Tuesday 21 July 2015

ಒಮ್ಮೆ ಸತ್ತ ಮೇಲೆ ಮತ್ತೆ ಹುಟ್ಟುತ್ತೇವಾ?

'ಅಧ್ಯಾತ್ಮ ಚರ್ಚೆ’ ಅಂತೇನಾದರೂ ಅಂದರೆ ಅನೇಕರು ಆಗಿಂದಾಗ್ಯೆ ಕಿವಿ ಕಣ್ಣುಗಳನ್ನು ಮುಚ್ಚಿಕೊಂಡು ಜಾಗ ಖಾಲಿ ಮಾಡಿಬಿಡುತ್ತಾರೆ. ಆದರೆ ಚರ್ಚೆ ಮಾಡಲಿ, ಬಿಡಲಿ.. ಆತ್ಮದಿಂದಲೇ ಜಗತ್ತು ವ್ಯಾಪ್ತಗೊಂಡಿರುವುದನ್ನು ಮರೆತೇಬಿಡುತ್ತಾರೆ. ಒಂದೇ ಒಂದು ನಿಮಿಷ ಸುಮ್ಮನೆ ಕಣ್ಮುಚ್ಚಿ ಕುಳಿತುಕೊಂಡು ನಾನು ಹೇಳುವ ವಿಚಾರಗಳ ಕುರಿತಂತೆ ಆಲೋಚಿಸಿ. ನೀವು ಖಂಡಿತ ಅಚ್ಚರಿಗೊಳಗಾಗುವಿರಿ.
ನಮ್ಮ ಸುತ್ತಲೂ ನಡೆಯುವ ಅನೇಕ ಸಂಗತಿಗಳನ್ನು ವಿಜ್ಞಾನ ಆಕಸ್ಮಿಕವೆಂದು ಕರೆದು ಬದಿಗಿಟ್ಟುಬಿಟ್ಟಿದೆ. ಉದಾಹರಣೆಗೆ, ಭೂಮಿಯೇ ಮೊದಲಾದ ಗ್ರಹಗಳು ಸೂರ್ಯನ ಸುತ್ತ ಸುತ್ತುವುದಲ್ಲ ಹಾಗೆ ಎಲ್ಲ ಗ್ರಹಗಳನ್ನು ಅಧೀನದಲ್ಲಿ ಇಟ್ಟುಕೊಂಡು ತನ್ನ ಸುತ್ತ ಸುತ್ತಿಸಿಕೊಳ್ತಿರುವ ವಿಶ್ವ ಪ್ರಜ್ಞೆಯನ್ನು ಸೂರ್ಯನಿಗೆ ಅದಾರು ಕೊಟ್ಟರು? ‘ಆಕಸ್ಮಿಕ’. ಬೀಜವೊಂದು ಮೊಳಕೆಯೊಡೆದು ಸಸಿಯಾಗುವ ಹಂತವೆಲ್ಲ ನಮಗೆ ಗೊತ್ತು. ಆದರೆ ಆ ಬೀಜಕ್ಕೆ ಮೊಳಕೆಯೊಡೆಯಬೇಕೆಂಬ ಪ್ರಜ್ಞೆ ಎಲ್ಲಿಂದ ಬಂತು? ಆಕಸ್ಮಿಕ. ಒಂದೆರಡು ವರ್ಷದ ಮಗುವನ್ನು ನೀರಿಗೆ ತಳ್ಳಿದರೆ ಉಸಿರು ಬಿಗಿ ಹಿಡಿಯಬೇಕೆಂಬ ಸಹಜ ಸಿದ್ಧಾಂತ ಅದರೊಳಗೆ ಕೂಡಲೇ ಜಾಗೃತವಾಗುತ್ತದೆ. ಹೇಳಿಕೊಟ್ಟಿದ್ದು ಯಾರು? ‘ಆಕಸ್ಮಿಕ. ಹುಟ್ಟಿದಾಕ್ಷಣ ಮಗು ತಾಯಿಯ ಮೊಲೆಯನ್ನು ಚೀಪಿ ಹಾಲು ಕುಡಿಯುತ್ತದಲ್ಲ, ತರಬೇತಿ ಕೊಟ್ಟ ಗುರು ಯಾರು? ‘ಆಕಸ್ಮಿಕ’!
ನಾನಂತೂ ಇಂತಹ ನೂರಾರು ವಿಸಮ್ಯಗಳನ್ನು ದಾಖಲಿಸಬಲ್ಲೆ. ಇಷ್ಟೊಂದು ಸಂಗತಿಗಳು ಆಕಸ್ಮಿಕವಾದರೂ ಹೇಗೆ? ನಾನು ಉಲ್ಲೇಖಿಸಿರುವ ಘಟನೆಗಳಲ್ಲೆಲ್ಲಾ ಸೂಕ್ಷ್ಮವಾದ ವಸ್ತುವೊಂದು ತನ್ನಿಚ್ಛೆಗೆ ತಕ್ಕಂತೆ ಎಲ್ಲವನ್ನೂ ನಿಯಂತ್ರಿಸುತ್ತದೆ ಅಂತ ನಿಮಗೆ ಅನಿಸುತ್ತಿಲ್ಲವೆ?
ಹೋಗಲಿ. ಯಾರಾದರೂ ತೀರಿಕೊಂಡಾಗ ನಾವೇನೆನ್ನುತ್ತೇವೆ ಹೇಳಿ. ಜೀವ ಹೋಯ್ತು ಅಂತ ತಾನೆ? ಅದು ಆಡು ಭಾಷೆಯಾಯ್ತು. ವೈದ್ಯಕೀಯ ಭಾಷೆಯಲ್ಲಿ ಜೀವ ಹೋಗೋದು ಅಂದರೆ ಉಸಿರು ನಿಲ್ಲೋದು, ಹೃದಯ ಸ್ತಬ್ಧವಾಗೋದು ಮತ್ತು ಮೆದುಳು ನಿಷ್ಕ್ರಿಯವಾಗೋದು ಅಂತ! ಇವನ್ನೇ ಆಧಾರವಾಗಿಟ್ಟುಕೊಂಡು `ಮರವೊಂದು ಸತ್ತಿದೆ’ ಎನ್ನುವುದನ್ನು ಹೇಗೆ ಹೇಳಬಹುದು? ಯೋಚಿಸಿ ನೋಡೋಣ. ಅಲ್ಲಿ ಹೃದಯವಿಲ್ಲ, ಮೆದುಳಿಲ್ಲ. ನಾವೆಂದುಕೊಂಡಂತಹ ಉಸಿರಾಟವೂ ನಡೆದಿಲ್ಲ. ಮತ್ತೆ ಸತ್ತಾಗ ಆದದ್ದಾದರೂ ಏನು? 12
ಮನುಷ್ಯರ ವಿಚಾರದಲ್ಲಿಯೂ ಹಾಗೆಯೇ. ಆತ ಸತ್ತು ಆರು ಗಂಟೆಗಳ ವರೆಗೆ ಕಣ್ಣು ದಾನಕ್ಕೆ ಯೋಗ್ಯವಾಗಿರುತ್ತದೆ; ಜಠರ ಕೆಲಸ ಮಾಡುತ್ತಿರುತ್ತದೆ. ಅದರರ್ಥ ಜೀವ ಹೋಯಿತೆಂದು ನಾವು ಉದ್ದೇಶಿಸಿದ ನಂತರವೂ ದೇಹದ ಅನೇಕ ಅಂಗಗಳು ಜೀವಂತವಾಗಿರುತ್ತದೆ. ಹಾಗಿದ್ದರೆ ನಿಜವಾಗಿಯೂ ಹೋದದ್ದೇನು? ಅದನ್ನೇ `ಆತ್ಮ’ ಎಂದರು ನಮ್ಮವರು. ಕೆಲವರು ಪ್ರಾಣಶಕ್ತಿ ಅಂತ ಕರೆದಿದ್ದೂ ಅದನ್ನೇ! ಇದೇ ಆತ್ಮ ಶಕ್ತಿ ಎಲ್ಲರೊಳಗಿದ್ದುಕೊಂಡು ವಿಶ್ವದ ನಿಯತಿಗೆ ಕಾರಣವಾಗಿದೆಯಲ್ಲ, ಇದನ್ನು ಅರಿಯುವ ಪ್ರಯತ್ನವನ್ನೆ ಅಧ್ಯಾತ್ಮ ಎಂದು ಕರೆದದ್ದು. ಇದೇ ಆತ್ಮಶಕ್ತಿ ನಮ್ಮೊಳಗಿದ್ದುಕೊಂಡು ಹೃದಯ ಬಡಿಯಲು ಪ್ರೇರಣೆ ಕೊಟ್ಟರೆ, ಇದೇ ಆತ್ಮಶಕ್ತಿಸೂರ್ಯನ ಸುತ್ತ ಇಷ್ಟೇ ವೇಗದಲ್ಲಿ ಸುತ್ತಬೇಕೆಂದು ಭೂಮಿಗೆ ಹೇಳಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ತತ್ತ್ವಶಾಸ್ತ್ರ ತನ್ನ ತಾನರಿತರೆ ಜಗವನ್ನೇ ಅರಿತಂತೆ ಎಂದು ಹೇಳಿರುವುದು.
ಛಾಂದೋಗ್ಯ ಉಪನಿಷತ್ತಿನಲ್ಲಿ ಶ್ವೇತಕೇತು ಮತ್ತು ಅವನ ತಂದೆ ಉದ್ಧಾಲಕನ ನಡುವಿನ ಸಂವಾದದ ಸಾರವೇ ಇದು. ‘ಯಾವುದನ್ನು ಅರಿತ ಮೇಲೆ ಜಗತ್ತಿನಲ್ಲಿ ಮತ್ತೇನನ್ನೂ ತಿಳಿಯುವ ಅಗತ್ಯವಿಲ್ಲವೋ ಅದಾವುದು?’ ಎಂಬ ಪ್ರಶ್ನೆಗೆ ತಂದೆಯ ಉತ್ತರ `ತತ್ತ್ವಮಸಿ’ ಅಂತ. ಅದರರ್ಥ ‘ಅದು ನೀನೇ ಆಗಿರುವೆ’. ‘ನಿನ್ನ ನೀನು ಅರಿತರೆ ಜಗತ್ತಿನ ಎಲ್ಲವೂ ನಿನ್ನ ಪದತಲದಲ್ಲಿ’ ಎಂದಿದ್ದ ಉದ್ಧಾಲಕ. ಮತ್ತು ಇದನ್ನು ಅರಿಯಲು ಇರುವ ಏಕೈಕ ಮಾರ್ಗ ಕಣ್ಣು ಮುಚ್ಚುವುದು ಮಾತ್ರ. ವಿಜ್ಞಾನದ ಮಿತಿ ಇರೋದು ಇಲ್ಲೇ. ಅದು ತನ್ನಿಂದ ಹೊರಗಿರುವ ಎಲ್ಲವನ್ನೂ ಅಧ್ಯಯನ ಮಾಡಬಲ್ಲದು. ಚಂದ್ರನ ಮೇಲಿನ ಕಲ್ಲುಗಳು, ಭೂಮಿಯ ಕೆಳಪದರದಲ್ಲಿರುವ ಹಳೆಯ ಕಟ್ಟಡಗಳು, ಪಶು – ಪ್ರಾಣಿ – ಕ್ರಿಮಿ ಕೀಟ ಎಲ್ಲವನ್ನೂ ವಿಜ್ಞಾನಿ ಅಧ್ಯಯನ ಮಾಡಬಲ್ಲ. ಅವನಿಗೆ ತನ್ನ ಹೃದಯದ ಬಗ್ಗೆ ತಿಳಿಯಬೇಕೆಂದರೂ ಸತ್ತ ವ್ಯಕ್ತಿಯ ದೇಹವನ್ನು ಕತ್ತರಿಸಿಯೇ ನೋಡಬೇಕು.
ಒಟ್ಟಿನಲ್ಲಿ, ತನ್ನಿಂದ ಹೊರಗಿರುವ ಎಲ್ಲವನ್ನೂ ಪ್ರಯೋಗಕ್ಕೆ ಒಳಪಡಿಸುವುದನ್ನು ಭೌತಿಕ ವಿಜ್ಞಾನ ಎನ್ನಬಹುದಾದರೆ, ತನ್ನ ತಾನು ಅರಿತುಕೊಳ್ಳುವುದನ್ನು ಆಧ್ಯಾತ್ಮಿಕ ಅಥವಾ ಆತ್ಮವಿಜ್ಞಾನ ಎನ್ನಬಹುದು ಅಷ್ಟೆ. ಇವೆರಡರಲ್ಲಿ ಯಾವುದಾದರೂ ಒಂದನ್ನು ಆಯ್ದುಕೊಂಡು ಸಂಪೂರ್ಣ ತೊಡಗಿಸಿಕೊಂಡು ಮುಳುಗಿಬಿಟ್ಟರೆ ಮತ್ತೊಂದು ಹಿಂಬಾಲಿಸಿಯೇ ಹಿಂಬಾಲಿಸುತ್ತದೆ, ಅನುಮಾನವಿಲ್ಲ. ನಮ್ಮ ಋಷಿಗಳು ಆತ್ಮವಿಜ್ಞಾನದಲ್ಲಿ ಆಳಕ್ಕಿಳಿದರು, ಭೌತಿಕ ವಿಜ್ಞಾನ ಅವರನ್ನು ಬಾಯ ಮೇಲೆ ಬೆರಳಿಟ್ಟುಕೊಂಡು ಅನುಸರಿಸಿತು. ಹೀಗಾಗಿಯೇ ಇಂದಿನ ವಿಜ್ಞಾನಿಯೂ ಗಾಬರಿಗೊಳಗಾಗುವಂತಹ ಖಗೋಳ, ಭೂಗೋಳ, ಗಣಿತ, ರಸಾಯನ ಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆ ಸಾಧ್ಯವಾಗಿದ್ದು. ಅದೇ ಸಮಯಕ್ಕೆ ಐನ್‍ಸ್ಟೀನ್, ಹೀಸನ್‍ಬರ್ಗ್‍ರಂತಹ ವಿಜ್ಞಾನಿಗಳು ಭೌತವಿಜ್ಞಾನದಲ್ಲಿ ಸಾಧನೆ ಮಾಡ ಮಾಡುತ್ತಲೇ ಆತ್ಮತತ್ತ್ವದ ಅರಿವು ಬೆಳೆಸಿಕೊಂಡುಬಿಟ್ಟರು. ಸ್ಟೀಫನ್ ಹಾಕಿಂಗ್ ಮಾತನ್ನು ಕೇಳುವಾಗ ಆತ ಆತ್ಮವೆಂಬ ಪದವೊಂದನ್ನು ಬಳಸುವುದಿಲ್ಲ ಬಿಟ್ಟರೆ, ಉಳಿದವೆಲ್ಲ ಋಷಿವಾಕ್ಯಗಳ ಪುನರ್‍ಸ್ಮರಣೆಯೇ!
ಆತ್ಮ ಜೀವದೊಂದಿಗೆ ಬೆಸೆದುಕೊಂಡಿರುವವರೆಗೂ ಈ ದೇಹ ಜೀವಂತ. ಆತ್ಮ ದೇಹವನ್ನು ಬಿಡಲು ನಿಶ್ಚಯಿಸಿದರೆ, ಜೀವದೊಂದಿಗಿನ ತನ್ನ ಸಂಬಂಧವನ್ನು ಕಳೆದುಕೊಳ್ಳಲು ನಿಶ್ಚಯಿಸಿದರೆ, ಜೀವದೊಂದಿಗಿನ ತನ್ನ ಸಂಬಂಧವನ್ನು ಕಳೆದುಕೊಳ್ಳಲು ನಿಶ್ಚಯಿಸಿದರೆ ದೇಹದ ಕತೆ ಮುಗಿದಂತೆಯೇ. ಅದಕ್ಕೇ ಅವತ್ತು ಸಿದ್ಧಾರ್ಥನು ವೃದ್ಧಾಪ್ಯಕ್ಕೆ ಒಳಗಾದವರನ್ನೂ, ಅನಾರೋಗ್ಯಕ್ಕೆ ಒಳಗಾದವರನ್ನೂ, ಮೃತರನ್ನೂ ಕಂಡು ಶಾಶ್ವತ ವಸ್ತುವನ್ನು ಅರಸಿ ಹೊರಟಿದ್ದು. ಆತ್ಮಬೋಧೆಯಾದ ಮೇಲೆ ಬುದ್ಧನಾಗಿ ಮರಳಿದ್ದು. ದೇಹ ಸಾಯುವುದಕ್ಕೆ ಅಣಿಯಾಯಿತೆಂದರೆ ಆಗುವ ಪ್ರಕ್ರಿಎಯ ಗಮನಿಸಿ. ಅದುವರೆಗೂ ರುಚಿಸುತ್ತಿದ್ದುದು ಈಗ ಇಷ್ಟವಾಗುವುದಿಲ್ಲ. ಅದುವರೆಗೂ ಯಾವ ವಿಚಾರಗಳು ಪ್ರಚೋದಿಸುತ್ತಿದ್ದವೋ ಈಗ ಅವು ನಮ್ಮ ಗಮನಕ್ಕೂ ಬರುವುದಿಲ್ಲ. ಕೊನೆಗೆ ಔಷಧಗಳೂ ದೇಹದ ನರಗಳನ್ನು ಉದ್ದೀಪಿಸುವಲ್ಲಿ ಸೋಲುತ್ತವೆ. ಅಲ್ಲಿಗೆ ಆತ್ಮವೆಂಬುದು ಹೊರಡುವ ಸಿದ್ಧತೆ ಮಾಡಿಕೊಂಡಿದೆ ಎಂಬುದು ಖಾತ್ರಿ. ಈ ಆಥ್ಮ ಸುಮ್ಮನೆ ಹೋಗಿಬಿಡುವುದಿಲ್ಲ. ಈ ದೇಹವನ್ನು ಬಿಟ್ಟು ಮತ್ತೊಂದು ಹೊಸ ದೇಹದ ಅನ್ವೇಷಣೆ ಶುರು ಮಾಡುತ್ತದೆ ಅಷ್ಟೇ.
ಐತರೇಯ ಉಪನಿಷತ್ತು ಇದನ್ನು ಬಹಳ ಸುಂದರವಾಗಿ ವರ್ಣಿಸುತ್ತದೆ. ಆತ್ಮಧಾರಣೆ ಮಾಡಿದ ಪುರುಷನ ರೇತಸ್ಸು ಅಂಡಾಣುವನ್ನು ಹೊಕ್ಕುವುದು ಮೊದಲನೆ ಜನ್ಮವಂತೆ. ಈ ಆತ್ಮರೂಪವನ್ನು ತನ್ನ ಗರ್ಭದೊಳಗೆ ಪಾಳಿಸಿದ ಸ್ತ್ರೀ ಒಂಭತ್ತು ತಿಂಗಳ ನಂತರ ಭುವಿಗೆ ತರುವಳಲ್ಲ, ಅದು ಎರಡನೇ ಜನ್ಮ. ಇನ್ನು ಜರಾಜೀರ್ಣವಾಗಿ ದೇಹ ಬಿಟ್ಟೊಡನೆ ಆತ್ಮ ಪಡೆಯುವ ಹೊಸ ದೇಹ ಮೂರನೆ ಜನ್ಮವಂತೆ! ಈ ಮೂರನೆಯ ಜನ್ಮವನ್ನು ನಾವು ಪುನರ್ಜನ್ಮ ಅಂತ ಕರೆಯುತ್ತೇವೆ. ಹೊಸ ದೇಹಕ್ಕೆ ಹೋಲಿಸಿಕೊಂಡಾಗ ಈ ಹಳೆಯ ಜನ್ಮಗಳು ಪೂರ್ವಜನ್ಮ ಎನ್ನಿಸಿಕೊಳ್ಳುತ್ತವೆ.
ಪಶ್ಚಿಮದ ಮತಗಳಿಗೂ ಹಿಂದೂ ಧರ್ಮಕ್ಕೂ ವ್ಯತ್ಯಾಸ ಇಲ್ಲಿಯೇ. ಅವರ ಪ್ರಕಾರ ಹುಟ್ಟುವುದೂ ಒಮ್ಮೆ, ಸಾಯುವುದೂ ಒಮ್ಮೆಯೇ. ಸತ್ತಮೇಲೆ ಭಗವಂತ ಎಲ್ಲರನ್ನೂ ಅದೊಂದು ದಿನ ಎಬ್ಬಿಸಿ ಅವರವರ ಬದುಕಿಗೆ ತಕ್ಕಂತೆ ಸ್ವರ್ಗ ನರಕಗಳನ್ನು ದಯಪಾಲಿಸುತ್ತಾನೆ. ಪ್ರವಾದಿ ಮೆಚ್ಚುವಂತಹ ಕೆಲಸ ಮಾಡಿದವರು ಸ್ವರ್ಗಕ್ಕೆ, ಉಳಿದವರು ನರಕಕ್ಕೆ. ಮತ್ತು ಈ ಸ್ವರ್ಗ – ನರಕಗಳು ಶಾಶ್ವತವಾದವುಗಳು. ಅಲ್ಲಿ ತಿದ್ದಿಕೊಳ್ಳಲು ಅವಕಾಶವೇ ಇಲ್ಲ. ಆದರೆ ಸನಾತನ ಧರ್ಮ ಹಾಗಲ್ಲ. ಆತ್ಮ ಹಿಂದಿನ ಜನ್ಮದ ಕರ್ಮಗಳಿಗೆ ತಕ್ಕಂತೆ ಹೊಸದಾದ ದೇಹ ಪಡೆಯುತ್ತದೆ. ಅನುಭವಿಸಬೇಕಾದ್ದನ್ನು ಅನುಭವಿಸುತ್ತದೆ. ಮುಂದಿನ ಜನ್ಮಕ್ಕೆ ಅಣಿಯಾಗುತ್ತದೆ. ನಮ್ಮದು ಚಕ್ರೀಯ ಗತಿ. ಹುಟ್ಟು, ಸಆವು ಮತ್ತು ಮರು ಹುಟ್ಟು ಒಂದನ್ನೊಂದು ಹಿಂಬಾಲಿಸುತ್ತಲೇ ಇರುತ್ತವೆ. ಒಮ್ಮೆ ಆತ್ಮತತ್ತ್ವ ಎಲ್ಲದರೊಳಗೂ ಪ್ರೇರಕ ಶಕ್ತಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಪ್ರಜ್ಞಾಪೂರ್ವಕವಾಗಿ ಅರಿತರೆ, ಈ ಚಕ್ರದಿಂದ ಮುಕ್ತಿ ಎಂಬುದು ನಮ್ಮ ಚಿಂತನೆ.
ಬಿಡಿ. ಅದನ್ನು ಮತ್ತೊಮ್ಮೆ ಯಾವಾಗಲಾದರೂ ದೀರ್ಘವಾಗಿ ಚರ್ಚಿಸೋಣ. ಪುನರ್ಜನ್ಮವನ್ನು ಒಪ್ಪಿಕೊಂಡ ಮೇಲೆ ಆತ್ಮ ಮರುಹುಟ್ಟಿಗೆ ದೇಹವನ್ನು ಆಯ್ದುಕೊಳ್ಳುವ ಪರಿಯನ್ನೂ ಆಲೋಚಿಸಲೇಬೇಕಲ್ಲವೆ? ಇದೊಂದು ಬಗೆಯ ಸ್ವಯಂವರದಂತೆ ನಡೆಯುವ ಪ್ರಕ್ರಿಯೆ. ಹಳೆಯ ಜನ್ಮದ ಕರ್ಮಗಳನ್ನು ಅನುಸರಿಸಿ ಸೂಕ್ತ ತಂದೆ ತಾಯಿಯರನ್ನು ಆಯ್ದುಕೊಳ್ಳುವ ಅಪರೂಪದ ವಿಧಾನ. ಹೀಗಾಗಿ ಎಲ್ಲಿ – ಯಾವಾಗ – ಯಾರಿಗೆ ಹುಟ್ಟಬೇಕೆಂಬುದಕ್ಕೆ ಸ್ಪಷ್ಟ ನಿಯಮಗಳೇ ಇವೆ. ಇವುಗಳನ್ನೇ ನಮ್ಮ ಹಿರಿಯರು ಕರ್ಮಸಿದ್ಧಾಂತ ಎಂದಿದ್ದು. ನೀವು ಒಪ್ಪಿ – ಬಿಡಿ. ಏನಾದರೂ ಅವಘಡ ಸಂಭವಿಸಿದೊಡನೆ ಅಯಾಚಿತವಾಗಿ ‘ಎಲ್ಲಾ ನನ್ನ ಕರ್ಮ’ ಎಂದುಬಿಡುತ್ತೇವಲ್ಲ; ಅದು ಇದೇ ಸಿದ್ಧಾಂತದ ಪ್ರತಿಫಲ.
ಮೂರು ಬಗೆಯ ಕರ್ಮಗಳಿವೆ. ಸಂಚಿತ ಕರ್ಮ, ಪ್ರಾರಬ್ಧ ಕರ್ಮ ಮತ್ತು ಆಗಾಮಿ ಕರ್ಮ ಅಂತ. ಹಿಂದಿನ ಜನ್ಮದಲ್ಲಿ ಮಾಡಿದ ಒಳಿತುಕೆಡುಕುಗಳ ಕಂತೆ ಸಂಚಿತವಾಗಿ ಮುಂದಿನ ಜನ್ಮಕ್ಕೆ ವರ್ಗಾವಣೆಯಾಗುತ್ತದೆ; ಥೇಟು ಬ್ಯಾಂಕ್ ಬ್ಯಾಲೆನ್ಸಿನಂತೆ. ಇನ್ನು ಪ್ರಾರಬ್ಧ ಕರ್ಮ ಈ ಜನ್ಮದಲ್ಲಿ ನಾವು ಮಾಡಿದ ಸತ್ಕರ್ಮ – ದುಷ್ಕರ್ಮಗಳ ಲೆಕ್ಕಾಚಾರ. ಇದು ಹಳೆಯದನ್ನು ಕೆಲವೊಮ್ಮೆ ಮೀರಿ ನಿಂತು ಫಲ ಕೊಡಬಹುದು. ಈ ಪ್ರಾರಬ್ಧದಲ್ಲಿ ಕೆಲವು ಕರ್ಮಗಳು ಮುಂದಿನ ಜನ್ಮಕ್ಕೆ ಮೀಸಲಾಗಿಡಬಹುದು. ಆಗ ಅದು ಆಗಾಮಿಯಾಗುತ್ತದೆ, ಅಷ್ಟೇ.
ಹಳೆಯ ಜನ್ಮದಲ್ಲಿ ಸಂಗೀತಗಾರನಾಬೇಕೆಂದು ಪ್ರಯತ್ನಪಟ್ಟು, ಸಾಧನೆ ಮಾಡಿ ಕೀರ್ತಿ ಪಡೆಯುವ ಮುನ್ನ ದೇಹ ಬಿಟ್ಟ ಆತ್ಮವು ಈ ಜನ್ಮದಲ್ಲಿ ಸಂಗೀತದ ವಾತಾವರಣವಿರುವ ಮನೆಯಲ್ಲಿ ಹುಟ್ಟುತ್ತದೆ. ಬಾಲ್ಯದಲ್ಲಿಯೇ ಶ್ರೇಷ್ಠ ಸಂಗೀತಗಾರನೆಂಬ ಕೀರ್ತಿಯನ್ನು ಪಡೆದುಬಿಡುತ್ತದೆ. ಇದು ಎಲ್ಲ ಕ್ಷೇತ್ರಗಳಿಗೂ ಅನ್ವಯವಾಗುತ್ತದೆ. ಗೀತೆಯಲ್ಲಿ ಶ್ರೀಕೃಷ್ಣನು ಇದನ್ನು ಅನುಮೋದಿಸುತ್ತಾನೆ ಕೂಡ. ಯೋಗಭ್ರಷ್ಟನಾದ ಸಾಧಕನಿಗೆ ಮರುಜನ್ಮದಲ್ಲಿ ಸೂಕ್ತ ಪರಿಸರ ಒದಗಿಸಿಕೊಡುವ ಭರವಸೆಯನ್ನು ಕೊಡುತ್ತಾನೆ. ಅದಕ್ಕೇ ಸನಾತನ ಧರ್ಮ ತನ್ನ ಪ್ರತಿಯೊಂದು ಸಾಹಿತ್ಯದಲ್ಲೂ ನೈತಿಕ ಚೌಕಟ್ಟಿನ ನಿಯಮಗಳನ್ನು ರಾಶಿರಾಶಿಯಾಗಿ ಹೇರುತ್ತದೆ. ಇಲ್ಲಿ – ಈಗ ಮಾಡುವ ಸಣ್ಣ ತಪ್ಪೂ ಮುಂದಿನ ಜನ್ಮದಲ್ಲಾದರೂ ಫಲವುಣ್ಣುವಂತೆ ಮಾಡದೆ ಬಿಡುವುದಿಲ್ಲಎಂದೂ ಎಚ್ಚರಿಸುತ್ತದೆ.
ಹಾಗಿದ್ದ ಮೇಲೆ ನಮ್ಮ ಪೂರ್ವಜನ್ಮವನ್ನು ನಾವು ಇಣುಕಿ ನೋಡುವುದು ಸಾಧ್ಯವೆ? ಖಂಡಿತ ಸಾಧ್ಯ ಎನ್ನುತ್ತದೆ ಭಾರತೀಯ ಯೋಗಶಾಸ್ತ್ರ. ಸ್ವಾಮಿ ಅಭೇದಾನಂದರು ತಮ್ಮ ಪುನರ್ಜನ್ಮವೆಂಬ ಕೃತಿಯಲ್ಲಿ ಸುಂದರವಾದ ಉಲ್ಲೇಖವೊಂದನ್ನು ಕೊಡುತ್ತಾರೆ. ಕತ್ತಲ ಕೋಣೆಯಲ್ಲಿ ಸಿನೆಮಾ ಪರದೆಯ ಮೇಲೆ ಪ್ರೊಜೆಕ್ಟರ್ ಮೂಲಕ ಚಿತ್ರವೊಂದು ಮೂಡಿಬರುತ್ತಿದೆಯೆಂದು ಭಾವಿಸಿ. ಈಗ ಕೋಣೆಯ ಎಲ್ಲ ಬಾಗಿಲುಗಳನ್ನು ತೆರೆದುಬಿಡಿ. ಒಂದು ಕ್ಷಣ ಪರದೆಯ ಮೇಲೆ ಚಿತ್ರ ಮೂಡುವುದು ನಿಂತಿದೆ ಎನ್ನಿಸುತ್ತದೆ. ಆದರೆ ಹಾಗಾಗಿಲ್ಲ. ಕೋಣೆಯಲ್ಲಿ ಬೆಳಕು ಹೆಚ್ಚಾಗಿದೆ ಅಷ್ಟೇ. ಹಾಗೆಯೇ ಹೊಸ ಬದುಕಿನಲ್ಲಿ ಬಲವಾಗಿ ಮೈಮರೆತ ನಮಗೆ ಹಳೆಯ ಜನ್ಮ ಮರೆತುಹೋಗಿದೆ. ಇಂದ್ರಿಯಗಳನ್ನು ಹೊಸ ಬದುಕಿನಿಂದ ಒಳಗೆಳೆದುಕೊಂಡು ಮನಸ್ಸಿನ ಲೋಕವನ್ನು ಪದರಪದರವಾಗಿ ತೆರೆಯಲು ಶುರು ಮಾಡಿದರೆ ಹಳೆಯದೆಲ್ಲ ಉಮ್ಮಳಿಸಿ ಬರಲಾರಂಭಿಸುತ್ತದೆ.
ನಮ್ಮ ಋಷಿ ಮುನಿಗಳು ಇವುಗಳೆಲ್ಲದರ ಅಧ್ಯಯನಕ್ಕೆಂದೇ ವಿಸ್ತಾರವಾದ ವಿಜ್ಞಾನವನ್ನು ಅಭಿವೃದ್ಧಿಪಡಿಸಿದರು. ವೇದಗಳಲ್ಲಿ ಹೇಳಿರುವ ಆತ್ಮ ತತ್ತ್ವವನ್ನು ಉಪನಿಷತ್ತು ಸುದೀರ್ಘವಾಗಿ ಚರ್ಚಿಸಿತು. ಪುರಾಣಗಳು ಸಾಮಾನ್ಯ ಜನರಿಗೆ ಇವುಗಳನ್ನು ಕಥಾ ರೂಪದಲ್ಲಿ ತಲುಪಿಸಿದವು. ಈ ಸತ್ಯಗಳನ್ನು ಸಾಕ್ಷಾತ್ಕರಿಸಿಕೊಳ್ಳುವ ಜಿಜ್ಞಾಸೆ ಇದ್ದವರಿಗಾಗಿ ಅನೇಕ ಹೊಸಹೊಸ ಮಾರ್ಗಗಳು ಅನ್ವೇಷಣೆಗೊಂಡವು. ಯೋಗ ಅಂತಹುದೇ ಒಂದು ರಾಜಪಥ.
ಯೋಗವೆಂದಾಗ ದೇಹ ಕರಗಿಸುವ, ಆರೋಗ್ಯ ಹೆಚ್ಚಿಸುವ ನಾಲ್ಕೈದು ಆಸನಗಳಷ್ಟೇ ಎಂದು ಭಾವಿಸಬೇಡಿ. ಯೋಗ ಆತ್ಮತತ್ತ್ವವನ್ನು ಅರಿಯುತ್ತ ವಿಶ್ವಪ್ರಜ್ಞೆಯೊಂದಿಗೆ ನಮ್ಮ ಪ್ರಜ್ಞೆಯನ್ನು ಆತ್ಮಸಾತ್ ಮಾಡಿಕೊಳ್ಳುವ ಪ್ರಯತ್ನ. ಜೂನ್ 21ಕ್ಕೆ ಜಗತ್ತು ಯೋಗ ಮಾಡಿದೆ ಎಂದರೆ ಋಷಿಗಳ ಆ ಎಲ್ಲ ಪ್ರಯೋಗಗಳನ್ನು ಅನುಸರಿಸಲು ವಿಶ್ವಸಿದ್ಧವಾಯಿತೆಂದೇ ಅರ್ಥ. ವಿಶ್ವಕುಟುಂಬವಾಗುವುದು ಹೀಗೆಯೇ.

Wednesday 15 July 2015

ಧೀಶಕ್ತಿ ಪ್ರಚೋದಕನಿಗೆ ಕೋಟಿ ನಮಸ್ಕಾರ…

ಬೆಳಗ್ಗೆ ಎಷ್ಟು ಗಂಟೆಗೆ ಏಳಬೇಕು?” ಹಾಗಂತರಾಮಕೃಷ್ಣಆಶ್ರಮದ ಸ್ವಾಮಿ ಪುರುಷೋತ್ತಮಾನಂದರನ್ನು ಭಕ್ತರೊಬ್ಬರು ಕೇಳಿದರಂತೆ. ಸ್ವಾಮೀಜಿತಮ್ಮ ಎಂದಿನ ಧಾಟಿಯಲ್ಲಿ, “ಎಷ್ಟು ಗಂಟೆಗಾದರೂ ಎದ್ದೇಳಿ, ಎದ್ದ ಮೇಲೆ ಪೂರ್ಣವಾಗಿಎದ್ದಿರಿ”ಎಂದಿದ್ದರಂತೆ. ಅದೂ ಸತ್ಯವೇ. ಏಳುವುದು ಅಂದರೆ ಹಾಸಿಗೆ ಬಿಟ್ಟು ಏಳುವುದು ಅಂತಲ್ಲ. ದೇಹದ ಪ್ರತಿಯೊಂದುಜೀವಕೋಶವೂ ಚೈತನ್ಯಶೀಲಗೊಳ್ಳುವುದು ಎಂದರ್ಥ. ಮಲಗುವ ಕೋಣೆಯನ್ನುಕತ್ತಲ ಕೂಪವಾಗಿಸಿ, ಕೆಲಸದಕಚೇರಿಯನ್ನು ಸದಾ ಬೆಳಕಿನ ಗೋಳವಾಗಿಸಿ ಹಗಲು ರಾತ್ರಿಗಳ ಕಲ್ಪನೆಯನ್ನೇ ಕಳೆದುಕೊಂಡಿರುವ ನಮಗೆ ಋಷಿ ಮುನಿಗಳು ಉಲ್ಲೇಖ ಮಾಡಿರುವ ಅನೇಕ ಸಂಗತಿಗಳನ್ನು ಅರ್ಥೈಸಿಕೊಳ್ಳುವುದು ಬಿಡಿ, ಕಲ್ಪಿಸಿಕೊಳ್ಳುವುದೂ ಅಸಾಧ್ಯ.
sun3
ನಾವು ಬ್ರಾಹ್ಮೀ ಮುಹೂರ್ತವೊಂದರ ಬಗ್ಗೆ ಬಹುವಾಗಿ ಚರ್ಚಿಸುತ್ತೇವೆ. ಸೂರ್ಯೋದಯಕ್ಕೂ ಮುನ್ನಿನ ಸಮಯವದು. ಮನು ತನ್ನ ಸ್ಮøತಿಗ್ರಂಥದಲ್ಲಿ ಸ್ಪಷ್ಟಪಡಿಸುತ್ತಾನೆ, “ನಕ್ಷತ್ರಗಳು ಕಾಣುತ್ತಿರುವಾಗಲೇಎದ್ದು ಸೂರ್ಯ ನಮನಗೈಯುವುದು ಉತ್ತಮ. ನಕ್ಷತ್ರಗಳು ಅಸ್ತಮಿಸಿ ಸ್ವಲ್ಪವಷ್ಟೆ ಬೆಳಕು ಕಾಣುವಾಗಿನ ಉಪಾಸನೆ ಮಧ್ಯಮ. ಇನ್ನು ಸೂರ್ಯೋದಯವಾದ ಮೇಲೆ ಎದ್ದುಆತನಿಗೆಅಭಿವಂದಿಸುವುದುಅಧಮ”.
ಬ್ರಾಹ್ಮೀ ಮುಹೂರ್ತಅಂತರ್ಮುಖಿಯಾಗಿ ಬ್ರಹ್ಮನನ್ನುಅರಿಯಲುಅತ್ಯಂತ ಸೂಕ್ತ ಸಮಯ. ಇದನ್ನೇ ಉಷಃ ಕಾಲ ಅಂತಲೂಕರೆಯುತ್ತಾರೆ. ಉಷೆ ಸೂರ್ಯನ ಪತ್ನಿಯಂತೆ. ಸೂರ್ಯ ಬೆಳಗ್ಗೆ ಎದ್ದುಆಕೆಯನ್ನೇ ಹಿಂಬಾಲಿಸಿ ಬರುತ್ತಾನಂತೆ! ಹಾಗಂತ ಪುರಾಣಗಳು ಬಣ್ಣಿಸುತ್ತವೆ. ಇಷ್ಟಕ್ಕೂ ರಾತ್ರಿ ಕಳೆದು ಹಗಲಾಗುವಾಗ ಮತ್ತು ಹಗಲು ಮುಗಿದುರಾತ್ರಿಆರಂಭವಾಗುವಾಗಿನ ಈ ಸಂಧಿ ಕಾಲವನ್ನು ಹೇಗೆ ಸಂಬೋಧಿಸಬೇಕೆಂಬ ಕಲ್ಪನೆಯೂಜಗತ್ತಿನಲ್ಲಿಯಾರಿಗೂಇರಲಿಲ್ಲ. ಭಾರತ ಈ ಸಂಧ್ಯಾಕಾಲಗಳನ್ನು ಗುರುತಿಸಿ ಉಪಾಸನೆಗೆ ಅವನ್ನು ಸೂಕ್ತ ಸಮಯವೆಂದು ನಿರ್ಧಾರ ಮಾಡಿತು. ಈ ಹೊತ್ತಿನಲ್ಲಿಯೇ ಸಾವಿರಾರುಜನ ನದಿ ದಂಡೆಯಲ್ಲಿ ನಿಂತು ಸೂರ್ಯನಿಗೆಅಘ್ರ್ಯ ನೀಡುತ್ತಿದ್ದುದಲ್ಲದೇಗಾಯತ್ರೀ ಮಂತ್ರೋಪಾಸನೆಯನ್ನೂ ಮಾಡುತ್ತಿದ್ದರು. ಸೂರ್ಯನ ಬೆಳಕಿನಲ್ಲಿರುವ ಶಖ್ತಿಯಅರಿವುಅವರಿಗೆಖಂಡಿತವಾಗಿಯೂಇತ್ತು. ಬೆಳಗಿನ ಸೂರ್ಯ ಕಿರಣಗಳಿಗೆ ಮೈಯೊಡ್ಡಿದರೆಇಡಿಯ ದಿನಕ್ಕೆ ಬೇಕಾದ ಶಕ್ತಿ ಸಂಗ್ರಹವಾಗುವುದರಕುರಿತುಅವರು ತಿಳಿದೇ ಇದ್ದರು.
ಆಧುನಿಕ ವಿಜ್ಞಾನದ ಪ್ರಕಾರ ನಮ್ಮ ನಿದ್ದೆಮತ್ತುಎಚ್ಚರದಚಕ್ರಜಾಗೃತವಾಗಿರೋದೇ ಸೂರ್ಯನಿಂದ. ಸೂರ್ಯನ ಕಿರಣಗಳು ನಮ್ಮ ಮಿದುಳಿನ ಬೆಳಕನ್ನು ಗ್ರಹಿಸುವ ನರದ(ಆಪ್ಟಿಕ್ ನರ್ವ್)ಮೇಲೆ ಬಿದ್ದೊಡನೆ ಮಿದುಳು ನಿದ್ದೆತರುವ ಮೆಲಟೋನಿನ್ ಹಾರ್ಮೋನು ಸ್ರವಿಸುವುದನ್ನು ನಿಲ್ಲಿಸಿಬಿಡುತ್ತದೆ. ಅದರೊಟ್ಟಿಗೇ ಸೆರಿಟೋನಿನ್ ಎಂಬ ದ್ರವ ಹೆಚ್ಚು ಸ್ರವಿಸಲಾರಂಭಿಸಿ ಜಾಗೃತಾವಸ್ಥೆಯಲ್ಲಿ ನಮ್ಮನ್ನುಇಡುವುದಲ್ಲದೆ, ಸಂತೋಷವಾಗಿರುವಂತೆಯೂ ನೋಡಿಕೊಳ್ಳುತ್ತದೆ. ಅದಕ್ಕಾಗಿಯೇ ನಮ್ಮವರು ಮುಂಜಾವಿನ ಸೂರ್ಯನೆದುರು ಕುಳಿತಿರುತ್ತಿದ್ದುದು. ಸುಮ್ಮನೆ ಕುಳಿತಿರುವುದು ಬೇಡವೆಂದೇಧರ್ಮದಚೌಕಟ್ಟು ಜೋಡಿಸಿ ಸೂರ್ಯಶಕ್ತಿಯನ್ನು ಪ್ರಚೋದಕ ಶಕ್ತಿಯಾಗಿಸುವಉಪಾಯ ತೋರಿಸಿಕೊಟ್ಟಿದ್ದು.
ನಾವು ಬಹಳ ದೂರ ಬಂದಿದ್ದೇವೆ. ರಾತ್ರಿಯಕಣ್ಣುಕೋರೈಸುವ ಬೆಳಕು ನಮ್ಮ ಬೆಳಕನ್ನು ಗ್ರಹಿಸುವ ನರಗಳಲ್ಲಿ ಗೊಂದಲವೆಬ್ಬಿಸಿಬಿಡುತ್ತದೆ. ಅದಕ್ಕೆಯಾವುದು ಬೆಳಗು –ರಾತ್ರಿ ಎಂಬುದರ ಅರಿವಾಗದೇ ದೇಹದೊಳಗಿನ ಗಡಿಯಾರ ಏರುಪೇರಾಗಿಬಿಡುತ್ತದೆ. ಜೀವಕೋಶಗಳು ಬಲುಬೇಗ ಸ್ವಾಸ್ಥ್ಯ ಕಳೆದುಕೊಂಡುಬಿಡುತ್ತವೆ. ಹೀಗಾಗಿಯೇ ನಾವು ಸದಾರೋಗಿಷ್ಠರು. ಅದಕ್ಕೆಂದೇ ವೈದ್ಯರು ಬೆಳಗಾಗೆದ್ದು ಸೂರ್ಯನ ಕಿರಣಗಳಿಗೆ ಮೈಯೊಡ್ಡಿಅಂತ ಹೇಳಿದ್ದು. ದೇಹಜರ್ಝರಿತವಾದ ಮೇಲೆ ವೈದ್ಯರ ಮಾತು ಕೇಳಲು ಹಿಂದೆ ಮುಂದೆ ನೋಡದ ನಾವು, ಬಾಲ್ಯದಲ್ಲಿಯೇ ಋಷಿಗಳ ಮಾತು ಪಾಲಿಸಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ. ಅಲ್ಲವೇ?
ವಿಜ್ಞಾನದ ಅಮಲಿನಲ್ಲಿರುವಅಮೆರಿಕನ್ನರಿಗೂಇದರಅರಿವಾಗಿದೆ. ಸೂರ್ಯಕಾಣದ ಚಳಿಗಾಲದ ಹೊತ್ತಲ್ಲಿಅಮೆರಿಕದ ಶೇಕಡಾ 10ರಷ್ಟು ಜನಮಿದುಳಿನಲ್ಲಿ ಆಗುವ ರಾಸಾಯನಿಕಗಳ ಬದಲಾವಣೆಯಿಂದ ತೊಂದರೆಗೊಳಗಾಗುತ್ತಾರೆ. ಕೆಲಸ ಮಾಡಲಾಗದೆ ತೊಳಲಾಡುತ್ತಾರೆ. ಆಗೆಲ್ಲ ಸಊರ್ಯನಂತೆ ಭಾಸವಾಗುವದೊಡ್ಡದೊಡ್ಡ ಬಲ್ಬುಗಳನ್ನು ಅವರಎದುರಿಗಿಟ್ಟು ಸೆರಿಟೊನಿನ್ ಸ್ರವಿಸುವಂತೆ ಮಾಡಲಾಗುತ್ತದೆ. ಅನೇಕ ಬಾರಿ ಈ ಪ್ರಯೋಗಕೈಕೊಟ್ಟುಅನೇಕರು ಮಾನಸಿಕ ಖಿನ್ನತೆಗೆ ಒಳಗಾಗಿ ಹುಚ್ಚರೂಆಗಿಬಿಡುತ್ತಾರೆ!
ಸೂರ್ಯನನ್ನು ನಮ್ಮವರು ಗತಿಶೀಲ ಎಂದದ್ದು ಅದಕ್ಕೇ. ಆತತಾನಷ್ಟೆ ಚಲಿಸುವುದಿಲ್ಲ; ಎಲ್ಲರೊಳಗೂ ತಾನೇ ಹೊಕ್ಕು ಚಲಿಸುವಂತೆ ಮಾಡುತ್ತಾನೆ. ಬೆಳಗಾಗುವುದರೊಂದಿಗೆ ಉತ್ಸಾಹ ಮೂಡುವುದುಇದರಿಂದಲೇ. ಸಂಜೆಯಾಗುತ್ತದಣಿದದೇಹ ಮಲಗಿಕೊಳ್ಳಲು ಕಾತರಿಸುವುದುಇದಕ್ಕೇ. ದೇಹದಣಿಯಲು ಕೆಲಸ ಮಾಡಲೇಬೇಕೆಂದಿಲ್ಲ, ಸೂರ್ಯ ಅಸ್ತಮಿಸಿದರೆ ಸಾಕು! ಹೀಗಿದೆ ಸೂರ್ಯ ಮತ್ತು ನಮ್ಮದೇಹದ ಸಂಬಂಧ.
ಹೌದು.‘ಆರೋಗ್ಯ ಮತ್ತು ಸೂರ್ಯ’ ಈ ಕುರಿತಂತೆಯಾರಿಗೂ ಅನುಮಾನವೇಇಲ್ಲ. ಆದರೆ ಭಾರತೀಯರುಒಂದು ಹೆಜ್ಜೆ ಮುಂದೆಹೋಗಿ, ಅವನನ್ನು ಬುದ್ಧಿಶಕ್ತಿಯ ಪ್ರಚೋದಕ ಎಂತಲೂ ಭಾವಿಸಿ ಆರಾಧಿಸುತ್ತಾರೆ. ಒಟ್ಟಾರೆ ಗಾಯತ್ರಿ ಮಂತ್ರದ ಅರ್ಥವೇ ಧೀಶಕ್ತಿಯನ್ನು ಪ್ರಚೋದಿಸುವುದು ಅಂತ. ಭಗವದ್ಗೀತೆಯ ನಾಲ್ಕನೆ ಅಧ್ಯಾಯ ಶುರುವಾಗುವುದೇ ಕೃಷ್ಣನ ಅಚ್ಚರಿಯ ಮಾತುಗಳಿಂದ, “ನಾನು ಅವಿನಾಶಿಯಾದ ಈ ಯೋಗವನ್ನುಕಲ್ಪದಆದಿಯಲ್ಲಿ ಸೂರ್ಯನಿಗೆ ಹೇಳಿದೆ. ಸೂರ್ಯ ಮನುವಿಗೆ, ಮನು ಇಕ್ಷ್ವಾಕುವಿಗೆ ಹೇಳಿದ”–ಎಂದು ಮುಂದುವರೆಯುತ್ತದೆ. ತೈತ್ತಿರೀಯ ಬ್ರಾಹ್ಮಣವೂ“ಸೂರ್ಯ ಮುಂಜಾನೆಋಗ್ವೇದದೊಂದಿಗೆ ಉದಯಿಸಿದರೆ, ಯಜುರ್ವೇದದೊಂದಿಗೆ ಮಧ್ಯೆ ನಿಂತಿರುತ್ತಾನೆ. ಅಸ್ತಂಗತನಾಗುವ ವೇಳೆಗೆ ಸಾಮವೇದದಿಂದ ಪರಿಪುಷ್ಟವಾಗಿರುತ್ತಾನೆ”ಎಂದುಅಭಿಪ್ರಾಯಪಡುತ್ತದೆ.
ಶ್ರೇಷ್ಠ ಋಷಿ ಯಾಜ್ಞವಲ್ಕ್ಯರಂತೂ ಸೂರ್ಯನ ಶಿಷ್ಯರೇ! ಆಕತೆಯೇ ಸ್ವಾರಸ್ಯಕರ. ವೈಶಂಪಾಯನರ ಶಿಷ್ಯರಾಗಿದ್ದ ಯಾಜ್ಞ್ಯವಲ್ಕ್ಯರು ಸಣ್ಣ ವಿಚಾರವೊಂದಕ್ಕೆ ಗುರುಗಳೊಂದಿಗೆ ಜಿದ್ದಿಗೆ ಬಿದ್ದರು. ಕೋಪದಿಂದ ಗುರುಗಳು ತಾವುಕೊಟ್ಟ ವಿದ್ಯೆ ಮರಳಿ ಕೊಡಲು ಆಗ್ರಹಿಸಿದರು. ಯಾಜ್ಞವಲ್ಕ್ಯರೇನೂಕಡಿಮೆ ಸಾಧ್ಯತೆಯವರಲ್ಲ. ಅಲ್ಲಿಯೇ ಇದ್ದ ತಿತ್ತಿರಿಯೇ ಮೊದಲಾದ ಋಷಿಗಳೆದುರಿಗೆ ಇಷ್ಟೂ ದಿನ ಕಲಿತಿದ್ದನ್ನು ಹಾಗು ಹಾಗೆಯೇ ಒಪ್ಪಿಸಿಯೂಬಿಟ್ಟರು. ಹೀಗೆ ಪಡೆದುಕೊಂಡಿದ್ದನ್ನು ಆ ಋಷಿಗಳು ಮುಂದಿನ ಪೀಳಿಗೆಗೆ ಮುಟ್ಟಿಸಿದರು.ಅದು ಕೃಷ್ಣ ಯಜುರ್ವೇದವೆನಿಸಿತು. ಇತ್ತ ಯಾಜ್ಞವಲ್ಕ್ಯರು ಸೂರ್ಯನನ್ನೆ ಆರಾಧಿಸಿ ತಪಗೈದು ಒಲಿಸಿಕೊಂಡರು. ಅವರ ಜ್ಞಾನದ್ವಾರಗಳು ತೆರೆದುಕೊಂಡವು. ನಾರಾಯಣಪ್ರಣೀತವಾದಯಜುರ್ವೇದಅವರೆದುರಿಗೆಅನಾವರಣಗೊಂಡಿತು. ಅದು ಶುಕ್ಲಯಜುರ್ವೇದವಾಯ್ತು. ಹಾಗೆಂದು ವೇದಕಥೆಗಳು ಹೇಳುತ್ತವೆ.
ಸೂರ್ಯನಿಗೆ ನಮ್ಮ ಬುದ್ಧಿಯನ್ನು ಪ್ರಚೋದಿಸುವ ಶಕ್ತಿ ಇದೆಯೇ? ಈ ಪ್ರಶ್ನೆಕಾಡುವಂಥದ್ದೇ. ಇದನ್ನರಿಯಲು ಸ್ವಲ್ಪ ಮೆದುಳಿನ ಸಂರಚನೆ ತಿಳಿಯಬೇಕಾದ್ದು ಅನಿವಾರ್ಯ. ನಮ್ಮ ಮೆದುಳನ್ನು ಸ್ಥೂಲವಾಗಿ ಮೂರು ಭಾಗ ಮಾಡಬಹುದು. ಮುಂಭಾಗ, ಮಧ್ಯಭಾಗ ಮತ್ತು ಹಿಂಭಾಗ. ಮೆದುಳಿನ ಹಿಂಭಾಗ ಬೆನ್ನ ಹುರಿಗೆ ಹೊಂದಿಕೊಂಡಂತೆಇದೆ. ಇದುಎಲ್ಲಕಶೇರುಕ (ಬೆನ್ನ ಹುರಿಇರುವ ಪ್ರಾಣಿ)ಗಳಲ್ಲಿ ಇರುವಂಥದ್ದು. ನಾವು ತಲೆ ಹಾಕುವ ಅಗತ್ಯವೇಇಲ್ಲದ ಉಸಿರಾಟ, ಹೃದಯ ಬಡಿತದಂಥ ಕೆಲಸವನ್ನೆಲ್ಲಇದೇ ಮಾಡಿಸುತ್ತದೆ. ಇದಕ್ಕೆ ಸೇರಿಕೊಂಡ ಮೇಲ್ಭಾಗವೇ ಮೆದುಳಿನ ಮಧ್ಯಭಾಗ. ಇದು ಪ್ರತಿಕ್ರಿಯಾತ್ಮಕ ಕ್ರಿಯೆಗಳನ್ನು ನಡೆಸುತ್ತದೆ. ನೊಣ ಬಂದೊಡನೆಕಣ್ಮುಚ್ಚುತ್ತೇವಲ್ಲ, ಹಗ್ಗ ಕಂಡೊಡನೆ ಹಾವೆಂದು ಸರಕ್ಕನೆ ಹಿಂದೆ ಸರಿದುಬಿಡುತ್ತೇವಲ್ಲ, ಅಷ್ಟು ವೇಗದ ಪ್ರತಿಕ್ರಿಯೆ ಮೆದುಳಿನ ಮದ್ಯಭಾಗದಕೊಡುಗೆ. ಇನ್ನು, ಮಾನವ ಮೆದುಳಿನ ಅತ್ಯಂತ ಮುಂದುವರೆದ ಭಾಗವೇ ಮೆದುಳಿನ ಮುಂಭಾಗ. ಮೆದುಳು ಅಂತ ನಾವು ನೋಡೋದುಇದೇ ಭಾಗವನ್ನೆ. ಈ ಭಾಗ ಕ್ರಿಯಾಶೀಲವಾಗಿದ್ದಷ್ಟೂ ನಮ್ಮ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ. ಯೋಜನೆರೂಪಿಸುವ ಕ್ಷಮತೆ ಬಲಿಯುತ್ತದೆ. ಕಲ್ಪನೆಯ ಶಕ್ತಿ, ಆಲೋಚನಾ ಶಕ್ತಿ ಹೆಚ್ಚುವುದಕ್ಕೂ ಮೆದುಳಿನ ಈ ಭಾಗದಕೊಡುಗೆಯೇದೊಡ್ಡದು! ಮೆದುಳಿನ ಈ ಭಾಗಜೀವಂತಿಕೆಯಿಂದಕೂಡಿದ್ದಷ್ಟೂ ಮನುಷ್ಯ ಹೆಚ್ಚು ಕಲೆಗಾರನಾಗುತ್ತಾನೆ, ವಿಜ್ಞಾನಿಯಾಗುತ್ತಾನೆ, ಋಷಿಯೂಆಗುತ್ತಾನೆ! ಇದರ ಸಾಮರ್ಥ್ಯ ಕಡಿಮೆಯಾದಂತೆಲ್ಲ ಆತ ಪಶುವಿನಂತಾಗುತ್ತಾನೆ. ಕೋಪ – ದರ್ಪಗಳು ಹೆಚ್ಚಾಗುತ್ತವೆ. ಹಾಗಂತ ಹೇಳಿರೋದು, ಪುರಾಣಕಾರರಲ್ಲ, ಸ್ಮೃತಿಕಾರರೂ ಅಲ್ಲ, ಅಮೆರಿಕಾದ ನರರೋಗಅಧ್ಯಯನ ಸಂಸ್ಥೆಯ ವಿಜ್ಞಾನಿಗಳು!
ಇದರ ಪರಿಪೂರ್ಣಜ್ಞಾನದಿಂದಾಗಿಯೇ ನಮ್ಮವರು ಮೆದುಳಿನ ಭಾಗಕ್ಕೆ ಶಕ್ತಿ ತುಂಬಲೆಂದು ಸೂರ್ಯನಿಗೆ ನಮಸ್ಕರಿಸುವ ಪದ್ಧತಿ ಅಭಿವೃದ್ಧಿಪಡಿಸಿದರು. ಸೂರ್ಯ ಶಕ್ತಿಯ ಕ್ರೋಢೀಕರಣಕ್ಕೆ ಛಂದಸ್ಸುಗಳು ಹುಟ್ಟಿಕೊಂಡವು. ಮಂತ್ರಗಳ ರಚನೆಯಾಯ್ತು. ಸೂರ್ಯ ರಶ್ಮಿಗಳನ್ನು ವಿದ್ಯುತ್ ಆಗಿ ಪರಿವರ್ತಿಸಲು ಮಾಳಿಗೆಯ ಮೇಲೆ ಫೋಟೋವೋಲ್ಟಾಯಿಕ್ ಸೆಲ್‍ಗಳ ಪ್ಯಾನೆಲ್‍ಜೋಡಿಸುವುದಿಲ್ಲವೆ? ಮಂತ್ರಗಳೂ ಅದೇ ಕೆಲಸವನ್ನು ದೇಹದೊಳಗೆ ಮಾಡುತ್ತವೆ, ಬೌದ್ಧಿಕ ಶಕ್ತಿಯನ್ನು ಪ್ರಚೋದಿಸುತ್ತವೆ. ಮಂತ್ರಗಳು – ಛಂದಸ್ಸುಗಳು ನರಗಳ ಮೇಲೆ ಬೀರುವ ಪ್ರಭಾವಗಳ ಅಧ್ಯಯನಕ್ಕೆ ಸೂಕ್ತಯಂತ್ರಗಳನ್ನು ಕಂಡುಹಿಡಿದರೆ, ಈ ಸತ್ಯ ಅನಾವರಣಗೊಳ್ಳಬಹುದು. ಅದನ್ನು ಅರ್ಥೈಸಿಕೊಳ್ಲಬಲ್ಲಷ್ಟು ವಿಜ್ಞಾನವೇ ಬೆಳೆಸಿಲ್ಲದಿರುವಾಗ ಅರೆಬರೆಜ್ಞಾನದಿಂದ ಮಂತ್ರದೊಳಗೆ ಶಕ್ತಿಯಿಲ್ಲವೆನ್ನುವುದು ಸರಿಯಾ?
ಗಾಯತ್ರಿ ಮಂತ್ರವನ್ನುಕಂಡವರು ವಿಶ್ವಾಮಿತ್ರರಂತೆ. ತಪಸ್ಸಿಗೆ ಕುಳಿತು ಮೇನಕೆಯಿಂದಾಗಿ ವ್ರತಭಂಗವಾಗಿ ಮತ್ತೆ ಹಠದಿಂದ ಬ್ರಹ್ಮಬಲ ಸಆಕ್ಷಾತ್ಕರಿಸಿಕೊಂಡ ವಿಶ್ವಾಮಿತ್ರರು ವಸಿಷ್ಠರ ಪಾದಗಳಿಗೆ ಎರಗಿದಾಗ ಹೊರಬಂದ ಶ್ರೇಷ್ಠ ಮಂತ್ರವಂತೆಇದು. ಸಂಧ್ಯಾ ಕಾಲದಲ್ಲಿ ಇದನ್ನು ಉಚ್ಚರಿಸುವಾಗ ಮೆದುಳಿನ ಮುಂಭಾಗದ ಮೇಲೆ ವಿಶೇಷ ಪರಿಣಾಮ ಉಂಟು ಮಾಡುತ್ತದೆಎಂಬುದನ್ನು ನಮ್ಮವರುಒಪ್ಪಿದ್ದರು, ಸಿದ್ಧಪಡಿಸಿಕೊಂಡಿದ್ದರು. ಆಧುನಿಕ ವಿಜ್ಞಾನ ಇದನ್ನೇ ಬೇರೆ ಬೇರೆ ಮಾರ್ಗಗಳಿಂದ ಸಾಧಿಸಿಕೊಳ್ಳಲು ಯತ್ನಿಸುತ್ತಿದೆ. 1910ರಲ್ಲಿ ಲಂಡನ್ನಿನ ಕೆಲವು ವಿಜ್ಞಾನಿಗಳು ತಲೆಯ ಹೊರಭಾಗಕ್ಕೆಕೊಟ್ಟ ವಿದ್ಯುತ್ ಶಾಕ್‍ನಿಂದ ನರಗಳು ಪ್ರಭಾವಕ್ಕೆ ಒಳಗಾಗುವುದನ್ನು ಗುರುತಿಸಿದರು. 1985ರಲ್ಲಿ ಇನ್ನಷ್ಟು ವಿಜ್ಞಾನಿಗಳು ಪ್ರಯೋಗ ಮಾಡಿ ನೇರ ವಿದ್ಯುತ್ ಬಳಕೆಯ ಬದಲುಕಾಂತೀಯ ವಿದ್ಯುತ್(ಎಲೆಕ್ಟ್ರೋ ಮ್ಯಾಗ್ನೆಟ್) ಅನ್ನು ಬಳಸಿ ಬೇಕಾದ ನರಗಳನ್ನು ಚುರುಕುಗೊಳಿಸುವ ಪದ್ಧತಿ ಹುಡುಕಿದರು. ಇದನ್ನೇಇಂದು ವೈದ್ಯಕೀಯ ವಿಭಾಗದಲ್ಲಿಟ್ರಾನ್ಸ್‍ಕ್ರೇನಿಯಲ್ ಮ್ಯಾಗ್ನೆಟಿಕ್ ಸ್ಟಿಮ್ಯುಲೇಷನ್ ಅನ್ನೋದು. ಮಾನಸಿಕ ಖಿನ್ನತೆ, ಸ್ಕಿಜೋಫ್ರೇನಿಯಾದಂತಹ ರೋಗಗಳಿಗೆ ಸೂಕ್ತ ಪರಿಹಾರಇದೆಂದು ವೈದ್ಯರು ಹೇಳುತ್ತಾರೆ. ಪ್ರಯೋಗದಲ್ಲಿ ಸ್ವಲ್ಪಎಡವಟ್ಟಾದರೂವ್ಯಕ್ತಿ ಮೂರ್ಛೆ ಹೋಗುವ ಅಥವಾ ಮೆದುಳು ಸ್ವಾಧೀನ ಕಳೆದುಕೊಳ್ಳುವ ಸಥಿತಿಗೂತಲುಪಬಹುದೆಂದುಎಚ್ಚರಿಕೆಯನ್ನೂಕೊಡುತ್ತಾರೆ.
ಈಗ ಸಊರ್ಯನತ್ತ ಮರಳಿ ಬನ್ನಿ. ವಿದ್ಯುತ್ತನ್ನುಕೊಟ್ಟು ನರಗಳನ್ನು ಉದ್ದೀಪಿಸುವ ಪ್ರಯತ್ನಇಂದು ವಿಜ್ಞಾನಿಗಳು ಮಾಡುತ್ತಿದ್ದಾರೆ; ವಿದ್ಯುತ್ತಿನ ಮೂಲಸ್ರೋತವಾದ ಸೂರ್ಯನೆದುರಿಗೆ ನಿಂತು ನರಗಳನ್ನು ಪ್ರದೀಪ್ತಗೊಳಿಸುವ ಶ್ರೇಷ್ಠ ಪದ್ಧತಿಯನ್ನು ನಮ್ಮವರುಅಂದೇ ವಿಕಾಸಗೊಳಿಸಿದ್ದರು. ನಮ್ಮ ಉಪಾಸನೆ ಪರಿಸರಕ್ಕೆಅದೆಷ್ಟು ಪೂರಕವೆಂದರೆ, ಅಲ್ಲಿ ದುಷ್ಪರಿಣಾಮಗಳಾಗುವ ಹೆದರಿಕೆಯೇಇಲ್ಲ!
ಅಂದಹಾಗೆಗೀತೆಯಲ್ಲಿ ಶ್ರೀಕೃಷ್ಣತಾನು ವೈಶ್ವಾನರನಾಗಿಜಠರದಲ್ಲಿ ಕುಳಿತಿರುತ್ತೇನೆ ಅಂದಿರೋದನ್ನು ಕೇಳಿದ್ದೀರಲ್ಲಾ! ವೈದ್ಯಕೀಯಜಗತ್ತು ಹೊಟ್ಟೆಯನ್ನು ಸೆಕೆಂಡ್ ಬ್ರೈನ್ (ಎರಡನೇ ಮೆದುಳು) ಎನ್ನುತ್ತವೆ. ಮೆದುಳಿನಲ್ಲಿ ಉ0ಟಾಗುವ ಎಲ್ಲ ಬಗೆಯರಾಸಯನಿಕ ಪ್ರಕ್ರಿಯೆಗಳು ಹೊಟ್ಟೆಯಲ್ಲಾಗುತ್ತವೆ0ನ್ದರ್ಥ . ಅದ್ದಕ್ಕೆ ಹೊಟ್ಟೆ ಸರಿಯಾಗಿದ್ದರೆಆರೋಗ್ಯ ಎ0ದು ಹೇಳಿ ನಮ್ಮವರುಅದರರಕ್ಷಣೆಗೂ ಅಷ್ಟೆ ಗಮನ ಕೊಟ್ಟಿದ್ದರು.
ಹೌದು. ಭಾರತದ ವಿಶ್ವಗುರುತ್ವದ ಹಿಂದಿನ ಶಕ್ತಿಯೇಅದು. ನಾವು ಪ್ರಕೃತಿಯ ರಹಸ್ಯಗಳನ್ನು ಭೇದಿಸಿದರೆï,ಜಗತ್ತಿನಜನರೆಲ್ಲ ಸುತ್ತಣ ಪ್ರಕೃತಿ ನಮ್ಮ ಅಡಿಯಾಳೆಂಬಂತೆ ಶೋಷಿಸಿ ಪ್ರಭುತ್ವ ಸ್ಥಾಪಿಸಲು ಹೆಣಗಾಡುತ್ತಿದ್ದಾರೆ. ಭಾರತ ಪ್ರಕೃತಿಯನ್ನು ಪ್ರೀತಿಸಿ ಅದನ್ನು ಒಲಿಸಿಕೊಂಡೇ ಬದುಕು ನಡೆಸುವುದನ್ನು ಹೇಳಿಕೊಟ್ಟಿದೆ. ಹೀಗಾಗಿಯೇಇಲ್ಲಿದೇಹದಿಂದ ಹಿಡಿದು ವಿಶ್ವದವರೆಗೆಒಂದು ಸೂಕ್ಷ್ಮವಾದಅನುಬಂಧವಿದೆ. ದೇಹದ ಪ್ರತಿಯೊಂದುಜೀವಕೋಶವೂ ವಿಶ್ವದ ಮಹತ್ತಿನೊಂದಿಗೆ ಯಾರಿಗೂ ಕೇಳದ ಸೂಕ್ಷ್ಮ ಭಾಷೆಯಲ್ಲಿ ಸಂವಾದಿಸುತ್ತಇರುತ್ತದೆ. ಈ ಸೂಕ್ಷ್ಮ ಸಂವಾದದಿಂದಾಗಿಯೇ ಪ್ರಕೃತಿಯೂತನ್ನನ್ನುತಾನು ಅನಾವರಣಗೊಳಿಸಿಕೊಳ್ಳೋದು. ಅದಕ್ಕೇ ಇಲ್ಲಿಯಾವ ಋಷಿಯೂ ಮಂತ್ರವನ್ನು‘ಕಂಡುಹಿಡಿದ’ಅನ್ನುವುದಿಲ್ಲ. ಬದಲಿಗೆದರ್ಶನ ಮಾಡಿಕೊಂಡಎನ್ನಲಾಗುತ್ತದೆ. ಪ್ರಕೃತಿಯ ಸತ್ಯಅವನೆದುರಿಗೆಗೋಚರವಾದ ರೀತಿ ಅದು. ಇದರಿಂದಾಗಿಯೇ ಸಾವಿರಾರು ವರ್ಷಗಳ ಹಿಂದೆಅವರು ಹೇಳಿರುವುದನ್ನು ಇಂದು ಪ್ರಯೋಗಾಲಯಗಳಲ್ಲಿ ಸಿದ್ಧಪಡಿಸುವುದಷ್ಟೆ ನಮ್ಮ ಕೆಲಸ. ಅಷ್ಟೇ ಅಲ್ಲ, ಅವರು ಹಾಕಿಕೊಟ್ಟರಾಜಮಾರ್ಗದಿಂದದೂರ ಸರಿದಷ್ಟೂಅದೆಷ್ಟು ಕಷ್ಟಕೋಟಲೆಗಳನ್ನು ಅನುಭವಿಸುತ್ತಿದ್ದೇವೆಂಬ ಅರಿವೂ ನಮಗಾಗುತ್ತದೆ. ಪ್ರಪಂಚ ಮಾರ್ಗ ಸಾಕು, ಮುಕ್ತಿಯ ಯೋಗ ಮಾರ್ಗ ಬೇಕೆಂದುಜಗತ್ತಿಗೆ ಅನ್ನಿಸಿರೋದೂ ಅದ್ಕಕಾಗಿಯೇ.
ಮತ್ತೆ, ಈ ರೀತಿಯ ಬುದ್ಧಿ ಪ್ರಚೋದನೆಗೂ ಆ ಸೂರ್ಯದೇವನೇಕಾರಣ. ನಮಸ್ಕಾರ ಮಾಡೋರು ಮುಜುಗರವೆನ್ನಿಸಿದರೆ ಕೊನೆಪಕ್ಷ ಸಂಧ್ಯಾಕಾಲದಲ್ಲಿ ಸೂರ್ಯನೆದುರಿಗೆ ನಿಂತು ಬುದ್ಧಿ ಪ್ರಚೋದಕ ನರಗಳನ್ನು ಹುರಿಗೊಳಿಸಿ ಹೊಸೆದುಕೊಳ್ಳೋಣ. ಏನಂತೀರಿ?

Saturday 11 July 2015

ಸರ್ವಾಂತರ್ಯಾಮಿ, ಸರ್ವಪ್ರೇರಕ ಸೂರ್ಯ

ಕಾಲ ಗಣನೆಯ ಚರ್ಚೆ ಬಂದಾಗ ಜಗತ್ತಿನ ಯಾವ ವಿಜ್ಞಾನಿಯೂ ಭಾರತವನ್ನು ಕಡೆಗಣಿಸುವುದು ಸಾಧ್ಯವೇ ಇಲ್ಲ. ಈ ವಿಚಾರದಲ್ಲಿ ಜಗತ್ತಿನ ಆಧುನಿಕ ಮತಗಳೂ, ಮತ ಗ್ರಂಥಗಳೂ ಹಿಂದೂ ಚಿಂತನೆಗಳಿಗಿಂತ ಬಲು ಹಿಂದು! ಅನುಮಾನವೇ ಇಲ್ಲ. ‘ವಿಶ್ವದ ಕೇಂದ್ರ ಭೂಮಿ. ಸೂರ್ಯನೂ ಇದೇ ಭೂಮಿಯನ್ನು ಸುತ್ತುತ್ತಾನೆ’ ಹಾಗಂತ ಸೆಮೆಟಿಕ್ ಮತಗಳು ನಂಬಿದ್ದವು.  ದೇವರ ಮಕ್ಕಳು, ಪ್ರವಾದಿಗಳು ಇಲ್ಲಿ ಹುಟ್ಟುತ್ತಾರೆಂದರೆ ಇದೇ ಸರ್ವಶ್ರೇಷ್ಠವಾಗಿರಬೇಕೆಂಬ ಸಹಜ ಸಿದ್ಧಾಂತ ಅದು. ಜೊತೆಗೆ ಬೆಳಗಾಗಿ ಎದ್ದಾಗ ಪೂರ್ವಕ್ಕೆ ಕಾಣುವ ಸೂರ್ಯ ಸಂಜೆಯಾಗುವಾಗ ಪಶ್ಚಿಮದಲ್ಲಿ ಅಸ್ತಂಗತನಾಗುತ್ತಾನೆ. ಸಾಮಾನ್ಯನಾದ ಪ್ರತಿಯೊಬ್ಬನಿಗೂ ಸೂರ್ಯನೇ ನಮಗೆ ಪ್ರದಕ್ಷಿಣೆ ಹಾಕುತ್ತಿದ್ದಾನೆ ಅನ್ನಿಸುವುದರಲ್ಲಿ ತಪ್ಪೇನೂ ಇಲ್ಲ. ಪ್ರವಾದಿಗಳು ಅದನ್ನು ಹೇಳಿ ದೃಢಪಡಿಸಿ ಹೋದರು.  ಈಗಲೂ ಈ ವಾಕ್ಯಗಳನ್ನು ದೃಢವಾಗಿ ನಂಬಿರುವ ಅನೇಕರು “ಭೂಮಿ ತಿರುಗುವುದೇ ನಿಜವಾದರೆ ಮೇಲಕ್ಕೆಸೆದ ಚೆಂಡು ಕೆಳಗೆ ಬೀಳುವಾಗ ನಮ್ಮ ಕೈಗೇ ಬೀಳುವುದು ಹೇಗೆ? ಅದು ಪಕ್ಕದಲ್ಲೆಲ್ಲೋ ಹೋಗಿ ಬೀಳಬೇಕಲ್ಲವೆ? “ ಎಂದು ಬಾಲಿಶವಾಗಿ ಪ್ರಶ್ನಿಸುತ್ತಾರೆ. ಪಾಪ. ಇಂತಹವರ ವಿರುದ್ಧ ಅನೇಕ ಶತಮಾನಗಳ ಕಾಲ ವಿಜ್ಞಾನಿಗಳೂ ದನಿಯೆತ್ತಲಾಗದೆ ಕೊರಗಿದ್ದರು. ಕೋಪರ್ನಿಕಸ್, ಗೆಲಿಲಿಯೋರಂಥವರೆಲ್ಲ ಅದೇ ಸಾಲಿಗೆ ಸೇರಿದವರು.
su
ಆದರೆ ಈ ದೇಶ ಹಾಗಲ್ಲ. ಕಣ್ಣಿಗೆ ಕಾಣುವ ಈ ವಿಶ್ವದ ಕೇಂದ್ರ ಸೂರ್ಯನೇ ಎಂಬ ಅರಿವು ಇಲ್ಲಿನವರಿಗೆ ಇತ್ತು. ಸಕಲ ಚರಾಚರಗಳ ಪ್ರೇರಕ ಶಕ್ತಿಯೂ ಅವನೇ ಎಂಬುದೂ ಸ್ಪಷ್ಟವಾಗಿ ಗೊತ್ತಿತ್ತು. ಅದೂ ಒಂದೆರಡು ಸಾವಿರ ವರ್ಷಗಳ ಹಿಂದಲ್ಲ; ಋಗ್ವೇದ ಕಾಲದಿಂದಲೂ ಕೂಡ!
ಸಾಯಣರು ತಮ್ಮ ಋಗ್ವೇದ ಭಾಷ್ಯದಲ್ಲಿ `ಸೂರ್ಯ’ ಪದಕ್ಕೆ ಶ್ರೇಷ್ಠ, ಒಡೆಯ, ಸರ್ವಾಂತರ್ಯಾಮಿ, ಸರ್ವಪ್ರೇರಕ ಎಂಬೆಲ್ಲ ಅರ್ಥ ಹೇಳಿದರೆ; ಯಾಸ್ಕರು ತಮ್ಮ ನಿರುಕ್ತದಲ್ಲಿ ಸಂಚರಿಸುವವ, ಸೃಷ್ಟಿಸುವವ, ಪ್ರೇರೇಪಿಸುವವ ಎಂದೆಲ್ಲ ಗುಣಗಾನ ಮಾಡುತ್ತಾರೆ. ಅಲ್ಲಿಗೆ ಇಂದಿನ ವಿಜ್ಞಾನ ಸೂರ್ಯನ ಕುರಿತಂತೆ ನಡೆಸಿದ ಎಲ್ಲ ಸಂಶೋದನೆಗಳೂ ಇದರೊಳಗೆ ಸೇರಿಕೊಂಡಂತಾಯ್ತು. ನಮ್ಮ ಋಷಿಗಳು ಇಲ್ಲಿಗೇ ನಿಲ್ಲದೆ, ಸ್ಥಾವರ ಮತ್ತು ಜಂಗಮಾತ್ಮಕವಾದ ಪ್ರತಿಯೊಂದಕ್ಕೂ ಸೂರ್ಯನೇ ಅಂತರಾತ್ಮವೆಂದೂ ಬಣ್ಣಿಸಿ ಕೃತಾರ್ಥರಾಗಿದ್ದಾರೆ.
ಹಾಗಂತ ಈ ಲೇಖನ ಮಾಲೆಯುದ್ದಕ್ಕೂ ಬಣ್ಣಿಸಿದ ಸೃಷ್ಟಿಯ ಆದಿಪುರುಷ ಪರಬ್ರಹ್ಮ ಈ ಸೂರ್ಯನಲ್ಲವೆಂಬ ಜ್ಞಾನ ಋಷಿಗಳಿಗಿತ್ತು. ಭಗವದ್ಗೀತೆಯಂತೂ ಆ ಪರಮಾತ್ಮನೆದುರಿಗೆ ಈ ಸೂರ್ಯ ಕಳಾಹೀನವೆಂದು ಹೇಳಿದೆ. ಒಂದಂತೂ ಸ್ಪಷ್ಟ. ನಮ್ಮ ಕಣ್ಣೆದುರಿಗೆ ಕಾಣುವ ಗ್ರಹ – ಉಪಗ್ರಹಗಳ ಈ ಲೋಕಕ್ಕೆ ಸೂರ್ಯನೇ ಅಧಿಪತಿ. ಹೀಗೆ ಅನೇಕ ಲೋಕಗಳು ಸೇರಿ ನಿರ್ಮಾಣಗೊಂಡ ಮಹಾವಿಶ್ವದ ಅಧಿಪತಿ ಮಹಾಸೂರ್ಯ ಪರಮಾತ್ಮ ಎಂದಾಯ್ತು.
ಆ ವಿಶಿಷ್ಟ ಶಕ್ತಿಯಿಂದ ಪ್ರೇರಣೆ ಪಡೆದ ಈ ವಿಶ್ವ ಅದೆಷ್ಟು ಸರಳವಾಗಿದೆ ನೋಡಿ. ಪರಮಾತ್ಮ ತತ್ತ್ವದ ಸುತ್ತ ಸುತ್ತುವ ಇಡಿಯ ವಿಶ್ವ. ಅದರ ಮಿನಿಯೇಚರ್ ನಮ್ಮ ಸೌರ ಮಂಡಲ. ಇಲ್ಲಿ ಸೂರ್ಯನೇ ಪರಮಾತ್ಮ. ನೀವು ಅಣುವಿನ ಮಟ್ಟಕ್ಕೆ ಬಂದರೂ ಹಾಗೆಯೇ. ಪ್ರತಿಯೊಂದು ಪರಮಾಣುವಿನಲ್ಲೂ ಬಲಾಢ್ಯವಾದ ನ್ಯೂಕ್ಲಿಯಸ್ ಎಂಬ ಕೇಂದ್ರ, ಅದರ ಸುತ್ತಲೂ ಗಿರಗಿಟ್ಟಲೆಯಂತೆ ಸುತ್ತುವ ಎಲೆಕ್ಟ್ರಾನುಗಳು! ಇನ್ನು ನಮ್ಮ ವಿಚಾರಕ್ಕೆ ಬಂದರೆ, ಜೀವಕೋಶಗಳೂ ಹಾಗೆಯೇ. ಕೋಶಕ್ಕೊಂದು ಕೇಂದ್ರ, ಅದರ ಸುತ್ತಲೂ ರಚನೆಯಾಗಿರುವ ಜೀವ ಹಂದರ. ಪರಮಾತ್ಮ ತನ್ನಿರುವನ್ನು ಅಣುವಿನಿಂದ ಮಹತ್ತಿನವರೆಗೂ ಏಕಪ್ರಕಾರವಾಗಿ ತೊರಿಸಿಕೊಂಡಿದ್ದಾನೆ. ಹೀಗಾಗಿ “ಅಣೋರಣೀಯಾನ್ ಮಹತೋ ಮಹೀಯಾನ್” ಎಂದಾಗ ಇವೆಲ್ಲವೂ ಹಾದುಹೋಗುವುದು.
ನಮ್ಮ ಕಾಲ ಗಣನೆಯ ಕೇಂದ್ರ ಸೂರ್ಯ. ನಾವು ಹಗಲು ರಾತ್ರಿಗಳ ಲೆಕ್ಕಾಚಾರದಿಂದ ಶುರು ಮಾಡಿ ನಮ್ಮ ಆಯಸ್ಸು, ಭೂಮಿಯ ಆಯು, ವಿಶ್ವದ ಜೀವಾವಧಿಗಳನ್ನೆಲ್ಲ ಲೆಕ್ಕ ಹಾಕುತ್ತೇವಲ್ಲ, ಅದು ಸೂರ್ಯನ ಕಾರಣದಿಂದಲೇ. ಅವನಿಲ್ಲದ ಜಗತ್ತಿನ ಕಲ್ಪನೆ ಅಸಾಧ್ಯ. ನಮಗೆ ಹಗಲಿನ ಬೆಳಕೂ ಅವನದ್ದೇ; ರಾತ್ರಿ ಚಂದ್ರ ಪ್ರತಿಫಲಿಸುವ ಬೆಳಕೂ ಅವನದ್ದೇ! ರಾತ್ರಿಯ ವೇಳೆಗೆ ಮರತಪ್ರಾಯವಾಗುವ ಈ ಜಗತ್ತು ಬೆಳಕಾಗುವ ವೇಳೆಗೆ ಚೇತನವನ್ನು ಆವಾಹಿಸಿಕೊಂಡು ಜಾಗೃತವಾಗಲು ಆತನೇ ಕಾರಣ. ಭೂಮಿಯನ್ನು ಆತ ಆಕರ್ಷಿಸದೆ ಹೋಗಿದ್ದರೆ ಭೂಮಿ ಅದನ್ನು ಪ್ರತಿಭಟಿಸುವ ಜಗನ್ನಾಟಕ ನಡೆಯದೆ ಹೋಗಿದ್ದರೆ ಭೂಮಿಯ ಮೇಲೆ ಜೀವರಾಶಿಗಳು ಇರುತ್ತಲೇ ಇರಲಿಲ್ಲ. ಅರ್ಥವಾಗಲಿಲ್ಲವೆ? ವಿವರಿಸುತ್ತೇನೆ ಇರಿ.
ಭೂಮಿಯನ್ನು ಆದಿಶೇಷ ತಲೆಯ ಮೇಲೆ ಹೊತ್ತುಕೊಂಡಿದ್ದಾನೆ; ಅವನು ಅಲುಗಾಡಿದರೆ ಭೂಮಿಯ ನಾಶವೇ ಸರಿ ಅಂತ ಪುರಾಣಗಳಲ್ಲಿ ಹೇಳಿರುವುದನ್ನು ಕೇಳಿದ್ದು ನೆನಪಿದೆಯಾ? ನಾವೆಲ್ಲ ಇದನ್ನು ಆಡಿಕೊಂಡು ನಕ್ಕವರೇ. ಆದರೆ ವಿಜ್ಞಾನ ಅಧ್ಯಯನ ಹೆಚ್ಚಾದಂತೆ ಈ ಆದಿಶೇಷ ನಮ್ಮೆದುರು ಹೊಸತಾಗಿ ಅನಾವರಣಗೊಂಡ. ಭಾರತದಲ್ಲಿ ದೇವ ದಏವಿಯರ ಪರಿಕಲ್ಪನೆಗಳೆಲ್ಲವೂ ತಾತ್ತ್ವಿಕ ಹಿನ್ನೆಲೆಯುಳ್ಳವೇ ಎಂಬುದು ಅರಿವಾದರೆ, ಈ ಎಲ್ಲ ವೈಜ್ಞಾನಿಕ ಸತ್ಯಗಳ ಸುರುಳಿ ಬಿಚ್ಚುವುದು ಸುಲಭ.
ಸೂರ್ಯನ ಆಕರ್ಷಣ ಶಕ್ತಿ ಅದೆಷ್ಟೆಂದರೆ ಆತ ಭೂಮಿಯೂ ಸೇರಿದಂತೆ ಎಲ್ಲ ಗ್ರಹಗಳನ್ನು ತನ್ನೊಡಲೊಳಗೆ ಸೆಳೆದುಕೊಂಡುಬಿಡಲು ಸಿದ್ಧನಾಗಿಯೇ ಇರುತ್ತಾನೆ. ಅದಕ್ಕೇ ಅವನನ್ನು ಮಾರ್ತಾಂಡ ಎನ್ನೋದು. ಗೋಬಲ ಮಹರ್ಷಿಗಳ ಪ್ರಕಾರ ಮಾರ್ತಾಂಡ ಎಂದರೆ ಪ್ರಪಂಚದ ವಿಧ್ವಂಸಕ್ಕೆ ಕಾರಣನಾಗುವ ಪ್ರಳಯಕಾರಿ ಎಂದರ್ಥ. ಆತ ಸದಾ ಕಾಲ ಮಾರ್ತಾಂಡರೂಪೀ ಬಲವೊಂದನ್ನು ಭೂಮಿಯ ಮೇಲೆ ಹಾಕುತ್ತಲೇ ಇರುತ್ತಾನೆ. ಇತ್ತ ಭೂಮಿಯೂ ತನ್ನೊಡಲ ಸಾಮಥ್ರ್ಯವಷ್ಟನ್ನೂ ಬಗೆದು ಪ್ರಳಯವಾಗುವುದನ್ನು ತಡೆಗಟ್ಟುತ್ತಾಳೆ. ಸೂರ್ಯ ಭೂಮಿಯ ಮೇಲೆ ಹಾಕುವ ಬಲದಲ್ಲಿ ಭೂಮಿ ಸೂರ್ಯನ ಮೇಲೆ ಹಾಕುವ ಬಲವನ್ನು ಕಳೆದರೆ ಉಳಿಯುವ ಶೇಷವಿದೆಯಲ್ಲ. ಅದನ್ನೇ ನಮ್ಮವರು ಅತ್ಯಂತ ಪ್ರಾಚೀನವಾದ ‘ಆದಿಶೇಷ’ ಎಂದು ಕರೆದದ್ದು! ಈ ಆದಿಶೇಷವೇ ಭೂಮಿಯನ್ನು ಸೂಕ್ತ ಸ್ಥಾನದಲ್ಲಿ ಹಿಡಿದು ನಿಲ್ಲಿಸಿರೋದು. ಈ ಆದಿಶೇಷ ಏರುಪೇರಾದರೆ ಒಂದೋ ಭೂಮಿ ಸೂರ್ಯನೊಳಗೆ ಸೇರಿ ಹೋಗುತ್ತದೆ ಇಲ್ಲವೇ ಕಕ್ಷೆ ಬದಲಾಯಿಸಿಬಿಡುತ್ತದೆ. ಹೇಗಾದರೂ ಪ್ರಳಯ ಖಾತ್ರಿ. ಯಾವ ಜೀವಿಯೂ ಜೀವಿಸಲು ಭೂಮಿ ಯೋಗ್ಯವಾಗಿ ಉಳಿಯೋದಿಲ್ಲ.
ರಾಕ್ಷಸರ ಉಪಟಳ ಹೆಚ್ಚಾದಾಗ ಭೂದೇವಿ ಭಾರದಿಂದ ನಲುಗಿ ವಿಷ್ಣುವಿನ ಬಳಿ ಸಾಗಿ ಕಣ್ಣೀರ್ಗರೆಯುತ್ತಾಲೆಂಬುದನ್ನು ಎಲ್ಲ ಪುರಾಣಗಳಲ್ಲಿಯೂ ನೋಡುತ್ತೇವಲ್ಲ, ಅದು ಇದೇ ಆದಿಶೇಷ ಅಲುಗಾಡುವ ಪ್ರಸಂಗ. ಆಗಲೇ ಅವತಾರಗಳುದಿಸಿ ಕೆಡುಕನ್ನು ಕಡಿಮೆ ಮಾಡಿ ಭೂಮಿಯ ಶಕ್ತಿ ಹೆಚ್ಚಿಸುತ್ತಾರೆ. ರಾಮ ಕಾಡಿನಲ್ಲಿ ರಾಕ್ಷಸರ ಸಂಹಾರ ಮಾಡಿದನೆಂದರೆ ಕಾಡುಗಳ್ಳರ, ಮರ ಕಡಿಯುವವರ, ಪ್ರಾಣಿ ಹಿಂಸಕರನ್ನು ನಾಶ ಮಾಡಿದ ಎಂಬ ಅರ್ಥವೇ ಇರಬೇಕು; ಕೃಷ್ಣ ಯಮುನೆಯಲ್ಲಿ ಕಾಳಿಂಗನ ಮರ್ದಿಸಿದನೆಂದರೆ ನದಿಗೆ ವಿಷ ಕಕ್ಕುತ್ತಿದ್ದ ಜನರನ್ನು ನಾಶಗೈದಿರಬೇಕು. ಭೂಮಿಯನ್ನು ತಣಿಸಿ ಆಕೆಗೆ ಶಕ್ತಿಯನ್ನೇನೋ ಈ ರೀತಿ ತುಂಬಿಸಿದ್ದಾಯ್ತು. ಸೂರ್ಯನ ಮಾರ್ತಾಂಡರೂಪೀ ಬಲವನ್ನು ತಣಿಸುವುದು ಹೇಗೆ?
ಅದಕ್ಕೇ ಭಾರತದ ಋಷಿಗಳು ಉದಯಿಸುವ ಮತ್ತು ಅಸ್ತಮಿಸುವ ಸೂರ್ಯನಿಗೆ ಅಘ್ರ್ಯ ನೀಡುವ ಪರಂಪರೆ ತಂದರು. ಇದನ್ನೆ ಸಂಧ್ಯಾವಂದನೆ, ಸಂಧ್ಯಾ ಉಪಾಸನೆ ಎಂದು ಕರೆದರು. ತೈತ್ತಿರೀಯ ಆರಣ್ಯಕದ ಪ್ರಕಾರ ರಾಕ್ಷಸರು ಭಗವಂತನ ಕುರಿತು ತಪಸ್ಸು ಮಾಡಿ ಸೂರ್ಯನೊಡನೆ ಸದಾಕಾಲ ಕಾದಾಡುವ ವರ ಪಡೆದುಕೊಂಡರಂತೆ. ರಾಕ್ಷಸರನ್ನು ಕತ್ತಲಿಗೆ ಹೋಲಿಸುವುದಾದರೆ, ಕತ್ತಲು – ಬೆಳಕುಗಳ ಕದನವನ್ನೆ ಹಗಲು – ರಾತ್ರಿ ಎಂದು ಕರೆಯಬಹುದು ತಾನೆ? ಸಂಧ್ಯಾವಂದನೆ ಮಾಡುವಾಗ ನೀರನ್ನು ಅಭಿಮಂತ್ರಿಸಿ ತನ್ನೊಳಗಿನ ಪಾಪಪುರುಷನನ್ನು ನಾಶ ಮಾಡಿ ಪವಿತ್ರವಾಗುವ ವ್ಯಕ್ತಿ ಗಾಯತ್ರಿ ಮಂತ್ರದ ಉಚ್ಚಾರಣೆಯಿಂದಿಗೆ ಸೂರ್ಯನಿಗೆ ಅಘ್ರ್ಯ ಸಮರ್ಪಿಸುತ್ತಾನೆ. ಹೀಗೆ ಸಮರ್ಪಿಸಿದ ಅಘ್ರ್ಯವೇ ಸೂರ್ಯನಿಗೆ ವಜ್ರಕವಚದಂತೆ. ಅದರ ಮೂಲಕವೇ ಆತ ರಾಕ್ಷಸರೊಂದಿಗೆ ಕಾದಾಡಿ ಜಯಶೀಲನಾಗುತ್ತಾನಂತೆ. ಆತನ ಗೆಲುವು ನಮಗೆ ಬೆಳಕು!
ಹೌದು. ನನಗೆ ಗೊತ್ತು. ಇಷ್ಟನ್ನೂ ಕೇಳುವಾಗ ನಿಮಗೆ ನಗು ಬರುತ್ತಿರಬಹುದು. ನಾವು ಅಘ್ರ್ಯ ನೀಡದಿದ್ದರೆ ಬೆಳಕೇ ಆಗುವುದಿಲ್ಲವೇನೋ ಎಂದೂ ಕೇಳಬಹುದು. ನಾನು ಕೊಡುವ ಯಾವ ಉತ್ತರವೂ ನಿಮ್ಮನ್ನು ಸಮಾಧಾನ ಪಡಿಸಲಾರದು. ಆದರೆ ಒಂದಂತೂ ಸತ್ಯ. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಖರ ಸೂರ್ಯ ರಷ್ಮಿಯಿಂದ ಬೆಂದು ಹೋಗಿವೆ. ಅಲ್ಲೆಲ್ಲ ಕುಡಿಯುವ ನೀರಿಗಿಂತ ಪೆಟ್ರೋಲೇ ಅಗ್ಗ. ಇನ್ನೂ ಕೆಲವು ದೇಶಗಳಲ್ಲಿ ಆತನ ಕಿರಣಗಳು ಅದೆಷ್ಟು ಕೋಮಲವೆಂದರೆ ಕುಡಿಯುವ ನೀರು ದ್ರವರೂಪದಲ್ಲಿರದೇ ಮಂಜುಗಡ್ಡೆಯಾಗಿಬಿಟ್ಟಿದೆ. ನೀರು ಬೇಕೆಂದರೆ ಮಂಜು ಕರಗಿಸಿ ಕುಡಿಯಬೇಕು.
ಭಾರತದ ಕಥೆಯೇ ಬೇರೆ. ಇಲ್ಲಿ ನದಿಗಳಿಗೆ ಕೊರತೆಯಿಲ್ಲ. ಫಲವತ್ತಾದ ಭೂಮಿಯ ಕೊರತೆಯಿಲ್ಲ. ಇಳುವರಿಯಂತೂ ಜಗತ್ತಿನ ಇತರ ಭಾಗಗಳಿಗಿಂತ ಹೆಚ್ಚು. ಏಕೆ ಹೀಗೆ? ಈಗೀಗ ಪರಿಸ್ಥಿತಿ ಬದಲಾಗುತ್ತಿದೆ. ನದಿಗಳು ಬತ್ತುತ್ತಿವೆ. ಭೂಮಿ ಬರಡಾಗುತ್ತಿದೆ. ಬೆಳೆಯ ಪ್ರಮಾಣ ನಿರೀಕ್ಷೆಯಷ್ಟಿಲ್ಲ. ಸೆಕೆ ತಡೆಯಲಾಗದಷ್ಟು ಹೆಚ್ಚುತ್ತಿದೆ. ಹೀಗೇಕೆ?
ವೈಜ್ಞಾನಿಕ ಬುದ್ಧಿಮತ್ತೆಯ ನೆಪದಲ್ಲಿ ಸೂರ್ಯನಿಗೆ ನಮಿಸುವ, ಭೂಮಿಯನ್ನು ತಣಿಸುವ ಆಚರಣೆಗಳನ್ನೆಲ್ಲ ಬಿಟ್ಟಿದ್ದೇ ಕಾರಣ ಇರಬಹುದಾ? ಹೌದೆಂದು ನಾನು ಹೇಳುತ್ತಿಲ್ಲ. ಪ್ರಶ್ನೆ ಕೇಳಿಕೊಂಡೆ ಅಷ್ಟೆ. ಹಾಗಂತ ಸೂರ್ಯನಿಗೆ ನಮಿಸುವ ಈ ಪರಂಪರೆ ಮೇಲ್ವರ್ಗದ ಜನರು ಹುಟ್ಟುಹಾಕಿದ್ದೆಂದು ಭಾವಿಸಬೇಡಿ. ಪ್ರಾಯಶಃ ಜಗತ್ತಿನ ಎಲ್ಲ ಬುಡಕಟ್ಟು ಜನಾಂಗಗಳೂ ಸೂರ್ಯನನ್ನು ಆರಾಧಿಸಿಯೇ ಆರಾಧಿಸುತ್ತವೆ. ಅರುಣಾಚಲ ಪ್ರದೇಶದಲ್ಲಿ ಈಗಲೂ ಮತಾಂತರಗೊಳ್ಳದ ಜನ ಪೂಜಿಸುವುದು ‘ಡೋನ್ಯೋ – ಪೋಲೋ’ ಎಂಬ ಸೂರ್ಯ – ಚಂದ್ರರ ಕಲ್ಪನೆಯನ್ನೇ. ಆ ಸೂರ್ಯನನ್ನು ಅವರು ಹಾಡಿ ಹೊಗಳುತ್ತಾರೆ. ಅವನಿಗಾಗಿ ಹಬ್ಬ ಆಚರಿಸುತ್ತಾರೆ. ಬಲಿ ಕೊಡುತ್ತಾರೆ ಎಲ್ಲವೂ! ಹಾಗೆ ಮಾಡದ ಕೆಲವರು ಇತ್ತೀಚೆಗೆ “ನಾವು ಪರಮಾತ್ಮನಿಗೆ ಮಾತ್ರ ನಮಿಸುತ್ತೇವೆ, ಸೂರ್ಯನಿಗಲ್ಲ” ಎಂದು ಹೊಸ ವಾದ ಹುಟ್ಟುಹಾಕಿದ್ದಾರೆ. ಟಾಟಾ ಮೋಟಾರ್ಸ್‍ನಲ್ಲಿ ಕೆಲಸ ಮಾಡುವವ “ನಾನು ನನ್ನ ಮ್ಯಾನೇಜರ್‍ಗೆ ಗೌರವ ಕೊಡಲಾರೆ, ರತನ್ ಟಾಟಾ ಮಾತು ಮಾತ್ರ ಕೇಳುತ್ತೇನೆ” ಎಂದರೆ ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನದ ವಾದ ಇದು. ಅಂತಹ ಕೆಲಸಗಾರನನ್ನು ರತನ್ ಟಾಟಾ ಕೂಡ ಕಂಪನಿಯಿಂದ ಕಿತ್ತೆಸೆಯುವುದರಲ್ಲಿ ಅನುಮಾಣವೇ ಇಲ್ಲ. ಏನಂತೀರಿ?
ಸೂರ್ಯನನ್ನು ಅವಜ್ಞೆ ಮಾಡುವ ಪ್ರಮೇಯವೇ ಇಲ್ಲ. ಪರಿಸರಕ್ಕೆ ಪೂರಕವಾಗಿ ಬದುಕುವುದು ಎಂದರೆ ಸೂರ್ಯನ ಗಡಿಯಾರಕ್ಕೆ ಹೊಂದಿಕೊಳ್ಳುವುದೆಂದೇ ಅರ್ಥ. ಆತ ಅಸ್ತಂಗತನಾಗುವಾಗ ಇಡಿಯ ಪ್ರಕೃತಿಯೇ ಚೈತನ್ಯಶೂನ್ಯವಾಗುತ್ತದೆ. ಪಕ್ಷಿಗಳು ಗೂಡು ಸೇರುತ್ತವೆ, ಕ್ರಿಯಾಶೀಲವಾಗಿದ್ದ ಕೀಟ – ಭ್ರಮರಗಳು ಸದ್ದು ನಿಲ್ಲಿಸುತ್ತವೆ. ಗವ್ವೆನ್ನುವ ನೀರವತೆ. ಬೆಳಗಾಗುವ ಒಂದು ತಾಸು ಮುನ್ನ ಕಾಡಿನ ಬಳಿ ಇರುವ ಯಾವುದಾದರೂ ಗುಡ್ಡವನ್ನೇರಿ ಕುಳಿತುಬಿಡಿ. ಬೆಳಗಾಗುವ ಆ ಇಡಿಯ ಪ್ರಕ್ರಿಯೆ ನೋಡಿ ನೀವು ದಂಗಾಗದಿದ್ದರೆ ಕೇಳಿ. ಆದಿತ್ಯನ ಆಗಮನದ ಮುನ್ಸೂಚನೆ ಮೊದಲು ಕೀಟಗಳಿಗೆ ದೊರೆಯುತ್ತದೆ. ಅವುಗಳ ಸದ್ದು ನಿಧಾನವಾಗಿ ಇಡಿಯ ಕಾಡನ್ನು ವ್ಯಾಪಿಸಿ ಕಾಡನ್ನು ಜುಯ್ಯೆನ್ನಿಸಿಬಿಡುತ್ತದೆ. ಒಂದೊಂದೇ ಜಾತಿಯ ಪಕ್ಷಿಗಳು ಅನುಕ್ರಮವಾಗಿ ಚಿಂವ್‍ಗುಡಲಾರಂಭಿಸುತ್ತವೆ. ರೆಕ್ಕೆ ಝಾಡಿಸಿ ಮೈಕೊಡವಿಕೊಂಡು ಆಹಾರ ಅರಸಿ ಹೊರಟೇಬಿಡುತ್ತವೆ. ಈ ಎಲ್ಲ ಪಕ್ಷಿಗಳಲ್ಲಿ ಅತ್ಯಂತ ಕೊನೆಗೆ ಕೂಗುವುದು ಕೋಳಿ. ಮನುಷ್ಯರಾದ ನಾವು ಕೋಳಿ ಕೂಗಿದ ಮೇಲೆ ಬೆಳಗಾಯ್ತು ಎನ್ನುತ್ತೇವೆ!
ಸೂರ್ಯ ಸಣ್ಣ ಕೀಟದಿಂದ ಹಿಡಿದು ಮನುಷ್ಯನವರೆಗಿನ ಪ್ರತಿಯೊಂದನ್ನೂ ತನ್ನ ಶಕ್ತಿಯಿಂದ ಪ್ರಚೋದಿಸುತ್ತಾನೆ. ನಮ್ಮೊಳಗಿನ ಪ್ರತಿಯೊಂದು ಜೀವಕೋಶಗಳೂ ಆತನಿಂದ ಪುಷ್ಟಿಗೊಳ್ಳುತ್ತವೆ. ಸೂರ್ಯನ ಬೆಳಕು – ಶಾಖದಲ್ಲಿ ಆಗುವ ಸಣ್ಣ ಏರುಪೇರುಗಳೂ ನಮ್ಮಲ್ಲಿ ಅನೇಕ ರೋಗಗಳನ್ನು ಹುಟ್ಟುಹಾಕಬಹುದು. ಋಗ್ವೇದದ ಮಂತ್ರವೊಂದು ಸೂರ್ಯನನ್ನು ಶರೀರಗತ ಬಾಹ್ಯರೋಗವನ್ನೂ ಹೃದಯದ ಅಂತರ ರೋಗವನ್ನೂ ನಾಶಗೊಳಿಸೆಂದು ಪ್ರಾರ್ಥಿಸುತ್ತದೆ. ಪ್ರಸ್ಕಣ್ವ ಋಷಿಯು ಈ ಮಂತ್ರದ ಮೂಲಕ ಚರ್ಮಸಂಬಂಧಿ ಕಾಯಿಲೆಯಿಂದ ಮುಕ್ತಗೊಂಡರಂತೆ. ಸೂರ್ಯಕಿರಣಗಳ ಕೊರತೆಯಿಂದ ವಿಟಮಿನ್ ಡಿ ನಷ್ಟವಾಗಿ ರಿಕೆಟ್ಸ್ ಕಾಯಿಲೆ ಬರುವುದೆಂದು ಪ್ರಾಥಮಿಕ ಶಾಲೆಯಲ್ಲೇ ಓದಿದ್ದೇವಲ್ಲ!
ಸೂರ್ಯ ಕಥನ ಮುಗಿಯುವಂಥದ್ದಲ್ಲ. ಯಾರು ಏನಾದರೂ ಮಾಡಿಕೊಳ್ಳಲಿ, ನಾವು ಸೂರ್ಯನಮಸ್ಕಾರಕ್ಕೆ ಅಣಿಯಾಗೋಣ, ಶತ್ರುಂಜಯರಾಗೋಣ!