IMPORTANT NOTICE

New official website is launched for Karada Community. Please visit www.karadavishwa.com for more details.

Sunday, 31 March 2024

ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗದ ಸಪ್ತಶತೀ ಪಾರಾಯಣ ಮುಂದುವರೆದು, ಧನ್ವಂತರಿ ದೇವರ ಪ್ರೀತ್ಯರ್ಥ ಯಾಗ. 30-03-24


ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ 4ನೇಯ ದಿನ ಋಕ್ ಸಂಹಿತಾ ಯಾಗ ಆಜ್ಯಾಹುತಿಯಿಂದ ಜರುಗಿ, ಸಹಸ್ರ ಚಂಡಿಕಾ ಯಾಗದ ಸಪ್ತಶತೀ ಪಾರಾಯಣ ಮುಂದುವರೆದು, ಧನ್ವಂತರಿ ದೇವರ ಪ್ರೀತ್ಯರ್ಥ ಯಾಗ, ಶ ದೇವರ ಮಹಾಪೂಜೆ, ಮಹಾ ಮಂಗಳಾರತಿ, ಭಕ್ತ ವರ್ಗಕ್ಕೆ ತೀರ್ಥ ಪ್ರಸಾದ ಗಳೊಂದಿಗೆ ಅನ್ನದಾನ ಜರುಗಿತು.    

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ವೇದಮಾತಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಲೋಕಕಲ್ಯಾಣಾರ್ಥವಾಗಿ ವಿವಿಧ ಯಾಗಗಳು ಜರುಗುತ್ತಿರುವ ಸುಸಂದರ್ಭ ಯಾಗ ಶಾಲೆಯಲ್ಲಿ ಸಹಸ್ರ ಚಂಡಿಕಾ ಯಾಗಕ್ಕಾಗಿ ಮಂಟಪ ದೇವತಾ ಆರಾಧನೆ, ದಂಪತಿ ಪೂಜಾ, ಸುವಾಸಿನಿ, ಕುಮಾರಿಕಾ ಆರಾಧನೆ, ಸುಮಾರು ನೂರು ಜನ ಋತ್ವಿಜರು ಸೇರೀ ಸಪ್ತಶತೀ ಪಾರಾಯಣ ನೆರವೇರುತ್ತಿದೆ.

ಧನ್ವಂತರಿ ಯಾಗದ ಬಾಬ್ತು ಗುರು, ಗಣಪತಿ ಪೂಜೆ, ಸಂಕಲ್ಪ, ಸ್ವಸ್ತಿ ಪುಣ್ಯಾಹ ವಾಚನ, ಆಚಾರ್ಯಾದಿ ಋತ್ವಿಕ್ ವರಣ, 40 ಸಾವಿರ ಧನ್ವಂತರಿ ಮಂತ್ರ ಪಠಣ ದೊಂದಿಗೆ, ತುಪ್ಪ, ಚರು, ದೂರ್ವೇ, ಅಮೃತ ಬಳ್ಳಿ ಸಂಮಿಧೆಗಳಿಂದ ತಲಾ ಸಹಸ್ರ ಸಂಖ್ಯೆಯಲ್ಲಿ ನಾಲ್ಕು ಸಾವಿರ ಆಹುತಿ ಸಮರ್ಪಣೆಯೊಂದಿಗೆ ಹವನ, ಪೂರ್ಣಾಹುತಿ ಸುಸಂಪನ್ನ.

ದಿನಾಂಕ 30 ಮಾರ್ಚ್ 2024ನೇ , ಶನಿವಾರ ಸುಸಂಪನ್ನಗೊಂಡ ಶ್ರೀ ದುರ್ಗಾಪರಮೇಶ್ವರಿ ದೇವರ ಮಹಾ ಮಂಗಳಾರತಿ  ಭಕ್ತ ವರ್ಗಕ್ಕೆ ತೀರ್ಥ ಪ್ರಸಾದ ವಿತರಣೆ ಸಹಸ್ರಾರು ಸಂಖ್ಯೆಯಲ್ಲಿ ಅನ್ನಸಂತರ್ಪಣೆ ಜರುಗಿತು.

ಅಗಲ್ಪಾಡಿ ಕ್ಷೇತ್ರ l ಸಹಸ್ರ ಚಂಡಿಕಾ ಯಾಗ l ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ FOX24LIVE

 


ಅಪೂರ್ವದಲ್ಲಿ ಅಪೂರ್ವ ಈ ಯಾಗ | ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ

 


ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ 3ನೇಯ ದಿನ ಋಕ್ ಸಂಹಿತಾ ಯಾಗ ಆಜ್ಯಾಹುತಿಯಿಂದ ಜರುಗಿತು.


ಹನ್ನೊಂದು ಜನ ಋತ್ವಿಜರು ರುದ್ರ ಪಠಣ ದೊಂದಿಗೆ ಹೊಮವನ್ನು  ಆಜ್ಯ ಸಮರ್ಪಿಸಿ ಮಾಡಿ,  ರುದ್ರ ಚಮೆ ಪಠಣದೊಂದಿಗೆ ಪೂರ್ಣಾಹುತಿ ನೆರವೇರಿತು. ಯಾಗ ಶಾಲೆಯಲ್ಲಿ ಸಹಸ್ರ ಚಂಡಿಕಾ ಯಾಗದ ಪ್ರಯುಕ್ತ ಗುರು ಗಣಪತಿ ಪೂಜೆ, ಮಹಾ ಸಂಕಲ್ಪ, ಆಚಾರ್ಯಾದಿ ಋತ್ವಿಕ್ ವರಣ, ಸಪ್ತಶತೀ ಪಾರಾಯಣ ಆರಂಭ,  ಮಂಟಪ ಸಂಸ್ಕಾರ, ಪ್ರಧಾನ ಕಲಶ ಸ್ಥಾಪನೆ ಜರುಗಿತು.

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಸಂಯುಕ್ತಾಶ್ರಯದಲ್ಲಿ  ಲೋಕ ಕಲ್ಯಾಣಾರ್ಥ ವಾಗಿ   ಸಹಸ್ರ ಚಂಡಿಕಾ ಯಾಗ ಆರಂಭ, ಋಕ್ ಸಂಹಿತಾ ಯಾಗ, ಸಾನ್ನಿಧ್ಯ ವೃದ್ಧಿಗಾಗಿ ಕಲಶಾಭಿಷೇಕ ನಡೆದು ಶ್ರೀ ದೇವರ ಮಹಾಪೂಜೆ ಭೂತ ಬಲಿ, ಉತ್ಸವ ಜರುಗಿತು. 

ದಿನಾಂಕ 29 ಮಾರ್ಚ್ 2024ನೇ , ಶುಕ್ರವಾರ ಸುಸಂಪನ್ನಗೊಂಡ ಚಂಡಿಕಾ ದೇವಿ ಪ್ರೀತ್ಯರ್ಥ ದಂಪತಿ ಪೂಜನ, ಹದಿನೆಂಟು ಸುವಾಸಿನಿ ಯರ ಪೂಜನದೊಂದಿಗೆ, ಇಪ್ಪತ್ತ ನಾಲ್ಕು ಜನ ಕುಮಾರಿಯರ ಆರಾಧನೆ ನೆರವೇರಿತು.  ಶ್ರೀ ದುರ್ಗಾಪರಮೇಶ್ವರಿ ದೇವರ ಮಹಾ ಮಂಗಳಾರತಿ  ಭಕ್ತ ವರ್ಗಕ್ಕೆ ತೀರ್ಥ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರುಗಿತು.