವಾರದ ತನಕ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿಯಾಗ, ಋಕ್ ಸಂಹಿತಾ ಯಾಗ, ಐಕಮತ್ಯ ಹೋಮ, ರುದ್ರಹೋಮ, ಧನ್ವಂತರಿ ಹೋಮ ಮತ್ತು ಸಹಸ್ರಚಂಡಿಕಾ ಯಾಗ ಜರಗಲಿರುವುದು.
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ 2ನೇಯದಿನ ಋಕ್ ಸಂಹಿತಾ ಯಾಗ , ಐಕ್ಯ ಮತ್ಯ ಹೋಮ.
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ 2ನೇಯದಿನ ಋಕ್ ಸಂಹಿತಾ ಯಾಗ ಆಜ್ಯಾಹುತಿಯಿಂದ ಜರುಗಿತು. ಅರಣೀ ಮಥನ ಪೂರ್ವಕ ಅಗ್ನಿ ಪ್ರಜನನ ದೊಂದಿಗೆ ಐಕ್ಯ ಮತ್ಯ ಹೋಮ ಜರುಗಿತು. ಹೊಮವನ್ನು ಐಕ್ಯ ಮತ್ಯ ಮಂತ್ರ ಪಠಣದೊಂದಿಗೆ ಆಜ್ಯ, ಚರು, ಸಮಿಧೆ ಸಮರ್ಪಿಸಿ, ಋತ್ವಿಜರು ನೆರವೇರಿಸಿದರು.
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಸಂಯುಕ್ತಾಶ್ರಯದಲ್ಲಿ ಲೋಕ ಕಲ್ಯಾಣಾರ್ಥ ವಾಗಿ ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿಯಾಗ, ವೇದ ಪುರುಷನ ಪೂರ್ಣಾನುಗ್ರಹ ಪ್ರಾಪ್ತಿಗಾಗಿ ಋಕ್ ಸಂಹಿತಾ ಯಾಗ, ಐಕ್ಯಮತ್ಯಹೋಮ, ರುದ್ರಹೋಮ, ಧನ್ವಂತರಿ ಹೋಮ, ಹಾಗೂ ಸಹಸ್ರ ಚಂಡಿಕಾ ಯಾಗ, ಸಾನ್ನಿಧ್ಯ ವೃದ್ಧಿಗಾಗಿ ಕಲಶಾಭಿಷೇಕ ಜರುಗುತ್ತಿರುವ ಸುಸಂದರ್ಭ ದಿನಾಂಕ 28 ಮಾರ್ಚ್ 2024ನೇ ಗುರುವಾರ ಸುಸಂಪನ್ನಗೊಂಡಿತು. ಪೂರ್ಣಾಹುತಿ ಯೊಂದಿಗೆ ಯಾಗ ಸಂಪನ್ನಗೊಂಡಿತು.
ಮಧ್ಯಾಹ್ನ ಶ್ರೀ ದುರ್ಗಾಪರಮೇಶ್ವರಿ ದೇವರ ಮಹಾ ಮಂಗಳಾರತಿ ಭಕ್ತ ವರ್ಗಕ್ಕೆ ತೀರ್ಥ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರುಗ ಪೂರ್ಣಾಹುತಿಯೊಂದಿಗೆ ನಡೆಸಲಾಯಿತು.
ಕ್ಷೇತ್ರದ ಆಡಳಿತ ಮೊತ್ತೇಸರ ಎ.ಜಿ. ಶರ್ಮಾ ಕೋಳಿಕ್ಕಜೆ ಮುತುವರ್ಭಾಜಿಯಿಂದ ಭಾಗ ವಹಿಸಿದ್ದರು. ವೇದಮಾತಾ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ತಲೇಕ, ಲೋಕ ಸಭಾ ಸದಸ್ಯರು, ಸಮೀತಿ ಸದಸ್ಯರು , ಭಕ್ತರು ಭಾಗವಹಿಸಿದ್ದರು .
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ, ಶ್ರೀ ಮಹಾಗಣಪತಿ ಯಾಗ, ಋಕ್ ಸಂಹಿತಾ ಯಾಗ, ಯಾಗ ಸಮುಚ್ಚಯಕ್ಕೆ ಚಾಲನೆ.
ಅಗಲ್ಪಾಡಿ ಯಾಗ ಶಾಲೆ, ಪಾಕಶಾಲೆ, ವಸತಿಗೃಹ ಸಾಂಸ್ಕೃತಿಕ ವೇದಿಕೆ ಎಡನೀರು ಶ್ರೀಗಳು ದೀಪ ಬೆಳಗಿಸಿ ಉದ್ಘಾಟಿಸಿದರು.
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥ ವಾಗಿ ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿಯಾಗ, ವೇದಪುರುಷನ ಪೂರ್ಣಾನುಗ್ರಹ ಪ್ರಾಪ್ತಿಗಾಗಿ ಋಕ್ ಸಂಹಿತಾ ಯಾಗ, ಐಕ್ಯಮತ್ಯಹೋಮ, ರುದ್ರಹೋಮ, ಧನ್ವಂತರಿ ಹೋಮ, ಹಾಗೂ ಸಹಸ್ರ ಚಂಡಿಕಾ ಯಾಗ, ಸಾನ್ನಿಧ್ಯ ವೃದ್ಧಿಗಾಗಿ ಕಲಶಾಭಿಷೇಕ ಮಾ.27ರಂದು ಆರಂಭಗೊಳ್ಳಲಿದ್ದು, ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ.
ಕಾರ್ಯಕ್ರಮದ ಅಂಗವಾಗಿ ಮಾ.26ರಂದು ಬೆಳಗ್ಗೆ ಗಣಪತಿಯಾಗ ಸಂಪನ್ನಗೊಂಡು, ಎಡನೀರು ಸಂಸ್ಥಾನದ ಮಠಾಧೀಶರಾದ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಯವರು ಚಿತ್ತೈಸಿ, ಯಾಗ ಶಾಲೆ, ಪಾಕಶಾಲೆ, ವಸತಿಗೃಹ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಪುಂಗನೂರು ಗೋಮಾತೆ ಯಾಗದ ಸಂದರ್ಭದಲ್ಲಿ ಆಂಧ್ರಪ್ರದೇಶದ ಪುಂಗನೂರು ಗೋವು ಭಗವದ್ಭಕ್ತರನ್ನು ತಳಿಯ ಗೋವಿನಂತೆ ಪುಂಗನೂರು ಗೋವು ಆಕರ್ಷಿಸಲಿದೆ. ಗಿಡ್ಡ ತಳಿಯಾಗಿ ನೋಡಲು ಆಕರ್ಷಕವಾಗಿದೆ. ಇದರ ಹಾಲು ಅತ್ಯಂತ ಶ್ರೇಷ್ಠವಾಗಿದ್ದು ಆರೋಗ್ಯದಾಯಕವಾಗಿದೆ. ಒಂದು ಗಂಡು ಹಾಗೂ ಒಂದು ಹೆಣ್ಣು ಗೋವನ್ನು ಆಂಧ್ರಪ್ರದೇಶದಿಂದ ತರಲಾಗಿದೆ. ಇದು ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದ ಗೋ ಶಾಲೆಯಲ್ಲಿ ಇರಲಿದೆ.