Tuesday 25 August 2015

ಕುಂಡಲಿನಿ, ನಮ್ಮೊಳಗಿನ ಸುಪ್ತ ಶಕ್ತಿ ಸಂಜೀವಿನಿ

ಶಿವನಿಗೆ ಮೂರನೇ ಕಣ್ಣು ಇರೋದು ಕಲಾವಿದನ ಕಲ್ಪನೆಯಾ ಅಥವಾ ಹಾಗೊಂದು ಸಾದ್ಯತೆ ಇದೆಯಾ? ಹೌದು, ಪುರಾಣದ ಕಥೆಗಳು ನಮ್ಮನ್ನು ಪ್ರಗತಿಂದ ದೂರ ತಳ್ಳಿಬಿಡುವ ಭಯ ಯಾವಾಗಲೂ ಇದ್ದದ್ದೇ. ಆದರೆ ಪ್ರಾಮಾಣಿಕವಾಗಿ ಹೇಳಿ, ಅನೇಕ ಬಗೆಯ ಅತೀಂದ್ರಿಯ ಶಕ್ತಿಗಳು ನಮಗೂ ಇಲ್ಲವೇ?
ಉದಾಹರಣೆಗೆ ಕೆಲವು ಅಪರೂಪದ ಘಟನೆಗಳು ಆಗಾಗ ನಮ್ಮ ಅನುಭವಕ್ಕೆ ಬರುತ್ತಲೇ ಇರುತ್ತವೆ. ಯಾರನ್ನೋ ಉತ್ಕಟವಾಗಿ ನೆನಪಿಸಿಕೊಳ್ಳುತ್ತಿರುತ್ತೇವೆ, ಅವರ ಫೋನ್ ಕಾಲ್ ಬರುತ್ತೆ ಅಥವಾ ಅವರೇ ಹಾಜರಾಗಿಬಿಡ್ತಾರೆ. ಆಗೆಲ್ಲ ನಿಮಗೆ ನೂರು ವರ್ಷ ಆಯಸ್ಸು ಅಂತೀವಿ. ದೂರದೂರಿನಲ್ಲಿ ಮಗ ತೊಂದರೆಗೆ ಸಿಕ್ಕಿ ಹಾಕಿಕೊಂಡಿರ್ತಾನೆ, ಇಲ್ಲಿ ಯಾವುದರ ಅರಿವಿಲ್ಲದಿದ್ದರೂ ತಾಯ ಎದೆ ಬಡಿತ ಜೋರಾಗಿರುತ್ತೆ. ಇವತ್ತು ಆಫೀಸಿನಲ್ಲಿ ಅವಘಡ ನಡೆದೇ ನಡೆಯುತ್ತೆ ಅಂತ ಮನಸ್ಸು ಹೇಳುತ್ತಿರುತ್ತೆ; ಸಂಜೆಯೊಳಗೆ ರಾದ್ದಾಂತವೇ ಆಗಿಬಿಟ್ಟಿರುತ್ತೆ. ಹೇಗೆ ಇದೆಲ್ಲ? ಪ್ರತೀಬಾರಿ ‘ಆಕಸ್ಮಿಕ’ವೇ ಉತ್ತರವೇ. ಅಥವಾ ಕಾಕತಾಳೀಯವೆಂದು ತಳ್ಳಿಬಿಡೋಣವೆ? ಪ್ರಾಮಾಣಿಕವಾಗಿ ಯೋಚಿಸಿ ಇವೆಲ್ಲ ಹೇಗೆ ಸಾಧ್ಯ?

10299003_925107604219059_9062761733252944909_nವಿಜ್ಞಾನದ ಮರೆಯಲಿ ನಿಂತು ಹಿಂದು ಧರ್ಮದ ಮೇಲೆ ಕಲ್ಲೆಸೆಯುವವರಿಗೆ ಒಂದು ಅಚ್ಚರಿಯ ಸಂಗತಿ ಹೇಳಲೇಬೇಕು. ಕಳೆದ ಕೆಲವಾರು ವರ್ಷಗಳ ಹಿಂದೆ ಮೆದುಳಿನ ಬರೋಬ್ಬರಿ ಮಧ್ಯ ಭಾಗದಲ್ಲಿ ವಿಜ್ಞಾನಿಗಳು ‘ಪಿನಿಯಲ್ ಗ್ಲ್ಯಾಂಡ್’ನ್ನು ಗುರುತಿಸಿದರು. ಇದು ಗೋಧಿಯ ಕಾಳಿನ್ಟದ್ದು ನಮ್ಮ ಪಾಲಿಗೆ ನಿದ್ದೆಯ ನಿಯಂತ್ರಣಕ್ಕೆ ಕಾರಣವಾಗುವುದಷ್ಟೇ ಅಲ್ಲ, ಅದ್ಭುತವಾದ ಆಧ್ಯಾತ್ಮಿಕ ಅನುಭೂತಿಗಳಿಗೂ ಪ್ರಮುಖ ತಾಣವಾಗಿದೆಯೆಂದು ಒಪ್ಪಿದ ಅನೇಕರು ಇದನ್ನು ‘ಮೂರನೇ ಕಣ್ಣು’ ಎಂತಲೇ ಕರೆದರು! ಭೌತಿಕ ಮತ್ತು ಆಧ್ಯಾತ್ಮಿಕ ಅನುಭವಗಳ ನಡುವಿನ ಕೊಂಡಿ ಇದು ಎಂಬುದು ಅವರ ಅಂಬೋಣ. ಅದಕ್ಕೆಂದೇ ಭ್ರೂ ಮಧ್ಯೆ ಭಸ್ಮವಿಟ್ಟು ಗೌರವ ಸಲ್ಲಿಸುವ ರೂಢಿ ನಮ್ಮದು. ಪಿನಿಯಲ್ ಗ್ರಂಥಿ ಚುರುಕಾದಾಗಲೆಲ್ಲ ಅತೀಂದ್ರಿಯವಾದ ಘಟನೆಗಳು ಸಹಜವೆಂಬಂತೆ ನಡೆಯುತ್ತವೆ.
ಇಷ್ಟಕ್ಕೂ ಅದೇಕೆ ಅಸಾಧ್ಯವಾಗಬೇಕು ಹೇಳಿ? ಹಾಗೇ ಗಮನಿಸಿ. ಜೋಗ್‌ನಲ್ಲಿ ಉತ್ಪಾದನೆಯಾಗುವ “ದ್ಯುತ್ ನಮ್ಮ ಮನೆಗೆ ತಲುಪಲು ವಾಹಕ ತಂತಿಗಳು ಬೇಕೇಬೇಕು. ಹಾಗೆಂದಮಾತ್ರಕ್ಕೆ ತಂತಿಗಳಿಲ್ಲದೇ “ದ್ಯುತ್ ಹರಿಯುವುದು ಅಸಾಧ್ಯವೆಂದಿರೋ ಜೋಕೆ. “ದ್ಯುತ್ತಿನ ಪ್ರಖರ ರೂಪವಾದ “ಂಚು ಭೂ”ಗೆ ತಲುಪಲು ಯಾವ ತಂತಿಯೂ ಇಲ್ಲವಲ್ಲ, ಅದು ಹೇಗೆ? ಬಲು ಸರಳ. ಮನೆಯಲ್ಲಿ ಹರಿಯುವ ವಿದ್ಯುತ್ ೧೨೦ ವೋಲ್ಟ್ ಸಾಮರ್ಥ್ಯದ್ದಾದರೆ, ಭೂಮಿಗೆ ಅಪ್ಪಳಿಸಲೆಂದು ಧಾವಿಸುವ ಮಿಂಚಿನದ್ದು ಹತ್ತು ಕೋಟಿ ವೋಲ್ಟ್‌ಗಳು! ಹರಿಯುವ ವಿದ್ಯುತ್ತಿನ ಸಾಮರ್ಥ್ಯ ಅಪಾರವಾಗಿದ್ದರೆ ಅದಕ್ಕೆ ವಾಹಕವೇ ಬೇಕಿಲ್ಲ. ಹಾಗಾದರೆ ಉತ್ಕಟವಾದ ಇಚ್ಛೆಯೊಂದು ತಂತಿಲ್ಲದೇ ಮತ್ತೊಬ್ಬ ವ್ಯಕ್ತಿಯನ್ನು ಮುಟ್ಟುವುದದೇಕೆ ಸಾಧ್ಯವಿಲ್ಲ?
ಸಾಮಾನ್ಯವಾಗಿ ಪ್ರೇಮಿಗಳಲ್ಲಿ ಈ ಬಗೆಯ ಉತ್ಕಟ ಭಾವವಿರುತ್ತದೆ. ಅದು ತಾಯ ಪ್ರೇಮವಿರಬಹುದು, ನಲ್ಲ-ನಲ್ಲೆಯರದ್ದೂ ಆಗಿರಬಹುದು. ಈ ಪ್ರವಾಹ ಏಕಮುಖವಾದಷ್ಟೂ ಪಿನಿಯಲ್ ಗ್ರಂಥಿ ಜಾಗೃತವಾಗುತ್ತದೆ. ಈ ಕಾರಣಕ್ಕೆ ನಮ್ಮಲ್ಲಿ ಮೂರ್ತಿಪೂಜೆ ಹುಟ್ಟಿಕೊಂಡಿದ್ದು. ಹುಟ್ಟುವ ಅಷ್ಟೂ ಪ್ರೇಮವನ್ನು ಆ ಮೂರ್ತಿಯ ಹಿಂದಿನ ತತ್ವಕ್ಕೆ ಸಮರ್ಪಿಸಿದರೆ ಈ ಗ್ರಂಥಿ ಜಾಗೃತವಾಗಿ ಆಗ ಹುಟ್ಟುವ ಆಲೋಚನೆಗಳು ಅಸಾಮಾನ್ಯವಾಗಿರುತ್ತವೆ. ‘ನಿಮಗೆ ನಿಮ್ಮ ಗಂಡ ದೇವರಾಗಬಹುದಾದರೆ, ನಾನೇಕೆ ದೇವರನ್ನೇ ಗಂಡನೆನ್ನಬಾರದು’ ಎಂದು ಮೀರಾ ಪ್ರಶ್ನಿಸುವಾಗ ಅವಳಲ್ಲಿದ್ದ ಭಾವ ಇದೇ. ಅಕ್ಕ ಮಹಾದೇವಿಯ ಚನ್ನಮಲ್ಲಿಕಾರ್ಜುನನ ಪ್ರೇಮವೂ ಇದೇ ಬಗೆಯದ್ದು. ಹೀಗಾಗಿಯೇ ಇಂದಿಗೂ ಅನೇಕರ ಮನಸ್ಸಿನ ಕದ ಅವರು ತಟ್ಟುತ್ತಲೇ ಇರುತ್ತಾರೆ! ಸುಮ್ಮನೆ ಯೋಚಿಸಿ. ಅವರು ಹುಟ್ಟು ಹಾಕಿದ ಆಲೋಚನಾ ತರಂಗಗಳ ಸಾಮರ್ಥ್ಯದೆದುರು ಮಿಂಚಿನ ದಶಕೋಟಿ ವೋಲ್ಟೂ ತೃಣ ಮಾತ್ರ! ಹೀಗಿರುವಾಗ ಹತ್ತು ಸಾವಿರ ವರ್ಷಗಳ ಹಿಂದೆ ತನ್ನ ಆಲೋಚನೆಗಳನ್ನು ಜಗತ್ತಿಗೆ ಕೊಟ್ಟ ಋಗಳ ಚಿಂತನಾ ತರಂಗಗಳ ಸಾಮರ್ಥ್ಯ ಅಂದಾಜು ಮಾಡಿ ನೋಡಿ!
ವಿಜ್ಞಾನ ಯಾವುದನ್ನು ವಿವರಿಸಲು ಹೆಣಗಾಡುತ್ತಿದೆಯೋ, ತಂತ್ರಶಾಸ್ತ್ರ ಕುಂಡಲಿನಿ ಶಕ್ತಿಯ ಮೂಲಕ ಸರಳವಾಗಿ “ವರಿಸಿದೆ. ಬಹುಶಃ ಅದು ಉಲ್ಲೇಖಿಸಿರುವ ಆಜ್ಞಾ ಚಕ್ರ ಪಿನಿಯಲ್ ಗ್ರಂಥಿಯೇ ಇರಬೇಕೆನ್ನಿಸುತ್ತದೆ.
ವಾಸ್ತವವಾಗಿ ಕುಂಡಲಿನಿ ಬೆನ್ನು ಮೂಳೆಯ ಕೆಳಭಾಗದಲ್ಲಿ ಸುಪ್ತವಾಗಿರುವುದಂತೆ. ಕುಂಡಲ ಅಂದರೆನೇ ಸುರುಳಿಯಾಕಾರದ್ದು ಅಂತ. ಈ ಶಕ್ತಿ ಹಾವಿನ ರೂಪದಲ್ಲಿ ಸುರುಳಿ ಸಿಂಬೆಯಾಗಿರುತ್ತದೆ. ಯೋಗದ ಮೂಲಕ ಈ ಹಾವನ್ನು ಜಾಗೃತಗೊಳಿಸಿ ಒಂದೊಂದೇ ಚಕ್ರದ ಮೂಲಕ ಹಾದುಹೋಗುವಂತೆ ಮಾಡಿದರೆ ಕೊನೆಗೆ ಮೆದುಳಿಗೆ ಬಂದು ಸೇರಿಕೊಳ್ಳುತ್ತದೆ. ಆಗ ಪರಮಾನುಭೂತಿ. ಅದಕ್ಕೇ ನಮ್ಮಲ್ಲಿ ಜಾಗೃತ ಕುಂಡಲಿನಿಯ ಪ್ರತೀಕವಾದ ನಾಗರ ಕಟ್ಟೆಗಳನ್ನು ಆರಾಧಿಸುವುದು.
ಈ ಇಡಿಯ ಪ್ರಕ್ರಿಯೆಯನ್ನು ಮತ್ತೊಂದು ಬಗೆಯಲ್ಲಿಯೂ ರಸವತ್ತಾಗಿ ಬಣ್ಣಿಸುತ್ತಾರೆ. ಮೂಲಾಧಾರದಲ್ಲಿರುವ ಕುಂಡಲಿನಿ ಎಲ್ಲ ಶಕ್ತಿಯ ಕೇಂದ್ರ. ಈ ಶಕ್ತಿಯೇ ದುರ್ಗೆ! ಬಹುಪಾಲು ಸಮಯ ಆಕೆ ಶಾಂತಳಾಗಿಯೇ ಇರುತ್ತಾಳೆ. ಪ್ರಯತ್ನಪೂರ್ವಕವಾಗಿ ಆಕೆಯನ್ನು ಜಾಗೃತಗೊಳಿಸಿದರೆ ಆಕೆ ಆರು ಚಕ್ರಗಳ ಮೂಲಕ ಹಾದು ಸಹಸ್ರಾರದಲ್ಲಿ ಕುಳಿತಿರುವ ಶಿವನೊಡನೆ ಒಂದಾಗುತ್ತಾಳೆ. ಯೋಗಿಯೊಬ್ಬ ಅನುಭವಿಸುವ ಪರಮಾನಂದವನ್ನು ಶಿವ-ಶಿವೆಯರ ಮಿಲನಕ್ಕೆ ಹೋಲಿಸಿದ್ದಾರೆ ನಮ್ಮವರು.
ಕುಂಡಲಿನಿಯ ಶಕ್ತಿಗೂ ಬೆನ್ನಹುರಿಗೂ ನಿಕಟವಾದ ಸಂಪರ್ಕವಿದೆ. ಹೀಗಾಗಿಯೇ ಯೊಗಾಸನಗಳಲ್ಲೂ ಬೆನ್ನಹುರಿ ನೇರವಾಗಿಟ್ಟುಕೊಳ್ಳುವ ಅಭ್ಯಾಸಕ್ಕೇ ಮೊದಲ ಪ್ರಾಶಸ್ತ್ಯ. ನೀರು ಹರಿಯುವ ಪೈಪು ಬಾಗಿ ಬೆಂಡಾಗಿದ್ದರೆ ನೀರು ಸರಾಗವಾಗಿ ಹರಿಯಲು ಹೇಗೆ ಅಡಚಣೆಯಾಗುವುದೋ ಹಾಗೆಯೇ ಬೆನ್ನಹುರಿ ನೇರವಾಗಿಲ್ಲದಿದ್ದರೆ ಕುಂಡಲಿನಿಯೂ ಸರಾಗವಾಗಿ ಮೇಲೇರಲಾರದು. ಈ ಬೆನ್ನಹುರಿಗೆ ಹೊಂದಿಕೊಂಡಂತೆ ಇರುವುದೇ ಇಡಾ ಮತ್ತು ಪಿಂಗಳವೆಂಬ ನಾಡಿಗಳು. ಇವೆರಡೂ ನಾಡಿಗಳ ನಡುವಿನ ಖಾಲಿ ಸ್ಥಳವೇ ಸುಷುಮ್ನಾ. ಈ ಸುಷುಮ್ನಾದ ಮೂಲಕವೇ ಏರೋದು ಕುಂಡಲಿನಿ.
ಇವಿಷ್ಟೂ ತುಂಬಾ ಟೆಕ್ನಿಕಲ್ ಆಯ್ತು. ಮೂಲಭೂತ ಪ್ರಶ್ನೆ ಮಾತ್ರ ಹಾಗೆಯೇ ಉಳಿತು. ಕುಂಡಲಿನಿಯಲ್ಲಿ ಶಕ್ತಿ ಇರೋದು ನಿಜವಾ? ವಿಜ್ಞಾನ ಅಧಿಕೃತವಾಗಿ ಈ ಕುರಿತಂತೆ ಏನೂ ಹೇಳಿಲ್ಲವಾದರೂ ಧಿಕ್ಕರಿಸುವ ಧೈರ್ಯವನ್ನೂ ತೋರುತ್ತಿಲ್ಲ. ಆದರೆ ಅನುಭವಕ್ಕೆ ಬರುವ ಕೆಲವು ಸಂಗತಿಗಳ ಆಧಾರದ ಮೇಲೆ ಕುಂಡಲಿನಿ ಶಕ್ತಿಯ ಇರುವನ್ನು ಅಂದಾಜಿಸಬಹುದು.
ಹಾಗೇ ಯೋಚಿಸಿ. ಮನಸ್ಸಿನಲ್ಲಿ ಬಗೆಬಗೆಯ ಆಸೆಗಳು ಭುಗಿಲೇಳುತ್ತಲೇ ಇರುತ್ತವೆ. ತಿನ್ನುವ, ಕುಡಿಯುವ, ನೋಡುವ, ಸ್ಪರ್ಶಿಸುವ, ಭೋಗಿಸುವ ಬಗೆ-ಬಗೆಯ ಬಯಕೆಗಳು. ಆದರೆ ನೀವೊಂದು ಮುಖ್ಯವಾದ ಪರೀಕ್ಷೆ ಬರೆಯಬೇಕಾದ ದಿನ ಬಂದಿದೆಯೆಂದುಕೊಳ್ಳಿ, ಅವತ್ತು ಹಸಿವಿದ್ದರೂ ತಿನ್ನಬೇಕೆನಿಸುತ್ತಿಲ್ಲ; ಭೋಗದ ಬಯಕೆಗಳು ಹತ್ತಿರಕ್ಕೂ ಸುಳಿಯುತ್ತಿಲ್ಲ. ಹೀಗೇಕೆ? ಒಳ್ಳೆಯ ಭಜನೆಯೊಂದನ್ನು ಕೇಳಿದ ಮೇಲೆ ಸ್ವಲ್ಪ ಹೊತ್ತು ಕಣ್ಣುಮುಚ್ಚಿ ಕೂರಬೇಕೆನಿಸುತ್ತಲ್ಲ!! ಆಗೆಲ್ಲಾ ನಾವೂ ಉದ್ಗರಿಸುತ್ತೇವೆ, ‘ಮನಸ್ಸು ಅದೆಷ್ಟು ಎತ್ತರಕ್ಕೇರಿತ್ತಲ್ಲ’ ಅಂತ. ನಿಜ ಹೇಳಿ. ಮನಸ್ಸು ಕೆಳಕ್ಕಿಳಿಯುವುದು, ಎತ್ತರಕ್ಕೇರುವುದು ಅಂತೆಲ್ಲ ಮಾತಾಡುವ ನಮಗೆ ನಿಜವಾಗಿಯೂ ಮನಸ್ಸು ಎಲ್ಲಿದೆ ಎಂಬುದು ಗೊತ್ತೇನು? ವಾಸ್ತವವಾಗಿ ಕುಂಡಲಿನಿ ಮೂಲಾಧಾರದಲ್ಲಿದ್ದಾಗ ಮನಸ್ಸು ಭೋಗದ ಚಿಂತನೆಯಲ್ಲಿ ಲೀನವಾಗಿರುತ್ತದೆ. ಅಲ್ಲಿಂದ ಅದು ಒಂದೊಂದು ಹಂತ ಮೇಲೇರಿದಂತೆಲ್ಲ ಮನೋಭಾವನೆಗಳು ಬದಲಾಗುತ್ತ ಸಾಗುತ್ತದೆ.
ಋಗಳು ಕುಂಡಲಿನಿ ಸಾಗುವ ಹಾದಿಯನ್ನು ಗಮನಿಸಿ ಮಾರ್ಗದುದ್ದಕ್ಕೂ ಚಕ್ರಗಳನ್ನು ಗುರುತಿಸಿದ್ದಾರೆ. ಅತ್ಯಂತ ಕೆಳಮಟ್ಟದ್ದು ಮೂಲಾಧಾರ. ಇಲ್ಲಿಯೇ ಕುಂಡಲಿನಿ ಸದಾ ಸುರುಳಿಯಾಗಿರೋದು. ಇಲ್ಲಿಂದ ಮೇಲೆ ಮಣಿಪೂರ, ಆಮೇಲೆ ಸ್ವಾಧಿಷ್ಠಾನ. ಮತ್ತೂ ಸ್ವಲ್ಪ ಮೇಲೇರಿದರೆ ಅನಾಹತ. ಆನಂತರ “ಶುದ್ಧ, ಭ್ರೂ ಮಧ್ಯೆ ಆಜ್ಞಾ. ಈ ಆರು ಚಕ್ರಗಳನ್ನು ದಾಟಿದರೆ ಸೇರೋದು ಮೆದುಳಿನಲ್ಲಿನ ಸಹಸ್ರಾರ. ಪ್ರತಿಯೊಂದು ಚಕ್ರವೂ ಒಂದೊಂದು ಕಮಲದಂತೆ ಚಿತ್ರಿಸಲ್ಪಟ್ಟಿದೆ. ಅದಕ್ಕಿರುವ ದಳಗಳ ಸಂಖ್ಯೆಯೂ ಬೇರೆ-ಬೇರೆ. ಸಹಸ್ರಾರ ಕೆಳಮುಖವಾಗಿ ಇನ್ನೂ ಅರಳದಿರುವ ಸಾ”ರ ದಳಗಳ ಕಮಲವಂತೆ. ಕುಂಡಲಿನಿ ಒಂದೊಂದೇ ಚಕ್ರವನ್ನು ಹಾದು ಹೋಗುತ್ತಿದ್ದಂತೆ ಆಯಾ ಕಮಲಗಳು ಅರಳುತ್ತವೆ. ಆಗೆಲ್ಲ ಬಗೆಬಗೆಯ ಶಕ್ತಿಗಳು ಸಿದ್ಧಿಯಾಗುತ್ತವೆ. ಕೆಲವರಿಗೆ ನೀರಿನ ಮೇಲೆ ನಡೆಯುವ, ಗಾಳಿಯಲ್ಲಿ ತೇಲುವ ಶಕ್ತಿ ದೊರೆತರೆ ಇನ್ನೂ ಕೆಲವರಿಗೆ ಇತರರ ಮನಸ್ಸನ್ನೇ ಓದಿಬಿಡುವ ಶಕ್ತಿ ಬಂದೀತು. ಈ ಕುಂಡಲಿನಿ ಸಹಸ್ರಾರವನ್ನು ಮುಟ್ಟಿದೊಡನೆ ಕೆಳಮುಖವಾಗಿರುವ ಆ ಕಮಲ ಊರ್ಧ್ವಮುಖಿಯಾಗಿ ಅರಳಿ ನಿಲ್ಲುವುದಂತೆ. ಆಗಲೇ ಯೋಗಿಯೊಬ್ಬ ಪರಿಪೂರ್ಣ ಆನಂದವನ್ನು ತನ್ನದಾಗಿಸಿಕೊಳ್ಳುವುದು. ಆಗಲೇ ಆತನಿಗೆ ಬಾಹ್ಯ ಪ್ರಜ್ಞೆ ಕಳೆದುಹೋಗಿ ಪೂರ್ಣ ಸಮಾಧಿಯ ಅನುಭೂತಿಯಾಗೋದು.
ಇಂತಹ ಸ್ಥಿತಿಗೇರಲು ಎರಡು ಮಾರ್ಗಗಳಿವೆ. ಮೊದಲನೆಯದು ಅರಿ”ಗೇ ಬರದಂತೆ ಅಚಾನಕ್ಕಾಗಿ ಜ್ಞಾನದ ಹೊಸ್ತಿಲನ್ನು ಎಡವಿ ಬಿದ್ದು ಸಮಾಧಿಗೇರಿಬಿಡುವುದು, ಮತ್ತೊಂದು ನಿರಂತರ ಅಭ್ಯಾಸದಿಂದ ಹಂತ-ಹಂತವಾಗಿ ಮೇಲೇರಿ, ಬೇಕೆಂದಾಗ ಈ ಅನುಭವದ ಸವಿ ಸವಿಯುವುದು. ನಮ್ಮ ಋಷಿಗಳು ಎರಡನೇ ಸಾಲಿಗೆ ಸೇರಿದವರು. ಅಷ್ಟೇಅಲ್ಲ, ಇತರರು ಇದನ್ನು ಸಾಧಿಸಿಕೊಳ್ಳಲು ಬೇಕಾದ ಕ್ರಮವನ್ನೂ ನಿರೂಪಿಸಿಕೊಟ್ಟರು. ಅಚಾನಕ್ಕಾಗಿ ಕುಂಡಲಿನಿ ಮೇಲೇರಿದ ಕೆಲವರಿಗೆ ಪೊದೆಯಲ್ಲಿ, ಗುಹೆಯಲ್ಲಿ ದೇವತೆಗಳು ಕಂಡರು; ದೇವದೂತರು ಅನ್ನ-ನೀರು ಕೊಟ್ಟರು. ಅನಕ್ಷರಸ್ಥ ಓದುವಂತೆ ಮಾಡಿದರು. ಈ ಬಗೆಯ ಅನುಭವಗಳ್ಯಾವುವೂ ಸುಳ್ಳಾಗಿರಲಿಕ್ಕಿಲ್ಲ. ಆದರೆ ಕುಂಡಲಿನಿ ಅಚಾನಕ್ಕು ಸಹಸ್ರಾರ ಮುಟ್ಟಿದ ಆನಂದವನ್ನು ಜೀರ್ಣಿಸಿಕೊಳ್ಳಲಾಗಲಿಲ್ಲ ಅಷ್ಟೇ. ಇಂಥವರು ಹುಟ್ಟುಹಾಕಿದ ಮತ ಪಂಥಗಳು ಕೆಲವಷ್ಟು ಒಳ್ಳೆಯ ಅಂಶಗಳನ್ನು ಹೊಂದಿದ್ದರೂ ಅವು ಸಮಾಜಕ್ಕೆ ಉಂಟುಮಾಡಿದ ಅನಾಹುತವೇ ಹೆಚ್ಚು. ಹಾಗೆಂದು ಸ್ವಾಮಿ ವಿವೇಕಾನಂದರ ಅಭಿಮತ.
ಭಾರತ ಈ ಕುಂಡಲಿನಿಯ ಜಾಗೃತಿಗೆ ರೂಪಿಸಿದ ವೈಜ್ಞಾನಿಕಕ್ರಮವನ್ನು ಯೋಗ ಎಂದು ಕರೆತು. ಶಕ್ತಿ ಉತ್ಪಾದನೆಯ ತೀವ್ರ ಪ್ರಯತ್ನಕ್ಕೆ ಧ್ಯಾನ ಎಂಬ ಹೆಸರು ಕೊಟ್ಟಿತು. ಹಾಗಂತ ಯೋಗ ಸಲೀಸಾದುದಲ್ಲ. ಮನಸ್ಸು ಕೇಳಮುಖವಾಗಿದೆಯೆಂದರೆ ಕುಂಡಲಿನಿ ಕೆಳ ಚಕ್ರದಲ್ಲಿದೆ ಅಂತರ್ಥ ತಾನೇ? ಅದಕ್ಕೆ ಮೊದಲು ಮನಸ್ಸನ್ನು ಅಭ್ಯಾಸಪೂರ್ವಕವಾಗಿ ಮೇಲೆತ್ತಬೇಕು. ಅಂದರೆ ಭೋಗದ ವಾಸನೆ ಬಿಡಬೇಕು. ಈ ಬಗೆಯ ವಿರಾಗಿಯಲ್ಲಿ ಕುಂಡಲಿನಿ ಸುಮ್ಮನಿರುವುದಕ್ಕೆ ಸಾಧ್ಯವೇ ಇಲ್ಲ ಮತ್ತು ಜಾಗೃತಗೊಂಡ ಕುಂಡಲಿನಿಗೆ ಸುಷುಮ್ನಾದ ಮೂಲಕ ಮೇಲೇರದೇ ಬೇರೆ ವಿಧಿಲ್ಲ. ಆಗ ಅವನದ್ದು ಧ್ಯಾನಕ್ಕೆ ಮೊದಲ ಹೆಜ್ಜೆ. ಇವಿಷ್ಟೂ ಆಗುವ ವೇಳೆಗೆ ಮನಸ್ಸು ಸಾಕಷ್ಟು ಮೆತ್ತಗಾಗಿರುತ್ತದೆ. ತನ್ನ ಹಾರಾಟವನ್ನು ಕಡಿಮೆ ಮಾಡಿ ಹೇಳಿದಂತೆ ಕೇಳಿಕೊಂಡು ಬಿದ್ದಿರುತ್ತದೆ. ಈಗ ಇದನ್ನು ಬೇಕಾದೆಡೆ ಕೇಂದ್ರೀಕರಿಸುವ ಪ್ರಯತ್ನ ಮಾಡಬೇಕು. ಇದನ್ನು ದೀರ್ಘಕಾಲ ಅಭ್ಯಾಸ ಮಾಡಿದರೆ ಇದು ಧ್ಯಾನವಾಗಿಬಿಡುತ್ತದೆ.
ಹೀಗೆ ಧ್ಯಾನದಿಂದ ಶೇಖರಿಸಲ್ಪಟ್ಟ ಅಷ್ಟೂ ಶಕ್ತಿಯು ಸುಷುಮ್ನಾ ನಾಳದ ಮೂಲಕ ಹರಿಯಲು ಶುರುವಾತೆಂದರೆ ಅಪರೂಪದ ಅನುಭವಗಳಾಗುತ್ತವೆ. ಇವು ನಮ್ಮ ಕಲ್ಪನೆಯನ್ನು, ಕನಸನ್ನೂ ಮೀರಿಸಬಹುದಾದ ವೈಭವದ ಅನುಭವಗಳು. ಒಂದೊಂದು ಚಕ್ರದ ಕಮಲವೂ ಕುಂಡಲಿನಿ ಶಕ್ತಿ ಪ್ರವಾಹದಿಂದ ಅರಳುತ್ತ ಹೋದಂತೆ ಸೃಷ್ಟಿಯ ರಹಸ್ಯ ತೆರೆದುಕೊಳ್ಳುತ್ತ ಹೋಗುವುದು. ಅಪಾರವಾದ ಶಕ್ತಿ ಹರಿಯಲಾರಂಭಿಸುವುದು. ಹೀಗೆ ಕ್ರಮಬದ್ಧ ಸಾಧನೆಂದ ಶಕ್ತಿ ಸಂಚಯ ಮಾಡಿಕೊಂಡವರು ಋಗಳೆನಿಸಿದರು. ಅವರೇ ವೇದಗಳನ್ನು ಬೆಳಕಿಗೆ ತಂದರು. ಭೂಗೋಳ, ಖಗೋಳ, ಅಣು ವಿಜ್ಞಾನ, ಆಯುರ್ವೇದವೇ ಮೊದಲಾದವುಗಳ ಅಂತರಂಗವನ್ನು ಅರಿತು ನಮ್ಮೆದುರಿಗಿಟ್ಟರು. ಇಷ್ಟು ಶ್ರೇಷ್ಠ “ಚಾರಗಳನ್ನು ಸಮಾಜಕ್ಕೆ ನೀಡುವಾಗ ಇದಕ್ಕೊಂದು ಪೇಟೆಂಟ್ ಪಡೆಯಬೇಕೆಂದು ಅವರಿಗೆಂದೂ ಅನಿಸಲಿಲ್ಲ. ತಮ್ಮ ವಿಚಾರಗಳನ್ನು ಉಳಿಸುವುದಕ್ಕೋಸ್ಕರ “ರೋಧಿಗಳ ದಮನ ಮಾಡಲು ಅವರು ಕತ್ತಿ ಹಿಡಿಯಲಿಲ್ಲ. ಏಕೆಂದರೆ ಅವರು ಯೋಗಿಗಳಾಗಿದ್ದರು, ಭೋಗಿಗಳಲ್ಲ!
ಅಂದಹಾಗೆ ಒಂದು ಮಾತು. ವ್ಯಕ್ತಿಯೊಬ್ಬ ಕುಂಡಲಿನಿ ಜಾಗೃತಗೊಳಿಸಿಕೊಂಡು ವಿಶೇಷ ಜ್ಞಾನ ಪಡೆದು ಋಷಿಯಾಗುತ್ತಾನೆ, ಗುರುವಾಗುತ್ತಾನೆ. ಹಾಗೆಯೇ ರಾಷ್ಟ್ರಕ್ಕೂ ಕುಂಡಲಿನಿ ಇದೆಯಾ? ಏಕಿಲ್ಲ. ರಾಷ್ಟ್ರಕ್ಕೆ ಆತ್ಮಇರಬಹುದಾದರೆ ಕುಂಡಲಿನಿಯೂ ಇರಲೇಬೇಕು. ಒಮ್ಮೆ ಭಾರತದ ಭೂಪಟವನ್ನು ಕಣ್ಣೆದುರಿಗಿಟ್ಟುಕೊಂಡು ನೋಡಿ. ಮೂಲಾಧಾರವಾದ ಕನ್ಯಾಕುಮಾರಿಯಲ್ಲಿ ಸುಪ್ತಳಾಗಿರುವ ದುರ್ಗೆಯು ಮೈಕೊಡವಿ ಎದ್ದು ನಿಂತು ಸಹಸ್ರಾರವಾದ ಹಿಮಾಲಯದಲ್ಲಿ ನೆಲೆ ನಿಂತಿರುವ ಶಿವನನ್ನು ಸೇರಿಕೊಂಡುಬಿಟ್ಟರೆ ರಾಷ್ಟ್ರದ ಕುಂಡಲಿನಿ ಷಟ್ಚಕ್ರಗಳನ್ನು ಭೇದಿಸಿದಂತೆಯೇ. ವಿಶ್ವಗುರುವಾಗುವ ಕೊನೆಯ ಹಂತ ಅದೇ!

Tuesday 18 August 2015

ಇದು ಬೌದ್ಧಿಕ ಕ್ಷತ್ರಿಯರ ಯುದ್ಧ

 ಅಮೇರಿಕಾದ ಪ್ರಿಸ್ನಟನ್ ನ ಶಾಲೆ. ಅಲ್ಲಿನ ಶಿಕ್ಷರರೊಬ್ಬರು ದೆಹಲಿ ಮೂಲದ ಹಿಂದೂವೊಬ್ಬರನ್ನು ವಿವೇಕಾನಂದರು ಮತ್ತು ರಾಮಕೃಷ್ಣರ ಕುರಿತಂತೆ ಮಕ್ಕಳಿಗೆ ಪಾಠ ಮಾಡಬಾರದೆಂದು ನುಡಿದರು.ಆಶ್ಚರ್ಯಚಕಿತರಾದ ಆತ ಹುಬ್ಬೇರಿಸಿ ಏಕೆಂದು ಕೇಳಿದರೆ ಅವರು ಸಲಿಂಗಕಾಮಿಗಳಾಗಿದ್ದರಂತೆ ಎಂಬ ಉತ್ತರ ಬಂತು.ಬೆಚ್ಚಿ ಬಿದ್ದ ಭಾರತೀಯ ಮೂಲದ ವ್ಯಕ್ತಿ ಹಾಗೆ ಹೇಳಿದ್ದು ಯಾರೆಂದು ಕೇಳಿದ್ದಕ್ಕೆ ಅವರು ಆತನ ಕೈಗೊಂದು ಪುಸ್ತಕವಿತ್ತರು.ಅದು ಜೆಫ್ರಿ ಕೃಪಾಲ್ ಬರೆದಿದ್ದ ‘ಕಾಳಿಯ ಮಕ್ಕಳು’. ಕೃತಿಯುದ್ದಕ್ಕೂ ವಿಕೃತಿಗಳೇ ತುಂಬಿದ್ದುದನ್ನು ಕಂಡು ಅಸಹ್ಯದಿಂದ ಬೆಂದು ಹೋದ ಆತ ಅಮೇರಿಕಾದ ಬುದ್ಧಿವಂತರ ನಡುವೆ ತಿರುಗಾಡುತ್ತಿರುವ ಹಿಂದೂಗಳ ಅವಹೇಳನ ಮಾಡುವ ಅನೇಕ ಪುಸ್ತಕಗಳನ್ನು ಹುಡುಕಿದರು.ಅದರ ಕುರಿತಂತೆ ಇತರ ಹಿಂದೂಗಳಿಗೆ ಗೊತ್ತಿರಲಿಲ್ಲವೆಂದಲ್ಲ.ಆದರೆ ಅವರು ಅದೆಷ್ಟು ಅವಮಾನಿತರಾಗಿದ್ದರೆಂದರೆ ಬಾಯಿ ತೆರೆಯಲಾಗದೇ ಮೌನ ವಹಿಸಿ ಬಿಟ್ಟಿದ್ದರು.ಶಾಲೆಗಳಲ್ಲಿ ಹಿಂದೂವಾಗಿರುವುದು ಮಗುವೊಂದಕ್ಕೆ ಅತ್ಯಂತ ಕಠಿಣವಾಗಿತ್ತು.ಓರಗೆಯ ಕ್ರಿಶ್ಚಿಯನ್ನರು ಹಿಂದೂ ದೇವ-ದೇವಿಯರನ್ನು ಆಡಿಕೊಂಡು ನಗುವಾಗ ಇವರೆಲ್ಲ ಬರಿಯ ಮೂಕ ಪ್ರೇಕ್ಷಕರಷ್ಟೇ.
ರಾಜೀವ್ ಮಲ್ಹೋತ್ರಾ! ಬ್ರೇಕಿಂಗ್ ಇಂಡಿಯಾ, ಬೀಯಿಂಗ್ ಡಿಫರೆಂಟ್, ಇಂದ್ರಾಸ್ ನೆಟ್ ಗಳ ಮೂಲಕ ಅಮೇರಿಕಾದಾದ್ಯಂತ ಹರಡಿಕೊಂಡಿರುವ ಹಿಂದೂ ವಿರೋಧಿಗಳಿಗ ಸೂಕ್ತ ಉತ್ತರ ಕೊಡುತ್ತಿರುವ ವ್ಯಕ್ತಿ. ಎಡಪಂಥದ ಗಬ್ಬು ಘಾಟಿನಲ್ಲಿಯೇ ಕಾಲದೂಡುತ್ತಿರುವ ಭಾರತದ ಬುದ್ಧಿ ಜೀವಿಗಳ ಆರಾಧ್ಯವೆನಿಸಿದ್ದವರನ್ನೆಲ್ಲ ತನ್ನ ಭೌದ್ಧಿಕ ಗದಾಪ್ರಹಾರದಿಂದ ಝಾಡಿಸಿ ಕೊಡವಿ ಬಿಟ್ಟಿರುವ ಜಟ್ಟಿ ಆತ.
ತನ್ನ ಮಗು ಓದುತ್ತಿರುವ ಪ್ರಿನ್ಸ ಟನ್ ನ ಶಾಲೆಯೊಂದು ಆತನಲ್ಲಿ ಭಾರತದ ಕುರಿತಂತೆ, ಹಿಂದೂ ಧರ್ಮದ ಕುರಿತಂತೆ ಜಿಜ್ಞಾಸೆ ಹುಟ್ಟು ಹಾಕಿತ್ತು.ಅವರು ಅಮೇರಿಕದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನಗಳಿಗೆ ಹೋಗಲು ಶುರು ಮಾಡಿದರು.ಅವರಿಗೆ ಅಲ್ಲಿ ಮತ್ತೊಂದು ಅಚ್ಚರಿ ಕಾದಿತ್ತು.ಜುದಾಯಿಸಂನ ಬಗ್ಗೆ ರಬ್ಬಿಗಳು,ಬುದ್ಧ ಪಂಥದ ಕುರಿತಾಗಿ ಭಿಕ್ಷುಗಳು,ಇಸ್ಲಾಂನ ಬಗ್ಗೆ ಇಮಾಮ್ ಗಳು ಮಾಡನಾಡಿದರೆ,ಹಿಂದೂ ಧರ್ಮದ ಕುರಿತಾಗಿ ಮಾತ್ರ ಹಿಂದೂಗಳೇ ಅಲ್ಲದ ಯನಿವರ್ಸಿಟಿಯ ಪ್ರೊಫೆಸರುಗಳು ಮಾಡನಾಡುತ್ತಿದ್ದರು.ಸಂಸ್ಕೃತವನ್ನು ತಿಳಿಯುವುದೆಂದರೆ ಹಿಂದೂ ಧರ್ಮದ ಸಾಹಿತ್ಯವನ್ನು ಅರೆದು ಕುಡಿದಿರುವಂತೆ ಎಂಬುದು ಅವರ ಭಾವನೆಯಾಗಿತ್ತು.ರಾಜೀವ್ ಗೆ ಇದು ಸರಿ ಕಾಣಲಿಲ್ಲ.ಅವರು ಅಮೇರಿಕನ್ನರ ಗ್ರಹಿಕೆಯನ್ನು ವ್ಯವಸ್ಥಿತವಾಗಿ ಖಂಡಿಸಿ ಪತ್ರಿಕೆಗಳಿಗೆ ಲೇಖನ ಬರೆಯಲಾರಂಭಿಸಿದರು.
ವೆಂಡಿ ಡೋನಿಯರ್ ಮತ್ತು ಆಕೆಯ ಶೀಷ್ಯ ವೃಂದ ಹಿಂದೂ ಧರ್ಮದ ಮೇಲೆ ಎಸಗಿರುವ ಆಘಾತ ಈಗ ಮುಕ್ತ ಚರ್ಚೆಗೆ ಬಂತು.ದೆಹಲಿಯ ವಕಿಲೇ ಮೋನಿಕಾ ಅರೋರಾ ಈ ಚರ್ಚೆಗಳಿಂದ ಪ್ರೇರೆಪಿತರಾಗಿ ವೆಂಡಿ ಡೋನಿಯರ್ ಳ ಹಿಂದೂ ಧರ್ಮಕ್ಕೆ ವಿರುದ್ಧವಾಗಿರುವ ಕೃತಿಯೊಂದರ ಮೇಲೆ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಿದಳು.ಅಲ್ಲಿಗೆ ಹಿಂದೂ ಧರ್ಮ ಇನ್ನು ಅಪದ್ಧಗಳನ್ನು ಸಹಿಸಲಾರದೆಂಬ ಸ್ಪಷ್ಟ ಸಂದೇಶ ಜಗತ್ತಿಗೆ ಹೋಯ್ತು.ಅಕೇಯ ಕೃತಿಯಲ್ಲಿದ್ದ ತಪ್ಪುಗಳನ್ನು ಪುಟಸಂಖ್ಯೆಗಳ ಸಮೇತ ಉಲ್ಲೇಖ ಮಾಡಿ ನ್ಯಾಯಾಲದ ಮುಂದಿರಸಲಾಯಿತು.ಆಕೆಯ ಭಾರತದ ಭಕ್ತರು,ಪಶ್ಚಿಮದ ಶಿಷ್ಯರು ಹಿಂದೂ ಧರ್ಮದ ಸಹಿಷ್ಣು ವಿಚಾರಧಾರೆ ಸತ್ತೇ ಹೊಯಿತೆಂದು ಒಂದೇ ಕಣ್ಣಿನಲ್ಲಿ ಅತ್ತರು.ಯಾರೂ ‘ಕ್ಯಾರೆ’ ಎನ್ನಲಿಲ್ಲ.ಕೊನೆಗೆ ಕೆಲವು ಗೂಂಡಾಗಳು ಈ ಕೃತಿಯ ವಿರುದ್ಧನಿಂತಿದ್ದಾರೆಂದು ಪುಕಾರು ಹಬ್ಬಿಸಿ ಜನಸ್ಪಂದನೆಗಾಗಿ ಕಾದರು.ಲಾಭವಾಗಲಿಲ್ಲ,ಪ್ರಕಾಶಕರಾದ ಪೆಂಗ್ವಿನ್ ಸಂಸ್ಥೆ ಈ ಪುಸ್ತಕವನ್ನು ಮರಳಿಪಡೆದು ಡೋನಿಯರ್ ತಪ್ಪು ಮಾಡಿದ್ದಾಳೆಂಬುದನ್ನು ಅನುಮೋದಿಸಿತು.
ಹಾಗೆ ನೋಡಿದರೆ ಈ ಇಡಿಯ ಹೋರಾಟದಲ್ಲಿ ರಾಜೀವ್ ಮಲ್ಹೋತ್ರಾ ನೇರವಾಗಿ ಇಳಿದೇ ಇರಲಿಲ್ಲ ಆದರೆ ಅಮೇರಿಕಾದಲ್ಲಿ ಅವರು ಶುರು ಮಾಡಿದ ಬೌದ್ಧಿಕ ಸಮರ ಜಗತ್ತಿನ ಎಲ್ಲ ಹಿಂದೂಗಳ ಆತ್ಮಸ್ಥೈರ್ಯ ವೃದ್ಧಿಸಿತ್ತು.
ರಾಜೀವ್ ಮಲ್ಹೋತ್ತಾ ಅಮೇರಿಕನ್ನರ,ಬುದ್ಧಿಜೀವಿಗಳ,ಕ್ರಿಶ್ಚಿಯನ್ ಮಿಷಿನರಿಗಳ ವಿರುದ್ಧ ತೊಡೆತಟ್ಟಿ ಸಮರಕ್ಕೆ ನಿಂತರು.ಎಲ್ಲಿಯೂ ಭಾವನೆಗಳು ಬೌದ್ಧಿಕ ಯುದ್ದಧವನ್ನು ಸೋಲಿಸದಂತೆ ಎಚ್ಚರಿಕೆ ವಹಿಸಿದರು.ಭಾರತದ ಕುರಿತಂತೆ,ಹಿಂದೂ ಧರ್ಮದ ಕುರಿತಂತೆ ಅಮೆರಿಕನ್ ಪಂಡಿತರು ಎತ್ತಿರುವ ಪ್ರಶ್ನೆಗಳಿಗೆ ಅವರದೇ ಶೈಲಿಯಲ್ಲಿ ಉತ್ತರಿಸಲಾರಂಭಿಸಿದರು.ಭಾರತನ್ನು ಅವಹೇಳನನ ಗೈಯುವ, ಹಿಂದೂ ಧರ್ಮವನ್ನು ತುಚ್ಛವಾಗಿ ಕಾಣುವ ಬಿಳಿಯರ ಪ್ರಯತ್ನಕ್ಕೆ ತಡೆಗೋಡೆಯಾಗಿ ನಿಂತರು.ಅಲ್ಲಿಯವರೆಗೆ ಸುಪ್ತವಗಿದ್ದ ಹಿಂದೂ ಶ್ರದ್ಧೆ ಜಾಗೃತವಾಯ್ತು.ರಾಜೀವ್ ಮಲ್ಹೋತ್ರಾ ಹಿಂದೂಗಳನ್ನು ಅಂತಾರಾಷ್ಟರೀಯ ವೇದಿಕೆಯಲ್ಲಿ ಸಮರ್ಥಿಸಿಕೊಳ್ಳುವ ಸಮರ್ಥ ವ್ಯಕ್ತಿಯಾಗಿಬಿಟ್ಟಿದ್ದರು.ಅವರ ಬ್ರೇಕಿಂಗ್ ಇಂಡಿಯಾ ಅಂತೂ ಭಾರತವನ್ನು ಛಿದ್ರ ಛಿದ್ರವಾಗಿಸುವ ಮಿಶಿನರಿಗಳ ಕೈವಾಡಕ್ಕೆ ಹಿಡಿದ ಕೈಗನ್ನಡಿಯಾಯ್ತು.
ಸಹಜವಾಗಿಯೇ ಇಷ್ಟೂ ದಿನ ಸುಳ್ಳನ್ನು ಸತ್ಯವೆಂದುನಂಬಿಸುತ್ತಾ ಬಂದಿದ್ದ ಪಶ್ಚಿಮದ ಪಂಡಿತರ ಬೆವರು ಹರಿಯಿತು.ರಾಜೀವ್ ಮಲ್ಹೋತ್ರಾರನ್ನು ಚರ್ಚೆಗೆ ಆಹ್ವಾನಿಸುವುದನ್ನೇ ಬಿಟ್ಟು ಬಿಟ್ಟರು.ಅವರ ಪ್ರಶ್ನೆಗಳಿಗೆ ಉತ್ತರಿಸಲಾಗದವರು ಅವರ ಅಧ್ಯಯನದ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನೆ ಎತ್ತಿದರು.ಅಮೆರಿಕದಲ್ಲಿ ಬಿಡಿ, ಭಾರತದಲ್ಲೂ ಸಮೂಹ ಮಾಧ್ಯಮದ ಆಯಕಟ್ಟಿನಲ್ಲಿರುವವರು ಈ ಎಲ್ಲ ಬೆಳವಣಿಗೆಗಳಿಂದ ವಿಚಲಿತರಾಗಿ ಮನಸ್ಸಿಗೆ ಬಂದಂತೆ ಮಾತನಾಡಿದರು.ಅದು ಹಾಗೆಯೇ.ಬರ್ಖಾ,ರಾಜ್ ದೀಪ್ ರಿಗಷ್ಟೇ ಅಲ್ಲ, ನಮ್ಮ ಅನೇಕ ವಿಶ್ವವಿದ್ಯಾಲಯಗಳ ಪ್ರಮುಖ ಪ್ರೋಫೆಸರುಗಳಿಗೆ ಈ ಅಮೇರಿಕದ ಪಂಡಿತರ ಕೃತಿಗಳೇ ಅಧ್ಯಯನಕ್ಕೆ ಆಹಾರ.ಇವರುಗಳೆಲ್ಲ ಭಾರತವನ್ನು ನೋಡುವುದು ಈ ಕೃತಿಗಳ ಕಣ್ಣಿನಿಂದಲೇ.
ಎಷ್ಟು ಅಚ್ಚರಿಯಲ್ಲವೆ? ಋಗ್ವೇದದ ಅನುವಾದ ನಮಗೆ ಮ್ಯಾಕ್ಸ್ ಮುಲ್ಲರನದೇ ಆಗಬೇಕು.ಹಿಂದೂ ಪ್ರಜ್ಞೆಯ ಕುರಿತಂತೆ ವೆಂಡಿ ಡೋನಿಯರಳೇ ಹೇಳಬೇಕು.ಕೊನೆಗೆ ಪೂರ್ವದ ಸಾಹಿತ್ಯದ ಕುರಿತಂತೆ ಅಧಿಕಾರಿಯುತವಾಗಿ ಮಾತನಾಡಲು ಶೆಲ್ಡನ್ ಪೊಲ್ಲಾಕ್ ನೇ ಬೇಕು.ಆತ ಮತ್ತೊಬ್ಬ ಮಹಾ ಮೋಸಗಾರ,ಆಚರಣೆಗಳಿಂದ ಹಿಂದುವಂತೆ ಕಾಣಿಸಿಕೊಳ್ಳುತ್ತಾನೆ.ನಿಮ್ಮ ಮನೆಗೋ,ಮಠಕ್ಕೋ ಬಂದರೆ ನೇರ ದೇವರೆದುರಿಗೆ ನಿಂತು ‘ಅಗ್ನಿಮೀಳೆ’ ಎಂದು ಮಂತ್ರ ಶುರು ಮಾಡಿಯೇಬಿಡುತ್ತಾನೆ.ಅಲ್ಲಿಗೆ ನೀವು ಕ್ಲೀನ್ ಬೊಲ್ಡ್.ನಿಧಾನವಾಗಿ ಆತ ಹಿಂದೂ ಧರ್ಮದ ಕುರಿತಂತೆ ಪ್ರಶ್ನಾರ್ಥಕವಾಗಿ ಮಾತನಾಡಲಾತಂಭಿಸುತ್ತಾನೆ.ನಾವು ತಲೆ ಅಲುಗಾಡಿಸುತ್ತಾ ಅಹುದಹುದೆನ್ನುತ್ತೇವೆ.ಈತನ ಪ್ರಭಾವದಿಂದ ಶೃಂಗೇರಿ ಮಠವೂ ಹೊರ ಬಂದಿಲ್ಲ.ಇನ್ ಫೋಸಿಸ್ ಸಂಸ್ಥೆಯಂತೂ ಪೂರ್ವದ ಸಾಹಿತ್ಯದ ಅನುವಾದಕ್ಕೆಂದು ಆತನಿಗೆ ಯಾರುಯಾರಿಗೂ ನೀಡದಷ್ಟು ಬಲುದೊಡ್ಡ ಮೊತ್ತವನ್ನು ದತ್ತಿಯಾಗಿ ನೀಡಿದೆ.ಈ ಗುಲಾಮ ಮಾನಸಿಕತೆಗೆ ಏನನ್ನುತ್ತೀರಿ?
ಜಗತ್ತೇಲ್ಲ ಈ ರೀತಿಯ ಢೋಂಗಿ ಜನರೊಂದಿಗೆ ನಿಂತಿರುವಾಗ ಏಕಾಂಗಿಯಾಗಿ ಹೋರಾಟ ಶುರು ಮಾಡಿದ್ದು ರಾಜೀವ್ ಮಲ್ಹೋತ್ತಾ.ಆದರೆ ಬರಬರುತ್ತಾ ಅವರ ಶಕ್ತಿ ವೃದ್ಧಿಯಾಯಿತು.ಭಾರತೀಯರು ಸಮಸ್ಯೆಯನ್ನು ಅರಿತುಕೊಳ್ಳಲಾರಂಭಿಸಿದರು.ಹಿಂದೂ ಧರ್ಮದ ಕುರಿತಂತೆ ಆಚರಣೆಯಲ್ಲಿ ನಿಷ್ಠರಾದ ಹಿಂದೂಗಳೇ ಮಾತನಾಡಬೇಕು,ಸಂಸ್ಕೃತದ ಕುರಿತಂತೆ ಅರಿತವರೇ ಹೇಳಬೇಕು ಇವೆಲ್ಲ ಪ್ರಜ್ಞೆ ಜಾಗೃತವಾಯಿತು.
16ನೇ ವಿಶ್ವ ಸಂಸ್ಕೃತ ಸಮ್ಮೇಳನ ಬ್ಯಾಂಕಾಕಿನಲ್ಲಿ ನಡೆದಾಗ ಅಲ್ಲಿಗೆ ರಾಜೀವ್ ಮಲ್ಹೋತ್ರಾ ವಿಶೇಷ ಅತಿಥಿ. ಅಲ್ಲಿ ಅವರು ಮಾತನಾಡುತ್ತಾ ತಾನು ಮುಂದೆ ಬರೆಯಲಿರುವ ಕೃತಿಯಲ್ಲಿ ದಾಖಲಿಸಲಿರುವ ಅಂಶಗಳ ಕುರಿತು ಗಮನ ಸೆಳೆದರು.ಪಶ್ಚಿಮದ ಜನ ಸಂಸ್ಕೃತ ಕಲಿತು ಹೇಳಿದ್ದನ್ನು ನಾವು ಕೇಳಬೇಕೆ? ನಾವು ಪಶ್ಚಿಮ ಕೊಟ್ಟದ್ದನ್ನು ಸ್ವೀಕರಿಸುವ ದಾಸರೆ ಅಥವಾ ಪಶ್ಚಿಮಕ್ಕೂ ಕೊಡಬಲ್ಲ ಸಾಮರ್ಥ್ಯ ನಮ್ಮಲ್ಲಿದೆಯೇ? ಹೀಗೆ ಅನೇಕ ಅಂಶಗಳು ಅದರಲ್ಲಿ ದಾಖಲಾಗಿವೆ ಎಂದಂತೆ ನೆರೆದಿದ್ದ ಸಾಂಪ್ರದಾಯಿಕರೆಲ್ಲ ಆನಂದದಿಂದ ಚಪ್ಪಾಳೆ ತಟ್ಟಿದರೆ ಕೆಲವರಿಗೆ ನಡುಕ ಉಂಟಾಗಿತ್ತು.ಹೇಗಾದರೂ ಮಾಡಿ ಈ ಕೃತಿ ಹೊರಬರದಂತೆ ತಡೆಯಬೇಕೆಂಬ ಪ್ರಯತ್ನ ಶುರುವಾಯ್ತು.
ಪ್ರಿನ್ಸ್ ಟನ್ ನ ಚರ್ಚ್ ಒಂದರಲ್ಲಿ ಶಿಕ್ಷಕನಾದ ರಿಚರ್ಡ್ ಫಾಕ್ಸ್ ಯಂಗ್ ಚಾಲಾಕುತನ ತೋರಿದ.ರಾಜೀವ್ ಮಲ್ಹೋತ್ರಾರ ಪುಸ್ತಕಗಳಲ್ಲಿ ಕೃತಿಚೌರ್ಯವಾಗಿದೆ ಎಂದು ಹುಯಿಲೆಬ್ಬಿಸಿದ.ಅವರ ಪುಸ್ತಕಗಳಲ್ಲಿ ತಾವು ಯಾರಿಂದ ಈ ವಿಚಾರವನ್ನು ಎರವಲು ಪಡೆದಿದ್ದಾರೋ ಅವರ ಹೆಸರನ್ನು ನಮೂದಿಸಿಲ್ಲವೆಂದು ಪುಸ್ತಕ ಪ್ರಕಾಶಕರಿಗೆ ದೂರು ಕೊಟ್ಟ.ಆತನ ಬೆಂಬಲಕ್ಕೆ ಪಿಟಿಷನ್ನಿಗೆಗೆ 192 ಜನ ಸಹಿ ಮಾಡಿದರು.ಭಾರತದಲ್ಲಿ ಅನೇಕ ಎಡಚರು ಅರ್ಧರಾತ್ರಿಯಲ್ಲೂ ಕೊಡೆ ಹಿಡಿದು ಕುಣಿದಾಡಿದರು.ಇತ್ತ ಮಧು ಕಿಶ್ವರ್ ರವರು ರಾಜೀವ್ ರ ಬೆಂವಲಕ್ಕೆ ಬಿಂತು ಪಿಟಿಷನ್ ಜನರ ಮುಂದಿಟ್ಟಾಗ ಏಳಿ ಸಾವಿರಕ್ಕೂ ಹೆಚ್ಚು ಜನ ಸಹಿ ಮಾಡಿದರು.ಹಾಂ!ಕದನ ಈಗಲೂ ನಡೆಯುತ್ತಿದೆ.
ಹೌದು, ಇದು ನಿರ್ಣಾಯಕ ಕದನವೇ.ಸುಳ್ಳನ್ನು ಸತ್ಯವೆಂದು ನಂಬಿಸಿ ಸೌಧ ಕಟ್ಟಿದವರ ಅಡಿಪಾಯವೇ ಅಲುಗಾಡುತ್ತಿದೆ.ಆ ಸೌಧವನ್ನು ತೋರಿಸಿ ಇಷ್ಟು ದಿನ ಭಾರತದಲ್ಲಿ ತಮ್ಮ ಬೇಳೆ ಬೇಯಿಸಿಕೊಂಡ ಪುಣ್ಯಾತ್ಮರೆಲ್ಲ ಬಿಳಿಚಿಕೊಂಡಿದ್ದಾರೆ.ನೆನಪಿಡಿ,ರಾ ಜೀ ವ್ ಮಲ್ಹೋತ್ರಾ ನೆಪ ಮಾತ್ರ. ಈ ಕದನ ನಮ್ಮೆಲ್ಲರಿಗೂ ಸೇರಿದ್ದು.ಸಮಯ ಸಿಕ್ಕಾಗ ನೀವೂ ಪಿಟಿಷನ್ನಿಗೆ ಒಂದು ಸಹಿ ಹಾಕಿ

Saturday 15 August 2015

ನಮ್ಮ ಸುಖಕ್ಕಾಗಿ ತನ್ನ ಜೀವ ಕೊಡುವ ಯೋಧನ ಕಷ್ಟ ಕೇಳಿದ್ದೇವಾ?

ಒಂದು ಗಂಭೀರ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಕೇಳಲೇಬೇಕಾಗಿದೆ. ನಿಜಕ್ಕೂ ನಾವು ನಮ್ಮ ಸೈನಿಕರನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದೆವಾ? ಅವರಿಗೆ ಸಿಗಬೇಕಾದ ಮರ್ಯಾದೆ ಸಿಗುತ್ತಿದೆಯಾ? ನಮ್ಮ ನೆಮ್ಮದಿ, ಮೋಜು, ತೆವಲು, ರಕ್ಷಣೆಗಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟಿರುವ, ನಮ್ಮ ಕುಟುಂಬದ ಒಳಿತಿಗಾಗಿ ತಮ್ಮ ಸಂಸಾರವನ್ನೇ ಪಣಕ್ಕಿಡುವ ಸೈನಿಕರ ಕ್ಷೇಮಕ್ಕಾಗಿ ನಾವು ಮಾಡುತ್ತಿರುವುದೇನು? ದೇಶ ರಕ್ಷಣೆಯ ಮುಂದೆ ಎಲ್ಲವೂ ಗೌಣ ಎಂದು ಭಾವಿಸಿರುವ ಸೈನಿಕರನ್ನು ನಾವು ಹೇಗೆ ನಡೆಸಿಕೊಳ್ಳುತ್ತಿದ್ದೇವೆ? ದೇಶ ರಕ್ಷಣೆಗಾಗಿ ಸರ್ವಸ್ವವನ್ನೂ ಧಾರೆಯೆರೆಯುವ, ಅದನ್ನೇ ತನ್ನ ಜೀವನದ ಪರಮ ಪವಿತ್ರ ಕಾರ್ಯ ಎಂದು ಭಾವಿಸಿರುವ ಸೈನಿಕನಿಗೆ ನಾವು ಎಷ್ಟು ಪ್ರೀತಿ ತೋರಿದ್ದೇವೆ? ಅವನ ಕೆಲಸವನ್ನು ಮೆಚ್ಚಿ ಮೈದಡವಿದ್ದೇವೆ? ಅವನ ಶ್ರಮ, ರಕ್ತ, ಕಣ್ಣೀರಿಗೆ ಯಾವ ಬೆಲೆಯಿದೆ?
ಈ ಪ್ರಶ್ನೆಯನ್ನು ಕೇಳಲೇ ಬೇಕಾಗಿದೆ.
ಈ ಜಗತ್ತಿನ ಅತ್ಯಂತ ಎತ್ತರದ ಮತ್ತು ದುರ್ಗಮವಾದ ಯುದ್ಧಭೂಮಿ ಎಂದು ಕರೆಯಿಸಿಕೊಳ್ಳುವ ಸಿಯಾಚಿನ್ ಪ್ರದೇಶವನ್ನೊಮ್ಮೆ ಸುಮ್ಮನೆ ಮಸ್ಸಿನಲ್ಲಿ ಕಲ್ಪಿಸಿಕೊಳ್ಳಿ. ಮತ್ತೇನೂ ಹೇಳೋದು ಬೇಡ, ನಮಗೆ ‘ಅರ್ಧ’ ದಿನ ಅಲ್ಲಿರಲು ಸಾಧ್ಯವಿಲ್ಲ. ಮೂಳೆಯ ಮೂಲೆ ಮೂಲೆ ಕೊರೆಯುವ ಮೈನಸ್ ಎಪ್ಪತ್ತು ಡಿಗ್ರಿ ಹವಾಮಾನವಿರುವ ಭೀಕರ ಚಳಿ, ಶೀತಗಾಳಿ, ಕೆಲ ಕಾಲ ಬರಿ ಮೈಯನ್ನು ಗಾಳಿಗೆ ಬಿಟ್ಟರೆ ಮರಗೆಟ್ಟು ಹೋಗುವಂಥ ವಿಷಮ ವಾತಾವರಣ, ಹಿಮ ಪರ್ವತದ ಹೊರತಾಗಿ ಮತ್ತೇನೂ ಕಾಣದ, ಪ್ರತಿದಿನ ಮಲ ಮೂತ್ರ ವಿಸರ್ಜನೆಗೂ ಹರಸಾಹಸ ಮಾಡಬೇಕಾದ ಪರಿಸ್ಥಿತಿಯಿರುವ ಸಿಯಾಚಿನ್ ಪ್ರದೇಶದಲ್ಲಿ ಯುದ್ಧ ಮಾಡುವ ಮಾತಿರಲಿ, ಅಲ್ಲಿ ಇರುವುದೇ ಒಂದು ದೊಡ್ಡ ಪವಾಡ. ಸಿಯಾಚಿನ್ ಪ್ರದೇಶವನ್ನು ‘ಕಿಲ್ಲಿಂಗ್ ಫೀಲ್ಡ್್’ ಎಂದು ಕರೆಯುವುದುಂಟು.
ಅಲ್ಲಿಗೆ ಭೇಟಿ ನೀಡಿದ ಅಂದಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್ ಹೇಳಿದ್ದರು – ‘ಸಾಮಾನ್ಯ ಮನುಷ್ಯನಾದವನು ಸಿಯಾಚಿನ್್ನಲ್ಲಿ ಹತ್ತು ನಿಮಿಷ ಸಹ ಇರಲಾರ. ಇಂಥ ಪ್ರದೇಶದಲ್ಲಿ ನಮ್ಮ ಸೈನಿಕರು ಹೇಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದೇ ಒಂದು ವಿಸ್ಮಯ. ಯಾಕೆಂದರೆ ಕೆಲವರು ಇಲ್ಲಿ ಎರಡು-ಮೂರು ವರ್ಷಗಳಿಂದ ಇದ್ದಾರೆ. ಅವರ ಮನೋಸ್ಥೈರ್ಯಕ್ಕೆ ನಾನು ಮೂಕ ವಿಸ್ಮಿತನಾಗಿದ್ದೇನೆ. ನನಗೆ ಮನೆಯಲ್ಲಿ ಇರುವಾಗ ಸೈನಿಕರ ನೆನಪಾದರೆ ಏನೋ ಅಪರಾಧ ಭಾವ ಕಾಡುತ್ತಿತ್ತು. ನಾನು ಇಲ್ಲಿ ಇಷ್ಟೊಂದು ಆರಾಮಾಗಿದ್ದೇನೆ. ಆದರೆ ನಮ್ಮ ಸೈನಿಕರ ಪಾಡೇನು ಎಂಬುದನ್ನು ನೆನೆದಾಗ ಕುಬ್ಜನಾಗಿಬಿಡುತ್ತಿದ್ದೆ. ಹೀಗಾಗಿ ಆಗಾಗ ಕಾರ್ಗಿಲ್ ಮತ್ತು ಸಿಯಾಚಿನ್್ಗೆ ಹೋಗಿ ಬರುತ್ತಿದ್ದೆ’
ಸಿಯಾಚಿನ್ ಮೃತ್ಯು ಕಂದರವೇ. ಅಲ್ಲಿ ಸೈನಿಕರು ವೈರಿಗಳ ಜತೆ ಕಾದಾಡಿ ಮೃತಪಟ್ಟಿದ್ದಕ್ಕಿಂತ, ಭೀಕರ ಚಳಿ ಜತೆ ಹೋರಾಡಲಾಗದೇ ಸತ್ತಿದ್ದೇ ಹೆಚ್ಚು. ವೈರಿಗಳ ಜತೆ ಕಾದಾಡುವುದು ದೊಡ್ಡದಲ್ಲ. ಆದರೆ ‘ಅಗೋಚರ ಚಳಿ’ಯ ಜತೆ ಸೆಣಸುವುದೆಂತು?
ಸಿಯಾಚಿನ್್ನಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯೋಧರು ಜಗತ್ತಿನ ಎಂಥ ವಾತಾವರಣದಲ್ಲಾದರೂ ಬದುಕುತ್ತಾರೆ. ತಾಸಿಗೆ 160-180 ಕಿ.ಮಿ. ವೇಗದಲ್ಲಿ ಬೀಸುವ ಚಳಿಗಾಳಿ, ವರ್ಷವಿಡೀ ಸುರಿಯುವ ಮಂಜಿನಧಾರೆಗೆ ಎದೆಯೊಡ್ಡುವುದಿದೆಯಲ್ಲ, ಅದಕ್ಕೆ ಅಗಾಧ ಛಾತಿಯೇ ಬೇಕು. ಕಳೆದ ಹತ್ತು ವರ್ಷಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಸೈನಿಕರು ಫ್ರಾಸ್ಟ್್ಬೈಟ್, ಚಳಿ ಹೊಡೆತಕ್ಕೆ ಅಸು ನೀಗಿದ್ದಾರೆ.
ಭಾರತೀಯ ಸೇನೆಯಲ್ಲಿ ಸಿಯಾಚಿನ್ ಡ್ಯೂಟಿಗೆ ಸೈನಿಕನೊಬ್ಬನಿಗೆ ಬುಲಾವ್ ಬಂತೆಂದರೆ ಮೃತ್ಯುಲೋಕಕ್ಕೆ ಸೆಣೆಸಲು ಕರೆ ಬಂದಂತೆ. ಆದರೆ ನಮ್ಮ ಸೈನಿಕರು ಅದೆಂಥ ಕಠಿಣತಮ ಮಾನಸಿಕ ಸ್ಥಿತಿ, ಛಲ, ಪ್ರೇರಣೆ, ಹೋರಾಟ, ತ್ಯಾಗ, ಬಲಿದಾನ, ದೇಶಪ್ರೇಮಕ್ಕೆ ತಮ್ಮನ್ನು ಅರ್ಪಿಸಿಕೊಂಡಿರುತ್ತಾರೆಂದರೆ, ಯಾರೂ ಸಹ ಒಲ್ಲೆ ಎನ್ನುವುದಿಲ್ಲ. ಬೆಂಗಳೂರಿನ ವಿಧಾನಸೌಧದಲ್ಲೋ, ಎಂಎಸ್ ಬಿಲ್ಡಿಂಗ್್ನಲ್ಲೋ ಕೆಲಸ ಮಾಡುವ ಸರ್ಕಾರಿ ನೌಕರ ಅಥವಾ ಪತ್ರಿಕಾಲಯದಲ್ಲಿ ಕೆಲಸ ಮಾಡುವ ವರದಿಗಾರರನ್ನು ಬೀದರಕ್ಕೋ, ಗುಲ್ಬರ್ಗಕ್ಕೋ ವರ್ಗ ಮಾಡಿ, ವಿಲಿವಿಲಿ ಅಂತ ಒದ್ದಾಡಿ ಬಿಡುತ್ತಾರೆ. ನೌಕರಿಯನ್ನಾದರೂ ಬಿಟ್ಟೇವು ಆದರೆ ಬೆಂಗಳೂರು ಬಿಡಲೊಲ್ಲೆವು ಅಂತಾರೆ. ಸರ್ಕಾರಿ ವೈದ್ಯರನ್ನು ಪಕ್ಕದ ಹಳ್ಳಿಗೆ ಕಳಿಸಿಬಿಡಿ ನೋಡೋಣ.
ಆದರೆ ವೀರಯೋಧನನ್ನು ಲಡಾಕ್್ಗೋ, ಕಾರ್ಗಿಲ್್ಗೋ, ಸಿಯಾಚಿನ್್ಗೋ ಕಳಿಸಿ, ಮದುವೆಯಾದ ಮಾರನೇ ದಿನವೇ ಅಲ್ಲಿಗೆ ಹೊರಡಿ ಎನ್ನಿ, ‘ಇಲ್ಲ’ ಅಂದ್ರೇ ಕೇಳಿ. ಮರು ಮಾತಿಲ್ಲದೇ, ತುಟಿಪಿಟಿಕ್ಕೆನ್ನದೇ ಮಣಭಾರದ ಟ್ರಂಕ್ ಕಟ್ಟುತ್ತಾರೆ. ಜೀವದ ಹಂಗು ತೊರೆದು ಸೆಣೆಸಲು ಸಿದ್ಧರಾಗಿ ನಿಂತಿರುತ್ತಾರೆ. ನೌಕರಿ ಮಾಡಬೇಕಲ್ಲಪ್ಪಾ ಎಂಬ ಭಾವನೆಯಿಂದಲ್ಲ.
ದೇಶಪ್ರೇಮ, ದೇಶ ರಕ್ಷಣೆಗಾಗಿ! ಅದಕ್ಕಾಗಿ ಎಂಥ ಅಪಾಯ ಎದುರಿಸಲು ರೆಡಿ. ಇಂಥ ಸೈನಿಕರನ್ನ್ನುನಾವು ಹೇಗೆ ನಡೆಸಿಕೊಳ್ಳುತ್ತಿದ್ದೇವೆ? ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು.
ಕಾರ್ಗಿಲ್ ಯುದ್ಧದ ದಿನಗಳನ್ನು ಒಮ್ಮೆ ನೆನಪಿಸಿಕೊಂಡರೆ ಆ ಸಮಯಕ್ಕೆ ನಮ್ಮ ಮೈಯಲ್ಲಿ ಅದೆಂಥಾ ಉತ್ಕರ್ಷ ಭೋರ್ಗರೆದಿತ್ತು ಎಂಬುದೂ ನೆನಪಿಗೆ ಬರುತ್ತದೆ. ಆಗಷ್ಟೇ ಟಿವಿ ಪತ್ರಿಕೋದ್ಯಮವೂ ತಲೆ ಎತ್ತಿತ್ತು. ಹಿಂದೆಂದೂ ಇರದ ರೀತಿಯಲ್ಲಿ ಅದು ಯುದ್ಧವನ್ನು ಸೀದಾ ನಮ್ಮ ಮನೆಯ ಜಗುಲಿಗೇ ತಂದಿರಿಸಿತ್ತು. ಪ್ರತಿ ಭಾರತೀಯನ ಎದೆಯಲ್ಲೂ ದೇಶಪ್ರೇಮದ ಡಮರು ನಾದ. ಆದರೆ, ಸಮರ ಮುಗಿದು ವರ್ಷಗಳು ಕಳೆಯುತ್ತಲೇ ನಮ್ಮ ಸ್ಮೃತಿ ಖಜಾನೆ ನಿಧಾನಕ್ಕೆ ಮುಸುಕು ಎಳೆದುಕೊಳ್ಳತೊಡಗಿತು. ನಮಗೆ ಚರ್ಚಿಸುವುದಕ್ಕೆ ಕೂಗಾಡುವುದಕ್ಕೆ ಬೇರೆ ವಿಷಯಗಳು ಸಿಕ್ಕವು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಕೆಲದಿನಗಳವರೆಗೆ ನೆನಪಿಸಿಕೊಂಡೆವು. ಕೊನೆಗೆ ಆಗೀಗ ಅವರ ಹೆಸರು ಪ್ರಸ್ತಾಪವಾಗುವ ಹಂತಕ್ಕೆ ಹೋಗಿ ನಿಧಾನಕ್ಕೆ ಎಲ್ಲವೂ ಮಸುಕಾಯಿತು. ವಿಕ್ರಂ ಬಾತ್ರಾ, ಸೌರಭ್ ಕಾಲಿಯಾ ಹೀಗೆ ಮಹಾಶೌರ್ಯ ಮೆರೆದವರನ್ನು ಈಗಲೂ ನೆನಪಿಸಿಕೊಳ್ಳುತ್ತಿದ್ದೇವೆ. ಅವರನ್ನು ಮರೆಯಬಾರದು ಕೂಡ. ಆದರೆ ಹೋರಾಡಿ ಗಾಯಗೊಂಡು, ಕೈ-ಕಾಲು ಕಳೆದುಕೊಂಡ ಯೋಧರ ಸಂಖ್ಯೆಯೂ ದೊಡ್ಡದು. ಅವರೆಲ್ಲ ನಮ್ಮ ಅಂದಾಜಿಗೆ ನಿಲುಕಲೇ ಇಲ್ಲ. ಇವತ್ತಿಗೆ ಅವರೆಲ್ಲರ ಸ್ಥಿತಿ ಏನೆಂಬ ಬಗ್ಗೆ ಯಾರಿಗೂ ದರಕಾರವಿಲ್ಲ.
ಕಾರ್ಗಿಲ್ ವಿಜಯೋತ್ಸವ ಎಂಬುದು ನಮಗೆ ನವರಾತ್ರಿ- ದೀಪಾವಳಿಗಳಂತೆ ಒಂದು ಹಬ್ಬವಾಗಬೇಕಿತ್ತು. ಯುದ್ಧದ ಕಾವು ಎದ್ದಿದ್ದ ದಿನಗಳಲ್ಲಿ ಯೋಧರನ್ನು ಕೊಂಡಾಡಿದ್ದಷ್ಟೇ ದೇಶಪ್ರೇಮವಾಗುವುದಿಲ್ಲ. ನಮ್ಮ ನೆಚ್ಚಿನ ನಟನ ಚಿತ್ರ ಬಿಡುಗಡೆಯಾದ ದಿನದಂದೂ ಆತನ ಕಟೌಟ್ ಏರಿಸಿ ತೋರಿಸುತ್ತೇವೆ. ಕಾರ್ಗಿಲ್್ನ ಕದನಕ್ಕೆ, ಅದರಲ್ಲಿ ನಮ್ಮ ಯೋಧರ ವಿಜಯಕ್ಕೆ ದಶಕಗಳ ಪ್ರಾಯವೇ ಸಂದಿದ್ದರೂ ಪ್ರಾರಂಭಿಕ ಪ್ರಶಂಸೆಗಳನ್ನು ಮೀರಿದ ಕೃತಜ್ಞತಾಪೂರ್ವಕ ಆರಾಧನೆಯೊಂದು ನಮ್ಮಲ್ಲಿ ನೆಲೆಗೊಳ್ಳಲೇ ಇಲ್ಲ. ಸರ್ಕಾರದ ಮಟ್ಟದಲ್ಲಂತೂ ಈ ವಿಜಯದ ನೆನಪು ಅಪ್ರಸ್ತುತವಾಗುವುದು ಅವಶ್ಯವಿತ್ತು! ಏಕೆಂದರೆ ಎನ್್ಡಿಎ ಸರ್ಕಾರದ ಅವಧಿಯಲ್ಲಿ ಈ ಸಮರ ನಡೆದಿದ್ದರಿಂದ ಅದರ ಗೆಲುವನ್ನು ವರ್ಷಕ್ಕೊಮ್ಮೆ ಅದ್ಧೂರಿಯಾಗಿ ನೆನಪಿಸಿಕೊಂಡಿದ್ದೇ ಆದರೆ ಅದರ ಶ್ರೇಯಸ್ಸನ್ನು ತಮ್ಮ ಪ್ರತಿಪಕ್ಷಗಳಿಗೆ ಸಲ್ಲಿಸಿದಂತಾಗುತ್ತಲ್ಲ ಎಂಬುದು ಕಳೆದೆರಡು ಅವಧಿಗಳಿಗೆ ದೇಶವನ್ನು ಆಳುತ್ತಿರುವ ಯುಪಿಎ ಕೂಟದ ಚಿಂತನೆ! ಇವರ ರಾಜಕೀಯ ವರಸೆಗಳು ಏನೇ ಇದ್ದಿರಲಿ, ನಾವು ಈ ವಿಜಯದ ಸಂಭ್ರಮವನ್ನು ಕಾಪಿಟ್ಟುಕೊಳ್ಳೋಣ ಎಂಬ ತೀವ್ರತೆ ಪ್ರಜೆಗಳಾದ ನಮ್ಮಲ್ಲೂ ಉಳಿಯಲಿಲ್ಲ ಎಂಬುದೇ ದುರಂತ.
ಈ ಹಿಂದಿನ ಸಮರಗಳ ಬಗ್ಗೆ ಹಿರಿಯರ ಬಾಯಲ್ಲಿ ಕೇಳಿ ತಿಳಿದ, ಪುಸ್ತಕಗಳಲ್ಲಿ, ವರದಿಗಳಲ್ಲಿ ಓದಿಕೊಂಡ ಅನುಭವಗಳಷ್ಟೇ ಇದ್ದವು. ಆದರೆ, ಕಾರ್ಗಿಲ್್ನ ಸಮರ ಮೊದಲೇ ಹೇಳಿದಂತೆ ನೇರವಾಗಿ ನಮ್ಮ ಮನೆಯ ಜಗುಲಿಯಲ್ಲೇ ಅನಾವರಣಗೊಂಡಿತ್ತು. ಈ ದೇಶದ ಯುವಕರನ್ನು ಅದು ನೇರವಾಗಿ ತಾಗಿತ್ತು. ಅಷ್ಟಾಗಿಯೂ ಇಂದು ಯಾವ ಹುಡುಗ-ಹುಡುಗಿಯ ಕೊಠಡಿಯಿಂದಲೂ ಶಾರುಖ್, ಸಲ್ಮಾನ್, ಐಶ್ವರ್ಯಾ, ಧೋನಿ, ಸಚಿನ್, ಯುವರಾಜ್, ಗಂಭೀರ್ ಇವರುಗಳು ನಿವೃತ್ತಿ ಪಡೆದಿಲ್ಲ. ಕಣ್ಣೆದುರು ಕಾರ್ಗಿಲ್ ಕದನ ತೆರೆದುಕೊಂಡಿತು ಎಂಬ ಅಚ್ಚರಿ ಆ ಕ್ಷಣಕ್ಕೆ ಸದ್ದು ಮಾಡಿತಾದರೂ ಯಾರ ಮನೆ ಗೋಡೆಯನ್ನೂ ವಿಕ್ರಂ ಬಾತ್ರಾ, ಸೌರಭ್ ಕಾಲಿಯಾ, ಅಂಜು ನಯ್ಯರ್್ರಂಥ ವೀರರು ಆಕ್ರಮಿಸಿಕೊಳ್ಳಲಿಲ್ಲ. ಪರ್ವತ ಶ್ರೇಣಿಯೊಂದನ್ನು ಗೆದ್ದುಕೊಂಡ ಬೆನ್ನಲ್ಲೇ, ಇದು ಆರಂಭವಷ್ಟೇ ಇನ್ನೂ ಗೆಲ್ಲಬೇಕಿದೆ ಎಂಬ ಅರ್ಥದಲ್ಲಿ ‘ಯೇ ದಿಲ್ ಮಾಂಗೇ ಮೋರ್್’ ಎಂದು ಅವಾಜು ಹಾಕಿದ್ದ ವಿಕ್ರಂ ಬಾತ್ರಾ. ಮಾತಿನಂತೆ ನಡೆದು ಪ್ರಾಣವನ್ನೂ ಕೊಟ್ಟ. ನಾವು ಆ ಕ್ಷಣಕ್ಕೆ ಭಾವುಕರಾಗಿ ನಂತರ ತಮಾಷೆ ಮುಗಿಯಿತೆಂಬಂತೆ ಪೆಪ್ಸಿ ಹೀರಿಕೊಂಡು ‘ದಿಲ್ ಮಾಂಗೆ ಮೋರ್್’ ಎಂಬ ನಮ್ಮ ಬಣ್ಣದ ಲೋಕದಲ್ಲಿ ಕಳೆದು ಹೋದೆವು.
ಹಾಗಾದರೆ ನಮ್ಮ ದೇಶಪ್ರೇಮದ ಗ್ರಹಿಕೆಯಲ್ಲೇ ದೋಷವಿದೆಯಾ? ಕಾರ್ಗಿಲ್್ನ ವೀರೋತ್ಕರ್ಷ ಯುವಕರನ್ನು ಸೇನೆ ಸೇರುವುದಕ್ಕೆ ಇಡಿ ಇಡಿಯಾಗಿ ಪ್ರೇರೇಪಿಸಲೇ ಇಲ್ಲ. ಇದು ಸರ್ಕಾರ- ಸಮಾಜಗಳ ಒಟ್ಟಾರೆ ವೈಫಲ್ಯವೆಂದೇ ಹೇಳಬೇಕು. ಏಕೆಂದರೆ ದೇಶಸೇವೆ ಎಂಬುದು ನಮ್ಮಲ್ಲಿ ಆಕರ್ಷಣೆಯೇ ಅಲ್ಲ. ಸಾಫ್ಟ್್ವೇರ್ ಉದ್ಯೋಗಿಯಾಗಿದ್ದೇನೆ, ಬಿಸಿನೆಸ್ ಮಾಡುತ್ತಿದ್ದೇನೆ, ಟಿವಿಲೀ ಬರ್ತೇನೆ ಅಂತೆಲ್ಲ ಹೇಳಿಕೊಂಡಂತೆ ಯೋಧನಾಗಿದ್ದೇನೆ ಅನ್ನುವುದು, ಸೇನೆಯಲ್ಲಿ ಸೇವೆಯನ್ನು ಹೇಳಿಕೊಳ್ಳುವ ಕಾಯಕವನ್ನಾಗಿ ರೂಪಿಸುವುದಕ್ಕೆ ಸೋತಿದ್ದೇವೆ. ಇಲ್ಲಿ ಯೋಧರ ಕೈಗೆ ನೀಡುವ ಬಂದೂಕುಗಳು, ಅವರ ಸಾರಿಗೆಗೆ ಬಳಸುವ ವಾಹನಗಳು ಇಂಥ ಅಗತ್ಯಗಳ ಪೂರೈಕೆಯಲ್ಲೂ ಭ್ರಷ್ಟಾಚಾರ ನಡೆಯುತ್ತದೆ. ಸಾಲದ್ದಕ್ಕೆ ಯೋಧ ತನ್ನ ಪ್ರಾಣ ಒತ್ತೆ ಇಟ್ಟು ಗೆದ್ದುಕೊಂಡ ನೆಲವನ್ನು ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ರಾಜಕಾರಣಿಗಳು ಮತ್ತು ಅಧಿಕಾರಿಗಳು ಶಾಂತಿ ಒಪ್ಪಂದ ಎಂಬ ನೆಪದಲ್ಲಿ ಬಿಟ್ಟುಕೊಡುತ್ತಾರೆ. ದೇಶಕ್ಕಾಗಿ ತ್ಯಾಗ ಮಾಡಿದವನನ್ನು ಆತನಿಗೆ ತಾನು ಮಾಡಿದ ತ್ಯಾಗ ಸಾರ್ಥಕ ಎಂಬಂತೆ ನಡೆಸಿಕೊಳ್ಳುವ ಜಾಯಮಾನವೇ ನಮ್ಮದಲ್ಲ. ಅವರ ಕುಟುಂಬದ ಬೇಕು- ಬೇಡಗಳನ್ನು ವಿಚಾರಿಸಿಕೊಳ್ಳುವ ಕೆಲಸ ಸರಿಯಾಗಿ ಆಗುವುದಿಲ್ಲ. ಗಾಯಗೊಂಡ ಯೋಧರಿಗೆ ಸರ್ಕಾರಿ ಕೆಲಸ ಕೊಡುತ್ತೇವೆ ಎಂಬ ಘೋಷಣೆಯೇನೋ ಆಗುತ್ತದೆ, ಅದಕ್ಕೆ ಚಪ್ಪಾಳೆಯೂ ಸಂದಾಯವಾಗುತ್ತದೆ. ಆದರೆ, ಆ ಯೋಧ ಘೋಷಣೆಯಾಗಿದ್ದನ್ನು ತನಗೆ ದಕ್ಕಿಸಿಕೊಳ್ಳುವುದಕ್ಕೆ ಕಚೇರಿಯಿಂದ ಕಚೇರಿಗೆ ಅಲೆಯುತ್ತ ಬಸವಳಿದು ಹೋಗುತ್ತಾನೆ. ಐದು- ಹತ್ತು ವರ್ಷಗಳೇ ಸಂದರೂ ಅವನ ಉದ್ಯೋಗ ಭರವಸೆ ಈಡೇರುವುದಿಲ್ಲ. ಇನ್ನು, ಮೃತ ಯೋಧರ ಕುಟುಂಬಗಳಿಗೆ ನೀಡುವ ಭರವಸೆಗಳ ಕತೆಯೂ ಇದೇ.
ಇವೆಲ್ಲದರ ಪರಿಣಾಮ ಸಮಾಜದ ಸಂವೇದನೆಗೂ ತಾಗದೇ ಇರುವುದಿಲ್ಲ. ಅಷ್ಟೆಲ್ಲ ಹೋರಾಡಿ, ತಮ್ಮ ಸರ್ವಸ್ವವನ್ನೂ ದೇಶಕ್ಕೆ ಅಂತ ಎತ್ತಿಟ್ಟು ಕಾದಾಡುವ ಯೋಧನ ಗತಿ ಹೀಗೆ ಅನ್ನುವುದಾದರೆ ಯಾವ ಪುರುಷಾರ್ಥಕ್ಕಾಗಿ ಮಿಲಿಟರಿ ಸೇರಬೇಕು ಎಂದು ಯುವಕರು ಅಂದುಕೊಂಡರೆ ಅದರಲ್ಲಿ ಆಶ್ಚರ್ಯವೇನೂ ಇಲ್ಲ.
ದೇಶ ಕಾಳಜಿಗೆ ಕೆಲಸ ಮಾಡುತ್ತೇನೆ ಅಂತ ಹೊರಡುವ ಎಲ್ಲರಿಗೂ ಸಾಮಾನ್ಯವಾಗಿ ಇದೇ ಗತಿ ಎಂಬ ಉದಾಹರಣೆಗಳೇ ನಮ್ಮ ಕಣ್ಣ ಮುಂದೆ ಸುಳಿದಾಡುತ್ತವೆ. ಮೊನ್ನೆ ಪಾಕಿಸ್ತಾನದ ಜೈಲಿನಿಂದ ಬಿಡುಗಡೆ ಹೊಂದಿದ ಸುರ್ಜೀತ್ ಸಿಂಗ್ ಕತೆಯನ್ನೇ ಗಮನಿಸಿ. ‘ತಾನು ಗೂಢಚಾರಿಕೆಗೆ ಎಂದೇ ಪಾಕಿಸ್ತಾನದ ಒಳಗೆ ನುಸುಳಿದ್ದು. ಆದರೆ ನನ್ನನ್ನು ಹಾಗೆ ಕಳುಹಿಸಿದ ಸರ್ಕಾರ ಮಾತ್ರ ನನ್ನ ಬಿಡುಗಡೆಗಾಗಲೀ, ನನ್ನ ಕುಟುಂಬದ ಹಿತ ಕಾಯುವುದಕ್ಕಾಗಲೀ ಏನೂ ಮಾಡಲಿಲ್ಲ’ ಎಂದುಬಿಟ್ಟ ಸುರ್ಜೀತ್. ನಿಜ, ಆತನ ಆ ಹೇಳಿಕೆ ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ಒಂದಿಷ್ಟು ಮುಜುಗರ ಉಂಟುಮಾಡಿದೆ. ಈಗಲೂ ಅಧಿಕೃತವಾಗಿ ನಾವು ಆತನನ್ನು ಗೂಢಚಾರ ಎಂದು ಒಪ್ಪಿಕೊಳ್ಳುವುದಕ್ಕಾಗುವುದಿಲ್ಲ. ಆದರೆ ಆತನ ದನಿಯಲ್ಲಿ ವ್ಯಕ್ತವಾದ ಹತಾಶೆಯನ್ನು ಗಮನಿಸಿ. ಯುವಕನಾಗಿ ಪಾಕ್ ನೆಲದಲ್ಲಿ ಕಾಲಿಟ್ಟಿರುವ ಆತ ಮರಳಿ ಬರುತ್ತಿರುವುದು ಮುದುಕನಾಗಿ. ನಮ್ಮ ಮೇಲೆ ಧಾಳಿ ಮಾಡಿದ ಉಗ್ರರಿಗೇ ರಾಜಾತಿಥ್ಯ ನೀಡುವ ನಾವು, ಅಂಥ ಕಾಳಜಿಯ ಸ್ವಲ್ಪ ಭಾಗವನ್ನಾದರೂ ದೇಶದ ಹಿತಾಸಕ್ತಿ ಕಾಯುವುದಕ್ಕೆ ಹೋದ ಇಂಥವರ ಕುಟುಂಬಗಳನ್ನು ನೋಡಿಕೊಳ್ಳುವುದಕ್ಕೆ ನೀಡಿದ್ದೇ ಆದಲ್ಲಿ ಖಂಡಿತ ಸುರ್ಜೀತ್ ಬಾಯಿಂದ ಆ ಮಾತುಗಳು ಹೊರಡುತ್ತಿರಲಿಲ್ಲ.
ಪಾಕಿಸ್ತಾನಕ್ಕೆ ಯುದ್ಧ ಕೈದಿಯಾಗಿ ಸೆರೆಯಾದ ವಿಜಯ್ ತಂಬೆ ಬಿಡುಗಡೆ ಇನ್ನೂ ಸಾಧ್ಯವಾಗಿಲ್ಲ. ಅವರು ಪಾಕಿಸ್ತಾನದ ಯಾವ ಜೈಲಿನಲ್ಲಿದ್ದಾರೆ ಎಂಬುದೂ ಗೊತ್ತಿಲ್ಲ. ಕಳೆದ ನಲವತ್ತು ವರ್ಷಗಳಿಂದ ಪತ್ನಿ ದಮಯಂತಿ ತಂಬೆ ಗಂಡನ ಆಗಮನ ನೋಡುತ್ತಿದ್ದಾಳೆ. ಅವರಂತೆ ಎಷ್ಟೋ ಭಾರತೀಯರು ಕೈದಿಗಳಾಗಿ ಕೊಳೆಯುತ್ತಿದ್ದಾರೆ. ಬಾಂಗ್ಲಾದೇಶದ ಯುದ್ಧದಲ್ಲಿ ಭಾರತ ಸೇನೆಗೆ ಸೆರೆ ಸಿಕ್ಕಿದ್ದ 93 ಸಾವಿರ ಪಾಕ್ ಯೋಧರನ್ನು ಕದನ ಮುಗಿಯುತ್ತಿದ್ದಂತೆ ಬಿಡುಗಡೆ ಮಾಡಲಾಗಿತ್ತು. ಆ ಔದಾರ್ಯದ ಚೂರುಭಾಗವನ್ನೂ ಪಾಕಿಸ್ತಾನ ತೋರಿಸುತ್ತಿಲ್ಲ. ನಮಗೂ ಸಹ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಮ್ಯಾಚ್ ಆಡುವುದರಲ್ಲಿ ಇರುವ ಆಸಕ್ತಿ ಇವರೆಲ್ಲರ ಬಿಡುಗಡೆಗೆ ನಿರಂತರ ಪ್ರಯತ್ನ ಮಾಡುವುದರಲ್ಲಿಲ್ಲ.
ನಮ್ಮ ವ್ಯವಸ್ಥೆಯಿಂದ ದೇಶಪ್ರೇಮ ಹೊರಹೊಮ್ಮುವುದಕ್ಕೆ ಅಡ್ಡಿಯಾಗುತ್ತಿರುವುದಾದರೂ ಏನು ಎಂಬುದನ್ನು ಕಾರ್ಗಿಲ್್ನ ಹುತಾತ್ಮ ಯೋಧ, ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಮಹಾವೀರ ಚಕ್ರ ಪಡೆದ ಕ್ಯಾಪ್ಟನ್ ಅಂಜು ನಯ್ಯರ್ ಅವರ ತಂದೆಯ ಮಾತುಗಳನ್ನು ಕೇಳಿಸಿಕೊಂಡಾಗ ಸ್ಪಷ್ಟವಾಗುತ್ತದೆ. ಕಾರ್ಗಿಲ್ ಸಮರ ಅಂತ್ಯಗೊಂಡು ಪುತ್ರಶೋಕ ಹಾಗೂ ಮಗನ ತ್ಯಾಗದ ಹೆಮ್ಮೆಯನ್ನು ಅನುಭವಿಸುತ್ತಿರುವಾಗಲೇ ಅವರು ಹೇಳಿದ್ದರು- ‘ಆತ ‘ಯುದ್ಧರೀತಿ’ಯ ವಾತಾವರಣದಲ್ಲಿ ಸಾಯಬೇಕಿರಲಿಲ್ಲ. ಸಾವಿನಂಥ ಸ್ಥಿತಿ ಎಂಬುದಿಲ್ಲ. ಒಂದೋ ಸಾವು ಇಲ್ಲವೇ ಬದುಕು. ಹಾಗೆಯೇ ನಿರ್ಣಾಯಕ ಗಳಿಗೆಯಲ್ಲಿ ಯುದ್ಧ ಇಲ್ಲವೇ ಶಾಂತಿ ಎಂಬ ಸ್ಪಷ್ಟ ಧೋರಣೆ ಇರಬೇಕು. ನಮ್ಮ ದೇಶಕ್ಕೆ ಇಷ್ಟು ಸುಲಭವಾಗಿ ಒಳನುಗ್ಗುತ್ತಿರುವ ಉಗ್ರರನ್ನು ಹಿಡಿದು ಶಿಕ್ಷಿಸುವುದಕ್ಕೆ ಸರ್ಕಾರಕ್ಕೆ ಆಗುವುದಿಲ್ಲವೇ?’ ಇವರ ಮಾತನ್ನೇ ಮುಂದುವರಿಸುತ್ತ ಅವರ ಸಂಬಂಧಿಯೊಬ್ಬರು ಹೇಳಿದ್ದರು- ‘ಅಂಜು ನಯ್ಯರ್ ಬಲಿದಾನಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಕಶ್ಚಿತ್ ಒಳನುಸುಳುಕೋರರಿಂದ ಸಮರಸದೃಶ ಸ್ಥಿತಿ ಉಂಟಾಗಿ ಪ್ರಾಣ ತೆರಬೇಕಾಯ್ತಲ್ಲ ಎಂಬ ಕಟು ವಾಸ್ತವ ನಮ್ಮ ದುಃಖವನ್ನು ಹೆಚ್ಚಿಸಿದೆ’.
ಈ ಎಲ್ಲ ಗೋಜಲುಗಳು ಎದುರು ನಿಂತಾಗ ಸಾಂತ್ವನ ಹೇಳುವುದು ಇಸ್ರೇಲ್ ಮಾದರಿ. ಆ ದೇಶದಲ್ಲಿ ಪ್ರತಿಯೊಬ್ಬರೂ ನಿಯಮಿತ ಅವಧಿಗೆ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಅದನ್ನು ತಮ್ಮ ಆದ್ಯ ಕರ್ತವ್ಯವೆಂದೂ, ಹೆಮ್ಮೆಯೆಂದೂ ಭಾವಿಸುತ್ತಾರೆ. ಕಾರ್ಗಿಲ್ ವಿಜಯ ದಿನದ ಈ ಅಭಿಮಾನದ ಗಳಿಗೆಯಲ್ಲಾದರೂ ನಮ್ಮಲ್ಲಿ ಅಂಥದೊಂದು ದೇಶಾಭಿಮಾನದ ಒರತೆ ಹನಿಯಲಿ ಅಲ್ಲವೇ?